Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಎಸ್ತೇರಳು 6:3 - ಕನ್ನಡ ಸಮಕಾಲಿಕ ಅನುವಾದ

3 ಆಗ ಅರಸನು, “ಈ ಸತ್ಕಾರ್ಯಕ್ಕಾಗಿ ಮೊರ್ದೆಕೈಯನಿಗೆ ಯಾವ ಸನ್ಮಾನ ಮಾಡಲಾಯಿತು?” ಎಂದು ವಿಚಾರಿಸಿದನು. ಅರಸನ ಸೇವಕರು, “ಮೊರ್ದೆಕೈಯನಿಗೆ ಏನೂ ಮಾಡಿಲ್ಲ,” ಎಂದು ಹೇಳಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

3 ಆಗ ಅರಸನು, “ಇದಕ್ಕಾಗಿ ಮೊರ್ದೆಕೈಗೆ ಯಾವ ಸ್ಥಾನಮಾನಗಳು ದೊರಕಿದವು?” ಎಂದು ವಿಚಾರಿಸಿದಾಗ ಅವನ ಸಾನ್ನಿಧ್ಯಸೇವಕರಾದ ಪರಿವಾರದವರು, “ಏನೂ ದೊರಕಲಿಲ್ಲ” ಎಂದು ಹೇಳಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

3 ಆಗ ಅರಸನು, “ಈ ಸತ್ಕಾರ್ಯಕ್ಕಾಗಿ ಮೊರ್ದೆಕೈಯನಿಗೆ ಯಾವ ಸನ್ಮಾನ ಮಾಡಲಾಯಿತೆಂದು ವಿಚಾರಿಸಿದಾಗ, ಅವನ ಆಸ್ಥಾನಸೇವಕರು ಯಾವುದೂ ಇಲ್ಲವೆಂದು ಉತ್ತರವಿತ್ತರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

3 ಆಗ ಅರಸನು - ಇದಕ್ಕಾಗಿ ಮೊರ್ದೆಕೈಗೆ ಯಾವ ಸ್ಥಾನಮಾನಗಳು ದೊರಕಿದವೆಂದು ವಿಚಾರಿಸಿದಾಗ ಅವನ ಸಾನ್ನಿಧ್ಯಸೇವಕರಾದ ಪರಿವಾರದವರು - ಏನೂ ದೊರಕಲಿಲ್ಲ ಎಂದು ಹೇಳಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

3 ಇದನ್ನು ಕೇಳುತ್ತಿದ್ದ ಅರಸನು, “ಮೊರ್ದೆಕೈ ಹೀಗೆ ಮಾಡಿದುದಕ್ಕೆ ಯಾವ ಗೌರವ ಮತ್ತು ಬಹುಮಾನಗಳು ಕೊಡಲ್ಪಟ್ಟವು?” ಎಂದು ವಿಚಾರಿಸಿದನು. “ಮೊರ್ದೆಕೈಗೆ ಏನೂ ಕೊಡಲಿಲ್ಲ” ಎಂದು ಸೇವಕರು ಉತ್ತರಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಎಸ್ತೇರಳು 6:3
12 ತಿಳಿವುಗಳ ಹೋಲಿಕೆ  

ಆಗ ಅದರಲ್ಲಿ ಒಬ್ಬ ಜ್ಞಾನಿಯಾದ ಬಡ ಮನುಷ್ಯನು ಬಂದು, ತನ್ನ ಜ್ಞಾನದಿಂದ ಆ ಪಟ್ಟಣವನ್ನು ರಕ್ಷಿಸಿದನು. ಆದರೂ ಆ ಬಡ ಮನುಷ್ಯನನ್ನು ಯಾರೂ ಜ್ಞಾಪಕ ಮಾಡಿಕೊಳ್ಳಲಿಲ್ಲ.


ಆದರೂ ಪಾನದಾಯಕರ ಮುಖ್ಯಸ್ಥನು ಯೋಸೇಫನನ್ನು ಜ್ಞಾಪಕಮಾಡಿಕೊಳ್ಳದೆ ಅವನನ್ನು ಮರೆತುಬಿಟ್ಟನು.


ಆಗ ಬೇಲ್ಯಚ್ಚರನು ಆಜ್ಞಾಪಿಸಲು ದಾನಿಯೇಲನಿಗೆ ಧೂಮ್ರವಸ್ತ್ರವನ್ನು ಹೊದಿಸಿ, ಅವನ ಕೊರಳಿಗೆ ಚಿನ್ನದ ಹಾರವನ್ನು ಹಾಕಿ, ಇವನು ರಾಜ್ಯದ ಮೂರನೇ ಉನ್ನತ ಅಧಿಕಾರಿಗಳಲ್ಲಿ ಒಬ್ಬನೆಂದು ಸಾರಿದನು.


ಈಗ ನೀನು ಅರ್ಥಗಳನ್ನು ವಿವರಿಸಿ, ಕಷ್ಟಕರವಾದ ಸಮಸ್ಯೆಗಳನ್ನು ಬಗೆಹರಿಸಲು ಸಮರ್ಥನೆಂದು ನಾನು ನಿನ್ನ ವಿಷಯವಾಗಿ ಕೇಳಿದ್ದೇನೆ. ಹೀಗಾದರೆ ಈ ಬರಹವನ್ನು ಓದುವುದಕ್ಕೂ, ಅದರ ಅರ್ಥವನ್ನು ತಿಳಿಸುವುದಕ್ಕೂ ನಿನ್ನಿಂದ ಸಾಧ್ಯವಾದರೆ, ನಿನಗೆ ಧೂಮ್ರವಸ್ತ್ರವನ್ನು ಹೊದಿಸಿ, ಕೊರಳಿಗೆ ಚಿನ್ನದ ಹಾರವನ್ನು ಹಾಕಿಸಿ, ರಾಜ್ಯದ ಮೂರನೆಯ ಅಧಿಕಾರಿಯನ್ನಾಗಿ ನೇಮಿಸುವೆನು,” ಎಂದು ಹೇಳಿದನು.


ಅರಸನು ಗಟ್ಟಿಯಾಗಿ ಕಿರುಚಿ ಜ್ಯೋತಿಷ್ಯರನ್ನೂ, ಪಂಡಿತರನ್ನೂ, ಶಕುನ ಹೇಳುವವರನ್ನೂ ಕರೆಸಿ, ಬಾಬಿಲೋನಿನ ಜ್ಞಾನಿಗಳಿಗೆ, “ಯಾರು ಈ ಬರಹವನ್ನು ಓದಿ, ಅದರ ಅರ್ಥವನ್ನು ನನಗೆ ತಿಳಿಸುವರೋ, ಅವರಿಗೆ ಧೂಮ್ರವಸ್ತ್ರವನ್ನು ಹೊದಿಸಿ, ಅವನ ಕೊರಳಿಗೆ ಚಿನ್ನದ ಹಾರವನ್ನು ಹಾಕಿ, ರಾಜ್ಯದ ಮೂರನೆಯ ಅಧಿಕಾರಿಯಾಗಿ ಮಾಡುವೆನು,” ಎಂದು ಹೇಳಿದನು.


“ಯೆಬೂಸಿಯರಲ್ಲಿ ಒಬ್ಬನನ್ನು ಯಾರು ಮೊದಲು ಕೊಲ್ಲುವನೋ, ಅವನು ನನ್ನ ದಳಪತಿಯಾಗುವನು,” ಎಂದು ದಾವೀದ ಪ್ರಕಟಿಸಿದ್ದನು. ಹಾಗೆಯೇ ಚೆರೂಯಳ ಮಗ ಯೋವಾಬನು ಮೊದಲು ಹೋಗಿ ದಳಪತಿಯಾದನು.


ಅದನ್ನು ಅರಸನ ಮುಂದೆ ತಂದು ಓದಿಸಿದಾಗ, ದ್ವಾರಪಾಲಕರಾಗಿದ್ದ ರಾಜಕಂಚುಕಿಯರಲ್ಲಿ ಇಬ್ಬರಾದ ಬಿಗೆತಾನನೂ ತೆರೆಷನೂ ಅರಸನಾದ ಅಹಷ್ವೇರೋಷನನ್ನು ಕೊಲ್ಲಬೇಕೆಂದು ಒಳಸಂಚುಮಾಡಿದ ಘಟನೆಯು ಬರೆದಿತ್ತು. ಮೊರ್ದೆಕೈಯು ಹೇಗೆ ಅದನ್ನು ಅರಸನಿಗೆ ತಿಳಿಸಿದನೆಂದು ಸಹ ಅದರಲ್ಲಿ ಬರೆದಿತ್ತು.


ಆಗ ಅರಸನು, “ಯಾರು ಅಂಗಳದಲ್ಲಿ?” ಎಂದನು. ಅಷ್ಟರಲ್ಲಿ ಹಾಮಾನನು ತಾನು ಸಿದ್ಧಮಾಡಿಸಿದ ಗಲ್ಲುಮರಕ್ಕೆ ಮೊರ್ದೆಕೈಯನ್ನು ನೇಣುಹಾಕಿಸಲು ಅರಸನ ಸಂಗಡ ಮಾತನಾಡಲು ಅರಮನೆಯ ಹೊರಗಿನ ಅಂಗಳಕ್ಕೆ ಬಂದಿದ್ದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು