Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಎಸ್ತೇರಳು 4:8 - ಕನ್ನಡ ಸಮಕಾಲಿಕ ಅನುವಾದ

8 ಯೆಹೂದ್ಯರನ್ನು ನಾಶಮಾಡಲು ಶೂಷನಿನಲ್ಲಿ ಪ್ರಕಟಗೊಂಡ ರಾಜಾಜ್ಞೆಯ ಪತ್ರದ ಪ್ರತಿಯನ್ನು ಅವನ ಕೈಯಲ್ಲಿ ಕೊಟ್ಟು ಅದನ್ನು ಎಸ್ತೇರಳಿಗೆ ತೋರಿಸಿ ವಿವರಿಸುವಂತೆಯೂ, ಅವಳು ತನ್ನ ಜನರಿಗಾಗಿ ಅರಸನ ಮುಂದೆ ಹೋಗಿ ಬಿನ್ನಹ ಮಾಡುವಂತೆಯೂ ಆಕೆಗೆ ತಿಳಿಸಲು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

8 ಅದರೊಂದಿಗೆ ತಮ್ಮನ್ನು ಸಂಹರಿಸುವುದಕ್ಕೋಸ್ಕರ ಶೂಷನಿನಲ್ಲಿ ಪ್ರಕಟವಾದ ರಾಜಶಾಸನದ ಒಂದು ಪ್ರತಿಯನ್ನು ಕೊಟ್ಟು, “ಇದನ್ನು ಎಸ್ತೇರಳಿಗೆ ತೋರಿಸಿ ವಿವರಿಸು; ಮತ್ತು ಆಕೆಯು ಅರಸನ ಬಳಿಗೆ ಹೋಗಿ ಅವನು ಕೃಪೆ ತೋರಿಸುವಂತೆ ಅವನ ಸನ್ನಿಧಿಯಲ್ಲಿ ತನ್ನ ಜನರಿಗೋಸ್ಕರ ಬಿನ್ನಹ ಮಾಡಲಿ” ಎಂದು ಹೇಳಿಕಳುಹಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

8 ಅಲ್ಲದೆ ಯೆಹೂದ್ಯರನ್ನೆಲ್ಲಾ ಸಂಹರಿಸಬಿಡುವುದಕ್ಕೋಸ್ಕರ ಶೂಷನ್ ನಗರದಲ್ಲಿ ಪ್ರಕಟಗೊಂಡ ರಾಜಶಾಸನದ ಒಂದು ಪ್ರತಿಯನ್ನು ಅವನ ಕೈಗಿತ್ತನು. ಅದನ್ನು ಎಸ್ತೇರಳಿಗೆ ತೋರಿಸಿ ವಿವರಿಸುವಂತೆಯೂ ಆಕೆ ಅರಸನ ಸಮ್ಮುಖಕ್ಕೆ ಹೋಗಿ, ಆತ ದಯೆತೋರುವಂತೆ ಆತನ ಸನ್ನಿಧಿಯಲ್ಲಿ ತನ್ನ ಜನರಿಗೋಸ್ಕರ ಬಿನ್ನಹಮಾಡುವಂತೆ ಆಕೆಗೆ ತಿಳಿಸಬೇಕೆಂತಲೂ ಹೇಳಿಕಳುಹಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

8 ತಮ್ಮನ್ನು ಸಂಹರಿಸುವದಕ್ಕೋಸ್ಕರ ಶೂಷನಿನಲ್ಲಿ ಪ್ರಕಟವಾದ ರಾಜಶಾಸನದ ಒಂದು ಪ್ರತಿಯನ್ನು ಕೊಟ್ಟು - ಇದನ್ನು ಎಸ್ತೇರಳಿಗೆ ತೋರಿಸಿ ವಿವರಿಸು; ಮತ್ತು ಆಕೆಯು ಅರಸನ ಬಳಿಗೆ ಹೋಗಿ ಅವನು ಕೃಪೆ ತೋರಿಸುವಂತೆ ಅವನ ಸನ್ನಿಧಿಯಲ್ಲಿ ತನ್ನ ಜನರಿಗೋಸ್ಕರ ಬಿನ್ನಹ ಮಾಡಲಿ ಎಂದು ಹೇಳಿಕಳುಹಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

8 ಯೆಹೂದ್ಯರನ್ನು ಕೊಲ್ಲಬೇಕೆಂಬುವ ಅರಸನ ಆಜ್ಞಾಪತ್ರದ ಒಂದು ಪ್ರತಿಯನ್ನು ಹತಾಕನ ಕೈಯಲ್ಲಿ ಮೊರ್ದೆಕೈ ಕೊಟ್ಟನು. ಈ ಆಜ್ಞಾಪತ್ರವನ್ನು ಶೂಷನ್ ನಗರದ ಎಲ್ಲೆಡೆಯಲ್ಲಿಯೂ ಕಳುಹಿಸಲ್ಪಟ್ಟಿತ್ತು. ಹತಾಕನು ಆ ಪ್ರತಿಯನ್ನು ಎಸ್ತೇರಳಿಗೆ ತೋರಿಸಿ ಎಲ್ಲವನ್ನು ವಿವರಿಸಬೇಕೆಂದು ಮೊರ್ದೆಕೈ ಉದ್ದೇಶಿಸಿದನು. ಅಷ್ಟೇ ಅಲ್ಲ. ಎಸ್ತೇರ್ ರಾಣಿ ಅರಸನ ಬಳಿಗೆ ಹೋಗಿ ತನಗೂ ಆಕೆಯ ಜನರಿಗೂ ದಯೆ ತೋರಿಸಲು ಅರಸನೊಡನೆ ಬೇಡಲಿ ಎಂದು ಹತಾಕನೊಡನೆ ಹೇಳಿ ಕಳುಹಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಎಸ್ತೇರಳು 4:8
14 ತಿಳಿವುಗಳ ಹೋಲಿಕೆ  

ಅಧಿಕಾರಿಯು ನಿನಗೆ ವಿರುದ್ಧವಾಗಿ ಸಿಟ್ಟುಗೊಂಡರೆ, ನಿನ್ನ ಉದ್ಯೋಗವನ್ನು ಬಿಟ್ಟುಬಿಡಬೇಡ. ಏಕೆಂದರೆ ತಾಳ್ಮೆಯು ದೊಡ್ಡ ಅಪರಾಧಗಳನ್ನು ಶಾಂತಪಡಿಸುತ್ತದೆ.


ನಾನು ನೀತಿವಂತನಾಗಿದ್ದರೂ ಉತ್ತರ ಕೊಡೆನು; ಆದರೆ ನನ್ನ ನ್ಯಾಯಾಧಿಪತಿಗೆ ಕರುಣೆಗೋಸ್ಕರ ಮೊರೆಯಿಡುವೆನು.


ಎಸ್ತೇರಳು ಮೊರ್ದೆಕೈಯು ತನಗೆ ಆಜ್ಞಾಪಿಸಿದ ಹಾಗೆ ತಾನು ಇಂಥ ದೇಶದವಳು ಮತ್ತು ಇಂಥ ಕುಟುಂಬದ ಹಿನ್ನೆಲೆಯವಳು ಎಂಬುದನ್ನು ಯಾರಿಗೂ ತಿಳಿಸಿರಲಿಲ್ಲ. ಏಕೆಂದರೆ ಎಸ್ತೇರಳು ಮೊರ್ದೆಕೈಯ ಆರೈಕೆಯಲ್ಲಿ ಇದ್ದಾಗ ಆಕೆ ಅವನ ಆಜ್ಞೆಯನ್ನು ಕೈಕೊಂಡು ನಡೆದಂತೆಯೇ ಈಗಲೂ ಅವನ ಆಜ್ಞೆಯನ್ನು ಪಾಲಿಸುತ್ತಿದ್ದಳು.


ಈ ಲೋಕದಲ್ಲಿ ಅಹಂಕಾರಿಗಳಾಗಿರದೆ, ಅಸ್ತಿರವಾದ ಐಶ್ವರ್ಯದ ಮೇಲೆ ನಿರೀಕ್ಷೆಯನ್ನಿಡದೆ ನಮ್ಮ ಸುಖಕ್ಕೋಸ್ಕರ ಎಲ್ಲವನ್ನೂ ಸಮೃದ್ಧಿಯಾಗಿ ದಯಪಾಲಿಸುವ ದೇವರ ಮೇಲೆ ನಿರೀಕ್ಷೆಯನ್ನಿಡಬೇಕೆಂದು ಐಶ್ವರ್ಯವಂತರಿಗೆ ಆಜ್ಞಾಪಿಸು.


ಎಲ್ಲಕ್ಕೂ ಜೀವ ನೀಡುವ ದೇವರ ಮುಂದೆಯೂ ಪೊಂತ್ಯ ಪಿಲಾತನ ಮುಂದೆ ಒಳ್ಳೆಯ ಅರಿಕೆಯನ್ನು ಸಾಕ್ಷಿಯಾಗಿ ನೀಡಿದ ಕ್ರಿಸ್ತ ಯೇಸುವಿನ ಮುಂದೆಯೂ ನಾನು ನಿನಗೆ ಖಂಡಿತವಾಗಿ ಹೇಳವುದೇನೆಂದರೆ:


ಅವನು ಟೈರ್ ಮತ್ತು ಸೀದೋನಿನ ಜನರೊಂದಿಗೆ ಬಹು ಕೋಪವುಳ್ಳವನಾಗಿದ್ದನು. ಈಗ ಅವರೆಲ್ಲರೂ ಒಂದಾಗಿ ಅವನ ಬಳಿ ಬಂದು ಅರಸನ ನಂಬಿಗಸ್ತ ಸೇವಕನಾದ ಬ್ಲಾಸ್ತ ಎಂಬುವನ ಬೆಂಬಲವನ್ನು ಪಡೆದುಕೊಂಡು, ಸಂಧಾನ ಮಾಡಿಕೊಳ್ಳಲು ಅರಸನನ್ನು ಕೇಳಿಕೊಂಡರು. ಏಕೆಂದರೆ ಅವರ ಆಹಾರ ಧಾನ್ಯಗಳು ಅರಸನ ಸೀಮೆಯಿಂದ ಬರುತ್ತಿದ್ದವು.


ಅರಸನ ಹೃದಯವು ಯೆಹೋವ ದೇವರ ಕೈಯಲ್ಲಿ ನೀರಿನ ಕಾಲುವೆಗಳಂತೆ; ತನಗೆ ಇಷ್ಟವಾದ ಕಡೆಗೆ ಆತನು ಅದನ್ನು ತಿರುಗಿಸುತ್ತಾನೆ.


ನನ್ನ ಜನರಿಗೆ ಕೇಡು ಸಂಭವಿಸುವುದನ್ನು ನೋಡಿ ನಾನು ಹೇಗೆ ಸಹಿಸಲಿ? ಇಲ್ಲವೆ ನನ್ನ ಕುಟುಂಬದ ನಾಶವನ್ನು ನಾನು ನೋಡಿ ಹೇಗೆ ಸಹಿಸಲಿ?” ಎಂದಳು.


ಆಗ ಹತಾಕನು ಹಿಂದಿರುಗಿ ಬಂದು ಎಸ್ತೇರಳಿಗೆ ಮೊರ್ದೆಕೈಯ ಮಾತುಗಳನ್ನು ತಿಳಿಸಿದನು.


ಯೆರೂಸಲೇಮಿನ ಸಮಾಧಾನಕ್ಕಾಗಿ ಪ್ರಾರ್ಥನೆಮಾಡಿರಿ. “ಯೆರೂಸಲೇಮೇ, ನಿನ್ನನ್ನು ಪ್ರೀತಿಸುವವರಿಗೆ ಅಭಿವೃದ್ಧಿಯಾಗಲಿ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು