Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಎಸ್ತೇರಳು 7:9 - ಕನ್ನಡ ಸಮಕಾಲಿಕ ಅನುವಾದ

9 ಆಗ ರಾಜಕಂಚುಕಿಯರಲ್ಲಿ ಒಬ್ಬನಾದ ಹರ್ಬೋನನು ಅರಸನ ಮುಂದೆ ಬಂದು, “ಇಗೋ, ಅರಸನ ಪ್ರಾಣವನ್ನು ರಕ್ಷಿಸಲು ಮಾತಾಡಿದ ಮೊರ್ದೆಕೈಯನ್ನು ಕೊಲ್ಲುವುದಕ್ಕಾಗಿ ಹಾಮಾನನು ಮಾಡಿಸಿದ ಇಪ್ಪತ್ತೆರಡು ಮೀಟರ್ ಗಲ್ಲುಮರವು ಹಾಮಾನನ ಮನೆಯ ಹತ್ತಿರ ಇದೆ,” ಎಂದನು. ಅದಕ್ಕೆ ಅರಸನು, “ಇವನನ್ನು ಅದರಲ್ಲಿ ನೇತುಹಾಕಿರಿ” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

9 ಆಗ ಅರಸನ ಸೇವೆಮಾಡುತ್ತಿದ್ದ ಕಂಚುಕಿಗಳಲ್ಲಿ ಒಬ್ಬನಾದ ಹರ್ಬೋನನು, “ಅರಸನ ಪ್ರಾಣರಕ್ಷಣೆಗಾಗಿ ಸಮಾಚಾರವನ್ನು ತಿಳಿಸಿದ ಮೊರ್ದೆಕೈಯನ್ನು ನೇತುಹಾಕಿಸುವುದಕ್ಕೆ ಇವನು ಐವತ್ತು ಮೊಳ ಎತ್ತರವಾದ ಗಲ್ಲು ಕಂಬವನ್ನು ಸಿದ್ಧಮಾಡಿಸಿದ್ದಾನೆ” ಎಂದನು. ಅದಕ್ಕೆ ಅರಸನು, “ಹಾಗಾದರೆ ಹಾಮಾನನ್ನು ಅದಕ್ಕೇ ನೇತುಹಾಕಿರಿ” ಎಂದು ಆಜ್ಞಾಪಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

9 ಇದಲ್ಲದೆ, ಅರಸನ ಸೀಮೆಯಲ್ಲಿದ್ದ ಕಂಚುಕಿಗಳಲ್ಲೊಬ್ಬನಾದ ಹರ್ಬೋನನು, “ಇಗೋ, ಅರಸನ ಪ್ರಾಣವನ್ನು ರಕ್ಷಿಸಲು ಸಮಾಚಾರವನ್ನು ತಿಳಿಸಿದ ಮೊರ್ದಕೈಯನ್ನು ಕೊಲ್ಲುವುದಕ್ಕಾಗಿ ಹಾಮಾನನು ಸಿದ್ಧಮಾಡಿಸಿದ ಇಪ್ಪತ್ತೆರಡು ಮೀಟರ್ ಎತ್ತರದ ನೇಣುಗಂಬವಿದೆಯಲ್ಲ,” ಎನ್ನಲು ಅರಸನು, “ಇವನನ್ನು ಅದಕ್ಕೆ ನೇತುಹಾಕಿರಿ,” ಎಂದು ಆಜ್ಞಾಪಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

9 ಇದಲ್ಲದೆ ಅರಸನ ಸೇವೆಮಾಡುತ್ತಿದ್ದ ಕಂಚುಕಿಗಳಲ್ಲೊಬ್ಬನಾದ ಹರ್ಬೋನನು - ಇಗೋ ಈ ಹಾಮಾನನ ಮನೆಯ ಹತ್ತಿರ ಅರಸನ ಪ್ರಾಣರಕ್ಷಣೆಗಾಗಿ ಸಮಾಚಾರವನ್ನು ತಿಳಿಸಿದ ಮೊರ್ದೆಕೈಯನ್ನು ನೇತುಹಾಕಿಸುವದಕ್ಕೆ ಇವನಿಂದ ಸಿದ್ಧಮಾಡಲ್ಪಟ್ಟ ಐವತ್ತು ಮೊಳ ಎತ್ತರವಾದ ಗಲ್ಲು ಮರವಿರುತ್ತದಲ್ಲಾ ಅನ್ನಲು ಅರಸನು - ಇವನನ್ನು ಅದಕ್ಕೆ ನೇತುಹಾಕಿರಿ ಎಂದು ಆಜ್ಞಾಪಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

9 ಇದನ್ನು ಹೇಳಿದೊಡನೆಯೇ ಹತ್ತಿರದಲ್ಲಿದ್ದ ಸೇವಕರು ಬಂದು ಹಾಮಾನನ ಮುಖಕ್ಕೆ ಮುಸುಕುಹಾಕಿದರು. ಅವರಲ್ಲಿದ್ದ ಹರ್ಬೋನ ಎಂಬ ಕಂಚುಕಿಯು, “ಹಾಮಾನನು ತನ್ನ ಮನೆಯ ಬಳಿಯಲ್ಲಿ ಎಪ್ಪತ್ತೈದು ಅಡಿ ಎತ್ತರದ ಗಲ್ಲುಮರವನ್ನು ಮೊರ್ದೆಕೈಗೋಸ್ಕರ ಮಾಡಿಸಿದ್ದಾನೆ. ನಿನ್ನನ್ನು ಕೊಲ್ಲಲು ನಡೆಸಿದ್ದ ಸಂಚನ್ನು ನಿನಗೆ ತಿಳಿಸಿ ನಿನ್ನನ್ನು ಕಾಪಾಡಿದವನೇ ಮೊರ್ದೆಕೈ” ಎಂದು ಹೇಳಿದನು. ಅದಕ್ಕೆ ರಾಜನು, “ಹಾಮಾನನನ್ನು ಅದೇ ಗಲ್ಲುಮರಕ್ಕೆ ತೂಗುಹಾಕಿರಿ” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಎಸ್ತೇರಳು 7:9
20 ತಿಳಿವುಗಳ ಹೋಲಿಕೆ  

ಆಗ ಅವನ ಹೆಂಡತಿಯಾದ ಜೆರೆಷಳೂ ಅವನ ಸಮಸ್ತ ಸ್ನೇಹಿತರೂ ಅವನಿಗೆ, “ಅರಸನ ಅಪ್ಪಣೆಯನ್ನು ಪಡೆದು ಮೊರ್ದೆಕೈಯನ್ನು ಬೆಳಿಗ್ಗೆ ಗಲ್ಲಿಗೇರಿಸಲು ಇಪ್ಪತ್ತು ಮೀಟರ್ ಉದ್ದದ ಒಂದು ಗಲ್ಲುಮರವನ್ನು ಮಾಡು. ತರುವಾಯ ಅರಸನ ಸಂಗಡ ಔತಣಕ್ಕೆ ಹೋಗಿ ಸಂತೋಷವಾಗಿರು,” ಎಂದರು. ಈ ಸಲಹೆ ಹಾಮಾನನಿಗೆ ಮೆಚ್ಚಿಕೆಯಾದದ್ದರಿಂದ ಗಲ್ಲುಮರವನ್ನು ಸಿದ್ಧಮಾಡಿಸಿದನು.


ಏಳನೆಯ ದಿವಸದಲ್ಲಿ ಅರಸನಾದ ಅಹಷ್ವೇರೋಷನು ದ್ರಾಕ್ಷಾರಸದಿಂದ ಅಮಲೇರಿದಾಗ ಬಹುರೂಪವತಿಯಾದ ವಷ್ಟಿ ರಾಣಿಯ ಸೌಂದರ್ಯವನ್ನು ಜನರಿಗೂ ಪ್ರಧಾನರಿಗೂ ಪ್ರದರ್ಶಿಸುವುದಕ್ಕೆ ರಾಣಿಗೆ ರಾಜಕಿರೀಟವನ್ನು ಧರಿಸಿಕೊಂಡು ತನ್ನ ಮುಂದೆ ಕರೆದುಕೊಂಡು ಬರುವುದಕ್ಕೆ ಅರಸನಾದ ಅಹಷ್ವೇರೋಷನ ಸಮ್ಮುಖದಲ್ಲಿ ಸೇವೆ ಮಾಡುವ ಮೆಹೂಮಾನ್, ಬಿಜೆತಾ, ಹರ್ಬೋನಾ, ಬಿಗೆತಾ, ಅಬಗೆತಾ, ಜೇತರ್, ಕರಕಾಸ್ ಎಂಬ ಏಳುಮಂದಿ ಕಂಚುಕಿಗಳಿಗೆ ಹೇಳಿದನು.


ನಾನು ತಪ್ಪಿಸಿಕೊಂಡು ಸುರಕ್ಷಿತವಾಗಿ ಹೋಗುವಷ್ಟರಲ್ಲಿ ದುಷ್ಟರು ತಮ್ಮ ಬಲೆಗಳಲ್ಲಿಯೇ ಬೀಳಲಿ.


ನಾಶವು ಅವರಿಗೆ ಅನಿರೀಕ್ಷಿತವಾಗಿ ಬರಲಿ; ಅವರು ಅಡಗಿಸಿಟ್ಟ ಬಲೆಯು ಅವರನ್ನೇ ಹಿಡಿಯಲಿ; ವಿನಾಶನಕ್ಕಾಗಿ ಅವರು ಗುಂಡಿಯಲ್ಲಿ ಬೀಳಲಿ.


ಆಗ ಅರಸನು ಆಜ್ಞಾಪಿಸಲಾಗಿ, ದಾನಿಯೇಲನ ಮೇಲೆ ತಪ್ಪು ಹೊರಿಸಿದ್ದ ಮನುಷ್ಯರನ್ನು ತಂದು ಅವರನ್ನೂ, ಅವರ ಹೆಂಡತಿ ಮಕ್ಕಳನ್ನೂ ಸಿಂಹಗಳ ಗುಹೆಯಲ್ಲಿ ಹಾಕಿದರು. ಅವರು ಗುಹೆಯ ತಳವನ್ನು ಮುಟ್ಟುವುದಕ್ಕೆ ಮೊದಲೇ ಸಿಂಹಗಳು ಅವರ ಮೇಲೆ ಹಾರಿ ಬಂದು, ಅವರ ಎಲುಬುಗಳನ್ನೆಲ್ಲಾ ತುಂಡುತುಂಡಾಗಿ ಮುರಿದುಹಾಕಿದವು.


ರಾಜ್ಯದ ಎಲ್ಲಾ ದೇಶಾಧಿಪತಿಗಳೂ, ರಾಜ್ಯಪಾಲರೂ, ನಾಯಕರೂ, ಉಪರಾಜರೂ, ಆಲೋಚನೆಗಾರರೂ ಒಟ್ಟುಗೂಡಿ ಆಲೋಚಿಸಿದ್ದೇನೆಂದರೆ ಅರಸನೇ, ಯಾರಾದರೂ ಮೂವತ್ತು ದಿವಸಗಳವರೆಗೂ ನಿನ್ನನ್ನು ಬಿಟ್ಟು ಬೇರೆ ಯಾವ ದೇವರಿಗಾಗಲಿ, ಮನುಷ್ಯರಿಗಾಗಲಿ ಪ್ರಾರ್ಥನೆ ಮಾಡಿದ್ದಾದರೆ ಅಂಥವರು ಸಿಂಹಗಳ ಗವಿಗೆ ಹಾಕಲಾಗುವುದು ಎಂಬ ರಾಜಾಜ್ಞೆಯನ್ನು ವಿಧಿಸಿ, ಸ್ಥಿರ ಕಟ್ಟಳೆಯನ್ನು ಕೊಡತಕ್ಕದ್ದು.


ಕ್ಷಣಮಾತ್ರದಲ್ಲಿ ಅವರು ನಾಶವಾದರು. ಅವರು ದಿಗಿಲುಬಿದ್ದು ಸಂಪೂರ್ಣವಾಗಿ ನಾಶವಾದರು.


ಆದರೆ ಈ ಒಳಸಂಚು ಅರಸನಿಗೆ ತಿಳಿದುಬಂದಾಗ ಹಾಮಾನನು ಯೆಹೂದ್ಯರಿಗೆ ವಿರೋಧವಾಗಿ ಯೋಚಿಸಿದ ದುರಾಲೋಚನೆಯು ಅವನ ತಲೆಯ ಮೇಲೆ ಬರುವಂತೆ ಅರಸನು ಆಜ್ಞೆಯನ್ನು ಹೊರಡಿಸಿದನು. ಅದರೊಂದಿಗೆ ಅವನ ಮಕ್ಕಳನ್ನೂ ಗಲ್ಲಿಗೇರಿಸಲು ಅರಸನು ಆಜ್ಞಾಪಿಸಿದ್ದನು;


ಅವರು ಇನ್ನೂ ಅವನ ಸಂಗಡ ಮಾತನಾಡುತ್ತಿರುವಾಗಲೇ ರಾಜಕಂಚುಕಿಯವರು ಬಂದು, ಎಸ್ತೇರಳು ಏರ್ಪಡಿಸಿದ ಔತಣಕ್ಕೆ ಬೇಗನೆ ಬರಬೇಕೆಂದು ಹಾಮಾನನನ್ನು ಕರೆದರು.


ಅದನ್ನು ಅರಸನ ಮುಂದೆ ತಂದು ಓದಿಸಿದಾಗ, ದ್ವಾರಪಾಲಕರಾಗಿದ್ದ ರಾಜಕಂಚುಕಿಯರಲ್ಲಿ ಇಬ್ಬರಾದ ಬಿಗೆತಾನನೂ ತೆರೆಷನೂ ಅರಸನಾದ ಅಹಷ್ವೇರೋಷನನ್ನು ಕೊಲ್ಲಬೇಕೆಂದು ಒಳಸಂಚುಮಾಡಿದ ಘಟನೆಯು ಬರೆದಿತ್ತು. ಮೊರ್ದೆಕೈಯು ಹೇಗೆ ಅದನ್ನು ಅರಸನಿಗೆ ತಿಳಿಸಿದನೆಂದು ಸಹ ಅದರಲ್ಲಿ ಬರೆದಿತ್ತು.


ದಾವೀದನ ಕೈಯಲ್ಲಿ ಖಡ್ಗ ಇರಲಿಲ್ಲ. ದಾವೀದನು ಓಡಿಹೋಗಿ ಆ ಫಿಲಿಷ್ಟಿಯನ ಮೇಲೆ ನಿಂತು, ಅವನ ಖಡ್ಗವನ್ನು ತೆಗೆದುಕೊಂಡು, ಅದನ್ನು ಒರೆಯಿಂದ ಕಿತ್ತು, ಅವನನ್ನು ಕೊಂದು, ಅವನ ತಲೆಯನ್ನು ಕಡಿದುಹಾಕಿದನು. ಫಿಲಿಷ್ಟಿಯರು ತಮ್ಮ ಪರಾಕ್ರಮಶಾಲಿ ಸತ್ತು ಹೋದದ್ದನ್ನು ಕಂಡಾಗ ಓಡಿಹೋದರು.


ಯೇಹುವು ತನ್ನ ಮುಖವನ್ನು ಆ ಕಿಟಕಿಯ ಕಡೆಗೆ ಎತ್ತಿ, “ನನ್ನ ಕಡೆ ಇರುವವರು ಯಾರು?” ಎಂದನು. ಆಗ ಇಬ್ಬರು ಮೂವರು ಕಂಚುಕಿಗಳು ಆ ಕಿಟಕಿಯಲ್ಲಿಂದ ಅವನನ್ನು ನೋಡಿದರು.


ಆಗ ಅರಸನಾದ ಅಹಷ್ವೇರೋಷನು ಎಸ್ತೇರ್ ರಾಣಿಗೂ ಯೆಹೂದ್ಯನಾದ ಮೊರ್ದೆಕೈಗೂ ಹೇಳಿದ್ದೇನೆಂದರೆ, “ಇಗೋ, ಹಾಮಾನನು ಯೆಹೂದ್ಯರ ವಿರುದ್ಧ ಕೈಯೆತ್ತಿದ್ದರಿಂದ ಅವನ ಸೊತ್ತನ್ನು ಎಸ್ತೇರಳಿಗೆ ಕೊಟ್ಟೆನು. ಹಾಮಾನನನ್ನು ಗಲ್ಲಿಗೆ ಹಾಕಿದ್ದಾರೆ.


ಆಗ ಅರಸನು ಹಾಗೆಯೇ ಮಾಡಲು ಆಜ್ಞಾಪಿಸಿದನು. ಆ ಆಜ್ಞೆಯು ಶೂಷನಿನಲ್ಲಿ ಜಾರಿಗೆಬಂದಾಗ ಅವರು ಹಾಮಾನನ ಹತ್ತು ಮಂದಿ ಪುತ್ರರ ಶವವನ್ನು ಗಲ್ಲಿಗೆ ಹಾಕಿದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು