Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಎಸ್ತೇರಳು 2:21 - ಕನ್ನಡ ಸಮಕಾಲಿಕ ಅನುವಾದ

21 ಆ ದಿವಸಗಳಲ್ಲಿ ಮೊರ್ದೆಕೈಯು ಅರಮನೆಯ ಬಾಗಿಲಲ್ಲಿ ಕುಳಿತಿರುವಾಗ, ದ್ವಾರಪಾಲಕರಾದಂಥ ಅರಸನ ರಾಜಕಂಚುಕಿಗಳಾದ ಬಿಗೆತಾನ್ ಮತ್ತು ತೆರೆಷ್ ಎಂಬಿಬ್ಬರು ಅರಸನಾದ ಅಹಷ್ವೇರೋಷನ ಮೇಲೆ ಕೋಪಗೊಂಡು ಅವನನ್ನು ಕೊಲ್ಲಬೇಕೆಂದು ಒಳಸಂಚು ಮಾಡಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

21 ಆ ದಿನಗಳಲ್ಲಿ ಮೊರ್ದೆಕೈಯು ಅರಮನೆಯ ದ್ವಾರಪಾಲಕರಾದ ಬಿಗೆತಾನ್ ಮತ್ತು ತೆರೆಷ್ ಎಂಬ ಇಬ್ಬರು ರಾಜಕಂಚುಕಿಯರು ಕೋಪವುಳ್ಳವರಾಗಿ ಅರಸನಾದ ಅಹಷ್ವೇರೋಷನಿಗೆ ವಿರುದ್ಧವಾಗಿ ಕೈಯೆತ್ತಬೇಕೆಂದು ಒಳಸಂಚು ಮಾಡಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

21 ಆ ದಿನಗಳಲ್ಲಿ ಮೊರ್ದೆಕೈ, ಎಂದಿನಂತೆ ಅರಮನೆಯ ಹೆಬ್ಬಾಗಿಲಿನಲ್ಲಿ ಕುಳಿತುಕೊಂಡಿದ್ದಾಗ ದ್ವಾರಪಾಲಕರಾದ ಬಿಗೆತಾನ್ ಮತ್ತು ತೆರೆಷ್ ಎಂಬಿಬ್ಬರು ರಾಜಕಂಚುಕಿಗಳು ಅರಸನ ವಿರುದ್ಧ ಕೈಯೆತ್ತಬೇಕು ಎಂದು ಒಳಸಂಚು ಮಾಡಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

21 ಆ ದಿನಗಳಲ್ಲಿ ಮೊರ್ದೆಕೈಯು ಅರಮನೆಯ ಹೆಬ್ಬಾಗಲಿನಲ್ಲಿ ಕೂತುಕೊಂಡಿದ್ದಾಗ ಅರಮನೆಯ ದ್ವಾರಪಾಲಕರಾದ ಬಿಗೆತಾನ್ ತೆರೆಷ್ ಎಂಬ ಇಬ್ಬರು ರಾಜಕಂಚುಕಿಯರು ಕೋಪವುಳ್ಳವರಾಗಿ ಅರಸನಾದ ಅಹಷ್ವೇರೋಷನಿಗೆ ವಿರೋಧವಾಗಿ ಕೈಯೆತ್ತಬೇಕೆಂದು ಒಳಸಂಚುಮಾಡಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

21 ಮೊರ್ದೆಕೈ ಅರಮನೆಯ ಹೆಬ್ಬಾಗಿಲ ಬಳಿ ಕುಳಿತುಕೊಂಡಿದ್ದ ಸಮಯದಲ್ಲಿ ಒಂದು ವಿಷಯ ನಡೆಯಿತು. ಬಿಗೆತಾನ್ ಮತ್ತು ತೆರೆಷ್ ಎಂಬ ಇಬ್ಬರು ದ್ವಾರಪಾಲಕರು ಅರಸನ ಮೇಲೆ ಕೋಪಗೊಂಡು ಅವನನ್ನು ಕೊಲ್ಲಲು ಒಳಸಂಚು ಮಾಡುತ್ತಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಎಸ್ತೇರಳು 2:21
13 ತಿಳಿವುಗಳ ಹೋಲಿಕೆ  

ಅದನ್ನು ಅರಸನ ಮುಂದೆ ತಂದು ಓದಿಸಿದಾಗ, ದ್ವಾರಪಾಲಕರಾಗಿದ್ದ ರಾಜಕಂಚುಕಿಯರಲ್ಲಿ ಇಬ್ಬರಾದ ಬಿಗೆತಾನನೂ ತೆರೆಷನೂ ಅರಸನಾದ ಅಹಷ್ವೇರೋಷನನ್ನು ಕೊಲ್ಲಬೇಕೆಂದು ಒಳಸಂಚುಮಾಡಿದ ಘಟನೆಯು ಬರೆದಿತ್ತು. ಮೊರ್ದೆಕೈಯು ಹೇಗೆ ಅದನ್ನು ಅರಸನಿಗೆ ತಿಳಿಸಿದನೆಂದು ಸಹ ಅದರಲ್ಲಿ ಬರೆದಿತ್ತು.


ಅರಸರಿಗೆ ಜಯವನ್ನು ಕೊಡುವ ದೇವರೇ, ನಿಮ್ಮ ಸೇವಕನಾದ ದಾವೀದನನ್ನೂ ಭಯಂಕರ ಖಡ್ಗದಿಂದ ಬಿಡಿಸಿದ್ದೀರಿ.


ಆಮೋನನ ಸೇವಕರು ಅವನ ವಿರುದ್ಧ ಒಳಸಂಚುಮಾಡಿ, ಅರಮನೆಯಲ್ಲಿಯೇ ಅವನನ್ನು ಕೊಂದುಹಾಕಿದರು.


ಯೋವಾಷನ ಸೇವಕರು ಎದ್ದು ಅವನಿಗೆ ವಿರೋಧವಾಗಿ ಒಳಸಂಚುಮಾಡಿ, ಸಿಲ್ಲಾ ಊರಿಗೆ ಇಳಿದು ಹೋಗುವ ಮಾರ್ಗವಾದ ಬೇತ್ ಮಿಲ್ಲೋ ಎಂಬ ಸ್ಥಳದಲ್ಲಿ ಯೋವಾಷನನ್ನು ಕೊಂದುಹಾಕಿದರು.


ಆದರೆ ತಿರ್ಚದಲ್ಲಿ ತನ್ನ ಮನೆಯ ಉಗ್ರಾಣಿಕನಾದ ಅರ್ಚನ ಮನೆಯಲ್ಲಿ ಅವನು ಕುಡಿದು ಮತ್ತನಾಗಿರುವಾಗ, ಅರ್ಧ ರಥಗಳಿಗೆ ಅಧಿಪತಿಯಾಗಿರುವ ಅವನ ಸೇವಕನಾದ ಜಿಮ್ರಿಯನು ಅವನಿಗೆ ವಿರೋಧವಾಗಿ ಒಳಸಂಚು ಮಾಡಿದನು.


ದಾವೀದನು ಅಬೀಷೈಯನಿಗೂ, ತನ್ನ ಸಮಸ್ತ ಸೇವಕರಿಗೂ, “ನನ್ನ ಹೊಟ್ಟೆಯಲ್ಲಿ ಹುಟ್ಟಿದ ನನ್ನ ಮಗನು ನನ್ನ ಪ್ರಾಣವನ್ನು ಹುಡುಕಿದರೆ, ಎಷ್ಟೋ ಅಧಿಕವಾಗಿ ಬೆನ್ಯಾಮೀನನಾದವನು ಈಗ ಏನು ಮಾಡಿಯಾನು? ಅವನನ್ನು ಬಿಟ್ಟುಬಿಡಿರಿ. ಅವನು ದೂಷಿಸಲಿ. ಏಕೆಂದರೆ ಯೆಹೋವ ದೇವರು ಅವನಿಗೆ ಹಾಗೆಯೇ ಹೇಳಿದ್ದಾರೆ.


ಆದರೆ ಅಹಷ್ವೇರೋಷನು ಆಳುವಾಗ, ಅವನ ಆಳ್ವಿಕೆಯ ಪ್ರಾರಂಭದಲ್ಲಿ, ಅವರು ಯೆಹೂದ ಮತ್ತು ಯೆರೂಸಲೇಮಿನ ನಿವಾಸಿಗಳಿಗೆ ವಿರೋಧವಾಗಿ ದೂರು ಸಲ್ಲಿಸಿದರು.


ಕನ್ಯೆಯರನ್ನು ಎರಡನೆಯ ಸಾರಿ ಕೂಡಿಸುವಾಗ, ಮೊರ್ದೆಕೈಯು ಅರಮನೆಯ ಹೆಬ್ಬಾಗಿಲಲ್ಲಿ ಕುಳಿತುಕೊಂಡಿದ್ದನು.


ದಾನಿಯೇಲನು ಅರಸನನ್ನು ಬೇಡಿಕೊಂಡಿದ್ದರಿಂದ, ಅರಸನು ಶದ್ರಕ್, ಮೇಶಕ್, ಅಬೇದ್‌ನೆಗೋ ಎಂಬುವರನ್ನು ಬಾಬಿಲೋನಿನ ಸಂಸ್ಥಾನದ ಕಾರ್ಯಾಧಿಕಾರಿಗಳನ್ನಾಗಿ ನೇಮಿಸಿದನು. ದಾನಿಯೇಲನು ಅರಸನ ಅರಮನೆಯಲ್ಲಿ ಉಳಿದನು.


ಆ ರಾತ್ರಿ ಅರಸನಿಗೆ ನಿದ್ರೆ ಬರಲಿಲ್ಲ. ಆದ್ದರಿಂದ ಅರಸನು ಇತಿಹಾಸ ಘಟನೆಗಳನ್ನು ಬರೆದಿಟ್ಟಿದ್ದ ಗ್ರಂಥವನ್ನು ತೆಗೆದುಕೊಂಡು ಬರಲು ಹೇಳಿದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು