Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಎಸ್ತೇರಳು 10:3 - ಕನ್ನಡ ಸಮಕಾಲಿಕ ಅನುವಾದ

3 ಯೆಹೂದ್ಯನಾದ ಮೊರ್ದೆಕೈ ಅರಸನಾದ ಅಹಷ್ವೇರೋಷನಿಗೆ ಎರಡನೆಯವನೂ ಯೆಹೂದ್ಯರಲ್ಲಿ ಸನ್ಮಾನಿತನೂ ತನ್ನ ಸಹೋದರರ ಸಮೂಹದಲ್ಲಿ ಹೆಚ್ಚಿನ ಗೌರವ ಪಾತ್ರನೂ ತನ್ನ ಜನರ ಹಿತಚಿಂತಕನೂ ತನ್ನ ಸಂತಾನದವರಿಗೆ ಕ್ಷೇಮಾಭಿವೃದ್ಧಿಯನ್ನು ಮಾತನಾಡುವವನೂ ಆಗಿದ್ದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

3 ಯೆಹೂದ್ಯನಾದ ಮೊರ್ದೆಕೈಯಾದರೋ ರಾಜ್ಯದಲ್ಲಿ ಅರಸನಾದ ಅಹಷ್ವೇರೋಷನ ದ್ವಿತೀಯ ಸ್ಥಾನದವನೂ, ಯೆಹೂದ್ಯರಲ್ಲಿ ಸನ್ಮಾನಿತನೂ, ತನ್ನ ಬಂಧುಬಳಗಕ್ಕೆ ಪ್ರೀತಿಪಾತ್ರನೂ, ಸ್ವಜನರ ಹಿತಚಿಂತಕನೂ ಮತ್ತು ಸ್ವಕುಲದವರೆಲ್ಲರಿಗೂ ಶಾಂತಿದೂತನೂ, ಪ್ರಾರ್ಥನಾಪರನೂ ಆಗಿದ್ದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

3 ಯೆಹೂದ್ಯನಾದ ಮೊರ್ದೆಕೈಯಾದರೋ ಅರಸ ಅಹಷ್ವೇರೋಷನಿಗೆ ದ್ವಿತೀಯಸ್ಥಾನದವನೂ ಯೆಹೂದ್ಯರಲ್ಲಿ ಸನ್ಮಾನಿತನೂ ತನ್ನ ಬಂಧುಬಳಗದವರಲ್ಲಿ ಪ್ರೀತಿಪಾತ್ರನೂ ಸ್ವಜನರ ಹಿತಚಿಂತಕನೂ ಸ್ವಕುಲದವರೆಲ್ಲರಿಗೆ ಶಾಂತಿದೂತನೂ ಆಗಿದ್ದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

3 ಯೆಹೂದ್ಯನಾದ ಆ ಮೊರ್ದೆಕೈಯಾದರೋ ರಾಜ್ಯದಲ್ಲಿ ಅರಸನಾದ ಅಹಷ್ವೇರೋಷನಿಗೆ ದ್ವಿತೀಯಸ್ಥಾನದವನೂ ಯೆಹೂದ್ಯರಲ್ಲಿ ಸನ್ಮಾನಿತನೂ ತನ್ನ ಬಂಧುಜನ ಸಮೂಹಕ್ಕೆ ಪ್ರೀತಿಪಾತ್ರನೂ ಸ್ವಜನರ ಹಿತಚಿಂತಕನೂ ಸ್ವಕುಲದವರೆಲ್ಲರಿಗೋಸ್ಕರ ಸುಖಪ್ರಾರ್ಥನಾಪರನೂ ಆಗಿದ್ದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

3 ಅರಸನ ನಂತರ ರಾಜ್ಯದಲ್ಲಿ ಯೆಹೂದಿಯಾದ ಮೊರ್ದೆಕೈಯೇ ಮುಖ್ಯ ವ್ಯಕ್ತಿಯಾಗಿದ್ದನು. ರಾಜ್ಯದಲ್ಲಿ ಅವನಿಗೆ ಎರಡನೇ ಸ್ಥಾನವಿತ್ತು. ಯೆಹೂದ್ಯರೊಳಗೆ ಅವನು ಪ್ರಮುಖ ವ್ಯಕ್ತಿಯಾಗಿದ್ದನು. ಯೆಹೂದ್ಯರೆಲ್ಲರೂ ಅವನನ್ನು ಬಹಳವಾಗಿ ಗೌರವಿಸುತ್ತಿದ್ದರು. ತನ್ನ ಜನರ ಒಳಿತಿಗಾಗಿ (ಜನರಿಗೋಸ್ಕರವಾಗಿ) ಮೊರ್ದೆಕೈ ಬಹಳವಾಗಿ ಪ್ರಯಾಸಪಟ್ಟಿದ್ದರಿಂದ ಜನರು ಅವನನ್ನು ಸನ್ಮಾನಿಸಿದರು; ಮೊರ್ದೆಕೈ ಯೆಹೂದ್ಯರೆಲ್ಲರಿಗೆ ಸಮಾಧಾನವನ್ನು ತಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಎಸ್ತೇರಳು 10:3
17 ತಿಳಿವುಗಳ ಹೋಲಿಕೆ  

ಇಸ್ರಾಯೇಲರ ಹಿತಚಿಂತಕನು ಒಬ್ಬನು ಬಂದನೆಂಬ ಸಮಾಚಾರ ಹೋರೋನಿನ ಸನ್ಬಲ್ಲಟನಿಗೂ, ಅಮ್ಮೋನ್ ದೇಶದವನಾದ ಟೋಬೀಯ ಎಂಬ ಅಧಿಕಾರಿಗೂ ಮುಟ್ಟಿತು. ಅವರು ತುಂಬಾ ವಿಚಲಿತರಾದರು.


ಈ ರೀತಿಯಲ್ಲಿ ಕ್ರಿಸ್ತನಿಗೆ ಸೇವೆಮಾಡುವವರು ದೇವರಿಗೆ ಮೆಚ್ಚುಗೆಯಾದವರೂ ಜನರಿಂದ ಅನುಮೋದನೆ ಹೊಂದಿದವರೂ ಆಗಿರುತ್ತಾರೆ.


ಪ್ರಿಯರೇ, ನನ್ನ ಹೃದಯದ ಬಯಕೆಯು, ನಾನು ದೇವರಿಗೆ ಸಲ್ಲಿಸುವ ಪ್ರಾರ್ಥನೆಯು ಇಸ್ರಾಯೇಲರು ರಕ್ಷಣೆ ಹೊಂದಬೇಕೆಂಬುದೇ.


ಆಗ ಬೇಲ್ಯಚ್ಚರನು ಆಜ್ಞಾಪಿಸಲು ದಾನಿಯೇಲನಿಗೆ ಧೂಮ್ರವಸ್ತ್ರವನ್ನು ಹೊದಿಸಿ, ಅವನ ಕೊರಳಿಗೆ ಚಿನ್ನದ ಹಾರವನ್ನು ಹಾಕಿ, ಇವನು ರಾಜ್ಯದ ಮೂರನೇ ಉನ್ನತ ಅಧಿಕಾರಿಗಳಲ್ಲಿ ಒಬ್ಬನೆಂದು ಸಾರಿದನು.


ಇದಲ್ಲದೆ ಎಫ್ರಾಯೀಮ್ಯನಾಗಿರುವ ಪರಾಕ್ರಮಶಾಲಿಯಾದ ಜಿಕ್ರಿಯು ಅರಸನ ಮಗ ಮಾಸೇಯನನ್ನೂ, ಅರಮನೆಯ ನಾಯಕನಾದ ಅಜ್ರೀಕಾಮನನ್ನೂ, ಅರಸನಿಗೆ ಎರಡನೆಯವನಾದ ಎಲ್ಕಾನನನ್ನೂ ಕೊಂದುಹಾಕಿದನು.


ನೀನೇ ನನ್ನ ಅರಮನೆಯ ಅಧಿಕಾರಿಯಾಗಿರಬೇಕು. ನಿನ್ನ ಮಾತಿನ ಪ್ರಕಾರ ನನ್ನ ಜನರೆಲ್ಲಾ ಅಧೀನವಾಗಿರಲಿ. ಸಿಂಹಾಸನದಲ್ಲಿ ಮಾತ್ರ ನಾನು ನಿನಗಿಂತ ದೊಡ್ಡವನಾಗಿರುವೆನು,” ಎಂದನು.


ಈಗ ನೀನು ಅರ್ಥಗಳನ್ನು ವಿವರಿಸಿ, ಕಷ್ಟಕರವಾದ ಸಮಸ್ಯೆಗಳನ್ನು ಬಗೆಹರಿಸಲು ಸಮರ್ಥನೆಂದು ನಾನು ನಿನ್ನ ವಿಷಯವಾಗಿ ಕೇಳಿದ್ದೇನೆ. ಹೀಗಾದರೆ ಈ ಬರಹವನ್ನು ಓದುವುದಕ್ಕೂ, ಅದರ ಅರ್ಥವನ್ನು ತಿಳಿಸುವುದಕ್ಕೂ ನಿನ್ನಿಂದ ಸಾಧ್ಯವಾದರೆ, ನಿನಗೆ ಧೂಮ್ರವಸ್ತ್ರವನ್ನು ಹೊದಿಸಿ, ಕೊರಳಿಗೆ ಚಿನ್ನದ ಹಾರವನ್ನು ಹಾಕಿಸಿ, ರಾಜ್ಯದ ಮೂರನೆಯ ಅಧಿಕಾರಿಯನ್ನಾಗಿ ನೇಮಿಸುವೆನು,” ಎಂದು ಹೇಳಿದನು.


ಆದಕಾರಣ ಅರಮನೆಯ ಬಾಗಿಲಲ್ಲಿರುವ ಅರಸನ ಸಮಸ್ತ ಸೇವಕರು ಬಗ್ಗಿ ಹಾಮಾನನಿಗೆ ಅಡ್ಡಬೀಳುತ್ತಿದ್ದರು. ಏಕೆಂದರೆ ಅರಸನು ಅವನನ್ನು ಕುರಿತು ಹಾಗೆಯೇ ಆಜ್ಞಾಪಿಸಿದ್ದನು. ಆದರೆ ಮೊರ್ದೆಕೈಯು ಬಗ್ಗದೆ ಅಡ್ಡಬೀಳದೆಯೂ ಇದ್ದನು.


ಯೋನಾತಾನನು ಅವನಿಗೆ, “ಭಯಪಡಬೇಡ, ಏಕೆಂದರೆ ನನ್ನ ತಂದೆಯಾದ ಸೌಲನ ಕೈ ನಿನ್ನನ್ನು ಹಿಡಿಯುವುದಿಲ್ಲ. ನೀನು ಇಸ್ರಾಯೇಲಿನ ಮೇಲೆ ಅರಸನಾಗಿರುವಿ. ನಾನು ನಿನಗೆ ಎರಡನೆಯವನಾಗಿರುವೆನು ಮತ್ತು ಹೀಗೆ ಆಗುವುದೆಂದು ನನ್ನ ತಂದೆಯಾದ ಸೌಲನು ಸಹ ತಿಳಿದಿದ್ದಾನೆ,” ಎಂದನು.


ಈ ದಾನಿಯೇಲನಲ್ಲಿ ಉತ್ತಮ ಯೋಗ್ಯತೆಗಳು ಇದ್ದುದರಿಂದ ಅವನು ಉಪರಾಜರಿಗಿಂತಲೂ, ದೇಶಾಧಿಪತಿಗಿಂತಲೂ ಶ್ರೇಷ್ಠನಾಗಿದ್ದನು. ಈ ಕಾರಣದಿಂದ ಅರಸನು ಅವನನ್ನು ಸಮಸ್ತ ರಾಜ್ಯದ ಮೇಲೆ ಅಧಿಕಾರಿಯನ್ನಾಗಿ ನೇಮಿಸಲು ಉದ್ದೇಶಿಸಿದ್ದನು.


ಗೋಷೆನ್ ಪ್ರದೇಶದಲ್ಲಿ ನೀನು ವಾಸವಾಗಿದ್ದು ನಿನ್ನ ಮಕ್ಕಳೂ, ಮೊಮ್ಮಕ್ಕಳೂ, ದನಕುರಿಗಳೂ, ನಿನಗಿದ್ದದ್ದೆಲ್ಲವೂ ನನ್ನ ಸಮೀಪದಲ್ಲಿರಬೇಕು.


ಅಲ್ಲಿ ನಿನ್ನನ್ನು ಪೋಷಿಸುವೆನು. ಏಕೆಂದರೆ ಇನ್ನೂ ಕ್ಷಾಮದ ಐದು ವರ್ಷಗಳಿವೆ. ನಿನಗೂ, ನಿನ್ನ ಮನೆಗೂ, ನಿನಗಿರುವುದೆಲ್ಲದಕ್ಕೂ ಬಡತನವಾಗಬಾರದು’ ಎಂದು ಹೇಳಿರಿ.


ಆದರೆ ಇಸ್ರಾಯೇಲ್ ಜನರೂ ಯೆಹೂದ ಜನರೂ ದಾವೀದನು ತಮ್ಮ ಮುಂದೆ ಹೊರಟು ಹೋಗುತ್ತಾ ಬರುತ್ತಾ ಇರುವುದರಿಂದ ಅವನನ್ನು ಪ್ರೀತಿ ಮಾಡಿದರು.


ಶೂಷನಿನ ಅರಮನೆಯಲ್ಲಿ ಬೆನ್ಯಾಮೀನ್ ಕುಲದ ಕೀಷನ ಮರಿಮಗನೂ, ಶಿಮ್ಮೀಯ ಮೊಮ್ಮಗನೂ, ಯಾಯೀರನ ಮಗನೂ ಆದ ಮೊರ್ದೆಕೈ ಎಂಬ ಹೆಸರುಳ್ಳ ಒಬ್ಬ ಯೆಹೂದ್ಯನಿದ್ದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು