Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಎಸ್ತೇರಳು 4:15 - ಕನ್ನಡ ಸಮಕಾಲಿಕ ಅನುವಾದ

15 ಆಗ ಎಸ್ತೇರಳು ಮತ್ತೆ ಮೊರ್ದೆಕೈಗೆ,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

15 ಆಗ ಎಸ್ತೇರಳು ಮೊರ್ದೆಕೈಗೆ, “ನೀನು ಹೋಗಿ ಶೂಷನಿನಲ್ಲಿ ಸಿಕ್ಕುವ ಎಲ್ಲಾ ಯೆಹೂದ್ಯರನ್ನು ಕೂಡಿಸು;

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

15-16 ಆಗ ಎಸ್ತೇರಳು ಮೊರ್ದೆಕೈಯನಿಗೆ, “ನೀನು ಹೋಗಿ ಶೂಷನ್ ನಗರದಲ್ಲಿ ಇರುವ ಯೆಹೂದ್ಯರನ್ನೆಲ್ಲಾ ಸಭೆಸೇರಿಸು. ಎಲ್ಲರೂ ಹಗಲಿರುಳೆನ್ನದೆ ಮೂರು ದಿನ ಅನ್ನಪಾನಗಳನ್ನು ತೊರೆದು ನನಗೋಸ್ಕರ ಉಪವಾಸವನ್ನು ಕೈಗೊಳ್ಳಲಿ. ನನ್ನ ದಾಸಿಯರೊಡನೆ ನಾನೂ ಉಪವಾಸ ಕೈಗೊಳ್ಳುವೆನು. ಅನಂತರ ಅರಸನ ಆಜ್ಞೆಯನ್ನು ಮೀರಿಯಾದರೂ ನಾನು ಆತನ ಬಳಿಗೆ ಹೋಗುವೆನು, ಸತ್ತರೂ ಸಾಯುವೆನು,” ಎಂದು ಹೇಳಿಕಳುಹಿಸಿದಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

15-16 ಆಗ ಎಸ್ತೇರಳು - ನೀನು ಹೋಗಿ ಶೂಷನಿನಲ್ಲಿ ಸಿಕ್ಕುವ ಎಲ್ಲಾ ಯೆಹೂದ್ಯರನ್ನು ಕೂಡಿಸು; ನೀವೆಲ್ಲರೂ ಮೂರು ದಿನ ಹಗಲಿರುಳು ಅನ್ನಪಾನಗಳನ್ನು ಬಿಟ್ಟು ನನಗೋಸ್ಕರ ಉಪವಾಸ ಮಾಡಿರಿ; ಅದರಂತೆ ನಾನೂ ನನ್ನ ಸೇವಕಿಯರೊಡನೆ ಉಪವಾಸದಿಂದಿರುವೆನು. ಅನಂತರ ನಾನು ವಿಧಿ ಮೀರಿ ಅರಸನ ಬಳಿಗೆ ಹೋಗುವೆನು, ಸತ್ತರೆ ಸಾಯುತ್ತೇನೆ ಎಂದು ಮೊರ್ದೆಕೈಗೆ ಮರಳಿ ಹೇಳಿಸಿದಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

15-16 ಆಗ ಎಸ್ತೇರಳು ಈ ಉತ್ತರವನ್ನು ಮೊರ್ದೆಕೈಗೆ ಕಳುಹಿಸಿದಳು: “ಮೊರ್ದೆಕೈ, ನೀನು ಹೋಗಿ ಶೂಷನ್‌ನಲ್ಲಿರುವ ಎಲ್ಲಾ ಯೆಹೂದ್ಯರನ್ನು ಒಟ್ಟಿಗೆ ಸೇರಿಸಿ ನನಗಾಗಿ ಉಪವಾಸವಿರಲು ಅವರಿಗೆ ಹೇಳು. ಮೂರು ದಿನ ಹಗಲುರಾತ್ರಿ ಊಟಮಾಡಲೂಬಾರದು ಕುಡಿಯಲೂಬಾರದು. ನಾನೂ ನಿಮ್ಮ ಹಾಗೆ ಉಪವಾಸದಿಂದಿರುವೆನು. ನನ್ನೊಂದಿಗೆ ನನ್ನ ಸೇವಕಿಯರೂ ಉಪವಾಸ ಮಾಡುವರು. ನಾವು ಉಪವಾಸ ಮಾಡಿದ ಬಳಿಕ ನಾನು ರಾಜನ ಬಳಿಗೆ ಹೋಗುವೆನು. ಆತನು ಕರೆಯದೆ ನಾನು ಆತನ ಬಳಿಗೆ ಹೋಗುವುದು ನ್ಯಾಯಬಾಹಿರ. ಆದರೂ ನಾನು ಹೋಗುವೆನು, ನಾನು ಸಾಯಬೇಕಾದರೆ ಸಾಯುವೆನು.”

ಅಧ್ಯಾಯವನ್ನು ನೋಡಿ ನಕಲು ಮಾಡಿ




ಎಸ್ತೇರಳು 4:15
3 ತಿಳಿವುಗಳ ಹೋಲಿಕೆ  

ಏಕೆಂದರೆ ನೀನು ಈಗ ಮೌನವಾಗಿದ್ದು ಬಿಟ್ಟರೆ ಮತ್ತೊಂದು ಕಡೆಯಿಂದ ಯೆಹೂದ್ಯರಿಗೆ ಸಹಾಯವೂ ಬಿಡುಗಡೆಯೂ ಉಂಟಾಗುವುವು. ಆದರೆ ನೀನೂ ನಿನ್ನ ತಂದೆಯ ಮನೆಯವರೂ ನಾಶವಾಗಿಹೋಗುವಿರಿ. ಇಂಥಾ ಕಾಲಕ್ಕೋಸ್ಕರ ನೀನು ಪಟ್ಟಕ್ಕೆ ಬಂದಿರಬಹುದು, ಯಾರಿಗೆ ಗೊತ್ತು?” ಎಂದು ಹೇಳಿ ಕಳುಹಿಸಿದನು.


“ನೀನು ಹೋಗಿ ಶೂಷನಿನಲ್ಲಿರುವ ಎಲ್ಲಾ ಯೆಹೂದ್ಯರನ್ನು ಕೂಡಿಸು; ನೀವು ರಾತ್ರಿ ಹಗಲೂ ಮೂರು ದಿನ ಅನ್ನಪಾನಗಳನ್ನು ಬಿಟ್ಟು ನನಗೋಸ್ಕರ ಉಪವಾಸಮಾಡಿರಿ. ಹಾಗೆಯೇ ನಾನೂ ನನ್ನ ದಾಸಿಯರೊಡನೆ ಉಪವಾಸ ಮಾಡುವೆನು. ಅನಂತರ ನಾನು ರಾಜಾಜ್ಞೆಯನ್ನು ಮೀರಿ ಅರಸನ ಬಳಿಗೆ ಹೋಗುವೆನು. ನಾನು ಸತ್ತರೂ ಸಾಯುವೆನು,” ಎಂದು ಹೇಳಿಕಳುಸಿದಳು.


ದಾನಿಯೇಲನು ಅವನ ಜೊತೆಗಾರರೊಂದಿಗೆ ಉಳಿದ ಬಾಬಿಲೋನಿನ ಜ್ಞಾನಿಗಳ ಸಂಗಡ ಕೊಲೆಯಾಗದಂತೆ ಅವನು ತನ್ನ ಜೊತೆಗಾರರಿಗೆ ಅವರು ಈ ರಹಸ್ಯದ ಸಂಗತಿಯನ್ನು ಕುರಿತು ಪರಲೋಕದ ದೇವರಿಂದ ಕರುಣೆಯನ್ನು ಬೇಡಿಕೊಳ್ಳಬೇಕೆಂದು ಹೇಳಿದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು