11 “ಅರಸನು ಹೇಳಿಕಳುಹಿಸದೆ ಅರಸನ ಬಳಿಗೆ ಅರಮನೆಯ ಒಳಾಂಗಣಕ್ಕೆ ಹೋಗುವ ಗಂಡಸರಿಗಾಗಲಿ, ಹೆಂಗಸರಿಗಾಗಲಿ ಮರಣದಂಡನೆಯಾಗುವುದು. ಒಂದು ವೇಳೆ ಒಳಗೆ ಬಂದ ವ್ಯಕ್ತಿಯ ಕಡೆಗೆ ಅರಸನು ತನ್ನ ಸ್ವರ್ಣದಂಡವನ್ನು ಚಾಚಿದರೆ ಅವನಿಗೆ ಮಾತ್ರ ಮರಣದಂಡನೆಯಾಗದೆ ಜೀವದಿಂದ ಉಳಿಯುವರು. ಈ ರಾಜಾಜ್ಞೆಯನ್ನು ಅರಸನ ಸಮಸ್ತ ಸೇವಕರೂ ಅರಸನ ಪ್ರಾಂತಗಳ ಜನರೂ ತಿಳಿದಿದ್ದಾರೆ. ಆದರೆ ಕಳೆದ ಮೂವತ್ತು ದಿನಗಳಿಂದ ಅರಸನ ಬಳಿಗೆ ಹೋಗುವುದಕ್ಕೆ ನನಗೆ ಆಮಂತ್ರಣವೇ ಬರಲಿಲ್ಲ,” ಎಂದು ತಿಳಿಸುವಂತೆ ಹೇಳಿದಳು.
11 “ಅರಸನು ತನ್ನ ಬಳಿಗೆ ಬರಲು ಹೇಳಿದ ಹೊರತು ಅವನ ಬಳಿಗೆ ಒಳಗಣ ಪ್ರಾಕಾರಕ್ಕೆ ಹೋಗುವವರು ಮರಣದಂಡನೆಗೆ ಪಾತ್ರರಾಗುವರು ಎಂಬ ಒಂದೇ ನಿಯಮವು ಎಲ್ಲಾ ಸ್ತ್ರೀಪುರುಷರಿಗುಂಟು. ಯಾರ ಕಡೆಗೆ ಅವನು ತನ್ನ ಸುವರ್ಣದಂಡವನ್ನು ಚಾಚುವನೋ ಅವರು ಮಾತ್ರ ಜೀವದಿಂದುಳಿಯುವರು ಎಂಬುದು ಅರಸನ ಎಲ್ಲಾ ಸೇವಕರಿಗೂ ಮತ್ತು ಸಂಸ್ಥಾನಗಳ ಎಲ್ಲಾ ಜನರಿಗೂ ಗೊತ್ತು. ನನಗಂತೂ ಮೂವತ್ತು ದಿನಗಳಿಂದ ಅರಸನ ಬಳಿಗೆ ಹೋಗುವುದಕ್ಕೆ ಆಮಂತ್ರಣವಾಗಲಿಲ್ಲ” ಎಂದು ಹೇಳಿಸಿದಳು.
11 “ಅರಸನು ಹೇಳಿಕಳುಹಿಸಿದ ಹೊರತು ಅವನ ಬಳಿಗೆ ಅರಮನೆಯ ಒಳಾಂಗಣಕ್ಕೆ ಹೋಗುವವರು ಮರಣದಂಡನೆಗೆ ಗುರಿಯಾಗುವರು ಎಂಬ ನಿಷೇಧಾಜ್ಞೆ ಸ್ತ್ರೀಪುರುಷರೆನ್ನದೆ ಎಲ್ಲರಿಗೂ ಅನ್ವಯಿಸುತ್ತದೆ. ಯಾರ ಕಡೆಗೆ ಅವನು ತನ್ನ ಸ್ವರ್ಣದಂಡವನ್ನು ಚಾಚುವನೋ ಅವರು ಮಾತ್ರ ಜೀವದಿಂದುಳಿಯುವರು. ಇದು ಅರಸನ ಎಲ್ಲಾ ಸೇವಕರಿಗೂ ಸಂಸ್ಥಾನಗಳ ಎಲ್ಲಾ ನಿವಾಸಿಗಳಿಗೂ ತಿಳಿದ ವಿಷಯ; ನನಗಂತೂ ಕಳೆದ ಮೂವತ್ತು ದಿನಗಳಿಂದ ಅರಸನ ಬಳಿಗೆ ಹೋಗುವುದಕ್ಕೆ ಆಮಂತ್ರಣವೇ ಬರಲಿಲ್ಲ,” ಎಂದು ತಿಳಿಸುವಂತೆ ಹೇಳಿದಳು.
11 ಅರಸನು ಕರಿಸಿದರೆ ಹೊರತು ಅವನ ಬಳಿಗೆ ಒಳಗಣ ಪ್ರಾಕಾರಕ್ಕೆ ಹೋಗುವವರು ಮರಣದಂಡನೆಗೆ ಪಾತ್ರರಾಗುವರು ಎಂಬ ಒಂದೇ ನಿಯಮವು ಎಲ್ಲಾ ಸ್ತ್ರೀ ಪುರುಷರಿಗುಂಟು; ಯಾರ ಕಡೆಗೆ ಅವನು ತನ್ನ ಸುವರ್ಣದಂಡವನ್ನು ಚಾಚುವನೋ ಅವರು ಮಾತ್ರ ಜೀವದಿಂದುಳಿಯುವರೆಂಬದು ಅರಸನ ಎಲ್ಲಾ ಸೇವಕರಿಗೂ ಸಂಸ್ಥಾನಗಳ ಎಲ್ಲಾ ಜನರಿಗೂ ಗೊತ್ತುಂಟಲ್ಲಾ; ನನಗಂತೂ ಮೂವತ್ತು ದಿನಗಳಿಂದ ಅರಸನ ಬಳಿಗೆ ಹೋಗುವದಕ್ಕೆ ಆಮಂತ್ರಣವಾಗಲಿಲ್ಲ ಎಂದು ಹೇಳಿಸಿದಳು.
11 ಮೊರ್ದೆಕೈ, ಸಾಮ್ರಾಜ್ಯದಲ್ಲಿರುವ ಎಲ್ಲಾ ಅಧಿಕಾರಿಗಳಿಗೂ ಪ್ರಜೆಗಳಿಗೂ ತಿಳಿದಿರುವ ಒಂದು ವಿಷಯವೇನೆಂದರೆ, ರಾಜನು ಕರೆಯದೆ ಯಾರಾದರೂ ಆತನ ಬಳಿಗೆ ಹೋದರೆ ಅದಕ್ಕೆ ಮರಣದಂಡನೆಯೇ ಶಿಕ್ಷೆ ಎಂಬುದು. ರಾಜನು ತನ್ನ ಬಂಗಾರದ ದಂಡವನ್ನು ಯಾರ ಮೇಲೆ ತೋರಿಸುವನೋ ಅವನು ಮರಣಶಿಕ್ಷೆಯಿಂದ ಪಾರಾಗುವನು. ಈಗ ರಾಜನು ನನ್ನನ್ನು ಕರೆದು ಮೂವತ್ತು ದಿವಸಗಳಾದವು.”
ನೀವು ಕನಸನ್ನು ನನಗೆ ಹೇಳದಿದ್ದರೆ, ನಿಮಗೆ ಒಂದೇ ಒಂದು ಶಿಕ್ಷೆಯಿದೆ. ತಪ್ಪು ಮಾರ್ಗಕ್ಕೆ ನಡೆಸುವ ಹಾಗೂ ಕೆಟ್ಟ ಸಂಗತಿಗಳನ್ನು ನನಗೆ ಹೇಳಿ, ಪರಿಸ್ಥಿತಿಯನ್ನು ನೀವು ನನಗೆ ವಿರೋಧವಾಗಿ ಒಪ್ಪಂದ ಮಾಡಿಕೊಂಡಿದ್ದೀರಿ, ಬದಲಾವಣೆಯನ್ನು ನಿರೀಕ್ಷಿಸುವಂತೆ. ಆದ್ದರಿಂದ ಕನಸನ್ನು ನನಗೆ ಹೇಳಲೇಬೇಕು. ಆಗ ಅದನ್ನು ವ್ಯಾಖ್ಯಾನ ಮಾಡಿ, ವಿವರಿಸುವಿರೆಂದು ನಾನು ತಿಳಿಯುವೆನು,” ಎಂದನು.
ಆಗ ಅವಳು ಸಾಯಂಕಾಲದಲ್ಲಿ ರಾಜನಿವಾಸಕ್ಕೆ ಪ್ರವೇಶಿಸಿ ಮಾರನೆಯ ದಿವಸದಲ್ಲಿ ಉಪಪತ್ನಿಗಳ ಪಾಲಕನಾದ ಶವಷ್ಗಜ ಎಂಬ ರಾಜಕಂಚುಕಿಯ ವಶದಲ್ಲಿದ್ದ ಸ್ತ್ರೀಯರ ಎರಡನೆಯ ಮನೆಗೆ ಬರಬೇಕಾಗಿತ್ತು. ಅರಸನು ಯಾರಲ್ಲಿ ಸಂತೋಷಪಟ್ಟು ಅವಳನ್ನು ಹೆಸರಿನಿಂದ ಕರೆದ ಹೊರತು ಅವಳು ಪುನಃ ಅರಸನ ಬಳಿಗೆ ಹೋಗಬಾರದು.
ಆಗ ಅರಸನು, “ಯಾರು ಅಂಗಳದಲ್ಲಿ?” ಎಂದನು. ಅಷ್ಟರಲ್ಲಿ ಹಾಮಾನನು ತಾನು ಸಿದ್ಧಮಾಡಿಸಿದ ಗಲ್ಲುಮರಕ್ಕೆ ಮೊರ್ದೆಕೈಯನ್ನು ನೇಣುಹಾಕಿಸಲು ಅರಸನ ಸಂಗಡ ಮಾತನಾಡಲು ಅರಮನೆಯ ಹೊರಗಿನ ಅಂಗಳಕ್ಕೆ ಬಂದಿದ್ದನು.
“ಅರಸನಿಗೆ ಸಮ್ಮತಿಯಾದರೆ, ವಷ್ಟಿಯು ಅರಸನಾದ ಅಹಷ್ವೇರೋಷನ ಮುಂದೆ ಇನ್ನು ಮೇಲೆ ಬರಬಾರದೆಂದೂ ಅರಸನು ಅವಳ ರಾಜಸ್ಥಿತಿಯನ್ನು ಅವಳಿಗಿಂತ ಉತ್ತಮಳಾದ ಮತ್ತೊಬ್ಬಳಿಗೆ ಕೊಡಲಿ ಎಂದೂ ರಾಜಾಜ್ಞೆಯು ಹೊರಟು ಅದು ರದ್ದಾಗದ ಹಾಗೆ ಪಾರಸಿಯರ ಮತ್ತು ಮೇದ್ಯರ ಕಾನೂನುಗಳಲ್ಲಿ ಲಿಖಿತವಾಗಲಿ.
ಅದೇ ರೀತಿಯಾಗಿ ಪುರುಷರೇ, ಸ್ತ್ರೀಯು ಬಲಹೀನಳೆಂಬುದನ್ನು ತಿಳಿದು ನಿಮ್ಮ ಪತ್ನಿಯರ ಸಂಗಡ ವಿವೇಕದಿಂದ ಇರಿ. ಅವರು ಜೀವ ಕೃಪೆಯಲ್ಲಿ ನಿಮ್ಮೊಂದಿಗೆ ಬಾಧ್ಯರಾಗಿದ್ದಾರೆಂದು ತಿಳಿದು ಅವರಿಗೆ ಮಾನವನ್ನು ಸಲ್ಲಿಸಿರಿ. ಹೀಗೆ ನಡೆದರೆ ನಿಮ್ಮ ಪ್ರಾರ್ಥನೆಗಳಿಗೆ ಅಡ್ಡಿಯಿರುವುದಿಲ್ಲ.