14 ಆಗ ಅವಳು ಸಾಯಂಕಾಲದಲ್ಲಿ ರಾಜನಿವಾಸಕ್ಕೆ ಪ್ರವೇಶಿಸಿ ಮಾರನೆಯ ದಿವಸದಲ್ಲಿ ಉಪಪತ್ನಿಗಳ ಪಾಲಕನಾದ ಶವಷ್ಗಜ ಎಂಬ ರಾಜಕಂಚುಕಿಯ ವಶದಲ್ಲಿದ್ದ ಸ್ತ್ರೀಯರ ಎರಡನೆಯ ಮನೆಗೆ ಬರಬೇಕಾಗಿತ್ತು. ಅರಸನು ಯಾರಲ್ಲಿ ಸಂತೋಷಪಟ್ಟು ಅವಳನ್ನು ಹೆಸರಿನಿಂದ ಕರೆದ ಹೊರತು ಅವಳು ಪುನಃ ಅರಸನ ಬಳಿಗೆ ಹೋಗಬಾರದು.
14 ಆಕೆಯು ಅಲ್ಲಿಗೆ ಸಾಯಂಕಾಲ ಹೋದವಳು ಮರುದಿನ ಬೆಳಿಗ್ಗೆ ಅರಸನ ಉಪಪತ್ನಿಯರ ಪಾಲಕನಾದ ಶವಷ್ಗಜನೆಂಬ ರಾಜಕಂಚುಕಿಯ ವಶದಲ್ಲಿದ್ದ ಎರಡನೆಯ ಅಂತಃಪುರಕ್ಕೆ ಬರುವಳು. ಅರಸನು ಅವಳನ್ನು ಮೆಚ್ಚಿ ಹೆಸರು ಹೇಳಿ ಕರೆಯಿಸಿದ ಹೊರತಾಗಿ ಒಬ್ಬಳೂ ಅರಸನ ಬಳಿಗೆ ಪುನಃ ಹೋಗುವ ಹಾಗಿರಲಿಲ್ಲ.
14 ಆಕೆ ರಾಜನಿವಾಸಕ್ಕೆ ಸಾಯಂಕಾಲ ಹೋದವಳು ಮಾರನೆಯ ದಿನ ಬೆಳಗ್ಗೆ ಅರಸನ ಉಪಪತ್ನಿಗಳ ಪಾಲಕನಾದ ಶವಷ್ಗಜನೆಂಬ ರಾಜಕಂಚುಕಿಯ ವಶದಲ್ಲಿದ್ದ ಎರಡನೆಯ ಅಂತಃಪುರಕ್ಕೆ ಬರಬೇಕಾಗಿತ್ತು. ಅರಸನು ಅವಳನ್ನು ಬಯಸಿ ಅವಳ ಹೆಸರು ಹಿಡಿದು ಕರೆಕಳುಹಿಸಿದ ಹೊರತು ಅವಳು ಪುನಃ ಅರಸನ ಬಳಿಗೆ ಹೋಗುವಂತಿರಲಿಲ್ಲ.
14 ಆಕೆಯು ಅಲ್ಲಿಗೆ ಸಾಯಂಕಾಲ ಹೋದವಳು [ಮರುದಿನ] ಬೆಳಿಗ್ಗೆ ಅರಸನ ಉಪಪತ್ನಿಗಳ ಪಾಲಕನಾದ ಶವಷ್ಗಜನೆಂಬ ರಾಜಕಂಚುಕಿಯ ವಶದಲ್ಲಿದ್ದ ಎರಡನೆಯ ಅಂತಃಪುರಕ್ಕೆ ಬರುವಳು. ಅರಸನು ಅವಳನ್ನು ಮೆಚ್ಚಿ ಹೆಸರು ಹೇಳಿ ಕರಿಸಿದರೆ ಹೊರತಾಗಿ ಒಬ್ಬಳೂ ಅರಸನ ಬಳಿಗೆ ತಿರಿಗಿ ಹೋಗುವ ಹಾಗಿರಲಿಲ್ಲ.
14 ಮುಸ್ಸಂಜೆಯ ಸಮಯದಲ್ಲಿ ಕನ್ಯೆಯು ರಾಜನಿವಾಸವನ್ನು ಪ್ರವೇಶಿಸುವಳು. ಮರುದಿವಸ ಮುಂಜಾನೆ ಆಕೆಯು ಅಲ್ಲಿಂದ ಹಿಂತಿರುಗಿ ರಾಜನ ಉಪಪತ್ನಿಯರು ಉಳಿದುಕೊಳ್ಳುವ ಅಂತಃಪುರದ ಇನ್ನೊಂದು ಭಾಗದಲ್ಲಿ ನೆಲೆಸುವಳು. ಅಲ್ಲಿ ಆಕೆ ರಾಜನ ಕಂಚುಕಿ ಶವಷ್ಗಜನ ಮೇಲ್ವಿಚಾರಣೆಯಲ್ಲಿರುವಳು. ಶವಷ್ಗಜನು ರಾಜನ ಉಪಪತ್ನಿಗಳ ಮೇಲ್ವಿಚಾರಕನಾಗಿದ್ದನು. ರಾಜನು ಆಕೆಯ ಹೆಸರೆತ್ತಿ ಕರೆದಾಗ ಮಾತ್ರವೇ ಆಕೆಯು ತಿರುಗಿ ರಾಜನ ಬಳಿಗೆ ಹೋಗುವಳು. ಕರೆಯದಿದ್ದಲ್ಲಿ ಆಕೆಯು ಅಲ್ಲಿಯೇ ಇರುವಳು.
“ಅರಸನು ಹೇಳಿಕಳುಹಿಸದೆ ಅರಸನ ಬಳಿಗೆ ಅರಮನೆಯ ಒಳಾಂಗಣಕ್ಕೆ ಹೋಗುವ ಗಂಡಸರಿಗಾಗಲಿ, ಹೆಂಗಸರಿಗಾಗಲಿ ಮರಣದಂಡನೆಯಾಗುವುದು. ಒಂದು ವೇಳೆ ಒಳಗೆ ಬಂದ ವ್ಯಕ್ತಿಯ ಕಡೆಗೆ ಅರಸನು ತನ್ನ ಸ್ವರ್ಣದಂಡವನ್ನು ಚಾಚಿದರೆ ಅವನಿಗೆ ಮಾತ್ರ ಮರಣದಂಡನೆಯಾಗದೆ ಜೀವದಿಂದ ಉಳಿಯುವರು. ಈ ರಾಜಾಜ್ಞೆಯನ್ನು ಅರಸನ ಸಮಸ್ತ ಸೇವಕರೂ ಅರಸನ ಪ್ರಾಂತಗಳ ಜನರೂ ತಿಳಿದಿದ್ದಾರೆ. ಆದರೆ ಕಳೆದ ಮೂವತ್ತು ದಿನಗಳಿಂದ ಅರಸನ ಬಳಿಗೆ ಹೋಗುವುದಕ್ಕೆ ನನಗೆ ಆಮಂತ್ರಣವೇ ಬರಲಿಲ್ಲ,” ಎಂದು ತಿಳಿಸುವಂತೆ ಹೇಳಿದಳು.
ಏಕೆಂದರೆ ನನ್ನ ಸೇವಕನಾದ ಯಾಕೋಬನಿಗಾಗಿ, ನಾನು ಆಯ್ದುಕೊಂಡ ಇಸ್ರಾಯೇಲಿಗಾಗಿ ಹೆಸರು ಹಿಡಿದು ನಿನ್ನನ್ನು ಕರೆದಿದ್ದೇನೆ. ನೀನು ನನ್ನನ್ನು ಅರಿಯದವನಾಗಿದ್ದರೂ ನಿನಗೆ ಹೆಸರನ್ನು ಇಟ್ಟಿದ್ದೇನೆ.
ಈಗಲಾದರೋ ಯಾಕೋಬನ ವಂಶವೇ, ಇಸ್ರಾಯೇಲ್ ಸಂತಾನವೇ, ನಿನ್ನನ್ನು ಸೃಷ್ಟಿಸಿ, ರೂಪಿಸಿದ ಯೆಹೋವ ದೇವರು ಹೇಳುವುದೇನೆಂದರೆ: “ಹೆದರಬೇಡ, ಏಕೆಂದರೆ ನಾನು ನಿನ್ನನ್ನು ವಿಮೋಚಿಸಿದೆನಲ್ಲಾ, ನಿನ್ನ ಹೆಸರು ಹಿಡಿದು ಕರೆದೆನಲ್ಲಾ, ನೀನು ನನ್ನವನೇ.
ತರುವಾಯ ಅವಳು ಅವನಿಗೆ ಇಷ್ಟವಾಗದೆ ಹೋದರೆ, ಅವನು ಅವಳನ್ನು ಅವಳು ಬಯಸಿದ ಸ್ಥಳಕ್ಕೆ ಕಳುಹಿಸಿಬಿಡಬೇಕು. ಅವಳನ್ನು ಅವಮಾನಪಡಿಸಿದ್ದರಿಂದ ದಾಸತ್ವಕ್ಕೆ ಮಾರಲೂಬಾರದು, ದಾಸಿಯಂತೆ ನಡೆಸಲೂಬಾರದು.
ಮೊರ್ದೆಕೈಯ ದತ್ತುಮಗಳೂ, ಅವನ ಚಿಕ್ಕಪ್ಪನಾದ ಅಬೀಹೈಲನ ಮಗಳೂ ಆದ ಎಸ್ತೇರಳು ಅರಸನ ಬಳಿಗೆ ಹೋಗಲು ಸರದಿ ಬಂದಾಗ, ಸ್ತ್ರೀಯರ ಪಾಲಕನೂ ರಾಜಕಂಚುಕಿಯೂ ಆದ ಹೇಗೈ ನೇಮಿಸಿದ್ದನ್ನೇ ಹೊರತು ಬೇರಾವುದನ್ನೂ ಆಕೆ ಕೇಳಲಿಲ್ಲ. ಇದಲ್ಲದೆ ಎಸ್ತೇರಳು ತನ್ನನ್ನು ನೋಡುವ ಎಲ್ಲರಿಂದಲೂ ದಯೆಹೊಂದಿದ್ದಳು.