Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಎಸ್ತೇರಳು 6:4 - ಕನ್ನಡ ಸಮಕಾಲಿಕ ಅನುವಾದ

4 ಆಗ ಅರಸನು, “ಯಾರು ಅಂಗಳದಲ್ಲಿ?” ಎಂದನು. ಅಷ್ಟರಲ್ಲಿ ಹಾಮಾನನು ತಾನು ಸಿದ್ಧಮಾಡಿಸಿದ ಗಲ್ಲುಮರಕ್ಕೆ ಮೊರ್ದೆಕೈಯನ್ನು ನೇಣುಹಾಕಿಸಲು ಅರಸನ ಸಂಗಡ ಮಾತನಾಡಲು ಅರಮನೆಯ ಹೊರಗಿನ ಅಂಗಳಕ್ಕೆ ಬಂದಿದ್ದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

4 ಅರಸನು, “ಪ್ರಾಕಾರದಲ್ಲಿ ಯಾರಿದ್ದಾರೆ?” ಎಂದು ಕೇಳಿದನು. ಅಷ್ಟರಲ್ಲಿ ಹಾಮಾನನು ತಾನು ಸಿದ್ಧಮಾಡಿಸಿದ ಗಲ್ಲಿಗೆ ಮೊರ್ದೆಕೈಯನ್ನು ನೇತುಹಾಕಿಸುವುದಕ್ಕೆ ಅರಸನ ಅಪ್ಪಣೆ ಪಡೆದುಕೊಳ್ಳಬೇಕೆಂದು ಅರಮನೆಯ ಹೊರಗಣ ಪ್ರಾಕಾರದಲ್ಲಿ ಬಂದು ನಿಂತಿದ್ದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

4 ಕೂಡಲೆ ಅರಸನು, “ಯಾರಲ್ಲಿ, ಅಂಗಳದಲ್ಲಿ?” ಎಂದು ವಿಚಾರಿಸಿದನು. ಅಷ್ಟರಲ್ಲಿ, ತಾನೇ ಸಿದ್ಧಮಾಡಿಸಿದ್ದ ಗಲ್ಲುಮರಕ್ಕೆ ಮೊರ್ದೆಕೈಯನ್ನು ನೇಣುಹಾಕಿಸಲು ಅರಸನ ಅಪ್ಪಣೆಯನ್ನು ಪಡೆಯುವುದಕ್ಕೋಸ್ಕರ ಹಾಮಾನನು ಆಗತಾನೆ ಅರಮನೆಯ ಹೊರಗಣ ಅಂಗಳಕ್ಕೆ ಬಂದಿದ್ದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

4 ಅರಸನು - ಪ್ರಾಕಾರದಲ್ಲಿ ಯಾರಿದ್ದಾರೆ ಎಂದು ಕೇಳಿದನು. ಅಷ್ಟರಲ್ಲಿ ಹಾಮಾನನೇ ತಾನು ಸಿದ್ಧಮಾಡಿಸಿದ ಗಲ್ಲಿಗೆ ಮೊರ್ದೆಕೈಯನ್ನು ನೇತುಹಾಕಿಸುವದಕ್ಕೆ ಅರಸನ ಅಪ್ಪಣೆಪಡಕೊಳ್ಳಬೇಕೆಂದು ಅರಮನೆಯ ಹೊರಗಣ ಪ್ರಾಕಾರದಲ್ಲಿ ಬಂದಿದ್ದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

4 ಅದೇ ಸಮಯದಲ್ಲಿ ಹಾಮಾನನು ಹೊರಾಂಗಣದಲ್ಲಿದ್ದನು. ಅವನು ತಾನು ತಯಾರಿಸಿಟ್ಟಿರುವ ಗಲ್ಲುಕಂಬದಲ್ಲಿ ಮೊರ್ದೆಕೈಯನ್ನು ಗಲ್ಲಿಗೆ ಹಾಕಲು ಅರಸನಿಂದ ಅಪ್ಪಣೆ ಪಡೆದುಕೊಳ್ಳಲು ಬಂದಿದ್ದನು. ಅರಸನು ಹೊರಾಂಗಣದಲ್ಲಿ “ಈಗ ತಾನೇ ಯಾರು ಬಂದರು?” ಎಂದು ಕೇಳಿದಾಗ

ಅಧ್ಯಾಯವನ್ನು ನೋಡಿ ನಕಲು ಮಾಡಿ




ಎಸ್ತೇರಳು 6:4
12 ತಿಳಿವುಗಳ ಹೋಲಿಕೆ  

ಆಗ ಅವನ ಹೆಂಡತಿಯಾದ ಜೆರೆಷಳೂ ಅವನ ಸಮಸ್ತ ಸ್ನೇಹಿತರೂ ಅವನಿಗೆ, “ಅರಸನ ಅಪ್ಪಣೆಯನ್ನು ಪಡೆದು ಮೊರ್ದೆಕೈಯನ್ನು ಬೆಳಿಗ್ಗೆ ಗಲ್ಲಿಗೇರಿಸಲು ಇಪ್ಪತ್ತು ಮೀಟರ್ ಉದ್ದದ ಒಂದು ಗಲ್ಲುಮರವನ್ನು ಮಾಡು. ತರುವಾಯ ಅರಸನ ಸಂಗಡ ಔತಣಕ್ಕೆ ಹೋಗಿ ಸಂತೋಷವಾಗಿರು,” ಎಂದರು. ಈ ಸಲಹೆ ಹಾಮಾನನಿಗೆ ಮೆಚ್ಚಿಕೆಯಾದದ್ದರಿಂದ ಗಲ್ಲುಮರವನ್ನು ಸಿದ್ಧಮಾಡಿಸಿದನು.


“ಅರಸನು ಹೇಳಿಕಳುಹಿಸದೆ ಅರಸನ ಬಳಿಗೆ ಅರಮನೆಯ ಒಳಾಂಗಣಕ್ಕೆ ಹೋಗುವ ಗಂಡಸರಿಗಾಗಲಿ, ಹೆಂಗಸರಿಗಾಗಲಿ ಮರಣದಂಡನೆಯಾಗುವುದು. ಒಂದು ವೇಳೆ ಒಳಗೆ ಬಂದ ವ್ಯಕ್ತಿಯ ಕಡೆಗೆ ಅರಸನು ತನ್ನ ಸ್ವರ್ಣದಂಡವನ್ನು ಚಾಚಿದರೆ ಅವನಿಗೆ ಮಾತ್ರ ಮರಣದಂಡನೆಯಾಗದೆ ಜೀವದಿಂದ ಉಳಿಯುವರು. ಈ ರಾಜಾಜ್ಞೆಯನ್ನು ಅರಸನ ಸಮಸ್ತ ಸೇವಕರೂ ಅರಸನ ಪ್ರಾಂತಗಳ ಜನರೂ ತಿಳಿದಿದ್ದಾರೆ. ಆದರೆ ಕಳೆದ ಮೂವತ್ತು ದಿನಗಳಿಂದ ಅರಸನ ಬಳಿಗೆ ಹೋಗುವುದಕ್ಕೆ ನನಗೆ ಆಮಂತ್ರಣವೇ ಬರಲಿಲ್ಲ,” ಎಂದು ತಿಳಿಸುವಂತೆ ಹೇಳಿದಳು.


ಪರಲೋಕದಲ್ಲಿ ಕೂತಿರುವ ದೇವರು ಅದಕ್ಕೆ ನಗುವರು, ಕರ್ತದೇವರು ಅವರನ್ನು ಕಂಡು ಅಪಹಾಸ್ಯ ಮಾಡುವರು.


ಮೂರನೆಯ ದಿವಸದಲ್ಲಿ, ಎಸ್ತೇರಳು ರಾಜವಸ್ತ್ರ ಆಭರಣಗಳನ್ನು ಧರಿಸಿಕೊಂಡು ಅರಮನೆಗೆ ಎದುರಾಗಿರುವ ಅರಸನ ಒಳಗಣ ಪ್ರಾಕಾರವನ್ನು ಪ್ರವೇಶಿಸಿ ನಿಂತಳು. ಅರಸನು ರಾಜಮಂದಿರದೊಳಗೆ ತನ್ನ ರಾಜಸಿಂಹಾಸನದ ಮೇಲೆ ಬಾಗಿಲಿಗೆ ಎದುರಾಗಿ ಕುಳಿತಿದ್ದನು.


ನಿನ್ನ ಕೈಗೆ ಸಿಕ್ಕಿದ ಕೆಲಸವನ್ನೆಲ್ಲಾ ನಿನ್ನ ಪೂರ್ಣ ಶಕ್ತಿಯಿಂದ ಮಾಡು. ಏಕೆಂದರೆ ನೀನು ಹೋಗಲಿರುವ ಸಮಾಧಿಯಲ್ಲಿ, ಕೆಲಸವೂ ಯೋಜನೆಯೂ ತಿಳುವಳಿಕೆಯೂ ಜ್ಞಾನವೂ ಇರುವುದಿಲ್ಲ.


ಇದರಿಂದ ದೇವರು ಅವರ ಪ್ರಾಣವನ್ನು ಮರಣದಿಂದ ಬಿಡಿಸಿ, ಬರಗಾಲದಲ್ಲಿ ಅವರ ಜೀವವನ್ನು ಕಾಪಾಡುತ್ತಾರೆ.


ದೇವರು ಜ್ಞಾನಿಗಳನ್ನು ಅವರ ಯುಕ್ತಿಯಲ್ಲಿಯೇ ಹಿಡಿಯುತ್ತಾರೆ, ಮತ್ತು ಕುತಂತ್ರಿಯ ಯೋಜನೆಗಳನ್ನು ನಿರರ್ಥಕಮಾಡುತ್ತಾರೆ.


ಆಗ ರಾಜಕಂಚುಕಿಯರಲ್ಲಿ ಒಬ್ಬನಾದ ಹರ್ಬೋನನು ಅರಸನ ಮುಂದೆ ಬಂದು, “ಇಗೋ, ಅರಸನ ಪ್ರಾಣವನ್ನು ರಕ್ಷಿಸಲು ಮಾತಾಡಿದ ಮೊರ್ದೆಕೈಯನ್ನು ಕೊಲ್ಲುವುದಕ್ಕಾಗಿ ಹಾಮಾನನು ಮಾಡಿಸಿದ ಇಪ್ಪತ್ತೆರಡು ಮೀಟರ್ ಗಲ್ಲುಮರವು ಹಾಮಾನನ ಮನೆಯ ಹತ್ತಿರ ಇದೆ,” ಎಂದನು. ಅದಕ್ಕೆ ಅರಸನು, “ಇವನನ್ನು ಅದರಲ್ಲಿ ನೇತುಹಾಕಿರಿ” ಎಂದನು.


ಆಗ ಅರಸನು, “ಈ ಸತ್ಕಾರ್ಯಕ್ಕಾಗಿ ಮೊರ್ದೆಕೈಯನಿಗೆ ಯಾವ ಸನ್ಮಾನ ಮಾಡಲಾಯಿತು?” ಎಂದು ವಿಚಾರಿಸಿದನು. ಅರಸನ ಸೇವಕರು, “ಮೊರ್ದೆಕೈಯನಿಗೆ ಏನೂ ಮಾಡಿಲ್ಲ,” ಎಂದು ಹೇಳಿದರು.


ಆದ್ದರಿಂದ ಅರಸನ ಸೇವಕರು, “ಇಗೋ, ಹಾಮಾನನು ಅಂಗಳದಲ್ಲಿ ನಿಂತಿದ್ದಾನೆ,” ಎಂದರು. ಅದಕ್ಕೆ ಅರಸನು, “ಅವನು ಒಳಗೆ ಬರಲಿ,” ಎಂದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು