Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಎಸ್ತೇರಳು 7:2 - ಕನ್ನಡ ಸಮಕಾಲಿಕ ಅನುವಾದ

2 ಎರಡನೆಯ ದಿವಸ ದ್ರಾಕ್ಷಾರಸವನ್ನು ಪಾನಮಾಡುತ್ತಿರುವಾಗ ಅರಸನು ಮತ್ತೊಮ್ಮೆ ಎಸ್ತೇರಳಿಗೆ, “ಎಸ್ತೇರ್ ರಾಣಿಯೇ, ನಿನ್ನ ವಿಜ್ಞಾಪನೆ ಏನು? ನಿನ್ನ ಬೇಡಿಕೆ ಏನು? ಅದು ನನ್ನ ರಾಜ್ಯದ ಅರ್ಧವಾಗಿದ್ದರೂ ಸರಿ, ನಾನು ಅದನ್ನು ನಿನಗೆ ಕೊಡುವೆನು,” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

2 ಅವನು ಈ ಎರಡನೆಯ ದಿನದಲ್ಲಿಯೂ ದ್ರಾಕ್ಷಾರಸ ಪಾನಮಾಡುತ್ತಿರುವಾಗ ಅರಸನು ಎಸ್ತೇರಳಿಗೆ, “ಎಸ್ತೇರ್ ರಾಣಿಯೇ, ನಿನ್ನ ವಿಜ್ಞಾಪನೆ ಯಾವುದು ಹೇಳು; ಅದನ್ನು ನೆರವೇರಿಸುವೆನು. ನೀನು ನನ್ನ ಅರ್ಧರಾಜ್ಯವನ್ನು ಕೇಳಿಕೊಂಡರೂ ಸರಿಯೇ, ಅದನ್ನು ನಿನಗೆ ಕೊಡುವೆನು” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

2 ಅರಸನು ಈ ಎರಡನೆಯ ದಿನದಲ್ಲೂ ದ್ರಾಕ್ಷಾರಸ ಪಾನಮಾಡುತ್ತಿರುವಾಗ ಎಸ್ತೇರಳಿಗೆ, “ಎಸ್ತೇರ್ ರಾಣಿಯೇ, ನಿನ್ನ ವಿಜ್ಞಾಪನೆ ಯಾವುದು ಹೇಳು; ಅದನ್ನು ನಾನು ನೆರವೇರಿಸುವೆನು. ನನ್ನ ರಾಜ್ಯದ ಅರ್ಧಭಾಗವನ್ನು ಕೇಳಿದರೂ ಸರಿ, ನಾನದನ್ನು ನಿನಗೆ ಕೊಡುವೆನು,” ಎನ್ನಲು

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

2 ಅವನು ಈ ಎರಡನೆಯ ದಿನದಲ್ಲಿಯೂ ದ್ರಾಕ್ಷಾರಸಪಾನಮಾಡುತ್ತಿರುವಾಗ ಎಸ್ತೇರಳಿಗೆ - ಎಸ್ತೇರ್‍ರಾಣಿಯೇ, ನಿನ್ನ ವಿಜ್ಞಾಪನೆ ಯಾವದು, ಹೇಳು; ಅದನ್ನು ನೆರವೇರಿಸುವೆನು. ನೀನು ನನ್ನ ಅರ್ಧರಾಜ್ಯವನ್ನು ಕೇಳಿಕೊಂಡರೂ ಸರಿಯೇ, ಅದನ್ನು ನಿನಗೆ ಕೊಡುವೆನು ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

2 ಈ ಔತಣ ಸಮಾರಂಭದ ಎರಡನೆಯ ದಿನದಂದು ಅವರಿಬ್ಬರೂ ದ್ರಾಕ್ಷಾರಸ ಸೇವನೆ ಮಾಡುತ್ತಿರುವಾಗ ತಿರಿಗಿ ರಾಜನು ತನ್ನ ರಾಣಿಯನ್ನು ಪ್ರಶ್ನಿಸಿದನು, “ಎಸ್ತೇರ್ ರಾಣಿಯೇ, ನಿನಗೆ ಬೇಕಾದದ್ದನ್ನು ಕೇಳಿಕೊ. ನಾನು ಕೊಡುವೆನು; ಅರ್ಧ ರಾಜ್ಯ ಬೇಕಾದರೂ ನಾನು ಕೊಡುತ್ತೇನೆ” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಎಸ್ತೇರಳು 7:2
7 ತಿಳಿವುಗಳ ಹೋಲಿಕೆ  

ನೀವು ಇದುವರೆಗೆ ನನ್ನ ಹೆಸರಿನಲ್ಲಿ ಏನೂ ಕೇಳಿಕೊಳ್ಳಲಿಲ್ಲ. ಕೇಳಿರಿ, ನೀವು ಪಡೆದುಕೊಳ್ಳುವಿರಿ. ಆಗ ನಿಮ್ಮ ಆನಂದವು ಪರಿಪೂರ್ಣವಾಗಿರುವುದು.


ದ್ರಾಕ್ಷಾರಸವನ್ನು ಪಾನಮಾಡುತ್ತಿರುವಾಗ ಅರಸನು ಮತ್ತೊಮ್ಮೆ ಎಸ್ತೇರಳಿಗೆ, “ಈಗ ನಿನ್ನ ವಿಜ್ಞಾಪನೆ ಏನು? ನಿನ್ನ ಬೇಡಿಕೆ ಏನು? ಅದು ನನ್ನ ರಾಜ್ಯದ ಅರ್ಧವಾಗಿದ್ದರೂ ಸರಿ, ನಾನು ಅದನ್ನು ನಿನಗೆ ಕೊಡುವೆನು,” ಎಂದನು.


ಆಗ ಅರಸನು ಅವಳಿಗೆ, “ಎಸ್ತೇರ್ ರಾಣಿಯೇ, ನಿನ್ನ ವಿಜ್ಞಾಪನೆ ಏನು? ನಿನ್ನ ಬೇಡಿಕೆ ಏನು? ಅದು ನನ್ನ ರಾಜ್ಯದ ಅರ್ಧವಾಗಿದ್ದರೂ ಸರಿ, ನಾನು ಅದನ್ನು ನಿನಗೆ ಕೊಡುವೆನು,” ಎಂದನು.


ಆಗ ಅರಸನು ಎಸ್ತೇರ್ ರಾಣಿಗೆ, “ಯೆಹೂದ್ಯರು ಶೂಷನಿನ ಅರಮನೆಯಲ್ಲಿ ಐನೂರು ಮಂದಿಯನ್ನೂ ಹಾಮಾನನ ಹತ್ತು ಮಕ್ಕಳನ್ನೂ ಸಂಹರಿಸಿದ್ದಾರೆ. ಅವರು ಅರಸನ ಮಿಕ್ಕಾದ ಪ್ರಾಂತಗಳಲ್ಲಿ ಏನು ಮಾಡಿರಬಹುದೋ? ಈಗ ನಿನ್ನ ವಿಜ್ಞಾಪನೆ ಏನು? ಅದು ನಿನಗೆ ಕೊಡಲಾಗುವುದು. ಇನ್ನೂ ನಿನ್ನ ಬೇಡಿಕೆ ಏನು? ಅದು ಮಾಡಲಾಗುವುದು,” ಎಂದು ಹೇಳಿದನು.


“ನೀನೇನು ಕೇಳಿದರೂ ಕೊಡುತ್ತೇನೆ, ನನ್ನ ರಾಜ್ಯದಲ್ಲಿ ಅರ್ಧದಷ್ಟು ಕೇಳಿಕೊಂಡರೂ ಕೊಡುತ್ತೇನೆ,” ಎಂದು ಪ್ರಮಾಣ ಮಾಡಿದನು.


ಅರಸನೂ ಹಾಮಾನನೂ ಎಸ್ತೇರ್ ರಾಣಿಯ ಔತಣಕ್ಕೆ ಬಂದರು.


ಸಹಸ್ರಾಧಿಪತಿಯು ಯುವಕನ ಕೈಹಿಡಿದು ಏಕಾಂತವಾಗಿ ಪಕ್ಕಕ್ಕೆ ಕರೆದು, “ನೀನು ನನಗೆ ಹೇಳಬೇಕಾದದ್ದು ಏನು?” ಎಂದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು