Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಎಸ್ತೇರಳು 6:1 - ಕನ್ನಡ ಸಮಕಾಲಿಕ ಅನುವಾದ

1 ಆ ರಾತ್ರಿ ಅರಸನಿಗೆ ನಿದ್ರೆ ಬರಲಿಲ್ಲ. ಆದ್ದರಿಂದ ಅರಸನು ಇತಿಹಾಸ ಘಟನೆಗಳನ್ನು ಬರೆದಿಟ್ಟಿದ್ದ ಗ್ರಂಥವನ್ನು ತೆಗೆದುಕೊಂಡು ಬರಲು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

1 ಆ ರಾತ್ರಿಯಲ್ಲಿ ಅರಸನಿಗೆ ನಿದ್ರೆಬರಲಿಲ್ಲ; ಆದುದರಿಂದ ಅವನು ಪೂರ್ವ ಘಟನೆಗಳ ಗ್ರಂಥವನ್ನು ತರಲು ಸೇವಕರಿಗೆ ಅಪ್ಪಣೆಮಾಡಿ ಅದನ್ನು ಪಾರಾಯಣಮಾಡಿಸುತ್ತಿದ್ದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

1 ಆ ರಾತ್ರಿ ಅರಸನಿಗೆ ನಿದ್ದೆಯೇ ಬರಲಿಲ್ಲ. ಆದ್ದರಿಂದ, ಸ್ಮರಿಸತಕ್ಕ ಪೂರ್ವ ಘಟನೆಗಳನ್ನು ಬರೆದಿಟ್ಟಿದ್ದ ಗ್ರಂಥವನ್ನು ತರಿಸಿ, ಅದನ್ನು ಪಾರಾಯಣ ಮಾಡಿಸುತ್ತಿದ್ದಾಗ,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

1 ಆ ರಾತ್ರಿಯಲ್ಲಿ ಅರಸನಿಗೆ ನಿದ್ರೆ ಬರಲಿಲ್ಲ; ಆದದರಿಂದ ಸ್ಮರಿಸತಕ್ಕ ಪೂರ್ವವೃತ್ತಾಂತಗಳ ಗ್ರಂಥವನ್ನು ಅವನು ತರಿಸಿ ಪಾರಾಯಣಮಾಡಿಸುತ್ತಿರುವಾಗ

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

1 ಆ ರಾತ್ರಿ ಅರಸನಿಗೆ ನಿದ್ರಿಸಲಾಗಲಿಲ್ಲ. ಒಬ್ಬ ಸೇವಕನನ್ನು ಕರೆದು ರಾಜಕಾಲವೃತ್ತಾಂತ ಪುಸ್ತಕವನ್ನು ತರಹೇಳಿ ಅವನಿಂದ ಅದನ್ನು ಓದಿಸಿದನು. (ಈ ಪುಸ್ತಕದಲ್ಲಿ ಅರಸರ ರಾಜ್ಯ ಆಳ್ವಿಕೆಯಲ್ಲಿ ನಡೆದ ಘಟನೆಗಳು ಲಿಖಿತವಾಗಿರುತ್ತದೆ.)

ಅಧ್ಯಾಯವನ್ನು ನೋಡಿ ನಕಲು ಮಾಡಿ




ಎಸ್ತೇರಳು 6:1
12 ತಿಳಿವುಗಳ ಹೋಲಿಕೆ  

ಆಮೇಲೆ ಅರಸನು ತನ್ನ ಅರಮನೆಗೆ ಹಿಂದಿರುಗಿ, ಉಪವಾಸದಿಂದಲೇ ರಾತ್ರಿಯನ್ನು ಕಳೆದನು. ಗಾನ, ವಾದ್ಯಗಳನ್ನು ಅವನ ಮುಂದೆ ತರಲಿಲ್ಲ. ಅರಸನಿಗೆ ನಿದ್ರೆ ಬರಲಿಲ್ಲ.


ನೆಬೂಕದ್ನೆಚ್ಚರನ ಆಳಿಕೆಯ ಎರಡನೆಯ ವರ್ಷದಲ್ಲಿ ನೆಬೂಕದ್ನೆಚ್ಚರನು ಕನಸುಗಳನ್ನು ಕಂಡನು. ಅವನ ಆತ್ಮವು ಕಳವಳಗೊಂಡಿತು. ಅವನಿಗೆ ನಿದ್ರೆಯೇ ಬರಲಿಲ್ಲ.


ಈ ವಿಷಯ ವಿಚಾರಣೆಗೆ ಬಂದಾಗ ನಿಜವೆಂದು ಗೊತ್ತಾಯಿತು. ಆಗ ಆ ಇಬ್ಬರು ಅಧಿಕಾರಿಗಳನ್ನೂ ಗಲ್ಲಿಗೇರಿಸಲಾಯಿತು. ಇವೆಲ್ಲವನ್ನೂ ಅರಸನ ಮುಂದೆ ಇರುವ ರಾಜನ ಇತಿಹಾಸಗಳ ಪುಸ್ತಕದಲ್ಲಿ ಬರೆದಿಡಲಾಯಿತು.


ಆಹಾ! ದೇವರ ಐಶ್ವರ್ಯ, ಜ್ಞಾನ ಮತ್ತು ವಿವೇಕಗಳು ಎಷ್ಟು ಆಳವಾದವುಗಳು! ದೇವರ ತೀರ್ಮಾನಗಳು ಪರೀಶೀಲಿಸಲು ಅಸಾಧ್ಯವಾದದ್ದು! ದೇವರ ಮಾರ್ಗಗಳನ್ನು ಕಂಡುಹಿಡಿಯುವುದು ಅಪರಿಮಿತವಾದದ್ದು!


ಬಡವರೂ ದರಿದ್ರರೂ ನೀರನ್ನು ಹುಡುಕಿ ಕಾಣದೇ, ಬಾಯಾರಿಕೆಯಿಂದ ನಾಲಿಗೆ ಒಣಗಿದಾಗ, ಯೆಹೋವನಾದ ನಾನೇ ಅವರಿಗೆ ಉತ್ತರಕೊಡುವೆನು. ಇಸ್ರಾಯೇಲ್ ದೇವರಾಗಿರುವ ನಾನು ಅವರನ್ನು ಕೈಬಿಡೆನು.


ಅವನ ಅಧಿಕಾರದ ಕ್ರಿಯೆಗಳೂ ಅವನ ಪರಾಕ್ರಮವೂ ಅರಸನು ಮೊರ್ದೆಕೈಯನ್ನು ಹೆಚ್ಚಿಸಿದ ಮಹತ್ತಿನ ಪ್ರಸಿದ್ಧಿಯೂ ಮೇದ್ಯ ಮತ್ತು ಪಾರಸಿಯ ಅರಸರ ಇತಿಹಾಸಗಳ ಗ್ರಂಥದಲ್ಲಿ ಬರೆದಿರುತ್ತವೆ.


ಅಬ್ರಹಾಮನು ಆ ಸ್ಥಳಕ್ಕೆ ಯೆಹೋವ ಯೀರೆ ಎಂದು ಹೆಸರಿಟ್ಟನು. “ಯೆಹೋವ ದೇವರು ಪರ್ವತದ ಮೇಲೆ ಒದಗಿಸುವರು,” ಎಂದು ಇಂದಿನವರೆಗೂ ಜನರು ಹೇಳುತ್ತಾರೆ.


ಆಗ ಯೆಹೋವ ದೇವರಿಗೆ ಭಯಪಡುವವರು, ಒಬ್ಬರ ಸಂಗಡಲೊಬ್ಬರು ಮಾತಾಡಿಕೊಂಡರು. ಯೆಹೋವ ದೇವರು ಕಿವಿಗೊಟ್ಟು ಅದನ್ನು ಕೇಳಿದರು. ಇದಲ್ಲದೆ ಯೆಹೋವ ದೇವರಿಗೆ ಭಯಪಟ್ಟು, ಅವರ ನಾಮವನ್ನು ಗೌರವಿಸುವವರ ಬಗ್ಗೆ ಅವರು ತಮ್ಮ ಮುಂದೆ ಇದ್ದ ಜ್ಞಾಪಕ ಪುಸ್ತಕದಲ್ಲಿ ಬರೆಸಿದರು.


ಅರಸನಿಗೆ ಸಮ್ಮತಿಯಾದರೆ, ಅರಸನಿಗೂ ಹಾಮಾನನಿಗೂ ನಾನು ಮಾಡಲಿರುವ ಔತಣಕ್ಕೆ ನಾಳೆಯೂ ಬರಬೇಕು. ಆಗ ಅರಸನ ಪ್ರಶ್ನೆಗೆ ಉತ್ತರಕೊಡುವೆನು,” ಎಂದಳು.


ಈ ಕಾರ್ಯವು ಮೊರ್ದೆಕೈಗೆ ತಿಳಿದದ್ದರಿಂದ ಅವನು ಅದನ್ನು ರಾಣಿಯಾದ ಎಸ್ತೇರಳಿಗೆ ತಿಳಿಸಿದನು. ಎಸ್ತೇರಳು ಮೊರ್ದೆಕೈಯ ಹೆಸರನ್ನು ಅರಸನಿಗೆ ಹೇಳಿ ಆ ಒಳಸಂಚಿನ ಬಗ್ಗೆ ತಿಳಿಸಿದಳು.


ಆ ದಿವಸಗಳಲ್ಲಿ ಮೊರ್ದೆಕೈಯು ಅರಮನೆಯ ಬಾಗಿಲಲ್ಲಿ ಕುಳಿತಿರುವಾಗ, ದ್ವಾರಪಾಲಕರಾದಂಥ ಅರಸನ ರಾಜಕಂಚುಕಿಗಳಾದ ಬಿಗೆತಾನ್ ಮತ್ತು ತೆರೆಷ್ ಎಂಬಿಬ್ಬರು ಅರಸನಾದ ಅಹಷ್ವೇರೋಷನ ಮೇಲೆ ಕೋಪಗೊಂಡು ಅವನನ್ನು ಕೊಲ್ಲಬೇಕೆಂದು ಒಳಸಂಚು ಮಾಡಿದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು