Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಎಸ್ತೇರಳು 7:5 - ಕನ್ನಡ ಸಮಕಾಲಿಕ ಅನುವಾದ

5 ಆಗ ಅರಸನಾದ ಅಹಷ್ವೇರೋಷನು ರಾಣಿಯಾದ ಎಸ್ತೇರಳಿಗೆ, “ಯಾರು ಅವನು? ಈ ಪ್ರಕಾರ ಮಾಡಲು ಧೈರ್ಯಗೊಂಡವನು ಯಾರು? ಅವನು ಎಲ್ಲಿದ್ದಾನೆ?” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

5 ಅಹಷ್ವೇರೋಷ್ ರಾಜನು ಎಸ್ತೇರ್ ರಾಣಿಯನ್ನು, “ಇಂಥ ದುಷ್ಕೃತ್ಯದ ಮೇಲೆ ಮನಸ್ಸಿಟ್ಟವನು ಯಾವನು? ಅವನೆಲ್ಲಿ?” ಎಂದು ಕೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

5 ಆಗ ಅರಸನು, “ಇಂಥ ದುಷ್ಕೃತ್ಯವನ್ನು ಎಸಗಲು ಸಂಚು ನಡೆಸಿದ ಕೇಡಿಗನು ಯಾರು? ಎಲ್ಲಿದ್ದಾನೆ ಅವನು?” ಎಂದು ಕೇಳಲು

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

5 ಅಹಷ್ವೇರೋಷ್‍ರಾಜನು ಎಸ್ತೇರ್‍ರಾಣಿಯನ್ನು - ಇಂಥ ದುಷ್ಕೃತ್ಯದ ಮೇಲೆ ಮನಸ್ಸಿಟ್ಟವನು ಯಾವನು? ಅವನೆಲ್ಲಿ ಎಂದು ಕೇಳಲು

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

5 ಆಗ ರಾಜನು ಎಸ್ತೇರಳಿಗೆ, “ಹೀಗೆ ನಿನಗೆ ಯಾರು ಮಾಡಿದರು? ನಿನ್ನ ಜನರಿಗೆ ಇಂಥಾ ಕೆಲಸವನ್ನು ಮಾಡಲು ಯಾರಿಗೆ ಧೈರ್ಯವಾಯಿತು?” ಎಂದು ಕೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಎಸ್ತೇರಳು 7:5
5 ತಿಳಿವುಗಳ ಹೋಲಿಕೆ  

ಆದರೆ ಪೇತ್ರನು, “ಅನನೀಯಾ, ಪವಿತ್ರಾತ್ಮ ದೇವರಿಗೆ ಸುಳ್ಳು ಹೇಳುವಂತೆ ಸೈತಾನನು ನಿನ್ನ ಹೃದಯವನ್ನು ತುಂಬಿಸಿದ್ದು ಏಕೆ? ಆಸ್ತಿಯನ್ನು ಮಾರಿ ಬಂದ ಹಣದಲ್ಲಿ ಒಂದು ಭಾಗವನ್ನು ಇಟ್ಟುಕೊಂಡದ್ದೇಕೆ?


ಲೋಕವು ಕೆಟ್ಟವರ ಕೈವಶವಾಗಿದೆ; ನ್ಯಾಯಾಧಿಪತಿಗಳ ಮುಖಕ್ಕೆ ಮುಸುಕುಹಾಕಲಾಗಿದೆ; ಇದನ್ನು ಅನುಮತಿಸಿದವರು ದೇವರಲ್ಲದೆ ಮತ್ತೆ ಯಾರು?


ಆಗ ಇಸಾಕನು ಬಹಳವಾಗಿ ನಡುಗುತ್ತಾ, “ನೀನು ಬರುವುದಕ್ಕಿಂತ ಮೊದಲು ಬೇಟೆಯಾಡಿ ನನಗೆ ಊಟ ತಂದವನು ಯಾರು? ಅವನು ಎಲ್ಲಿದ್ದಾನೆ? ನೀನು ಬರುವುದರೊಳಗಾಗಿ ನಾನು ಎಲ್ಲವನ್ನೂ ಊಟಮಾಡಿ ಅವನನ್ನು ಆಶೀರ್ವದಿಸಿದೆನು. ಅವನು ಆಶೀರ್ವಾದ ಹೊಂದಿರುವನು,” ಎಂದನು.


ಏಕೆಂದರೆ ನಾನು ಮತ್ತು ನನ್ನ ಜನರು ದುರಂತಕ್ಕೂ, ಕೊಲೆಗೂ, ಸರ್ವನಾಶಕ್ಕೂ ಮಾರಟವಾಗಿದ್ದೇವೆ. ಒಂದು ವೇಳೆ, ನಾವು ದಾಸರಾಗಿಯಾಗಲಿ, ದಾಸಿಯರಾಗಲಿ ಮಾರಾಟವಾಗಿದ್ದರೆ ನಾನು ಸುಮ್ಮನಿರುತ್ತಿದ್ದೆ. ಅಂಥ ಕಷ್ಟಕ್ಕಾಗಿ ನಾನು ಅರಸನನ್ನು ತೊಂದರೆಪಡಿಸದೆ ಸುಮ್ಮನೆ ಇದ್ದುಬಿಡುತ್ತಿದ್ದೆನು,” ಎಂದಳು.


ಅದಕ್ಕೆ ಎಸ್ತೇರಳು, “ಆ ವೈರಿಯೂ ಹಗೆಗಾರನೂ ಬೇರೆ ಯಾರೂ ಅಲ್ಲ, ಈ ದುಷ್ಟ ಹಾಮಾನನೇ!” ಎಂದಳು. ಆಗ ಹಾಮಾನನು ಅರಸನ ಮುಂದೆಯೂ, ರಾಣಿಯ ಮುಂದೆಯೂ ಬೆಪ್ಪಾದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು