Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಎಫೆಸದವರಿಗೆ 6:8 - ಕನ್ನಡ ಸಮಕಾಲಿಕ ಅನುವಾದ

8 ದಾಸನಾಗಲಿ, ಸ್ವತಂತ್ರನಾಗಲಿ ತಾನು ಯಾವ ಸತ್ಕಾರ್ಯವನ್ನು ಮಾಡುತ್ತಾನೋ ಅದರ ಪ್ರತಿಫಲವನ್ನು ಕರ್ತ ಯೇಸುವಿನಿಂದ ಹೊಂದುವನೆಂದು ನೀವು ತಿಳಿದಿದ್ದೀರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

8 ಯಾಕೆಂದರೆ ಒಬ್ಬನು ದಾಸನಾಗಲಿ ಸ್ವತಂತ್ರನಾಗಲಿ ತಾನು ಯಾವ ಸತ್ಕಾರ್ಯವನ್ನು ಮಾಡುತ್ತಾನೋ ಅದರ ಪ್ರತಿಫಲವನ್ನು ಕರ್ತನಿಂದ ಹೊಂದುವನೆಂಬುದನ್ನು ನೀವು ತಿಳಿದವರಾಗಿದ್ದೀರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

8 ದಾಸ್ಯದಲ್ಲಿರುವವನಾಗಲಿ, ಸ್ವತಂತ್ರವುಳ್ಳವನಾಗಿರಲಿ ಸತ್ಕಾರ್ಯವನ್ನು ಮಾಡುವವನು ಪ್ರಭುವಿನಿಂದ ತಕ್ಕ ಪ್ರತಿಫಲವನ್ನು ಪಡೆದೇ ತೀರುವನೆಂದು ನೀವು ಬಲ್ಲಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

8 ಯಾಕಂದರೆ ಒಬ್ಬನು ದಾಸನಾಗಲಿ ಸ್ವತಂತ್ರನಾಗಲಿ ತಾನು ಯಾವ ಸತ್ಕಾರ್ಯವನ್ನು ಮಾಡುತ್ತಾನೋ ಅದರ ಪ್ರತಿಫಲವನ್ನು ಕರ್ತನಿಂದ ಹೊಂದುವನೆಂಬದನ್ನು ನೀವು ತಿಳಿದವರಾಗಿಯೇ ಇದ್ದೀರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

8 ಒಳ್ಳೆಯದನ್ನು ಮಾಡುವ ಪ್ರತಿಯೊಬ್ಬನಿಗೂ ದೇವರು ಪ್ರತಿಫಲವನ್ನು ಕೊಡುತ್ತಾನೆಂಬುದನ್ನು ಜ್ಞಾಪಕದಲ್ಲಿಟ್ಟುಕೊಳ್ಳಿರಿ. ಪ್ರತಿಯೊಬ್ಬ ವ್ಯಕ್ತಿಯು ಅವನು ಸೇವಕನಾಗಿರಲಿ ಅಥವಾ ಸ್ವತಂತ್ರನಾಗಿರಲಿ ತಾನು ಮಾಡುವ ಒಳ್ಳೆಯ ಕಾರ್ಯಗಳಿಗೆ ಪ್ರತಿಫಲವನ್ನು ಹೊಂದುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

8 ಕಶ್ಯಾಕ್ ಮಟ್ಲ್ಯಾರ್, ಗುಲಾಮಾಕ್ನಿ ಹೊಂವ್ದಿತ್, ಯಜಮಾನಾಕ್ನಿ ಹೊಂವ್ದಿತ್, ಧನಿ ತೆನಿ ಕರಲ್ಲ್ಯಾ ಬರ್‍ಯಾ ಕಾಮಾಕ್ನಿ ಪ್ರತಿ ಫಳ್ ದಿತಾ ಮನ್ತಲೆ ತುಮ್ಕಾ ಗೊತ್ತ್ ಹಾಯ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಎಫೆಸದವರಿಗೆ 6:8
20 ತಿಳಿವುಗಳ ಹೋಲಿಕೆ  

ಕರ್ತ ಯೇಸುವಿನಿಂದ ಬಾಧ್ಯತೆಯನ್ನು ಬಹುಮಾನವಾಗಿ ಹೊಂದುವಿರೆಂದು ತಿಳಿದಿದ್ದೀರಲ್ಲಾ. ಏಕೆಂದರೆ ನೀವು ಕರ್ತ ಆಗಿರುವ ಕ್ರಿಸ್ತ ಯೇಸುವನ್ನೇ ಸೇವೆಮಾಡುವವರಾಗಿದ್ದೀರಿ.


ಆಗ ಅವರು ನಿನಗೆ ಪ್ರತ್ಯುಪಕಾರ ಮಾಡುವುದಕ್ಕೆ ಆಗದಿರುವುದರಿಂದ, ನೀನು ಧನ್ಯನಾಗುವೆ. ಏಕೆಂದರೆ ನೀತಿವಂತರ ಪುನರುತ್ಥಾನದಲ್ಲಿ ನಿನಗೆ ಪ್ರತ್ಯುಪಕಾರವಾಗುವುದು.”


ಯೆಹೂದ್ಯರು ಯೆಹೂದ್ಯರಲ್ಲದವರು, ಸುನ್ನತಿ ಹೊಂದಿದವರು, ಸುನ್ನತಿ ಹೊಂದದವರು, ನಾಗರಿಕ, ಅನಾಗರಿಕ, ಆಳು, ಸ್ವತಂತ್ರರು ಎಂಬ ಭೇದವಿಲ್ಲ. ಆದರೆ ಕ್ರಿಸ್ತ ಯೇಸುವೇ ಸಮಸ್ತರಲ್ಲಿಯೂ ಸಮಸ್ತವೂ ಆಗಿದ್ದಾರೆ.


ಏಕೆಂದರೆ, ನಾವೆಲ್ಲರೂ ನಮ್ಮ ದೇಹದ ಮೂಲಕ ನಡೆಸಿದ ಒಳ್ಳೆಯದಕ್ಕಾಗಲಿ, ಕೆಟ್ಟದ್ದಕ್ಕಾಗಲಿ ಸಿಗಬೇಕಾದ ಪ್ರತಿಫಲವನ್ನು ಹೊಂದುವುದಕ್ಕೋಸ್ಕರ ಕ್ರಿಸ್ತನ ನ್ಯಾಯಾಸನದ ಮುಂದೆ ಕಾಣಿಸಿಕೊಳ್ಳಲೇಬೇಕು.


ಮನುಷ್ಯಪುತ್ರನಾದ ನಾನು ನನ್ನ ತಂದೆಯ ಮಹಿಮೆಯಲ್ಲಿ ನನ್ನ ದೂತರೊಡನೆ ಬಂದಾಗ, ನಾನು ಪ್ರತಿಯೊಬ್ಬರಿಗೂ ಅವರವರ ಕೆಲಸಗಳಿಗೆ ತಕ್ಕಂತೆ ಪ್ರತಿಫಲವನ್ನು ಕೊಡುವೆನು.


ಹೀಗೆ ನಿನ್ನ ದಾನಧರ್ಮವು ಗುಟ್ಟಾಗಿರುವಾಗ, ಅಂತರಂಗದಲ್ಲಿ ಮಾಡುವುದನ್ನು ಕಾಣುವ ನಿನ್ನ ತಂದೆ ನಿನಗೆ ಪ್ರತಿಫಲವನ್ನು ಕೊಡುವರು.


ದುಷ್ಟನು ಮೋಸದ ಸಂಬಳವನ್ನು ಸಂಪಾದಿಸುತ್ತಾನೆ, ನೀತಿಯನ್ನು ಬಿತ್ತುವವನಿಗೆ ನಿಸ್ಸಂದೇಹವಾದ ಬಹುಮಾನವಿರುವುದು.


ಮಹಾ ಪ್ರತಿಫಲ ನಿಮಗಿರುವುದರಿಂದ ನಿಮ್ಮ ಧೈರ್ಯವನ್ನು ಕಳೆದುಕೊಳ್ಳಬೇಡಿರಿ.


ಖಂಡಿತವಾಗಿಯೂ ನಿನಗೆ ಮುಂದಿನ ನಿರೀಕ್ಷೆಯಿದೆ; ನಿನ್ನ ನಿರೀಕ್ಷೆಯು ನಿರರ್ಥಕವಾಗದು.


ಈಜಿಪ್ಟಿನ ನಿಕ್ಷೇಪಕ್ಕಿಂತಲೂ ಕ್ರಿಸ್ತ ಯೇಸುವಿಗಾಗಿ ನಿಂದೆಯನ್ನು ಹೊಂದುವುದು ಮಹಾಐಶ್ವರ್ಯವೆಂದೆಣಿಸಿಕೊಂಡನು. ಏಕೆಂದರೆ ಅವನು ತನ್ನ ಬಹುಮಾನಕ್ಕಾಗಿ ಎದುರು ನೋಡಿದನು.


ನೀವೆಲ್ಲರೂ ಕ್ರಿಸ್ತ ಯೇಸುವಿನಲ್ಲಿ ಒಂದೇ ಆಗಿರುವುದರಿಂದ, ಯೆಹೂದ್ಯರು ಯೆಹೂದ್ಯರಲ್ಲದವರು ಎಂದೂ ದಾಸರು ಸ್ವತಂತ್ರರು ಎಂದೂ ಗಂಡು ಹೆಣ್ಣು ಎಂದೂ ಭೇದವಿಲ್ಲ.


“ಜನರು ನೋಡಲಿ ಎಂದು ಅವರ ಮುಂದೆ, ನಿಮ್ಮ ದಾನಧರ್ಮಗಳನ್ನು ಮಾಡದಂತೆ ಎಚ್ಚರಿಕೆಯಿಂದಿರಿ. ಹಾಗೆ ಮಾಡಿದರೆ, ಪರಲೋಕದಲ್ಲಿರುವ ನಿಮ್ಮ ತಂದೆಯಿಂದ ನಿಮಗೆ ಪ್ರತಿಫಲ ಸಿಕ್ಕುವುದಿಲ್ಲ.


ಸಂತೋಷಪಟ್ಟು ಆನಂದಿಸಿರಿ. ಏಕೆಂದರೆ ಪರಲೋಕದಲ್ಲಿ ನಿಮಗೆ ಮಹಾ ಪ್ರತಿಫಲ ಸಿಕ್ಕುವುದು. ಅವರು ನಿಮಗಿಂತ ಮುಂಚೆ ಇದ್ದ ಪ್ರವಾದಿಗಳನ್ನು ಸಹ ಇದೇ ರೀತಿಯಲ್ಲಿ ಹಿಂಸೆಪಡಿಸಿದರು.


ಕೆಡುಕರಿಗೆ ಕಷ್ಟ! ಅವರಿಗೆ ಕೇಡೇ ಇರಲಿ. ಏಕೆಂದರೆ ಅವರ ಕೈಗಳ ಪ್ರತಿಫಲವು ಅವರಿಗೆ ಕೊಡಲಾಗುವುದು.


ಆದರೆ ನಿಮ್ಮ ವೈರಿಗಳನ್ನು ಪ್ರೀತಿಸಿರಿ, ಅವರಿಗೆ ಒಳ್ಳೆಯದನ್ನು ಮಾಡಿರಿ. ಏನನ್ನೂ ತಿರುಗಿ ನಿರೀಕ್ಷಿಸದೆ ಸಾಲ ಕೊಡಿರಿ, ಆಗ ನಿಮ್ಮ ಪ್ರತಿಫಲ ದೊಡ್ಡದಾಗಿರುವುದು. ನೀವು ಮಹೋನ್ನತ ದೇವರ ಮಕ್ಕಳಾಗಿರುವಿರಿ, ಅವರು ಕೃತಜ್ಞತೆಯಿಲ್ಲದವರಿಗೂ ಕೆಟ್ಟವರಿಗೂ ದಯೆಯುಳ್ಳವರಾಗಿದ್ದಾರೆ.


ಯೆಹೂದ್ಯರಾಗಲಿ, ಗ್ರೀಕರಾಗಲಿ, ದಾಸರಾಗಲಿ, ಸ್ವತಂತ್ರರಾಗಲಿ ಒಂದೇ ದೇಹವಾಗುವಂತೆ, ನಾವೆಲ್ಲರೂ ಒಬ್ಬರೇ ಆತ್ಮದಿಂದ ಸ್ನಾನ ಮಾಡಿಸಿಕೊಂಡೆವು. ನಮ್ಮೆಲ್ಲರಿಗೂ ಒಬ್ಬ ಆತ್ಮವನ್ನು ಪಾನವಾಗಿ ಕೊಡಲಾಗಿದೆ.


ಆದರೆ ಅನ್ಯಾಯ ಮಾಡುವವನು ತಾನು ಮಾಡಿದ ಅನ್ಯಾಯಕ್ಕೆ ತಕ್ಕದ್ದನ್ನು ಹೊಂದುವನು ಮತ್ತು ದೇವರಲ್ಲಿ ಪಕ್ಷಪಾತವಿರುವುದಿಲ್ಲ.


“ಅವರು, ‘ಯಾರೂ ನಮ್ಮನ್ನು ಕೂಲಿಗೆ ಕರೆಯಲಿಲ್ಲ,’ ಎಂದರು. “ಆಗ ಅವನು, ‘ನೀವು ಸಹ ದ್ರಾಕ್ಷಿಯ ತೋಟಕ್ಕೆ ಹೋಗಿರಿ,’ ಎಂದು ಹೇಳಿದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು