Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಎಸ್ತೇರಳು 7:7 - ಕನ್ನಡ ಸಮಕಾಲಿಕ ಅನುವಾದ

7 ಅರಸನು ಕೋಪಗೊಂಡು ದ್ರಾಕ್ಷಾರಸ ಪಾನಮಾಡುವುದನ್ನು ಬಿಟ್ಟು, ಎದ್ದು ಅರಮನೆಯ ತೋಟಕ್ಕೆ ಹೋದನು. ಆದರೆ ಹಾಮಾನನು ರಾಣಿಯಾದ ಎಸ್ತೇರಳ ಮುಂದೆ ತನ್ನ ಪ್ರಾಣಕ್ಕೋಸ್ಕರ ಬೇಡಿಕೊಳ್ಳುತ್ತಾ ನಿಂತನು. ಏಕೆಂದರೆ ಅರಸನಿಂದ ತನಗೆ ಕೇಡು ನಿರ್ಣಯವಾಯಿತೆಂದು ಅವನಿಗೆ ತಿಳಿದಿತ್ತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

7 ಅರಸನು ರೌದ್ರಾವೇಶನಾಗಿ ದ್ರಾಕ್ಷಾರಸ ಪಾನಮಾಡುವುದನ್ನು ಬಿಟ್ಟೆದ್ದು ಅರಮನೆಯ ತೋಟಕ್ಕೆ ಹೋದನು. ಹಾಮಾನನಾದರೋ ಅರಸನಿಂದ ತನಗೆ ಕೇಡು ಸಿದ್ಧವಾಯಿತೆಂದು ತಿಳಿದು ಎಸ್ತೇರಳ ಹತ್ತಿರ ತನ್ನ ಪ್ರಾಣರಕ್ಷಣೆಯ ನಿಮಿತ್ತವಾಗಿ ಬಿನ್ನಹಮಾಡಿಕೊಳ್ಳಲು ನಿಂತುಕೊಂಡಿದ್ದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

7 ರೌದ್ರಾವೇಶಗೊಂಡ ಅರಸ ದ್ರಾಕ್ಷಾರಸ ಪಾನಮಾಡುವುದನ್ನು ಬಿಟ್ಟೆದ್ದು, ತೋಟಕ್ಕೆ ಹೋದನು. ಅರಸನಿಂದ ತನಗೆ ಶಿಕ್ಷೆ ನಿಶ್ಚಿತವೆಂದರಿತ ಹಾಮಾನನು ಎಸ್ತೇರ್ ರಾಣಿಯ ಮುಂದೆ ಪ್ರಾಣಭಿಕ್ಷೆಗಾಗಿ ಅಂಗಲಾಚಿ ಬೇಡುತ್ತಾ ನಿಂತನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

7 ಅರಸನು ರೌದ್ರಾವೇಶನಾಗಿ ದ್ರಾಕ್ಷಾರಸಪಾನಮಾಡುವದನ್ನು ಬಿಟ್ಟೆದ್ದು ಅರಮನೆಯ ತೋಟಕ್ಕೆ ಹೋದನು. ಹಾಮಾನನಾದರೋ ಅರಸನಿಂದ ತನಗೆ ಕೇಡು ಸಿದ್ಧವಾಯಿತೆಂದು ತಿಳಿದು ಎಸ್ತೇರಳ ಹತ್ತಿರ ತನ್ನ ಪ್ರಾಣ ರಕ್ಷಣೆಯ ನಿವಿುತ್ತವಾಗಿ ಬಿನ್ನಹಮಾಡಲು ನಿಂತುಕೊಂಡನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

7 ಅರಸನು ಕೋಪೋದ್ರಿಕ್ತನಾಗಿ, ಪಾನಪಾತ್ರೆಯನ್ನು ಅಲ್ಲಿಯೇ ಬಿಟ್ಟು ಎದ್ದು ಹೂತೋಟಕ್ಕೆ ಹೋದನು. ಹಾಮಾನನು ಕೋಣೆಯಲ್ಲಿಯೇ ಉಳಿದು ತನ್ನ ಪ್ರಾಣವನ್ನು ಉಳಿಸಬೇಕೆಂದು ಎಸ್ತೇರ್ ರಾಣಿಯನ್ನು ಬೇಡುತ್ತಿದ್ದನು. ಯಾಕೆಂದರೆ ರಾಜನು ತನ್ನನ್ನು ಕೊಲ್ಲಲು ತೀರ್ಮಾನಿಸಿರುವುದು ಅವನಿಗೆ ಅರಿವಾಯಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಎಸ್ತೇರಳು 7:7
14 ತಿಳಿವುಗಳ ಹೋಲಿಕೆ  

ಅರಸನ ಕೋಪವು ಸಿಂಹದ ಘರ್ಜನೆಯಂತಿದೆ; ಆದರೆ ಅವನ ದಯೆಯು ಹುಲ್ಲಿನ ಮೇಲಿರುವ ಇಬ್ಬನಿಯಂತಿದೆ.


ಆದರೆ ಅರಸನು ಅವರಿಂದ ಹೇಳಿ ಕಳುಹಿಸಿದ ಮಾತಿಗೆ ವಷ್ಟಿ ರಾಣಿಯು, “ನಾನು ಬರುವುದಿಲ್ಲ,” ಎಂದು ಹೇಳಿದಳು. ಆದ್ದರಿಂದ ಅರಸನು ಬಹುಕೋಪಗೊಂಡು, ರೋಷಾವೇಶನಾದನು.


ತಾವು ಯೆಹೂದ್ಯರೆಂದು ಸುಳ್ಳಾಗಿ ಹೇಳಿಕೊಳ್ಳುವ ಸೈತಾನನ ಸಭಾಮಂದಿರದಿಂದ ಕೆಲವರು ಬಂದು ನಿನ್ನ ಪಾದಕ್ಕೆ ಬೀಳುವಂತೆಯೂ ನಿನ್ನನ್ನು ನಾನು ಪ್ರೀತಿಸಿದ್ದನ್ನು ತಿಳಿಯುವಂತೆಯೂ ಮಾಡುವೆನು.


ಆಗ ನೆಬೂಕದ್ನೆಚ್ಚರನು ಉಗ್ರದಿಂದ ತುಂಬಿದವನಾಗಿ, ಅವನ ಮುಖಭಾವವು ಶದ್ರಕ್, ಮೇಶಕ್, ಅಬೇದ್‌ನೆಗೋ ಎಂಬವರಿಗೆ ವಿರೋಧವಾಗಿ ಬೇರೆಯಾಯಿತು. ಆಗ ಅವನು ಆ ಕುಲುಮೆಯನ್ನು ಸಾಧಾರಣವಾದ ಉರಿಗಿಂತ ಏಳರಷ್ಟು ಹೆಚ್ಚಾಗಿ ಉರಿ ಹಾಕಬೇಕೆಂದು ಆಜ್ಞಾಪಿಸಿದನು.


ಆಗ ನಿನ್ನನ್ನು ಕುಗ್ಗಿಸಿದವರು, ಬಗ್ಗಿಕೊಂಡು ನಿನ್ನ ಬಳಿಗೆ ಬರುವರು. ನಿನ್ನನ್ನು ಅಸಹ್ಯಿಸಿದವರೆಲ್ಲರೂ ನಿನ್ನ ಪಾದಗಳಿಗೆ ಅಡ್ಡಬಿದ್ದು, ನಿನ್ನನ್ನು ಯೆಹೋವ ದೇವರ ಪಟ್ಟಣವೆಂದೂ, ಇಸ್ರಾಯೇಲಿನ ಪರಿಶುದ್ಧನ ಚೀಯೋನೆಂದೂ ಕರೆಯುವರು.


ದುಷ್ಟರು ಒಳ್ಳೆಯವರಿಗೆ ಬಾಗುತ್ತಾರೆ, ದುಷ್ಟರು ನೀತಿವಂತರ ದ್ವಾರಗಳಲ್ಲಿ ಅಡ್ಡ ಬೀಳುತ್ತಾರೆ.


ದುಷ್ಟರು ಇದನ್ನು ಕಂಡು ವ್ಯಥೆ ಪಡುವರು; ಅವರು ತಮ್ಮ ಹಲ್ಲು ಕಡಿದು ಮರೆಯಾಗಿ ಹೋಗುವರು; ದುಷ್ಟರ ಆಶೆಯು ನಾಶವಾಗುವುದು.


ಈಗ ನೀನು ಮಾಡಬೇಕಾದದ್ದೇನೆಂದು ಆಲೋಚಿಸಿ ನೋಡು. ಏಕೆಂದರೆ ಕೇಡು ನಮ್ಮ ಯಜಮಾನನ ಮೇಲೂ ಅವನ ಮನೆಯ ಮೇಲೆಯೂ ನಿಶ್ಚಯವಾಗಿದೆ. ದುಷ್ಟನಾಗಿರುವ ಅವನ ಸಂಗಡ ಮಾತನಾಡುವುದು ಅಸಾಧ್ಯ,” ಎಂದನು.


ಆಗ ಯೋನಾತಾನನು, “ಅದು ನಿನಗೆ ದೂರವಾಗಿರಲಿ. ಏಕೆಂದರೆ ನಿನಗೆ ನನ್ನ ತಂದೆಯಿಂದ ಕೇಡು ಸಿದ್ಧವಾಗಿದ್ದರೆ, ನಾನು ಅದನ್ನು ನಿನಗೆ ತಿಳಿಸದೆ ಇರುವೆನೋ?” ಎಂದನು.


ಅದಕ್ಕೆ ಅವನು, ‘ಒಳ್ಳೆಯದು,’ ಎಂದು ಹೇಳಿದರೆ, ನಿನ್ನ ಸೇವಕನಿಗೆ ಸಮಾಧಾನವಾಗಿರುವುದು. ಅವನು ಬಹಳ ಕೋಪ ಮಾಡಿದರೆ, ಅವನಿಂದ ಕೇಡು ಸಿದ್ಧವಾಗಿದೆ ಎಂದು ತಿಳಿದುಕೋ.


ಆ ದಿವಸಗಳು ತೀರಿದ ತರುವಾಯ ಅರಸನು ಶೂಷನಿನ ಅರಮನೆಯಲ್ಲಿರುವ ಹಿರಿಕಿರಿಯರಾದ ಸಮಸ್ತ ಜನರಿಗೂ ಏಳು ದಿವಸಗಳವರೆಗೆ ಅರಸನ ಅರಮನೆಯ ತೋಟದ ಅಂಗಳದಲ್ಲಿ ಔತಣವನ್ನು ಮಾಡಿಸಿದನು.


ಅವರು ಮೊರ್ದೆಕೈಗೋಸ್ಕರ ಹಾಮಾನನು ಸಿದ್ಧಮಾಡಿದ್ದ ಅದೇ ಗಲ್ಲುಮರದಲ್ಲಿ ಅವನನ್ನು ನೇತುಹಾಕಿದರು. ಆಗ ಅರಸನ ಕೋಪವು ಶಾಂತವಾಯಿತು.


ಜ್ಞಾನವುಳ್ಳ ಸೇವಕನ ಕಡೆಗೆ ಅರಸನ ದಯೆ ಇದೆ; ಆದರೆ ಮಾನಗೇಡಿ ಸೇವಕನ ಮೇಲೆ ಅರಸನ ಕೋಪ ಎರಗುತ್ತದೆ.


ಅರಸನ ಕೋಪವು ಮೃತ್ಯುವಿನ ದೂತರಂತೆ ಇರುತ್ತದೆ, ಆದರೆ ಜ್ಞಾನಿಯು ಅದನ್ನು ಶಮನಪಡಿಸುವನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು