ಎಸ್ತೇರಳು 6:3 - ಕನ್ನಡ ಸಮಕಾಲಿಕ ಅನುವಾದ3 ಆಗ ಅರಸನು, “ಈ ಸತ್ಕಾರ್ಯಕ್ಕಾಗಿ ಮೊರ್ದೆಕೈಯನಿಗೆ ಯಾವ ಸನ್ಮಾನ ಮಾಡಲಾಯಿತು?” ಎಂದು ವಿಚಾರಿಸಿದನು. ಅರಸನ ಸೇವಕರು, “ಮೊರ್ದೆಕೈಯನಿಗೆ ಏನೂ ಮಾಡಿಲ್ಲ,” ಎಂದು ಹೇಳಿದರು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20193 ಆಗ ಅರಸನು, “ಇದಕ್ಕಾಗಿ ಮೊರ್ದೆಕೈಗೆ ಯಾವ ಸ್ಥಾನಮಾನಗಳು ದೊರಕಿದವು?” ಎಂದು ವಿಚಾರಿಸಿದಾಗ ಅವನ ಸಾನ್ನಿಧ್ಯಸೇವಕರಾದ ಪರಿವಾರದವರು, “ಏನೂ ದೊರಕಲಿಲ್ಲ” ಎಂದು ಹೇಳಿದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)3 ಆಗ ಅರಸನು, “ಈ ಸತ್ಕಾರ್ಯಕ್ಕಾಗಿ ಮೊರ್ದೆಕೈಯನಿಗೆ ಯಾವ ಸನ್ಮಾನ ಮಾಡಲಾಯಿತೆಂದು ವಿಚಾರಿಸಿದಾಗ, ಅವನ ಆಸ್ಥಾನಸೇವಕರು ಯಾವುದೂ ಇಲ್ಲವೆಂದು ಉತ್ತರವಿತ್ತರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)3 ಆಗ ಅರಸನು - ಇದಕ್ಕಾಗಿ ಮೊರ್ದೆಕೈಗೆ ಯಾವ ಸ್ಥಾನಮಾನಗಳು ದೊರಕಿದವೆಂದು ವಿಚಾರಿಸಿದಾಗ ಅವನ ಸಾನ್ನಿಧ್ಯಸೇವಕರಾದ ಪರಿವಾರದವರು - ಏನೂ ದೊರಕಲಿಲ್ಲ ಎಂದು ಹೇಳಿದರು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್3 ಇದನ್ನು ಕೇಳುತ್ತಿದ್ದ ಅರಸನು, “ಮೊರ್ದೆಕೈ ಹೀಗೆ ಮಾಡಿದುದಕ್ಕೆ ಯಾವ ಗೌರವ ಮತ್ತು ಬಹುಮಾನಗಳು ಕೊಡಲ್ಪಟ್ಟವು?” ಎಂದು ವಿಚಾರಿಸಿದನು. “ಮೊರ್ದೆಕೈಗೆ ಏನೂ ಕೊಡಲಿಲ್ಲ” ಎಂದು ಸೇವಕರು ಉತ್ತರಿಸಿದರು. ಅಧ್ಯಾಯವನ್ನು ನೋಡಿ |
ಈಗ ನೀನು ಅರ್ಥಗಳನ್ನು ವಿವರಿಸಿ, ಕಷ್ಟಕರವಾದ ಸಮಸ್ಯೆಗಳನ್ನು ಬಗೆಹರಿಸಲು ಸಮರ್ಥನೆಂದು ನಾನು ನಿನ್ನ ವಿಷಯವಾಗಿ ಕೇಳಿದ್ದೇನೆ. ಹೀಗಾದರೆ ಈ ಬರಹವನ್ನು ಓದುವುದಕ್ಕೂ, ಅದರ ಅರ್ಥವನ್ನು ತಿಳಿಸುವುದಕ್ಕೂ ನಿನ್ನಿಂದ ಸಾಧ್ಯವಾದರೆ, ನಿನಗೆ ಧೂಮ್ರವಸ್ತ್ರವನ್ನು ಹೊದಿಸಿ, ಕೊರಳಿಗೆ ಚಿನ್ನದ ಹಾರವನ್ನು ಹಾಕಿಸಿ, ರಾಜ್ಯದ ಮೂರನೆಯ ಅಧಿಕಾರಿಯನ್ನಾಗಿ ನೇಮಿಸುವೆನು,” ಎಂದು ಹೇಳಿದನು.