Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಎಸ್ತೇರಳು 6:10 - ಕನ್ನಡ ಸಮಕಾಲಿಕ ಅನುವಾದ

10 ಆಗ ಅರಸನು ಹಾಮಾನನಿಗೆ, “ನೀನು ಹೇಳಿದ ಪ್ರಕಾರವೇ ಬೇಗನೆ ಹೋಗಿ ರಾಜವಸ್ತ್ರಗಳನ್ನೂ ಪಟ್ಟದ ಕುದುರೆಯನ್ನೂ ತೆಗೆದುಕೊಂಡು ಅರಮನೆಯ ಹೆಬ್ಬಾಗಿಲಲ್ಲಿ ಕುಳಿತಿರುವ ಯೆಹೂದ್ಯನಾದ ಮೊರ್ದೆಕೈಗೆ ಹಾಗೆಯೇ ಮಾಡು. ನೀನು ಸಲಹೆಮಾಡಿದ್ದರಲ್ಲಿ ಒಂದನ್ನೂ ಬಿಡದೆ, ಎಲ್ಲವನ್ನೂ ಮಾಡು,” ಎಂದು ಹಾಮಾನನಿಗೆ ಆಜ್ಞಾಪಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

10 ಕೂಡಲೆ ಅರಸನು ಹಾಮಾನನಿಗೆ, “ನೀನು ಹೇಳಿದ ವಸ್ತ್ರಗಳನ್ನೂ ಮತ್ತು ಕುದುರೆಯನ್ನೂ ಬೇಗನೆ ತೆಗೆದುಕೊಂಡು ಬಂದು ಅರಮನೆಯ ಬಾಗಿಲಿನಲ್ಲಿ ಕುಳಿತುಕೊಂಡಿರುವ ಮೊರ್ದೆಕೈ ಎಂಬ ಯೆಹೂದ್ಯನಿಗೆ ಹಾಗೆಯೇ ಮಾಡು; ನೀನು ಹೇಳಿದವುಗಳಲ್ಲಿ ಒಂದನ್ನೂ ನೆರವೇರಿಸದೆ ಬಿಡಬೇಡ” ಎಂದು ಅಪ್ಪಣೆಮಾಡಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

10 ಕೂಡಲೆ ಅರಸನು ಹಾಮಾನನಿಗೆ, “ನೀನು ಹೇಳಿದ ಪ್ರಕಾರವೇ ಬೇಗನೆ ಹೋಗಿ ರಾಜವಸ್ತ್ರಗಳನ್ನೂ ಪಟ್ಟದ ಕುದುರೆಯನ್ನೂ ತೆಗೆದುಕೊಂಡು ಅರಮನೆಯ ಬಾಗಿಲಲ್ಲಿ ಕುಳಿತಿರುವ ಮೊರ್ದೆಕೈ ಎಂಬ ಯೆಹೂದ್ಯನಿಗೆ ಹಾಗೆಯೇ ಮಾಡು. ನೀನು ಸಲಹೆ ಮಾಡಿದವುಗಳಲ್ಲಿ ಒಂದನ್ನೂ ಬಿಡದೆ, ಚಾಚೂತಪ್ಪದೆ ನೆರವೇರಿಸು,” ಎಂದು ಅಪ್ಪಣೆಮಾಡಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

10 ಕೂಡಲೆ ಅರಸನು ಹಾಮಾನನಿಗೆ - ನೀನು ಹೇಳಿದ ವಸ್ತ್ರಗಳನ್ನೂ ಕುದುರೆಯನ್ನೂ ಬೇಗನೆ ತೆಗೆದುಕೊಂಡು ಬಂದು ಅರಮನೆಯ ಬಾಗಲಿನಲ್ಲಿ ಕೂತಿರುವ ಮೊರ್ದೆಕೈ ಎಂಬ ಯೆಹೂದ್ಯನಿಗೆ ಹಾಗೆಯೇ ಮಾಡು; ನೀನು ಹೇಳಿದವುಗಳಲ್ಲಿ ಒಂದನ್ನೂ ನೆರವೇರಿಸದೆ ಬಿಡಬೇಡ ಎಂದು ಅಪ್ಪಣೆಮಾಡಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

10 “ಈಗಲೇ,” ಅರಸನು ಹಾಮಾನನಿಗೆ ಆಜ್ಞೆಕೊಟ್ಟು “ಈಗಲೇ ಹೋಗಿ ರಾಜವಸ್ತ್ರಗಳನ್ನೂ ರಾಜನ ಕುದುರೆಯನ್ನೂ ಕೊಂಡುಹೋಗಿ ಯೆಹೂದ್ಯನಾದ ಮೊರ್ದೆಕೈಗೆ ನೀನು ಹೇಳಿದ ಪ್ರಕಾರವೆ ಮಾಡು. ಮೊರ್ದೆಕೈ ಅರಮನೆಯ ಹೆಬ್ಬಾಗಿಲ ಬಳಿಯಲ್ಲಿ ಕುಳಿತುಕೊಂಡಿರುತ್ತಾನೆ. ನಿನ್ನ ಸಲಹೆಯಂತೆಯೇ ಎಲ್ಲವನ್ನೂ ಮಾಡು” ಅಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಎಸ್ತೇರಳು 6:10
7 ತಿಳಿವುಗಳ ಹೋಲಿಕೆ  

ಆಕೆಯು ಯಾವುದರಿಂದ ತನ್ನನ್ನು ಘನಪಡಿಸಿಕೊಂಡು ಭೋಗಿನಿಯಾಗಿದ್ದಳೋ ಅದಕ್ಕೆ ತಕ್ಕಂತೆ ನೀವು ಆಕೆಗೆ ಯಾತನೆಯನ್ನೂ ದುಃಖವನ್ನೂ ಕೊಡಿರಿ. ಏಕೆಂದರೆ ಆಕೆ ತನ್ನ ಹೃದಯದಲ್ಲಿ, ‘ನಾನು ರಾಣಿಯಾಗಿ ಕುಳಿತುಕೊಂಡಿದ್ದೇನೆ. ನಾನು ವಿಧವೆಯಲ್ಲ, ಎಂದೆಂದಿಗೂ ದುಃಖಿಸುವುದಿಲ್ಲ!’ ಎಂದುಕೊಳ್ಳುತ್ತಾಳೆ.


ಏಕೆಂದರೆ, ಯಾರಾದರೂ ತಮ್ಮನ್ನು ತಾವೇ ಹೆಚ್ಚಿಸಿಕೊಳ್ಳುವರೋ ಅವರು ತಗ್ಗಿಸಲಾಗುವರು ಮತ್ತು ತಮ್ಮನ್ನು ತಾವೇ ತಗ್ಗಿಸಿಕೊಳ್ಳುವವರು ಹೆಚ್ಚಿಸಲಾಗುವರು,” ಎಂದರು.


ಈಗ ನೆಬೂಕದ್ನೆಚ್ಚರನಾದ ನಾನು ಪರಲೋಕದ ಅರಸರನ್ನು ಸ್ತುತಿಸಿ, ಹೆಚ್ಚಿಸಿ ಘನಪಡಿಸುತ್ತೇನೆ. ಅವರ ಕ್ರಿಯೆಗಳೆಲ್ಲಾ ಸತ್ಯವೇ. ಅವರ ಮಾರ್ಗಗಳು ನ್ಯಾಯವೇ. ಗರ್ವದಲ್ಲಿ ನಡೆಯುವವರನ್ನು ಅವರೇ ತಗ್ಗಿಸಬಲ್ಲರು.


ಯೆಹೋವ ದೇವರು ಅಹಾಬನ ಮನೆಯನ್ನು ಕುರಿತು ಹೇಳಿದ ಯೆಹೋವ ದೇವರ ಮಾತುಗಳಲ್ಲಿ ಒಂದೂ ವ್ಯರ್ಥವಾಗುವುದಿಲ್ಲವೆಂದು ನೀವು ತಿಳಿದುಕೊಳ್ಳಿರಿ. ಯೆಹೋವ ದೇವರು ತಮ್ಮ ಸೇವಕನಾದ ಎಲೀಯನ ಮುಖಾಂತರ ಹೇಳಿದ್ದನ್ನು ನೆರವೇರಿಸಿದ್ದಾರೆ,” ಎಂದನು.


ಆ ವಸ್ತ್ರಗಳನ್ನೂ ಕುದುರೆಯನ್ನೂ ಅರಸನ ಪ್ರಧಾನರಲ್ಲಿ ಒಬ್ಬನ ವಶಕ್ಕೆ ಕೊಡಬೇಕು. ಇವನು ಅರಸನು ಸನ್ಮಾನಿಸಬೇಕೆಂದಿರುವ ವ್ಯಕ್ತಿಗೆ ರಾಜವಸ್ತ್ರಗಳನ್ನು ತೊಡಿಸಿದ ತರುವಾಯ, ಅವನನ್ನು ಕುದುರೆಯ ಮೇಲೆ ಕೂರಿಸಿ ಪಟ್ಟಣ ಬೀದಿಗಳಲ್ಲಿ ಮೆರವಣಿಗೆ ಮಾಡಿಸುತ್ತಾ, ಅವನ ಮುಂದೆ, ‘ಅರಸನು ಸನ್ಮಾನಿಸಬೇಕೆಂದಿರುವ ಮನುಷ್ಯನಿಗೆ ಗೌರವಿಸುವ ರೀತಿ ಇದೇ!’ ಎಂದು ಪ್ರಕಟಿಸಬೇಕು,” ಎಂದನು.


ಆದ್ದರಿಂದ ಹಾಮಾನನು ರಾಜವಸ್ತ್ರಗಳನ್ನೂ ಪಟ್ಟದ ಕುದುರೆಯನ್ನೂ ತೆಗೆದುಕೊಂಡು ಮೊರ್ದೆಕೈಗೆ ಆ ವಸ್ತ್ರಗಳನ್ನು ತೊಡಿಸಿ, ಅವನನ್ನು ಕುದುರೆಯ ಮೇಲೆ ಕೂರಿಸಿ ಪಟ್ಟಣದ ಬೀದಿಗಳಲ್ಲಿ ಮೆರವಣಿಗೆ ಮಾಡಿಸಿ ಅವನ ಮುಂದೆ, “ಅರಸನು ಸನ್ಮಾನಿಸಬೇಕೆಂದಿರುವ ಮನುಷ್ಯನಿಗೆ ಗೌರವಿಸುವ ರೀತಿ ಇದೇ!” ಎಂದು ಸಾರಿದನು.


ಯೆಹೋವ ದೇವರಲ್ಲಿ ನಿರೀಕ್ಷಿಸುವವರೆಲ್ಲರೂ ದೃಢವಾಗಿರಿ; ನಿಮ್ಮ ಹೃದಯವು ಧೈರ್ಯದಿಂದ ಇರಲಿ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು