Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಎಸ್ತೇರಳು 2:17 - ಕನ್ನಡ ಸಮಕಾಲಿಕ ಅನುವಾದ

17 ಅರಸನು ಸಕಲ ಕನ್ಯೆಯರಿಗಿಂತ ಹೆಚ್ಚಾಗಿ ಎಸ್ತೇರಳನ್ನು ಮೆಚ್ಚಿಕೊಂಡನು. ಅವಳಿಗೆ ಅವನ ಸಮ್ಮುಖದಲ್ಲಿ ಸಮಸ್ತ ಕನ್ಯೆಯರಿಗಿಂತ ಹೆಚ್ಚು ದಯೆಯೂ ಮೆಚ್ಚುಗೆಯೂ ದೊರಕಿತು. ಆದ್ದರಿಂದ ಅವನು ರಾಜಕಿರೀಟವನ್ನು ಅವಳ ತಲೆಯ ಮೇಲೆ ಇರಿಸಿ ಎಸ್ತೇರಳನ್ನು ವಷ್ಟಿಗೆ ಬದಲಾಗಿ ರಾಣಿಯನ್ನಾಗಿ ಆರಿಸಿಕೊಂಡನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

17 ಅರಸನು ಎಲ್ಲಾ ಸ್ತ್ರೀಯರಲ್ಲಿ ಎಸ್ತೇರಳನ್ನು ಮೆಚ್ಚಿದನು. ಎಲ್ಲಾ ಕನ್ಯೆಯರಲ್ಲಿ ಆಕೆಯು ಅವನ ದಯೆಗೂ, ಪ್ರೀತಿಗೂ ಪಾತ್ರಳಾದುದರಿಂದ ಅವನು ರಾಜ ಮುಕುಟವನ್ನು ಆಕೆಯ ತಲೆಯ ಮೇಲಿಟ್ಟು, ಆಕೆಯನ್ನು ವಷ್ಟಿಗೆ ಬದಲಾಗಿ ರಾಣಿಯನ್ನಾಗಿ ಮಾಡಿಕೊಂಡನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

17 ಅರಸನು, ಎಲ್ಲಾ ಸ್ತ್ರೀಯರಿಗಿಂತಲೂ ಹೆಚ್ಚಾಗಿ ಎಸ್ತೇರಳನ್ನು ಮೆಚ್ಚಿಕೊಂಡನು. ಎಲ್ಲಾ ಕನ್ಯೆಯರ ಪೈಕಿ ಅರಸನ ವಿಶೇಷ ದಯೆಗೂ ಪ್ರೀತಿಗೂ ಪಾತ್ರಳಾದಳು. ಈ ಕಾರಣ, ಅರಸನು ಆಕೆಯ ತಲೆಯ ಮೇಲೆ ರಾಜಮುಕುಟವನ್ನಿಟ್ಟು ವಷ್ಟಿರಾಣಿಗೆ ಬದಲಾಗಿ ಆಕೆಯನ್ನು ತನ್ನ ಪಟ್ಟದರಸಿಯನ್ನಾಗಿ ಆರಿಸಿಕೊಂಡನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

17 ಎಲ್ಲಾ ಕನ್ಯೆಯರಲ್ಲಿ ಆಕೆಯು ಅವನ ದಯೆಗೂ ಪ್ರೀತಿಗೂ ಪಾತ್ರಳಾದದರಿಂದ ಅವನು ರಾಜಮುಕುಟವನ್ನು ಆಕೆಯ ತಲೆಯ ಮೇಲಿಟ್ಟು ಆಕೆಯನ್ನು ವಷ್ಟಿಗೆ ಬದಲಾಗಿ ರಾಣಿಯನ್ನಾಗಿ ಮಾಡಿಕೊಂಡು

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

17 ಎಲ್ಲಾ ಕನ್ಯೆಯರಿಗಿಂತ ರಾಜನು ಎಸ್ತೇರಳನ್ನು ಬಹಳವಾಗಿ ಪ್ರೀತಿಸಿದನು. ಆಕೆ ಅವನ ಮೆಚ್ಚಿಕೆಗೆ ಪಾತ್ರಳಾದಳು. ಎಲ್ಲಾ ಕನ್ಯೆಯರಲ್ಲಿ ಅವಳನ್ನು ಮಾತ್ರ ರಾಜನು ಹೆಚ್ಚಾಗಿ ಇಷ್ಟಪಟ್ಟನು. ಅರಸನಾದ ಅಹಷ್ವೇರೋಷನು ರಾಜ ಕಿರೀಟವನ್ನು ಆಕೆಯ ತಲೆಯ ಮೇಲಿರಿಸಿ ವಷ್ಟಿಯ ಬದಲಾಗಿ ಎಸ್ತೇರಳನ್ನು ತನ್ನ ರಾಣಿಯನ್ನಾಗಿ ಮಾಡಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಎಸ್ತೇರಳು 2:17
10 ತಿಳಿವುಗಳ ಹೋಲಿಕೆ  

ಯೆಹೋವ ದೇವರಾದ ನಾನು ಎತ್ತರವಾದ ಮರವನ್ನು ತಗ್ಗಿಸಿ, ತಗ್ಗಾದದ್ದನ್ನು ಎತ್ತರ ಪಡಿಸಿ, ಹಸುರಾಗಿರುವುದನ್ನು ಒಣಗಿಸಿ, ಒಣಗಿದ್ದನ್ನು ಚಿಗುರಿಸಿದ್ದೇನೆ, ಎಂದು ಅರಣ್ಯದ ಸಕಲ ವೃಕ್ಷಗಳು ತಿಳಿಯುವುದು. “ ‘ಯೆಹೋವ ದೇವರಾದ ನಾನೇ ಮಾತನಾಡಿ, ಅದನ್ನು ನಡೆಸಿದ್ದೇನೆ.’ ”


ಏಕೆಂದರೆ ನೀನು ಈಗ ಮೌನವಾಗಿದ್ದು ಬಿಟ್ಟರೆ ಮತ್ತೊಂದು ಕಡೆಯಿಂದ ಯೆಹೂದ್ಯರಿಗೆ ಸಹಾಯವೂ ಬಿಡುಗಡೆಯೂ ಉಂಟಾಗುವುವು. ಆದರೆ ನೀನೂ ನಿನ್ನ ತಂದೆಯ ಮನೆಯವರೂ ನಾಶವಾಗಿಹೋಗುವಿರಿ. ಇಂಥಾ ಕಾಲಕ್ಕೋಸ್ಕರ ನೀನು ಪಟ್ಟಕ್ಕೆ ಬಂದಿರಬಹುದು, ಯಾರಿಗೆ ಗೊತ್ತು?” ಎಂದು ಹೇಳಿ ಕಳುಹಿಸಿದನು.


ದೇವರು ದರಿದ್ರನನ್ನು ಭೂಮಿಯ ಧೂಳಿನಿಂದ ಎತ್ತುತ್ತಾರೆ. ಭಿಕ್ಷುಕನನ್ನು ತಿಪ್ಪೆ ಗುಂಡಿಯಿಂದ ತೆಗೆದು ಉನ್ನತಕ್ಕೇರಿಸುವವರೂ ಆಗಿದ್ದಾರೆ. ಅವರನ್ನು ಪ್ರಧಾನರ ಮಧ್ಯದಲ್ಲಿ ಕೂಡ್ರಿಸುತ್ತಾರೆ. ಘನತೆಯ ಸಿಂಹಾಸನವನ್ನು ಬಾಧ್ಯವಾಗಿ ಕೊಡುತ್ತಾರೆ. “ಭೂಮಿಯ ಆಧಾರ ಸ್ತಂಭಗಳು ಯೆಹೋವ ದೇವರದ್ದೇ. ಭೂಲೋಕವನ್ನು ಅವುಗಳ ಮೇಲೆ ಇಟ್ಟಿದ್ದಾರೆ.


ಎಸ್ತೇರಳು ಅರಸನಾದ ಅಹಷ್ವೇರೋಷನ ಆಳಿಕೆಯ ಏಳನೆಯ ವರ್ಷದ ಹತ್ತನೆಯ ತಿಂಗಳಾದ ತೇಬೆತ್ ಎಂಬ ಪುಷ್ಯ ಮಾಸದಲ್ಲಿ ಅರಸನ ಬಳಿಗೆ ಕರೆತರಲಾಯಿತು.


ಅರಸನು ಧರಿಸಿಕೊಳ್ಳುವ ರಾಜವಸ್ತ್ರಗಳನ್ನೂ, ಅರಸನು ಸವಾರಿ ಮಾಡುವ ಕುದುರೆಯನ್ನೂ, ಅರಸನ ತಲೆಯ ಮೇಲೆ ಧರಿಸಿಕೊಳ್ಳುವ ರಾಜಕಿರೀಟವನ್ನೂ ತರಿಸಬೇಕು.


ಅರಸನ ಹೃದಯವು ಯೆಹೋವ ದೇವರ ಕೈಯಲ್ಲಿ ನೀರಿನ ಕಾಲುವೆಗಳಂತೆ; ತನಗೆ ಇಷ್ಟವಾದ ಕಡೆಗೆ ಆತನು ಅದನ್ನು ತಿರುಗಿಸುತ್ತಾನೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು