Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಎಸ್ತೇರಳು 4:4 - ಕನ್ನಡ ಸಮಕಾಲಿಕ ಅನುವಾದ

4 ಆಗ ಎಸ್ತೇರಳ ದಾಸಿಯರೂ ಅವಳ ಕಂಚುಕಿಯರೂ ಬಂದು ಮೊರ್ದೆಕೈ ಬಗ್ಗೆ ಅವಳಿಗೆ ತಿಳಿಸಿದರು. ಆದ್ದರಿಂದ ರಾಣಿಯು ಬಹು ವ್ಯಥೆಪಟ್ಟಳು. ಇದಲ್ಲದೆ ಮೊರ್ದೆಕೈಯು ಗೋಣಿತಟ್ಟನ್ನು ತೆಗೆದುಹಾಕಿ, ವಸ್ತ್ರಗಳನ್ನು ಧರಿಸಿಕೊಳ್ಳುವಂತೆ ಉಡುಪನ್ನು ಕಳುಹಿಸಿಕೊಟ್ಟಳು. ಆದರೆ ಅವನು ಅದನ್ನು ತೆಗೆದುಕೊಳ್ಳಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

4 ಎಸ್ತೇರಳ ಸೇವಕಿಯರೂ ಕಂಚುಕಿಗಳೂ ರಾಣಿಯಾದ ಆಕೆಯ ಬಳಿಗೆ ಬಂದು ಈ ವಿಚಾರವನ್ನು ತಿಳಿಸಿದಾಗ ಆಕೆಯು ಬಹಳವಾಗಿ ಕಳವಳಗೊಂಡು ಮೊರ್ದೆಕೈಗೆ ವಸ್ತ್ರಗಳನ್ನು ಕಳುಹಿಸಿ, “ಗೋಣಿತಟ್ಟನ್ನು ತೆಗೆದುಬಿಟ್ಟು, ಇವುಗಳನ್ನು ಧರಿಸಿಕೋ” ಎಂದು ಹೇಳಿಕಳುಹಿಸಿದಳು. ಆದರೆ ಅವನು ಅವುಗಳನ್ನು ಸ್ವೀಕರಿಸಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

4 ಎಸ್ತೇರಳ ದಾಸಿಯರೂ ಕಂಚುಕಿಗಳೂ ಈ ವಿಷಯವನ್ನು ಆಕೆಗೆ ತಿಳಿಸಿದಾಗ ಆಕೆ ಬಹು ವ್ಯಸನಾಕ್ರಾಂತಳಾದಳು. ಉಟ್ಟ ಗೋಣಿತಟ್ಟನ್ನು ತೆಗೆದುಹಾಕಿ, ವಸ್ತ್ರಗಳನ್ನು ಧರಿಸಿಕೊಳ್ಳುವಂತೆ ಮೊರ್ದೆಕೈಗೆ ಉಡುಪನ್ನು ಕಳುಹಿಸಿಕೊಟ್ಟಳು. ಅವನಾದರೋ ಅವುಗಳನ್ನು ಸ್ವೀಕರಿಸಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

4 ಎಸ್ತೇರಳ ಸೇವಕಿಯರೂ ಕಂಚುಕಿಗಳೂ ರಾಣಿಯಾದ ಆಕೆಯ ಬಳಿಗೆ ಬಂದು ಅದನ್ನು ತಿಳಿಸಿದಾಗ ಆಕೆಯು ಬಹಳವಾಗಿ ಕಳವಳಗೊಂಡು ಮೊರ್ದೆಕೈಗೆ ವಸ್ತ್ರಗಳನ್ನು ಕಳುಹಿಸಿ - ಗೋಣಿತಟ್ಟನ್ನು ತೆಗೆದುಬಿಟ್ಟು ಇವುಗಳನ್ನು ಧರಿಸಿಕೋ ಎಂದು ಹೇಳಿಸಿದಳು; ಆದರೆ ಅವನು ಅವುಗಳನ್ನು ಸ್ವೀಕರಿಸಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

4 ಎಸ್ತೇರಳ ಸೇವಕಿಯರು ಮತ್ತು ಕಂಚುಕಿಯರು ಮೊರ್ದೆಕೈ ವಿಚಾರವಾಗಿ ಆಕೆಗೆ ತಿಳಿಸಿದರು. ಇದನ್ನು ಕೇಳಿ ಎಸ್ತೇರ್ ರಾಣಿಗೆ ತುಂಬಾ ಗಲಿಬಿಲಿಯೂ ದುಃಖವೂ ಆಯಿತು. ಆಕೆ ಅವನಿಗೋಸ್ಕರ ಬಟ್ಟೆಗಳನ್ನು ಕಳುಹಿಸಿ ಶೋಕದ ಬಟ್ಟೆಯನ್ನು ತೆಗೆದುಹಾಕಲು ಹೇಳಿಸಿದಳು. ಆದರೆ ಅವನು ಅವಳ ಬಟ್ಟೆಗಳನ್ನು ಸ್ವೀಕರಿಸಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಎಸ್ತೇರಳು 4:4
10 ತಿಳಿವುಗಳ ಹೋಲಿಕೆ  

ನನ್ನ ಇಕ್ಕಟ್ಟಿನ ದಿವಸದಲ್ಲಿ ಯೆಹೋವ ದೇವರನ್ನು ಹುಡುಕಿದೆನು. ನಾನು ರಾತ್ರಿಯೆಲ್ಲಾ ಬೇಸರವಿಲ್ಲದೆ ಕೈಚಾಚಿದೆ. ನನ್ನ ಮನಸ್ಸಿಗೆ ಶಾಂತಿ ಇರಲಿಲ್ಲ.


ಯೆಹೋವ ದೇವರು ಮತ್ತೆ ಹೀಗೆ ಹೇಳುತ್ತಾರೆ: “ರಾಮದಲ್ಲಿ ರೋದನೆಯೂ, ಗೋಳಾಟವೂ ಅಘೋರವಾದ ಅಳುವಿಕೆಯೂ ಕೇಳಿಸುತ್ತಿದೆ. ರಾಹೇಲಳು ತನ್ನ ಮಕ್ಕಳಿಗಾಗಿ ಗೋಳಾಡುತ್ತಾ, ಆದರಣೆ ಹೊಂದದೆ ಹೋಗಿದ್ದಾಳೆ. ಏಕೆಂದರೆ ಅವಳ ಮಕ್ಕಳು ಇನ್ನಿಲ್ಲ.”


ಯೆಹೋವ ದೇವರನ್ನು ಸೇರಿಕೊಂಡ ವಿದೇಶೀಯನು, “ಯೆಹೋವ ದೇವರು ತಮ್ಮ ಜನರಿಂದ ನನ್ನನ್ನು ಖಂಡಿತವಾಗಿ ಬಹಿಷ್ಕರಿಸುವರು,” ಎಂದು ಹೇಳದಿರಲಿ. ಮತ್ತು ನಪುಂಸಕನು, “ನಾನು ಕೇವಲ ಒಣಗಿದ ಮರ,” ಎಂದು ಹೇಳದಿರಲಿ.


ಆದರೆ ಅರಸನು ಅವರಿಂದ ಹೇಳಿ ಕಳುಹಿಸಿದ ಮಾತಿಗೆ ವಷ್ಟಿ ರಾಣಿಯು, “ನಾನು ಬರುವುದಿಲ್ಲ,” ಎಂದು ಹೇಳಿದಳು. ಆದ್ದರಿಂದ ಅರಸನು ಬಹುಕೋಪಗೊಂಡು, ರೋಷಾವೇಶನಾದನು.


ಯೇಹುವು ತನ್ನ ಮುಖವನ್ನು ಆ ಕಿಟಕಿಯ ಕಡೆಗೆ ಎತ್ತಿ, “ನನ್ನ ಕಡೆ ಇರುವವರು ಯಾರು?” ಎಂದನು. ಆಗ ಇಬ್ಬರು ಮೂವರು ಕಂಚುಕಿಗಳು ಆ ಕಿಟಕಿಯಲ್ಲಿಂದ ಅವನನ್ನು ನೋಡಿದರು.


ನಿಮ್ಮ ಧಾನ್ಯಗಳಲ್ಲಿಯೂ, ನಿಮ್ಮ ದ್ರಾಕ್ಷಿ ಫಲಗಳಲ್ಲಿಯೂ ಹತ್ತರಲ್ಲಿ ಒಂದು ಪಾಲನ್ನು ತೆಗೆದುಕೊಂಡು, ತನ್ನ ಅಧಿಕಾರಿಗಳಿಗೂ, ತನ್ನ ಸೇವಕರಿಗೂ ಕೊಡುವನು.


ಅವನ ಪುತ್ರಪುತ್ರಿಯರೆಲ್ಲಾ ಅವನನ್ನು ಆದರಿಸಿದರೂ ಅವನು ಆದರಣೆ ಹೊಂದಲೊಲ್ಲದೆ, “ನನ್ನ ಮಗನಿರುವ ಸಮಾಧಿಗೆ ದುಃಖದಿಂದಲೇ ಇಳಿದು ಹೋಗುವೆನು,” ಎಂದನು. ಹೀಗೆ ಅವನ ತಂದೆ ಅವನಿಗೋಸ್ಕರ ಅತ್ತನು.


ಅದರಂತೆ ಅವನು ಹೋಗುತ್ತಿದ್ದಾಗ, ಮಾರ್ಗದಲ್ಲಿ ಐಥಿಯೋಪ್ಯದ ರಾಣಿ ಕಂದಾಕೆಯ ಹಣಕಾಸಿನ ಮುಖ್ಯ ಅಧಿಕಾರಿಯಾಗಿದ್ದ ಕಂಚುಕಿಯನ್ನು ಭೇಟಿಯಾದನು. ಈ ಮನುಷ್ಯನು ಆರಾಧನೆಗಾಗಿ ಯೆರೂಸಲೇಮಿಗೆ ಹೋಗಿದ್ದನು.


ಇದಲ್ಲದೆ ಅರಸನ ಮಾತೂ ಅವನ ಕಟ್ಟಳೆಯೂ ಯಾವ ಯಾವ ಸೀಮೆಯಲ್ಲಿ ಯಾವ ಯಾವ ಸ್ಥಳಕ್ಕೆ ಹೋಯಿತೋ ಅಲ್ಲಿ ಯೆಹೂದ್ಯರೊಳಗೆ ಮಹಾ ದುಃಖವೂ ಉಪವಾಸವೂ ಅಳುವಿಕೆಯೂ ಗೋಳಾಡುವಿಕೆಯೂ ಉಂಟಾಗಿತ್ತು. ಅನೇಕರು ಗೋಣಿತಟ್ಟನ್ನು ಉಟ್ಟುಕೊಂಡು ಬೂದಿಯಲ್ಲಿ ಕುಳಿತುಕೊಂಡರು.


ಆಗ ಎಸ್ತೇರಳು ತನ್ನ ಬಳಿಯಲ್ಲಿ ಸೇವೆಗಾಗಿ ನೇಮಿಸಲಾಗಿದ್ದ ಅರಸನ ರಾಜಕಂಚುಕಿಯರಲ್ಲಿ ಹತಾಕನನ್ನು ಕರೆದು, ನಡೆದ ಸಂಗತಿ ಏನೆಂದೂ, ಮೊರ್ದೆಕೈಯ ವರ್ತನೆಗೆ ಕಾರಣವನ್ನೂ ಅವನಿಂದ ತಿಳಿದುಕೊಂಡು ಬರಬೇಕೆಂದು ಆಜ್ಞಾಪಿಸಿದಳು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು