Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಎಸ್ತೇರಳು 4:14 - ಕನ್ನಡ ಸಮಕಾಲಿಕ ಅನುವಾದ

14 ಏಕೆಂದರೆ ನೀನು ಈಗ ಮೌನವಾಗಿದ್ದು ಬಿಟ್ಟರೆ ಮತ್ತೊಂದು ಕಡೆಯಿಂದ ಯೆಹೂದ್ಯರಿಗೆ ಸಹಾಯವೂ ಬಿಡುಗಡೆಯೂ ಉಂಟಾಗುವುವು. ಆದರೆ ನೀನೂ ನಿನ್ನ ತಂದೆಯ ಮನೆಯವರೂ ನಾಶವಾಗಿಹೋಗುವಿರಿ. ಇಂಥಾ ಕಾಲಕ್ಕೋಸ್ಕರ ನೀನು ಪಟ್ಟಕ್ಕೆ ಬಂದಿರಬಹುದು, ಯಾರಿಗೆ ಗೊತ್ತು?” ಎಂದು ಹೇಳಿ ಕಳುಹಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

14 ನೀನು ಈಗ ಸುಮ್ಮನಿದ್ದುಬಿಟ್ಟರೆ ಬೇರೆ ಕಡೆಯಿಂದ ಯೆಹೂದ್ಯರಿಗೆ ಸಹಾಯವೂ, ವಿಮೋಚನೆಯೂ ಉಂಟಾದಾವು; ನೀನಾದರೋ ನಿನ್ನ ತಂದೆಯ ಮನೆಯವರೊಡನೆ ನಾಶವಾಗುವಿ. ಇದಲ್ಲದೆ ನೀನು ಇಂಥ ಸಂದರ್ಭಕ್ಕಾಗಿಯೇ ಪಟ್ಟಕ್ಕೆ ಬಂದಿರಬಹುದು” ಎಂದು ಹೇಳಿಕಳುಹಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

14 ನೀನೀಗ ಸುಮ್ಮನಿದ್ದುಬಿಟ್ಟರೆ ಬೇರಾವ ಕಡೆಯಿಂದಲೂ ಯೆಹೂದ್ಯರಿಗೆ ಸಹಾಯವಾಗಲಿ, ವಿಮೋಚನೆಯಾಗಲಿ ದೊರಕದು. ನೀನಾದರೋ ನಿನ್ನ ತಂದೆಯ ಮನೆಯವರೊಡನೆ ನಾಶವಾಗಿಹೋಗುವೆ. ಇದಲ್ಲದೆ ಇಂಥ ಸಂದರ್ಭಕ್ಕಾಗಿಯೇ ನೀನು ಪಟ್ಟಕ್ಕೆ ಬಂದಿರಬಹುದು, ಯಾರು ಬಲ್ಲರು?” ಎಂದು ಹೇಳಿಕಳುಹಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

14 ನೀನು ಈಗ ಸುಮ್ಮನಿದ್ದು ಬಿಟ್ಟರೆ ಬೇರೆ ಕಡೆಯಿಂದ ಯೆಹೂದ್ಯರಿಗೆ ಸಹಾಯವೂ ವಿಮೋಚನೆಯೂ ಉಂಟಾದಾವು; ನೀನಾದರೋ ನಿನ್ನ ತಂದೆಯ ಮನೆಯವರೊಡನೆ ನಾಶವಾಗುವಿ. ಇದಲ್ಲದೆ ನೀನು ಇಂಥ ಸಂದರ್ಭಕ್ಕಾಗಿಯೇ ಪಟ್ಟಕ್ಕೆ ಬಂದಿರಬಹುದು, ಯಾರು ಬಲ್ಲರು ಎಂದು ಹೇಳಿ ಕಳುಹಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

14 ನೀನು ಈಗ ಸುಮ್ಮನಿದ್ದರೆ ಯೆಹೂದ್ಯರಿಗೆ ಸಹಾಯವೂ ಸ್ವಾತಂತ್ರ್ಯವೂ ಬೇರೆ ದಿಕ್ಕಿನಿಂದ ಬರುವವು. ಆದರೆ ನೀನೂ ನಿನ್ನ ತಂದೆಯ ಬಳಗದವರೆಲ್ಲರೂ ಸಾಯುವರು. ಇಂಥ ಸಮಯದಲ್ಲಿ ನೀನು ರಾಣಿಯಾಗಿ ಆಯ್ಕೆಯಾದದ್ದು ಇದಕ್ಕೋಸ್ಕರವೋ ಎಂದು ಯಾರಿಗೆ ಹೇಳಲು ಸಾಧ್ಯ?”

ಅಧ್ಯಾಯವನ್ನು ನೋಡಿ ನಕಲು ಮಾಡಿ




ಎಸ್ತೇರಳು 4:14
31 ತಿಳಿವುಗಳ ಹೋಲಿಕೆ  

ಏಕೆಂದರೆ ಯೆಹೋವ ದೇವರು ತಮ್ಮ ಮಹತ್ತಾದ ಹೆಸರಿಗೋಸ್ಕರ ತಮ್ಮ ಜನರನ್ನು ಕೈಬಿಡುವುದಿಲ್ಲ. ನಿಮ್ಮನ್ನು ತಮ್ಮ ಜನರಾಗಿ ಮಾಡಿಕೊಳ್ಳಲು ಇಚ್ಛೈಸಿದ್ದಾರಲ್ಲಾ?


ನಿನಗೆ ವಿರೋಧವಾಗಿ ನಿರ್ಮಿಸಿದ ಆಯುಧಗಳು ಸಫಲವಾಗುವುದಿಲ್ಲ. ನಿನಗೆ ವಿರೋಧವಾಗಿ ನಿಂತುಕೊಳ್ಳುವ ಪ್ರತಿಯೊಂದು ನಾಲಿಗೆಯನ್ನು ನ್ಯಾಯತೀರ್ಪಿನಲ್ಲಿ ನೀನು ಖಂಡಿಸುವೆ. ಇದೇ ಯೆಹೋವ ದೇವರ ಸೇವಕರ ಬಾಧ್ಯತೆಯು, ಇದು ನನ್ನಿಂದ ಅವರಿಗೆ ದೊರೆಯುವ ಸಮರ್ಥನೆ,” ಎಂದು ಯೆಹೋವ ದೇವರು ಹೇಳುತ್ತಾರೆ.


ಏಕೆಂದರೆ ಯೆಹೋವ ದೇವರು ತಮ್ಮ ಜನರಿಗೆ ನ್ಯಾಯತೀರಿಸುವರು. ದೇವರು ತಮ್ಮ ಸೇವಕರ ಬಲ ಹೋಯಿತೆಂದೂ, ಗುಲಾಮರಾಗಲಿ, ಸ್ವತಂತ್ರರಾಗಲಿ ಉಳಿಯಲಿಲ್ಲವೆಂದೂ ನೋಡಿದಾಗ, ತಮ್ಮ ಸೇವಕರಿಗೋಸ್ಕರ ಕರುಣಿಸುವರು.


ನಾನು ಸಹ ನಿನಗೆ ಹೇಳುವುದೇನಂದರೆ, ನೀನು ಪೇತ್ರನು. ಈ ಬಂಡೆಯ ಮೇಲೆ ನಾನು ನನ್ನ ಸಭೆಯನ್ನು ಕಟ್ಟುವೆನು. ಪಾತಾಳದ ದ್ವಾರಗಳು ಅದನ್ನು ಜಯಿಸಲಾರವು.


ಏಕೆಂದರೆ ನಿನ್ನನ್ನು ರಕ್ಷಿಸುವುದಕ್ಕೆ ನಾನು ನಿನ್ನ ಸಂಗಡ ಇದ್ದೇನೆ,’ ಎಂದು ಯೆಹೋವ ದೇವರು ಹೇಳುತ್ತಾರೆ. ‘ನಿನ್ನನ್ನು ಎಲ್ಲಿ ಚದರಿಸಿದೆನೋ, ಆ ಎಲ್ಲಾ ಜನಾಂಗಗಳನ್ನು ನಾನು ಸಂಪೂರ್ಣವಾಗಿ ಮುಗಿಸಿಬಿಟ್ಟಾಗ್ಯೂ ನಿನ್ನನ್ನು ಸಂಪೂರ್ಣವಾಗಿ ಮುಗಿಸಿಬಿಡುವುದಿಲ್ಲ. ಮಿತಿಯಲ್ಲಿ ನಿನ್ನನ್ನು ಸರಿಪಡಿಸುವೆನು. ನಾನು ಶಿಕ್ಷಿಸದೆ ಬಿಡುವುದಿಲ್ಲ.’


ನನ್ನ ಸೇವಕನಾದ ಯಾಕೋಬನೇ, ನೀನು ಭಯಪಡಬೇಡ,” ಎಂದು ಯೆಹೋವ ದೇವರು ಹೇಳುತ್ತಾರೆ. “ಏಕೆಂದರೆ ನಾನೇ ನಿನ್ನ ಸಂಗಡ ಇದ್ದೇನೆ; ನಾನು ನಿನ್ನನ್ನು ಎಲ್ಲಿ ಓಡಿಸಿದೆನೋ, ಆ ಜನಾಂಗಗಳನ್ನೆಲ್ಲಾ ಸಂಪೂರ್ಣವಾಗಿ ಮುಗಿಸಿಬಿಡುತ್ತೇನೆ; ಆದರೆ ನಿನ್ನನ್ನು ಸಂಪೂರ್ಣವಾಗಿ ಮುಗಿಸಿಬಿಡುವುದಿಲ್ಲ; ನ್ಯಾಯದಿಂದಲೇ ನಿನ್ನನ್ನು ಶಿಕ್ಷಿಸುತ್ತೇನೆ; ಆದರೂ ನಿನ್ನನ್ನು ಶಿಕ್ಷಿಸದೆ ಬಿಡುವುದಿಲ್ಲ.”


ನಾವು ಗುಲಾಮರಾದರೂ ನಮ್ಮ ದೇವರು ನಮ್ಮ ದಾಸತ್ವದಲ್ಲಿ ನಮ್ಮನ್ನು ಕೈಬಿಡಲಿಲ್ಲ; ಹಾಳುಬಿದ್ದ ದೇವಾಲಯವನ್ನು ಪುನಃ ಕಟ್ಟಿ ಭದ್ರಪಡಿಸಲು ನಮಗೆ ನವಜೀವನ ಕೊಟ್ಟು, ಯೆಹೂದ ಮತ್ತು ಯೆರೂಸಲೇಮಿನಲ್ಲಿ ನಮಗೆ ಸಂರಕ್ಷಣೆಯ ಗೋಡೆ ಸಿಗುವಂತೆ, ಪಾರಸಿಯ ರಾಜರ ಸಮ್ಮುಖದಲ್ಲಿ ನಮಗೆ ದಯೆಯನ್ನು ದಯಪಾಲಿಸಿದ್ದೀರಿ.


ಮೊರ್ದೆಕೈಯ ದತ್ತುಮಗಳೂ, ಅವನ ಚಿಕ್ಕಪ್ಪನಾದ ಅಬೀಹೈಲನ ಮಗಳೂ ಆದ ಎಸ್ತೇರಳು ಅರಸನ ಬಳಿಗೆ ಹೋಗಲು ಸರದಿ ಬಂದಾಗ, ಸ್ತ್ರೀಯರ ಪಾಲಕನೂ ರಾಜಕಂಚುಕಿಯೂ ಆದ ಹೇಗೈ ನೇಮಿಸಿದ್ದನ್ನೇ ಹೊರತು ಬೇರಾವುದನ್ನೂ ಆಕೆ ಕೇಳಲಿಲ್ಲ. ಇದಲ್ಲದೆ ಎಸ್ತೇರಳು ತನ್ನನ್ನು ನೋಡುವ ಎಲ್ಲರಿಂದಲೂ ದಯೆಹೊಂದಿದ್ದಳು.


“ಆ ದಿನಗಳನ್ನು ಕಡಿಮೆ ಮಾಡದಿದ್ದರೆ, ಒಬ್ಬನೂ ಉಳಿಯುವಂತಿಲ್ಲ. ಆದರೆ ಆಯ್ಕೆಯಾದವರಿಗಾಗಿ ಆ ದಿನಗಳನ್ನು ಕಡಿಮೆ ಮಾಡಲಾಗುವುದು.


ಅರಸರು ನಿನಗೆ ಸಾಕು ತಂದೆಗಳು. ಅವರ ರಾಣಿಯರು ನಿನಗೆ ದಾದಿಗಳಾಗುವರು. ಅವರು ಭೂಮಿಯ ಕಡೆಗೆ ತಮ್ಮ ಮುಖವನ್ನು ಬಾಗಿಸಿ, ಅಡ್ಡಬಿದ್ದು, ನಿನ್ನ ಪಾದದ ಧೂಳನ್ನು ನೆಕ್ಕುವರು. ಆಗ ನಾನೇ ಯೆಹೋವ ಎಂದು ನೀನು ತಿಳಿದುಕೊಳ್ಳುವೆ. ಏಕೆಂದರೆ ನನ್ನನ್ನು ನಿರೀಕ್ಷಿಸಿಕೊಂಡಿರುವವರು ನಾಚಿಕೆಗೆ ಈಡಾಗರು.”


ಇವನು ತನ್ನ ಚಿಕ್ಕಪ್ಪನ ಮಗಳಾದ ಎಸ್ತೇರ್ ಎಂಬ ಹೆಸರನ್ನು ಪಡೆದ ಹದೆಸ್ಸಳನ್ನು ಸಾಕುತ್ತಿದ್ದನು. ಏಕೆಂದರೆ ಅವಳಿಗೆ ತಂದೆತಾಯಿಗಳು ಇರಲಿಲ್ಲ. ಈಕೆಯು ರೂಪವತಿಯಾಗಿಯೂ ಸೌಂದರ್ಯವಂತಳಾಗಿಯೂ ಇದ್ದಳು. ಅವಳ ತಂದೆತಾಯಿಗಳು ಸತ್ತು ಹೋದ ತರುವಾಯ ಮೊರ್ದೆಕೈ ಅವಳನ್ನು ತನ್ನ ಸ್ವಂತ ಮಗಳಂತೆ ನೋಡಿಕೊಳ್ಳುತ್ತಿದ್ದನು.


ಅಬ್ರಹಾಮನು ಆ ಸ್ಥಳಕ್ಕೆ ಯೆಹೋವ ಯೀರೆ ಎಂದು ಹೆಸರಿಟ್ಟನು. “ಯೆಹೋವ ದೇವರು ಪರ್ವತದ ಮೇಲೆ ಒದಗಿಸುವರು,” ಎಂದು ಇಂದಿನವರೆಗೂ ಜನರು ಹೇಳುತ್ತಾರೆ.


ಅದಕ್ಕೆ ನಾನು, “ನನ್ನಂಥಾ ಮನುಷ್ಯನು ಓಡಿ ಹೋಗುವನೋ? ನನ್ನಂಥವನು ಬದುಕಬೇಕೆಂದು ದೇವರ ಆಲಯದೊಳಗೆ ಹೋಗಬಹುದೇ? ನಾನು ಒಳಗೆ ಹೋಗುವುದಿಲ್ಲ,” ಎಂದೆನು.


ಆಗ ಅವರು ಯೆಶಾಯನಿಗೆ, “ಹಿಜ್ಕೀಯನು ಹೇಳುವುದೇನೆಂದರೆ: ‘ಈ ದಿವಸವು ಕಷ್ಟಕರವಾಗಿಯೂ ಗದರಿಕೆಯಾಗಿಯೂ ಅವಮಾನಕರವಾಗಿಯೂ ಇದೆ. ಏಕೆಂದರೆ ಹೆರಿಗೆಯ ಸಮಯವು ಬಂದಿದೆ ಆದರೆ ಹೆರುವುದಕ್ಕೆ ಶಕ್ತಿಯಿಲ್ಲ.


ಅದಕ್ಕೆ ದಾವೀದನು, “ನಾನು ಈಗ ಮಾಡಿದ್ದೇನು? ಮಾತನಾಡಿದೆನಷ್ಟೇ?” ಎಂದನು.


ಫಿಲಿಷ್ಟಿಯರು, “ಇದನ್ನು ಮಾಡಿದವರು ಯಾರು?” ಎಂದರು. ಅದಕ್ಕೆ ಅವರು, “ತಿಮ್ನಾದವನ ಅಳಿಯನಾದ ಸಂಸೋನನು ಮಾಡಿದನು. ಏಕೆಂದರೆ ಇವನು ಅವನ ಹೆಂಡತಿಯನ್ನು ತೆಗೆದುಕೊಂಡು, ಅವನ ಜೊತೆಗಾರನಿಗೆ ಕೊಟ್ಟನು,” ಎಂದರು. ಆಗ ಫಿಲಿಷ್ಟಿಯರು ಬಂದು, ಅವಳನ್ನೂ, ಅವಳ ತಂದೆಯನ್ನೂ ಬೆಂಕಿಯಿಂದ ಸುಟ್ಟುಬಿಟ್ಟರು.


ನಾನು ಉಸಿರಾಡಲು ಕಷ್ಟಪಡುತ್ತಿದ್ದೇನೆ, ದೇವರು ಕಹಿಯಾದವುಗಳಿಂದ ನನ್ನನ್ನು ತುಂಬಿಸುತ್ತಾರೆ.


ನಾನು ಯಾಕೋಬನಿಗೆ, ಇಸಾಕನಿಗೆ ಮತ್ತು ಅಬ್ರಹಾಮನಿಗೆ ಮಾಡಿದ ನನ್ನ ಒಡಂಬಡಿಕೆಯನ್ನು ಜ್ಞಾಪಕಮಾಡಿಕೊಂಡು, ದೇಶವನ್ನು ದಯೆಯಿಂದ ನೆನಪಿಸಿಕೊಳ್ಳುವೆನು.


ಯೆಹೋವ ದೇವರು ಇಸ್ರಾಯೇಲರಿಗೆ ಒಬ್ಬ ವಿಮೋಚಕನನ್ನು ಕೊಟ್ಟಿದ್ದರಿಂದ, ಅವರು ಅರಾಮ್ಯರ ಕೈಯಿಂದ ತಪ್ಪಿಸಿಕೊಂಡು ಹೋದರು. ಆಗ ಇಸ್ರಾಯೇಲರು ಮುಂಚಿನ ಹಾಗೆ ತಮ್ಮ ಮನೆಗಳಲ್ಲಿ ವಾಸವಾಗಿದ್ದರು.


ಆಗ ಮೊರ್ದೆಕೈಯು ಎಸ್ತೇರಳಿಗೆ, “ಯೆಹೂದ್ಯರೆಲ್ಲಾ ನಾಶವಾದರೂ ನೀನೊಬ್ಬಳು ಮಾತ್ರ ಅರಮನೆಯಲ್ಲಿರುವುದರಿಂದ ತಪ್ಪಿಸಿಕೊಳ್ಳುವೆಯೆಂದು ಭಾವಿಸಬೇಡ.


ಆಗ ಎಸ್ತೇರಳು ಮತ್ತೆ ಮೊರ್ದೆಕೈಗೆ,


ಅರಸನು ಸಕಲ ಕನ್ಯೆಯರಿಗಿಂತ ಹೆಚ್ಚಾಗಿ ಎಸ್ತೇರಳನ್ನು ಮೆಚ್ಚಿಕೊಂಡನು. ಅವಳಿಗೆ ಅವನ ಸಮ್ಮುಖದಲ್ಲಿ ಸಮಸ್ತ ಕನ್ಯೆಯರಿಗಿಂತ ಹೆಚ್ಚು ದಯೆಯೂ ಮೆಚ್ಚುಗೆಯೂ ದೊರಕಿತು. ಆದ್ದರಿಂದ ಅವನು ರಾಜಕಿರೀಟವನ್ನು ಅವಳ ತಲೆಯ ಮೇಲೆ ಇರಿಸಿ ಎಸ್ತೇರಳನ್ನು ವಷ್ಟಿಗೆ ಬದಲಾಗಿ ರಾಣಿಯನ್ನಾಗಿ ಆರಿಸಿಕೊಂಡನು.


ಹರಿಯುವುದಕ್ಕೆ ಒಂದು ಸಮಯ, ಹೊಲಿಯುವುದಕ್ಕೆ ಒಂದು ಸಮಯ. ಸುಮ್ಮನೆ ಇರುವುದಕ್ಕೆ ಒಂದು ಸಮಯ, ಮಾತಾಡುವುದಕ್ಕೆ ಒಂದು ಸಮಯ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು