Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಎಸ್ತೇರಳು 1:6 - ಕನ್ನಡ ಸಮಕಾಲಿಕ ಅನುವಾದ

6 ಅಲ್ಲಿ ಬಿಳಿ ಕಲ್ಲಿನ ಕಂಬಗಳಿಗೆ ಬೆಳ್ಳಿಯ ಉಂಗುರಗಳಿಂದಲೂ ರಕ್ತವರ್ಣದ ನಯವಾದ ನಾರು ಹಗ್ಗಗಳಿಂದಲೂ ತೂಗು ಹಾಕಲಾಗಿದ್ದವು. ಬಿಳಿ ಹಸಿರೂ ನೀಲವರ್ಣವೂ ಆದ ತೆರೆಗಳಿದ್ದವು. ಮಂಚಗಳು ಬೆಳ್ಳಿ ಬಂಗಾರದವುಗಳಾಗಿ ಕೆಂಪು, ನೀಲಿ, ಬಿಳಿ, ಕಪ್ಪು ಬಣ್ಣಗಳ ಅಮೃತಶಿಲೆಗಳಿಂದ ರಚಿತವಾದ ನೆಲದ ಮೇಲೆ ಇಡಲಾಗಿದ್ದವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

6 ಆ ತೋಟದ ಆವರಣವು ಬಿಳೀ ನೂಲಿನ ಬಟ್ಟೆಗಳೂ, ನೀಲಿಬಟ್ಟೆಗಳೂ, ಧೂಮ್ರವರ್ಣವುಳ್ಳ ನಾರಿನ ದಾರಗಳು ಮತ್ತು ಅಮೃತಶಿಲೆಯ ಕಲ್ಲುಕಂಬಗಳಿಗೆ ಕಟ್ಟಲಾದ ಬೆಳ್ಳಿಯ ಉಂಗುರ ಇವುಗಳಿಂದ ಅಲಂಕೃತವಾಗಿತ್ತು. ಜರತಾರಿ ಕಸೂತಿ ಹಾಕಿರುವ ಬೆಳ್ಳಿ ಬಂಗಾರದ ಸುಖಾಸನಗಳು, ಅವುಗಳನ್ನು ಕೆಂಪು, ಬಿಳಿ, ಹಳದಿ ಮತ್ತು ಕಪ್ಪು ಬಣ್ಣಗಳುಳ್ಳ ಅಮೃತಶಿಲೆಗಳ ಕಲ್ಲುಗಳಿಂದ ರಚಿತವಾದ ನೆಲಗಟ್ಟಿನ ಮೇಲೆ ಇಡಲಾಗಿತ್ತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

6 ಅಂಗಳದಲ್ಲಿ ಬಿಳಿ, ಹಸಿರು, ನೀಲಿವರ್ಣದ ಪರದೆಗಳು ರಕ್ತವರ್ಣದ ನಾರಿನ ಹಗ್ಗಗಳಿಂದ ಅಮೃತಶಿಲೆಯ ಬೆಳ್ಳಿಯ ಉಂಗುರಗಳಿಗೆ ತೂಗುಹಾಕಲಾಗಿದ್ದವು. ಜರತಾರಿ ಎಳೆಗಳಿಂದ ಕಸೂತಿಮಾಡಿದ ಸುಖಾಸನ ಪೀಠಗಳು, ಕೆಂಪು, ಬಿಳಿ, ಹಳದಿ ಹಾಗೂ ಕಪ್ಪು ವರ್ಣದ ಅಮೃತಶಿಲೆಯ ಹಾಸುಗಲ್ಲುಗಳಿಂದ ರಚಿತವಾದ ನೆಲದ ಮೇಲೆ ಇಡಲಾಗಿದ್ದವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

6 ಅಲ್ಲಿ ಬಿಳೀ ನೂಲಿನ ಬಟ್ಟೆಗಳೂ ನೀಲಿಬಟ್ಟೆಗಳೂ ಧೂಮ್ರವರ್ಣವುಳ್ಳ ನಾರಿನ ದಾರದಿಂದ ಸಂಗಮೀರ ಕಲ್ಲು ಕಂಬಗಳಲ್ಲಿನ ಬೆಳ್ಳಿಯ ಉಂಗುರಗಳಿಗೆ ಕಟ್ಟಲ್ಪಟ್ಟಿದ್ದವು. ಜರತಾರೆಯ ಕಸೂತಿ ಹಾಕಿರುವ ಲೋಡುಗಳು ಕೆಂಪು ಬಿಳಿ ಹಳದಿ ಕಪ್ಪು ಬಣ್ಣಗಳುಳ್ಳ ಸಂಗಮೀರ ಕಲ್ಲುಗಳಿಂದ ರಚಿತವಾದ ನೆಲಗಟ್ಟಿನ ಮೇಲೆ ಇಡಲ್ಪಟ್ಟಿದ್ದವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

6 ಆ ಒಳ ಉದ್ಯಾನವನವು ಬಿಳಿ ಮತು ನೀಲಿಬಣ್ಣಗಳ ಬಟ್ಟೆಗಳಿಂದ ಶೃಂಗರಿಸಲ್ಪಟ್ಟಿತ್ತು. ಅವುಗಳನ್ನು ಬಿಳಿ ಮತ್ತು ನೇರಳೆ ಬಣ್ಣದ ದಾರಗಳಿಂದ ಬೆಳ್ಳಿಯ ಉಂಗುರಗಳಲ್ಲಿ ಕಟ್ಟಲ್ಪಟ್ಟ ಅಮೃತಶಿಲೆಯ ಕಂಬಗಳಿಗೆ ತೂಗುಹಾಕಿದ್ದರು. ಬೆಲೆಬಾಳುವ ಕಲ್ಲುಗಳಿಂದಲೂ ಮುತ್ತು ಚಿಪ್ಪು, ರತ್ನಶಿಲೆಗಳಿಂದಲೂ ಅಲಂಕೃತವಾದ ನೆಲದ ಮೇಲೆ ಬೆಳ್ಳಿಬಂಗಾರಗಳಿಂದ ಮಾಡಿದ್ದ ಆಸನಗಳನ್ನಿಟ್ಟರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಎಸ್ತೇರಳು 1:6
10 ತಿಳಿವುಗಳ ಹೋಲಿಕೆ  

ದಂತದ ಮಂಚಗಳ ಮೇಲೆ ಮಲಗಿಕೊಳ್ಳುತ್ತೀರಿ. ತಮ್ಮ ಹಾಸಿಗೆಗಳ ಮೇಲೆ ಹಾಯಾಗಿ ಒರಗಿಕೊಳ್ಳುತ್ತೀರಿ. ಮಂದೆಯೊಳಗಿಂದ ಕುರಿಮರಿಗಳನ್ನೂ ಹಟ್ಟಿಯ ಮಂದೆಯೊಳಗಿಂದ ಕರುಗಳನ್ನೂ ತಿನ್ನುತ್ತೀರಿ.


ವೈಭವದ ಮಂಚದ ಮೇಲೆ ಕುಳಿತುಕೊಂಡೆ. ಅವರ ಮುಂದೆ ನನ್ನ ಧೂಪವನ್ನು ನನ್ನ ಎಣ್ಣೆಯನ್ನು ಇಟ್ಟಿದ್ದ ಮೇಜನ್ನು ಸಿದ್ಧಮಾಡಿದೆ.


ಅವರು ಅಡವು ಇಟ್ಟ ವಸ್ತ್ರಗಳ ಮೇಲೆ ಪ್ರತಿಯೊಂದು ಬಲಿಪೀಠಗಳ ಬಳಿಯಲ್ಲೂ ಮಲಗುತ್ತಾರೆ. ನಿಷೇಧಿಸಿದ ದ್ರಾಕ್ಷಾರಸವನ್ನು ತಮ್ಮ ದೇವರ ಆಲಯದಲ್ಲಿ ಕುಡಿಯುತ್ತಾರೆ.


ಅರಸನು ಅರಮನೆಯ ತೋಟದಿಂದ ದ್ರಾಕ್ಷಾರಸದ ಔತಣ ಸ್ಥಳಕ್ಕೆ ಹಿಂದಿರುಗಿ ಬಂದಾಗ, ಹಾಮಾನನು ಎಸ್ತೇರಳು ಕುಳಿತಿರುವ ಹಾಸಿಗೆಯ ಮೇಲೆ ಬಿದ್ದಿದ್ದನು. ಆಗ ಅರಸನು, “ನನ್ನ ಮುಂದೆಯೇ ಇವನು ರಾಣಿಯನ್ನು ಬಲಾತ್ಕಾರ ಮಾಡಬೇಕೆಂದಿರುವನೋ?” ಎಂದನು. ಆ ಮಾತು ಅರಸನ ಬಾಯಿಂದ ಹೊರಟ ಕೂಡಲೆ ಸೇವಕರು ಹಾಮಾನನ ಮುಖದ ಮೇಲೆ ಮುಸುಕನ್ನು ಹಾಕಿದರು.


ಮೊರ್ದೆಕೈ ಶುಭ್ರವಾದ ನೀಲ ರಾಜವಸ್ತ್ರವನ್ನು ಧರಿಸಿ, ಬಂಗಾರದ ದೊಡ್ಡ ಕಿರೀಟವನ್ನು ಇಟ್ಟುಕೊಂಡು, ರಕ್ತವರ್ಣವುಳ್ಳ ನಯವಾದ ನಾರಿನ ಶಾಲನ್ನು ಹೊದ್ದುಕೊಂಡು ಅರಸನ ಸಮ್ಮುಖದಿಂದ ಹೊರಟುಹೋದನು. ಶೂಷನ್ ಪಟ್ಟಣವು ಸಂಭ್ರಮವೂ ಸಂತೋಷವೂ ಉಳ್ಳದ್ದಾಗಿತ್ತು.


“ಗುಡಾರವನ್ನು ಹತ್ತು ಪರದೆಗಳಿಂದ ಮಾಡಿ, ನಯವಾಗಿ ಹೊಸೆದ ನಾರಿನಿಂದಲೂ ನೀಲಿ, ಧೂಮ್ರ, ರಕ್ತವರ್ಣದ ದಾರದಿಂದ ಮತ್ತು ಕೌಶಲ್ಯದ ಕೆಲಸದಿಂದಲೂ ಮಾಡಿದ ಕೆರೂಬಿಗಳುಳ್ಳವುಗಳಾಗಿಯೂ ಇರಬೇಕು.


ಅದಕ್ಕವನು, “ನಾನು ತಿನ್ನುವುದಿಲ್ಲ,” ಎಂದನು. ಆದರೆ ಅವನ ದಾಸರೂ, ಆ ಸ್ತ್ರೀಯೂ ಅವನನ್ನು ಬಲವಂತ ಮಾಡಿದ್ದರಿಂದ, ಅವನು ಅವರ ಮಾತನ್ನು ಕೇಳಿ, ನೆಲವನ್ನು ಬಿಟ್ಟು ಎದ್ದು, ಮಂಚದ ಮೇಲೆ ಕುಳಿತುಕೊಂಡನು.


ಯೆಹೋವ ದೇವರು ಹೀಗೆ ಹೇಳುತ್ತಾರೆ: “ಹೇಗೆ ಕುರುಬನು ಸಿಂಹದ ಬಾಯಿಯಿಂದ ಎರಡು ಕಾಲಿನ ಎಲಬುಗಳನ್ನು ಅಥವಾ ಕಿವಿಯ ಒಂದು ತುಂಡನ್ನು ರಕ್ಷಿಸಲು ಪ್ರಯತ್ನಿಸುತ್ತಾನೋ ಹಾಗೆಯೇ ಸಮಾರ್ಯದಲ್ಲಿ ವಾಸಿಸುವ ಇಸ್ರಾಯೇಲರು ಹಾಸಿಗೆಯ ತಲೆ ಮತ್ತು ಮಂಚದ ಬಟ್ಟೆಯ ತುಂಡುಗಳೊಂದಿಗೆ ಸಂರಕ್ಷಣೆ ಹೊಂದುತ್ತಾರೆ.”


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು