Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಎಸ್ತೇರಳು 3:13 - ಕನ್ನಡ ಸಮಕಾಲಿಕ ಅನುವಾದ

13 ಹನ್ನೆರಡನೆಯ ತಿಂಗಳಾದ ಆದಾರ್ ಮಾಸದ ಹದಿಮೂರನೆಯ ದಿನದಲ್ಲಿ, ಹಿರಿಯರೂ, ಕಿರಿಯರೂ, ಮಕ್ಕಳೂ, ಮಹಿಳೆಯರೂ, ಒಟ್ಟು ಎಲ್ಲಾ ಯೆಹೂದ್ಯರನ್ನು ಒಂದೇ ದಿನದಲ್ಲಿ ಕೊಂದುಹಾಕುವುದಕ್ಕೂ ನಾಶಮಾಡುವುದಕ್ಕೂ ಅವರ ಆಸ್ತಿಯನ್ನು ಕೊಳ್ಳೆ ಹೊಡೆಯುವದಕ್ಕೂ ಅರಸನ ಎಲ್ಲಾ ಪ್ರಾಂತಗಳಿಗೆ ಅಂಚೆಯವರ ಮೂಲಕ ಪತ್ರಗಳನ್ನು ಕಳುಹಿಸಲಾಯಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

13 ಪತ್ರಗಳು ಅಂಚೆಯವರ ಮುಖಾಂತರ ಎಲ್ಲಾ ರಾಜಸಂಸ್ಥಾನಗಳಿಗೆ ಕಳುಹಿಸಲ್ಪಟ್ಟವು. ಅವುಗಳಲ್ಲಿ, “ಒಂದೇ ದಿನದಲ್ಲಿ ಅಂದರೆ ಹನ್ನೆರಡನೆಯ ತಿಂಗಳಾದ ಫಾಲ್ಗುಣಮಾಸದ ಹದಿಮೂರನೆಯ ದಿನದಲ್ಲಿ ಹುಡುಗರು, ಹಿರಿಯರು, ಹೆಂಗಸರು, ಮಕ್ಕಳು ಎಂದು ನೋಡದೆ ಎಲ್ಲಾ ಯೆಹೂದ್ಯರನ್ನು ಕೊಲ್ಲಿರಿ, ಸಂಹರಿಸಿರಿ, ನಿರ್ನಾಮಗೊಳಿಸಿರಿ. ಅವರ ಸೊತ್ತನ್ನು ಸೂರೆಮಾಡಿರಿ” ಎಂದೂ ಬರೆದಿತ್ತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

13 ಪತ್ರಗಳನ್ನು ಅಂಚೆಯವರ ಮುಖಾಂತರ ಎಲ್ಲಾ ರಾಜಸಂಸ್ಥಾನಗಳಿಗೆ ಕಳಿಸಲಾಯಿತು. ಅವುಗಳಲ್ಲಿ ಈ ರೀತಿ ಬರೆದಿತ್ತು: “ಒಂದೇ ದಿನದಲ್ಲಿ, ಅಂದರೆ, ಹನ್ನೆರಡನೆ ತಿಂಗಳಾದ ಫಾಲ್ಗುಣ ಮಾಸದ ಹದಿಮೂರನೆಯ ದಿನದಲ್ಲಿ ಹಿರಿಯರು, ಕಿರಿಯರು, ಮಕ್ಕಳು, ಮಹಿಳೆಯರೆನ್ನದೆ ನಿಮ್ಮ ಮಧ್ಯೆ ವಾಸಿಸುವ ಎಲ್ಲಾ ಯೆಹೂದ್ಯರನ್ನು ಕೊಂದುಹಾಕಿ, ನಿರ್ಮೂಲಮಾಡಿ, ನಿರ್ನಾಮಗೊಳಿಸಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

13 ಪತ್ರಗಳು ಅಂಚೆಯವರ ಮುಖಾಂತರ ಎಲ್ಲಾ ರಾಜಸಂಸ್ಥಾನಗಳಿಗೆ ಕಳುಹಿಸಲ್ಪಟ್ಟವು. ಅವುಗಳಲ್ಲಿ - ಒಂದೇ ದಿನದಲ್ಲಿ ಅಂದರೆ ಹನ್ನೆರಡನೆಯ ತಿಂಗಳಾದ ಫಾಲ್ಗುನ ಮಾಸದ ಹದಿಮೂರನೆಯ ದಿನದಲ್ಲಿ ಹುಡುಗರು, ಮುದುಕರು, ಹೆಂಗಸರು, ಮಕ್ಕಳು ಎಂದು ನೋಡದೆ ಎಲ್ಲಾ ಯೆಹೂದ್ಯರನ್ನು ಕೊಲ್ಲಿರಿ, ಸಂಹರಿಸಿರಿ, ನಿರ್ನಾಮಗೊಳಿಸಿರಿ, ಅವರ ಸೊತ್ತನ್ನು ಸೂರೆಮಾಡಿರಿ ಎಂದೂ

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

13 ರಾಜಾಜ್ಞೆಯನ್ನು ಹೊತ್ತ ಸಂದೇಶವಾಹಕರು ದೇಶದ ಎಲ್ಲಾ ಕಡೆಗಳಲ್ಲಿ ಹೊತ್ತುಕೊಂಡು ಬಂದರು. ಆ ಪತ್ರದಲ್ಲಿ ಹನ್ನೆರಡನೇ ತಿಂಗಳಿನ ಹದಿಮೂರನೇ ದಿವಸದಂದು ಆಯಾ ಪ್ರಾಂತ್ಯಗಳಲ್ಲಿರುವ ಎಲ್ಲಾ ಯೆಹೂದ್ಯರನ್ನು ಚಿಕ್ಕವರು ದೊಡ್ಡವರು ಎನ್ನದೆ ಕೊಂದು ಅವರ ವಸ್ತುಗಳನ್ನೆಲ್ಲ ಸೂರೆ ಮಾಡಬೇಕೆಂಬದಾಗಿ ಬರೆದಿತ್ತು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಎಸ್ತೇರಳು 3:13
14 ತಿಳಿವುಗಳ ಹೋಲಿಕೆ  

ಇವರು ಯೆಹೂದ್ಯರ ವೈರಿಯಾದ ಹಮ್ಮೆದಾತನ ಮಗ ಹಾಮಾನನ ಹತ್ತು ಮಂದಿ ಪುತ್ರರು. ಆದರೆ ಅವರು ಇವರ ಸುಲಿಗೆಯನ್ನು ತೆಗೆದುಕೊಳ್ಳಲಿಲ್ಲ.


ಅದೇ ಪ್ರಕಾರ ಓಟಗಾರರು ಅರಸನ ಕೈಯಿಂದಲೂ ಅವನ ಪ್ರಧಾನರ ಕೈಯಿಂದಲೂ ಪತ್ರಗಳನ್ನು ತೆಗೆದುಕೊಂಡು, ಅರಸನ ಅಪ್ಪಣೆಯ ಪ್ರಕಾರ ಸಮಸ್ತ ಇಸ್ರಾಯೇಲ್ ಮತ್ತು ಯೆಹೂದ ದೇಶಗಳಿಗೆ ಹೋಗಿ, “ಇಸ್ರಾಯೇಲರೇ, ಅಬ್ರಹಾಮನ, ಇಸಾಕನ, ಇಸ್ರಾಯೇಲಿನ ದೇವರಾದ ಯೆಹೋವ ದೇವರ ಕಡೆಗೆ ತಿರುಗಿರಿ. ಆಗ ಅವರು ಅಸ್ಸೀರಿಯದ ಅರಸರ ಕೈಗೆ ತಪ್ಪಿಸಿಕೊಂಡ ನಿಮ್ಮ ಉಳಿದವರ ಕಡೆಗೆ ತಿರುಗುವರು.


ಈಗ ನೀನು ಹೋಗಿ ಅಮಾಲೇಕ್ಯರನ್ನು ಹೊಡೆದು, ಅವರಿಗೆ ಉಂಟಾದದ್ದನ್ನೆಲ್ಲಾ ಸಂಪೂರ್ಣವಾಗಿ ನಾಶಮಾಡಿಬಿಟ್ಟು, ಅವರನ್ನು ಕನಿಕರಿಸದೆ ಪುರುಷರನ್ನೂ, ಸ್ತ್ರೀಯರನ್ನೂ, ಚಿಕ್ಕವರನ್ನೂ, ಹಸುಗೂಸುಗಳನ್ನೂ, ದನಗಳನ್ನೂ, ಕುರಿಗಳನ್ನೂ, ಒಂಟೆಗಳನ್ನೂ, ಕತ್ತೆಗಳನ್ನೂ ಕೊಂದುಹಾಕು,’ ” ಎಂಬದು.


ಕರುಣೆ ತೋರಿಸದೆ ಇರುವವರಿಗೆ ಕರುಣೆಯಿಲ್ಲದ ನ್ಯಾಯತೀರ್ಪಾಗುವುದು. ಕರುಣೆವುಳ್ಳವರೋ ನ್ಯಾಯತೀರ್ಪಿನ ಮೇಲೆಯೇ ವಿಜಯವನ್ನು ಸಾಧಿಸುವರು.


“ಅವರ ಕಾಲುಗಳು ರಕ್ತಪಾತಕ್ಕೆ ಆತುರಗೊಂಡಿವೆ.


ಒಬ್ಬ ಸುದ್ದಿಗಾರ ಇನ್ನೊಬ್ಬ ಸುದ್ದಿಗಾರನ ಕಡೆ ಓಡುತ್ತಾನೆ. ಒಬ್ಬ ದೂತ ಇನ್ನೊಬ್ಬ ದೂತನ ಕಡೆಗೆ ಓಡಿಹೋಗಿ, ಬಾಬಿಲೋನಿನ ಅರಸನಿಗೆ ಈ ಸಮಾಚಾರವನ್ನು ತಿಳಿಸುತ್ತಾನೆ, ನಿನ್ನ ರಾಜಧಾನಿಯನ್ನು ಎಲ್ಲಾ ಕಡೆಯಿಂದ ಆಕ್ರಮಿಸಿದ್ದಾರೆ,


ನಾನು ಅವನನ್ನು ಭಕ್ತಿಹೀನ ಜನರಿಗೆ ವಿರುದ್ಧವಾಗಿ ಕಳುಹಿಸಿ, ನನ್ನ ಕೋಪಕ್ಕೆ ಗುರಿಯಾದ ನನ್ನ ಪ್ರಜೆಯನ್ನು ಸೂರೆಮಾಡಿ, ಕೊಳ್ಳೆಹೊಡೆದು ಬೀದಿಯ ಕೆಸರನ್ನೋ ಎಂಬಂತೆ ತುಳಿದುಹಾಕಬೇಕೆಂದು ಅಪ್ಪಣೆ ಕೊಡುವೆನು.


“ಆದರೆ ನನ್ನ ದಿನಗಳು ಅಂಚೆಯವನಿಗಿಂತಲೂ ತ್ವರೆಯಾಗಿವೆ; ಆನಂದವನ್ನೂ ನೋಡದೆ ದಿನಗಳು ಓಡಿಹೋಗುತ್ತವೆ.


ಏಕೆಂದರೆ ನಾನು ಮತ್ತು ನನ್ನ ಜನರು ದುರಂತಕ್ಕೂ, ಕೊಲೆಗೂ, ಸರ್ವನಾಶಕ್ಕೂ ಮಾರಟವಾಗಿದ್ದೇವೆ. ಒಂದು ವೇಳೆ, ನಾವು ದಾಸರಾಗಿಯಾಗಲಿ, ದಾಸಿಯರಾಗಲಿ ಮಾರಾಟವಾಗಿದ್ದರೆ ನಾನು ಸುಮ್ಮನಿರುತ್ತಿದ್ದೆ. ಅಂಥ ಕಷ್ಟಕ್ಕಾಗಿ ನಾನು ಅರಸನನ್ನು ತೊಂದರೆಪಡಿಸದೆ ಸುಮ್ಮನೆ ಇದ್ದುಬಿಡುತ್ತಿದ್ದೆನು,” ಎಂದಳು.


ಇದಲ್ಲದೆ ಯಾಜಕರ ಪಟ್ಟಣವಾದ ನೋಬಿನಲ್ಲಿ ಇರುವ ಪುರುಷರನ್ನೂ, ಸ್ತ್ರೀಯರನ್ನೂ, ಮಕ್ಕಳನ್ನೂ, ಕೂಸುಗಳನ್ನೂ, ಎತ್ತುಗಳನ್ನೂ, ಕತ್ತೆಗಳನ್ನೂ, ಕುರಿಗಳನ್ನೂ ಖಡ್ಗದಿಂದ ಹೊಡೆದುಬಿಟ್ಟನು.


ಅವಳು, “ಅರಸನಿಗೆ ನನ್ನ ಮೇಲೆ ದಯೆಯಿದ್ದರೆ, ಈ ಕಾರ್ಯವು ಅರಸನಿಗೆ ಸರಿ ಎಂದೆಣಿಸಿದರೆ, ಅರಸನು ನನ್ನನ್ನು ಮೆಚ್ಚಿದ್ದರೆ, ಅರಸನ ಎಲ್ಲಾ ಸಂಸ್ಥಾನಗಳಲ್ಲಿರುವ ಯೆಹೂದ್ಯರನ್ನು ಕೊಂದುಹಾಕುವುದಕ್ಕೆ, ಅಗಾಗನ ವಂಶದ ಹಮ್ಮೆದಾತನ ಮಗ ಹಾಮಾನನು ಬರೆದ ಪತ್ರಗಳನ್ನು ರದ್ದುಗೊಳಿಸಲು ಆಜ್ಞೆ ಹೊರಡಿಸಬೇಕು.


ಹನ್ನೆರಡನೆಯ ತಿಂಗಳಾದ ಆದಾರ್ ತಿಂಗಳೆಂಬ ಹದಿಮೂರನೆಯ ದಿನದಲ್ಲಿ ಅರಸನ ಆಜ್ಞೆಯು ನೆರವೇರುವುದಕ್ಕೆ ನಿರ್ಣಯವಾಗಿತ್ತು. ಯೆಹೂದ್ಯರ ಶತ್ರುಗಳು ಅದೇ ದಿನದಲ್ಲಿ ಅವರ ಮೇಲೆ ದೊರೆತನ ಮಾಡುವುದಾಗಿ ಎದುರುನೋಡಿದ್ದರು. ಅದಕ್ಕೆ ಬದಲಾಗಿ ಯೆಹೂದ್ಯರೇ ತಮ್ಮನ್ನು ಹಗೆಮಾಡುವವರ ಮೇಲೆ ದೊರೆತನ ಮಾಡಲಾರಂಭಿಸಿದರು.


ಹೀಗೆ ಯೆಹೂದ್ಯರು ತಮ್ಮ ಶತ್ರುಗಳೆಲ್ಲರನ್ನು ಸೋಲಿಸಿ, ಖಡ್ಗದಿಂದ ಸಂಹರಿಸಿದರು. ತಮ್ಮನ್ನು ಹಗೆಮಾಡುತ್ತಿದ್ದವರಿಗೆ ತಮ್ಮ ಇಷ್ಟ ಬಂದ ಹಾಗೆ ಮಾಡಿದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು