Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಎಸ್ತೇರಳು 1:13 - ಕನ್ನಡ ಸಮಕಾಲಿಕ ಅನುವಾದ

13 ಆಗ ನೀತಿ ನ್ಯಾಯಗಳನ್ನು ತಿಳಿದ ಪಂಡಿತರೆಲ್ಲರೊಂದಿಗೆ ಅರಮನೆಯ ಸಂಗತಿಗಳನ್ನು ಆಲೋಚಿಸುವುದು ಅರಸನ ಪದ್ಧತಿಯಾಗಿತ್ತು. ಆದುದರಿಂದ ಅರಸನು ಕಾಲಜ್ಞಾನಿಗಳ ಸಂಗಡ ಈ ವಿಷಯವಾಗಿ ವಿಚಾರಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

13 ವಿಧಿನಾಯ್ಯಗಳನ್ನು ಬಲ್ಲವರೆಲ್ಲರ ಮುಂದೆ ಅರಮನೆಯ ಸಂಗತಿಗಳನ್ನು ಇಡುವ ಪದ್ಧತಿಯಿತ್ತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

13 ವಿಧಿನಿಯಮಗಳನ್ನು ಬಲ್ಲ ಪಂಡಿತರೆಲ್ಲರ ಮುಂದೆ ಅರಮನೆಯ ಸಂಗತಿಗಳನ್ನು ಇಡುವ ಪದ್ಧತಿಯಿತ್ತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

13 ವಿಧಿನ್ಯಾಯಗಳನ್ನು ಬಲ್ಲವರೆಲ್ಲರ ಮುಂದೆ ಅರಮನೆಯ ಸಂಗತಿಗಳನ್ನು ಇಡುವ ಪದ್ಧತಿಯಿತ್ತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

13-14 ಕಾನೂನು ಮತ್ತು ದಂಡನೆಗಳ ಬಗ್ಗೆ ಪರಿಣಿತರಾಗಿದ್ದ ಮಂತ್ರಿಗಳ ಸಲಹೆ ಕೇಳುವುದು ರಾಜನ ವಾಡಿಕೆಯಾಗಿತ್ತು. ಅದೇ ಪ್ರಕಾರ ರಾಜನು ತನ್ನ ಸಲಹೆಗಾರರೊಂದಿಗೆ ಈ ವಿಷಯವನ್ನು ಆಲೋಚಿಸಿದನು. ಇವರು ರಾಜನಿಗೆ ನಿಕಟವರ್ತಿಗಳಾಗಿದ್ದರು. ಅವರು ಯಾರೆಂದರೆ ಕರ್ಷೆನಾ, ಶೇತಾರ್, ಅದ್ಮಾತಾ, ತರ್ಷಿಷ್, ಮೆರೆಸ್, ಮರ್ಸೆನಾ, ಮೆಮೂಕಾನ್ ಎಂಬ ಏಳು ಮಂದಿ ಮೇದ್ಯ, ಪಾರಸಿಯ ಪ್ರಮುಖ ಅಧಿಕಾರಿಗಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಎಸ್ತೇರಳು 1:13
11 ತಿಳಿವುಗಳ ಹೋಲಿಕೆ  

ಇಸ್ಸಾಕಾರನ ಮಕ್ಕಳಲ್ಲಿ ಇಸ್ರಾಯೇಲರು ಮಾಡತಕ್ಕದ್ದು ಯಾವುದೆಂದು ತಿಳಿಯತಕ್ಕಂಥ ಕಾಲಗಳನ್ನು ಪರೀಕ್ಷಿಸಿ ತಿಳಿದವರು ಬಂದರು. ಅವರ ಯಜಮಾನರು 200 ಮಂದಿಯಾಗಿದ್ದರು. ಅವರ ಸಹೋದರರೆಲ್ಲರು ಇವರ ಆಜ್ಞಾಧೀನರಾಗಿದ್ದರು.


ಆದ್ದರಿಂದ, ಅರಸನು ತನ್ನ ಕನಸನ್ನು ತಿಳಿಸಲು ಮಂತ್ರಗಾರರನ್ನೂ, ಜೋತಿಷ್ಯರನ್ನೂ, ಮಾಟಗಾರರನ್ನೂ, ಪಂಡಿತರನ್ನೂ ಕರೆಯಲು ಆಜ್ಞಾಪಿಸಿದನು. ಇವರೆಲ್ಲರೂ ಬಂದು ಅರಸನ ಮುಂದೆ ನಿಂತರು.


ಓ ಜನಾಂಗಗಳ ಅರಸರಾದವರೇ, ನಿಮಗೆ ಭಯಪಡದವನ್ಯಾರು? ಏಕೆಂದರೆ, ನಿಮಗೆ ಅದು ಸಲ್ಲತಕ್ಕದ್ದು. ಏಕೆಂದರೆ, ಜನಾಂಗಗಳ ಎಲ್ಲಾ ಜ್ಞಾನಿಗಳಲ್ಲಿಯೂ, ಅವುಗಳ ಎಲ್ಲಾ ರಾಜ್ಯಗಳಲ್ಲಿಯೂ ನಿಮ್ಮ ಹಾಗೆ ಯಾರೂ ಇಲ್ಲ.


ಬೆಳಿಗ್ಗೆ ಆಕಾಶವು ಮೋಡ ಕವಿದು ಕೆಂಪಾಗಿದ್ದರೆ, ‘ಇಂದು ಬಿರುಗಾಳಿ ಇರುವುದು’ ಎಂದೂ ನೀವು ಹೇಳುತ್ತೀರಿ. ಆಕಾಶದಲ್ಲಾಗುವ ಸೂಚನೆಗಳನ್ನು ನೀವು ಗ್ರಹಿಸಬಲ್ಲಿರಿ, ಆದರೆ ಕಾಲದ ಸೂಚನೆಗಳನ್ನು ನೀವು ಗ್ರಹಿಸಲಾರಿರಿ.


ಅರಸನು ಗಟ್ಟಿಯಾಗಿ ಕಿರುಚಿ ಜ್ಯೋತಿಷ್ಯರನ್ನೂ, ಪಂಡಿತರನ್ನೂ, ಶಕುನ ಹೇಳುವವರನ್ನೂ ಕರೆಸಿ, ಬಾಬಿಲೋನಿನ ಜ್ಞಾನಿಗಳಿಗೆ, “ಯಾರು ಈ ಬರಹವನ್ನು ಓದಿ, ಅದರ ಅರ್ಥವನ್ನು ನನಗೆ ತಿಳಿಸುವರೋ, ಅವರಿಗೆ ಧೂಮ್ರವಸ್ತ್ರವನ್ನು ಹೊದಿಸಿ, ಅವನ ಕೊರಳಿಗೆ ಚಿನ್ನದ ಹಾರವನ್ನು ಹಾಕಿ, ರಾಜ್ಯದ ಮೂರನೆಯ ಅಧಿಕಾರಿಯಾಗಿ ಮಾಡುವೆನು,” ಎಂದು ಹೇಳಿದನು.


ಇದನ್ನು ಕೇಳಿ ಅರಸನು ಕೋಪ ಮತ್ತು ರೌದ್ರವುಳ್ಳವನಾಗಿ, ಬಾಬಿಲೋನಿನಲ್ಲಿರುವ ಎಲ್ಲಾ ಜ್ಞಾನಿಗಳನ್ನು ಕೊಲೆಮಾಡಬೇಕೆಂದು ಆಜ್ಞಾಪಿಸಿದನು.


ಹೆರೋದ ರಾಜನ ಕಾಲದಲ್ಲಿ, ಯೂದಾಯದ ಬೇತ್ಲೆಹೇಮಿನಲ್ಲಿ ಯೇಸು ಜನಿಸಿದಾಗ, ಪೂರ್ವ ದೇಶದಿಂದ ಜ್ಞಾನಿಗಳು ಯೆರೂಸಲೇಮಿಗೆ ಬಂದು,


ದಾನಿಯೇಲನು ಅರಸನ ಸನ್ನಿಧಿಯಲ್ಲಿ ಉತ್ತರವಾಗಿ, “ಅರಸನು ಕೇಳುವ ರಹಸ್ಯವನ್ನು ಜ್ಞಾನಿಗಳೂ, ಜ್ಯೋತಿಷ್ಯರೂ, ಮಂತ್ರಗಾರರೂ, ಶಕುನ ಹೇಳುವವರೂ ಅರಸನಿಗೆ ತಿಳಿಸಲಾರರು.


ಆದರೆ ಅರಸನು ಅವರಿಂದ ಹೇಳಿ ಕಳುಹಿಸಿದ ಮಾತಿಗೆ ವಷ್ಟಿ ರಾಣಿಯು, “ನಾನು ಬರುವುದಿಲ್ಲ,” ಎಂದು ಹೇಳಿದಳು. ಆದ್ದರಿಂದ ಅರಸನು ಬಹುಕೋಪಗೊಂಡು, ರೋಷಾವೇಶನಾದನು.


ಜೆಬುಲೂನನವರಲ್ಲಿ ದೃಢಹೃದಯದಿಂದ ಸಾಲಾಗಿ ನಡೆಯುವ ಸಕಲ ಆಯುಧಗಳನ್ನು ಧರಿಸಿಕೊಂಡ ಯುದ್ಧ ನಿಪುಣರಾದ ಸೈನ್ಯವಾಗಿ ಹೊರಡುವವರು 50,000 ಮಂದಿ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು