Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಎಸ್ತೇರಳು 7:6 - ಕನ್ನಡ ಸಮಕಾಲಿಕ ಅನುವಾದ

6 ಅದಕ್ಕೆ ಎಸ್ತೇರಳು, “ಆ ವೈರಿಯೂ ಹಗೆಗಾರನೂ ಬೇರೆ ಯಾರೂ ಅಲ್ಲ, ಈ ದುಷ್ಟ ಹಾಮಾನನೇ!” ಎಂದಳು. ಆಗ ಹಾಮಾನನು ಅರಸನ ಮುಂದೆಯೂ, ರಾಣಿಯ ಮುಂದೆಯೂ ಬೆಪ್ಪಾದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

6 ಆಗ ಆಕೆಯು, “ನಮ್ಮನ್ನು ಬಾಧಿಸಬೇಕೆಂದಿರುವ ಹಗೆಗಾರನು ಮತ್ತು ಶತ್ರುವು ಈ ದುಷ್ಟ ಹಾಮಾನನೇ” ಎಂದಳು. ಇದನ್ನು ಕೇಳಿ ಹಾಮಾನನು ರಾಣಿಯ ಮುಂದೆ ಭಯಭೀತನಾದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

6 ಆಕೆ, “ನಮ್ಮ ವೈರಿಯೂ ಶತ್ರುವೂ ಬೇರಾರೂ ಅಲ್ಲ; ಇಗೋ, ಈ ಹಾಮಾನನೇ ಆ ದುಷ್ಟ,” ಎಂದಳು. ಇದನ್ನು ಕೇಳಿದೊಡನೆ ಹಾಮಾನನು ಅರಸನ ಮತ್ತು ರಾಣಿಯ ಮುಂದೆ ಭಯದಿಂದ ನಡುಗಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

6 ಆಕೆಯು - ನಮ್ಮನ್ನು ಬಾಧಿಸಬೇಕೆಂದಿರುವ ಹಗೆಗಾರನು ಈ ದುಷ್ಟ ಹಾಮಾನನೇ ಅಂದಳು. ಇದನ್ನು ಕೇಳಿದೊಡನೆ ಹಾಮಾನನು ಅರಸನ ಮತ್ತು ರಾಣಿಯ ಮುಂದೆ ಬೆಪ್ಪಾದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

6 ಎಸ್ತೇರಳು ಉತ್ತರಿಸುತ್ತಾ, “ನಮ್ಮನ್ನು ದ್ವೇಷಿಸುವ ಮನುಷ್ಯನು ಈ ಕೆಟ್ಟ ಹಾಮಾನನೇ” ಎಂದು ಹೇಳಿದಳು. ಆಗ ಹಾಮಾನನು ಭಯದಿಂದ ನಡುಗಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಎಸ್ತೇರಳು 7:6
18 ತಿಳಿವುಗಳ ಹೋಲಿಕೆ  

ಆಗ ಆ ನಿಯಮ ಮೀರುವವನು ಪ್ರತ್ಯಕ್ಷನಾಗುವನು. ಅವನನ್ನು ಕರ್ತ ಯೇಸು ತಮ್ಮ ಬಾಯಿಯ ಶ್ವಾಸದಿಂದ ಕೆಡವಿ, ತಮ್ಮ ಪ್ರತ್ಯಕ್ಷತೆಯ ಮಹಿಮೆಯಿಂದ ನಾಶಮಾಡಿಬಿಡುವರು.


ಆದರೆ ಹೊರಗಿನವರನ್ನು ತೀರ್ಪುಮಾಡುವವರು ದೇವರೇ. “ಆ ದುಷ್ಟನನ್ನು ನಿಮ್ಮಿಂದ ತೆಗೆದು ಹೊರಗೆ ಹಾಕಿರಿ.”


ಅರಸನ ಕೋಪವು ಮೃತ್ಯುವಿನ ದೂತರಂತೆ ಇರುತ್ತದೆ, ಆದರೆ ಜ್ಞಾನಿಯು ಅದನ್ನು ಶಮನಪಡಿಸುವನು.


ದುಷ್ಟರು ನನ್ನನ್ನು ಬೀಳಿಸಬೇಕೆಂದು ನನಗೆ ವಿರೋಧವಾಗಿ ಸಮೀಪಿಸುವಾಗ, ನನ್ನ ವೈರಿಗಳು ತಾವೇ ಎಡವಿಬಿದ್ದರು.


ಆಗ ಅರಸನು ತನ್ನ ಕೈಯಲ್ಲಿದ್ದ ಮುದ್ರೆಉಂಗುರವನ್ನು ತೆಗೆದು ಯೆಹೂದ್ಯರ ವೈರಿಯಾದ ಅಗಾಗನ ವಂಶಸ್ಥನೂ ಹಮ್ಮೆದಾತನ ಮಗನೂ ಆದ ಹಾಮಾನನಿಗೆ ಕೊಟ್ಟನು.


ಈ ಸುದ್ದಿ ಸುತ್ತಮುತ್ತಲಿನ ನಮ್ಮ ವಿರೋಧಿಗಳಾದ ಜನಾಂಗಗಳಿಗೆ ಮುಟ್ಟಿತು. ಅವರು ಭಯಭೀತರಾದರು. ಸೊಕ್ಕು ಮುರಿದವರಾಗಿ ಹಾಗೇ ಕುಗ್ಗಿಹೋದರು. ಈ ಕಾರ್ಯ ನಮ್ಮ ದೇವರಿಂದಲೇ ಪೂರ್ಣಗೊಂಡಿತು ಎಂದು ಅವರಿಗೆ ಮನದಟ್ಟಾಯಿತು.


ಪೂರ್ವಿಕರು ಹೇಳಿದ ಸಾಮತಿಯ ಪ್ರಕಾರ, ‘ದುಷ್ಟರಿಂದ ದುಷ್ಟತ್ವವು ಹುಟ್ಟುವುದು’ ಆದರೂ ನಾನು ನಿನಗೆ ವಿರೋಧವಾಗಿ ನನ್ನ ಕೈ ಮುಟ್ಟುವುದಿಲ್ಲ.


ನನ್ನ ಹೃದಯವು ಬಡಿದುಕೊಳ್ಳುತ್ತಿದೆ, ಗಾಬರಿಗೊಂಡಿದೆ. ನಡುಗುವಿಕೆಯು ನನ್ನನ್ನು ಕಳವಳಗೊಳಿಸಿದೆ, ನಾ ಬಯಸಿದ ಸಂಜೆಯೇ ನನಗೆ ಭಯಭ್ರಾಂತಿಯಾಗಿ ಮಾಡಿದ್ದಾನೆ.


ದೇಶದಲ್ಲಿ ಬಡವರ ಹಿಂಸೆಯನ್ನೂ ನೀತಿನ್ಯಾಯ ನಿರಾಕರಿಸಿದ್ದನ್ನೂ ನೀನು ನೋಡಿದರೆ, ಆಶ್ಚರ್ಯಪಡಬೇಡ. ಏಕೆಂದರೆ ಒಬ್ಬ ಅಧಿಕಾರಿಯ ಮೇಲೆ ಇನ್ನೊಬ್ಬನಿದ್ದಾನೆ. ಅವರಿಬ್ಬರ ಮೇಲೆ ಮತ್ತೊಬ್ಬ ಉನ್ನತ ಅಧಿಕಾರಿಗಳು ಇದ್ದಾರೆ.


ಆಗ ಅರಸನಾದ ಅಹಷ್ವೇರೋಷನು ರಾಣಿಯಾದ ಎಸ್ತೇರಳಿಗೆ, “ಯಾರು ಅವನು? ಈ ಪ್ರಕಾರ ಮಾಡಲು ಧೈರ್ಯಗೊಂಡವನು ಯಾರು? ಅವನು ಎಲ್ಲಿದ್ದಾನೆ?” ಎಂದನು.


ಅದೇ ದಿನದಲ್ಲಿ ಅರಸನಾದ ಅಹಷ್ವೇರೋಷನು ಯೆಹೂದ್ಯರ ವೈರಿಯಾದ ಹಾಮಾನನ ಸೊತ್ತನ್ನು ರಾಣಿಯಾದ ಎಸ್ತೇರಳಿಗೆ ಕೊಟ್ಟನು. ಇದಲ್ಲದೆ ಮೊರ್ದೆಕೈ ಅರಸನ ಬಳಿಗೆ ಬಂದನು. ಏಕೆಂದರೆ ಮೊರ್ದೆಕೈ ತನಗೆ ಸಂಬಂಧಿಕನು ಎಂದು ಎಸ್ತೇರಳು ತಿಳಿಸಿದ್ದಳು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು