Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಎಸ್ತೇರಳು 5:4 - ಕನ್ನಡ ಸಮಕಾಲಿಕ ಅನುವಾದ

4 ಅದಕ್ಕೆ ಎಸ್ತೇರಳು ಅರಸನಿಗೆ, “ಸಮ್ಮತಿಯಾದರೆ ನಾನು ಅರಸನಿಗಾಗಿ ಸಿದ್ಧಮಾಡಿಸಿರುವ ಔತಣಕ್ಕೆ ಅರಸನೂ ಹಾಮಾನನೂ ಈ ಹೊತ್ತು ಬರಬೇಕು,” ಎಂದಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

4 ಅದಕ್ಕೆ ಎಸ್ತೇರಳು, “ಅರಸನು ಒಪ್ಪುವುದಾದರೆ ನಾನು ಈಹೊತ್ತು ತಮಗೋಸ್ಕರ ಸಿದ್ಧಮಾಡಿಸಿರುವ ಔತಣಕ್ಕೆ ಹಾಮಾನನೊಡನೆ ಬರೋಣವಾಗಲಿ” ಎಂದು ಅರಿಕೆಮಾಡಿದಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

4 ಪ್ರತ್ಯುತ್ತರವಾಗಿ ಎಸ್ತೇರಳು, “ಅರಸರ ಚಿತ್ತವಾದರೆ ನಾನು ತಮಗೋಸ್ಕರ ಸಿದ್ಧಮಾಡಿಸಿರುವ ಔತಣಕ್ಕೆ ತಾವು ಹಾಮಾನನೊಂದಿಗೆ ದಯಮಾಡಿಸಬೇಕು,” ಎಂದು ವಿನಂತಿಸಿದಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

4 ಅದಕ್ಕೆ ಎಸ್ತೇರಳು - ಅರಸನ ಚಿತ್ತಕ್ಕೆ ಬಂದರೆ ನಾನು ಈಹೊತ್ತು ತಮಗೋಸ್ಕರ ಸಿದ್ಧಮಾಡಿಸಿರುವ ಔತಣಕ್ಕೆ ಹಾಮಾನನೊಡನೆ ಬರೋಣವಾಗಲಿ ಎಂದು ಅರಿಕೆಮಾಡಿದಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

4 ಅದಕ್ಕೆ ಎಸ್ತೇರಳು, “ನಾನು ಒಂದು ಔತಣವನ್ನು ಸಿದ್ಧಪಡಿಸಿರುತ್ತೇನೆ. ಅದಕ್ಕೆ ನೀವೂ, ಹಾಮಾನನೂ ಬರಬೇಕು ಎಂದು ವಿನಂತಿಸುತ್ತೇನೆ” ಎಂದಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಎಸ್ತೇರಳು 5:4
10 ತಿಳಿವುಗಳ ಹೋಲಿಕೆ  

ಮೂಢನು ತನ್ನ ಕೋಪವನ್ನೆಲ್ಲಾ ವ್ಯಕ್ತಪಡಿಸುವನು. ಆದರೆ ಜ್ಞಾನಿಯು ಕೋಪವನ್ನು ಶಾಂತಿಯಿಂದ ತಡೆಹಿಡಿಯುತ್ತಾನೆ.


ಅರಸನಿಗೆ ಸಮ್ಮತಿಯಾದರೆ, ಅರಸನಿಗೂ ಹಾಮಾನನಿಗೂ ನಾನು ಮಾಡಲಿರುವ ಔತಣಕ್ಕೆ ನಾಳೆಯೂ ಬರಬೇಕು. ಆಗ ಅರಸನ ಪ್ರಶ್ನೆಗೆ ಉತ್ತರಕೊಡುವೆನು,” ಎಂದಳು.


ಸಹೋದರರೇ, ಮಕ್ಕಳಂತೆ ಯೋಚಿಸುವುದನ್ನು ಬಿಟ್ಟುಬಿಡಿರಿ. ಕೇಡಿನ ವಿಷಯದಲ್ಲಿ ಶಿಶುಗಳಂತೆ ಇದ್ದರೂ, ನಿಮ್ಮ ಯೋಚನೆಯಲ್ಲಿ ಪ್ರಾಯಸ್ಥರಾಗಿರಿ.


ದಯೆತೋರಿಸಿ ಸಾಲಕೊಡುವವರಿಗೆ, ಒಳ್ಳೆಯದಾಗುವುದು; ಅವರು ತಮ್ಮ ಕಾರ್ಯಗಳನ್ನು ನ್ಯಾಯದಿಂದ ನಡೆಸುವರು.


ಅಂಚೆಯವರು ಅರಸನ ಆಜ್ಞೆಯಿಂದ ತ್ವರೆಯಾಗಿ ಹೊರಟು ಹೋದರು. ಶೂಷನಿನ ಅರಮನೆಯಲ್ಲಿಂದ ಆ ಆಜ್ಞೆಯು ಹೊರಡಿತು. ಅರಸನೂ ಹಾಮಾನನೂ ಮದ್ಯಪಾನ ಮಾಡಲು ಕುಳಿತುಕೊಂಡರು. ಆದರೆ ಶೂಷನ್ ಪಟ್ಟಣವೋ ತಳಮಳಗೊಂಡಿತ್ತು.


ಇದಲ್ಲದೆ, ‘ನಿನ್ನ ದಾಸ ಯಾಕೋಬನು ನಮ್ಮ ಹಿಂದೆ ಬರುತ್ತಾನೆಂದು ಹೇಳಬೇಕು,’ ” ಎಂದು ಆಜ್ಞಾಪಿಸಿದನು. ಏಕೆಂದರೆ ನನ್ನ ಮುಂದೆ ಹೋಗುವ ಕಾಣಿಕೆಯಿಂದ ಅವನನ್ನು ಸಮಾಧಾನಪಡಿಸುವೆನು. ತರುವಾಯ ಅವನ ಮುಖವನ್ನು ಕಾಣುವೆನು. ಅವನು ನನ್ನನ್ನು ಅಂಗೀಕರಿಸುವನೇನೋ ಎಂದುಕೊಂಡನು.


ಆಗ ಇಸಾಕನು, “ನನ್ನ ಮಗನೇ, ನೀನು ತಂದದ್ದನ್ನು ಕೊಡು, ಊಟಮಾಡಿ, ನಿನ್ನನ್ನು ಆಶೀರ್ವದಿಸುವೆನು,” ಎಂದನು. ಆಗ ಯಾಕೋಬನು ಅದನ್ನು ಹತ್ತಿರ ತೆಗೆದುಕೊಂಡು ಬಂದಾಗ ಅವನು ಊಟಮಾಡಿದನು. ಅವನು ದ್ರಾಕ್ಷಾರಸವನ್ನು ತಂದಾಗ, ಅದನ್ನು ಕುಡಿದನು.


ಆಗ ಅರಸನು ಅವಳಿಗೆ, “ಎಸ್ತೇರ್ ರಾಣಿಯೇ, ನಿನ್ನ ವಿಜ್ಞಾಪನೆ ಏನು? ನಿನ್ನ ಬೇಡಿಕೆ ಏನು? ಅದು ನನ್ನ ರಾಜ್ಯದ ಅರ್ಧವಾಗಿದ್ದರೂ ಸರಿ, ನಾನು ಅದನ್ನು ನಿನಗೆ ಕೊಡುವೆನು,” ಎಂದನು.


ಆಗ ಅರಸನು, “ಎಸ್ತೇರಳು ಹೇಳಿದ ಪ್ರಕಾರ ನಾವು ಮಾಡಲು, ಬೇಗನೆ ಹಾಮಾನನನ್ನು ಕರೆದುಕೊಂಡು ಬನ್ನಿರಿ,” ಎಂದು ಆಜ್ಞಾಪಿಸಿದನು. ಎಸ್ತೇರಳು ಏರ್ಪಡಿಸಿದ್ದ ಔತಣಕ್ಕೆ ಅರಸನೂ ಹಾಮಾನನೂ ಬಂದರು.


ಇದಲ್ಲದೆ ರಾಣಿಯಾದ ವಷ್ಟಿ ಅರಸನಾದ ಅಹಷ್ವೇರೋಷನ ಅರಮನೆಯಲ್ಲಿದ್ದ ಸ್ತ್ರೀಯರಿಗೆ ಔತಣವನ್ನು ಮಾಡಿಸಿದಳು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು