Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಎಸ್ತೇರಳು 8:10 - ಕನ್ನಡ ಸಮಕಾಲಿಕ ಅನುವಾದ

10 ಮೊರ್ದೆಕೈ ಅರಸನಾದ ಅಹಷ್ವೇರೋಷನ ಹೆಸರಿನಲ್ಲಿ ಬರೆದ ಪತ್ರಗಳಿಗೆ ಅರಸನ ಉಂಗುರದಿಂದ ಮುದ್ರೆಹಾಕಿ, ಸವಾರಿ ಕುದುರೆಗಳನ್ನು ಹತ್ತಿಕೊಂಡಿದ್ದ ಅಂಚೆಯವರ ಮೂಲಕ ವೇಗವಾಗಿ ಕಳುಹಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

10 ಮೊರ್ದೆಕೈಯು ಅರಸನ ಹೆಸರಿನಲ್ಲಿ ಬರೆಯಲ್ಪಟ್ಟ ಆ ಪತ್ರಗಳಿಗೆ ರಾಜಮುದ್ರೆಯನ್ನು ಹಾಕಿ, ಅರಮನೆಯ ಅಶ್ವಾಲಯಗಳಲ್ಲಿ ಹುಟ್ಟಿ ಬೆಳೆದಂಥ, ಅರಸನ ಸೇವೆಗಾಗಿ ಉಪಯೋಗಿಸಲ್ಪಡುತ್ತಿದ್ದ ವೇಗವಾಗಿ ಓಡುವಂಥ ಕುದುರೆಗಳ ಮುಖಾಂತರ ಕಳುಹಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

10 ಅರಸನ ಹೆಸರಿನಲ್ಲಿ ಬರೆಯಲಾದ ಈ ಪತ್ರಗಳಿಗೆ ಮೊರ್ದೆಕೈ ರಾಜಮುದ್ರೆಯನ್ನು ಒತ್ತಿ, ಅರಮನೆಯ ಅಶ್ವಾಲಯಗಳಲ್ಲಿ ಹುಟ್ಟಿ ಬೆಳೆದ ಸವಾರಿ ಕುದುರೆಗಳನ್ನೇರಿ ಹೊರಟ ಅಂಚೆಯವರ ಮುಖಾಂತರ ಕಳುಹಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

10 ಮೊರ್ದೆಕೈಯು ಅರಸನ ಹೆಸರಿನಲ್ಲಿ ಬರೆಯಲ್ಪಟ್ಟ ಅವುಗಳಿಗೆ ರಾಜಮುದ್ರೆಯನ್ನು ಹಾಕಿ ಅರಮನೆಯ ಅಶ್ವಾಲಯಗಳಲ್ಲಿ ಹುಟ್ಟಿ ಬೆಳೆದ ಸವಾರಿಕುದುರೆಗಳನ್ನು ಹತ್ತಿಕೊಂಡಿದ್ದ ಅಂಚೆಯವರ ಮುಖಾಂತರ ಕಳುಹಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

10 ರಾಜನ ಆಜ್ಞೆಯ ಪ್ರಕಾರ ಮೊರ್ದೆಕೈ ರಾಜಶಾಸನವನ್ನು ಬರೆಯಿಸಿದನು. ಅದಕ್ಕೆ ರಾಜಮುದ್ರೆಯನ್ನು ಒತ್ತಿಸಿ ರಾಜನಿಗಾಗಿ ವಿಶೇಷವಾಗಿ ಬೆಳೆಸಿದ ಅತ್ಯಂತ ವೇಗವಾಗಿ ಓಡುವ ಕುದುರೆಗಳ ಮೂಲಕ ಸಂದೇಶವಾಹಕರಿಂದ ರಾಜ್ಯದ ಮೂಲೆ ಮೂಲೆಗೆ ರಾಜಾಜ್ಞೆಯನ್ನು ಕಳುಹಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಎಸ್ತೇರಳು 8:10
13 ತಿಳಿವುಗಳ ಹೋಲಿಕೆ  

ಅರಸನಾದ ನೆಬೂಕದ್ನೆಚ್ಚರನು, ಭೂಲೋಕದಲ್ಲೆಲ್ಲಾ ವಾಸಮಾಡುವ ಎಲ್ಲಾ ಪ್ರಜೆಗಳಿಗೂ, ಜನಾಂಗಗಳಿಗೂ, ಭಾಷೆಯವರಿಗೂ, ನಿಮಗೆ ಶಾಂತಿಯು ಹೆಚ್ಚಾಗಲಿ.


ನಿನ್ನಿಂದ ಕುದುರೆಯನ್ನೂ, ಅದರ ಮೇಲೆ ಹತ್ತಿದವನನ್ನೂ ಚೂರುಚೂರಾಗಿ ಒಡೆದು ಬಿಡುತ್ತೇನೆ; ನಿನ್ನಿಂದ ರಥವನ್ನೂ, ಅದರಲ್ಲಿ ಸವಾರಿ ಮಾಡುವವನನ್ನೂ ಚೂರುಚೂರಾಗಿ ಒಡೆದು ಬಿಡುತ್ತೇನೆ.


“ಇದಲ್ಲದೆ ನೀನು, ‘ನಾನು ಅಶುದ್ಧನಲ್ಲ, ಬಾಳನನ್ನು ಹಿಂಬಾಲಿಸಲಿಲ್ಲ,’ ಎಂದು ಹೇಳುವುದು ಹೇಗೆ? ತಗ್ಗಿನಲ್ಲಿ ನಿನ್ನ ಮಾರ್ಗವನ್ನು ನೋಡು. ನೀನು ಮಾಡಿದ್ದನ್ನು ತಿಳಿದುಕೋ. ನೀನು ತೀವ್ರವಾಗಿ ಸಂಚಾರ ಮಾಡುವ ಹೆಣ್ಣು ಒಂಟೆಯೇ.


ಅವರು ನಿಮ್ಮ ಸಹೋದರರನ್ನು ಕುದುರೆಗಳ ಮೇಲೆಯೂ ರಥಗಳಲ್ಲಿಯೂ ಪಲ್ಲಕ್ಕಿಗಳಲ್ಲಿಯೂ ಹೇಸರಗತ್ತೆಗಳ ಮೇಲೆಯೂ ಒಂಟೆಗಳ ಮೇಲೆಯೂ ಸಮಸ್ತ ಜನಾಂಗಗಳೊಳಗಿಂದ ಯೆಹೋವ ದೇವರಿಗೆ ಕಾಣಿಕೆಯಾಗಿ ಇಸ್ರಾಯೇಲರು ಕಾಣಿಕೆಯನ್ನು ಶುದ್ಧಪಾತ್ರೆಯಲ್ಲಿ ಯೆಹೋವ ದೇವರು ಮನೆಗೆ ತರುವ ಪ್ರಕಾರ ನನ್ನ ಪರಿಶುದ್ಧ ಪರ್ವತವಾದ ಯೆರೂಸಲೇಮಿಗೆ ತರುವರೆಂದು ಯೆಹೋವ ದೇವರು ಹೇಳುತ್ತಾರೆ.


ಒಂಟೆಗಳ ಸಮೂಹವು ನಿನ್ನ ದೇಶದಲ್ಲಿ ತುಂಬಿಕೊಳ್ಳುವುದು. ಮಿದ್ಯಾನಿನ ಏಫಾದ ವೇಗವುಳ್ಳ ಒಂಟೆಗಳು ಅವೆಲ್ಲಾ ಶೆಬದಿಂದಲೂ ಬರುವುವು. ಬಂಗಾರವನ್ನೂ, ಧೂಪವನ್ನೂ ತರುವುವು. ಯೆಹೋವ ದೇವರ ಸ್ತೋತ್ರಗಳನ್ನು ಸಾರುವುವು.


ಅರಸನ ಮಾತುಗಳೇ ಸರ್ವೋನ್ನತವಾದುದರಿಂದ, “ನೀನು ಮಾಡುವುದೇನು?” ಎಂದು ಅವನಿಗೆ ಪ್ರಶ್ನಿಸುವವರಾರು?


“ಆದರೆ ನನ್ನ ದಿನಗಳು ಅಂಚೆಯವನಿಗಿಂತಲೂ ತ್ವರೆಯಾಗಿವೆ; ಆನಂದವನ್ನೂ ನೋಡದೆ ದಿನಗಳು ಓಡಿಹೋಗುತ್ತವೆ.


ಅದೇ ಪ್ರಕಾರ ಓಟಗಾರರು ಅರಸನ ಕೈಯಿಂದಲೂ ಅವನ ಪ್ರಧಾನರ ಕೈಯಿಂದಲೂ ಪತ್ರಗಳನ್ನು ತೆಗೆದುಕೊಂಡು, ಅರಸನ ಅಪ್ಪಣೆಯ ಪ್ರಕಾರ ಸಮಸ್ತ ಇಸ್ರಾಯೇಲ್ ಮತ್ತು ಯೆಹೂದ ದೇಶಗಳಿಗೆ ಹೋಗಿ, “ಇಸ್ರಾಯೇಲರೇ, ಅಬ್ರಹಾಮನ, ಇಸಾಕನ, ಇಸ್ರಾಯೇಲಿನ ದೇವರಾದ ಯೆಹೋವ ದೇವರ ಕಡೆಗೆ ತಿರುಗಿರಿ. ಆಗ ಅವರು ಅಸ್ಸೀರಿಯದ ಅರಸರ ಕೈಗೆ ತಪ್ಪಿಸಿಕೊಂಡ ನಿಮ್ಮ ಉಳಿದವರ ಕಡೆಗೆ ತಿರುಗುವರು.


ಹೀಗೆ ಅವಳು ಅಹಾಬನ ಹೆಸರಿನಲ್ಲಿ ಪತ್ರಗಳನ್ನು ಬರೆದು, ಅವುಗಳಿಗೆ ಅವನ ಮುದ್ರೆಹಾಕಿ, ಆ ಪತ್ರಗಳನ್ನು ನಾಬೋತನ ಸಂಗಡ ಅವನ ಪಟ್ಟಣದಲ್ಲಿ ವಾಸವಾಗಿರುವ ಹಿರಿಯರಿಗೂ, ಗೌರವಸ್ಥರಿಗೂ ಕಳುಹಿಸಿದಳು.


ಹೀಗೆಯೇ ಪ್ರತಿಯೊಬ್ಬನು ತನ್ನ ನೇಮಕದ ಪ್ರಕಾರ ಕುದುರೆಗಳಿಗೋಸ್ಕರವೂ, ಸವಾರಿ ಒಂಟೆಗಳಿಗೋಸ್ಕರವೂ, ಅವುಗಳ ಸ್ಥಳಕ್ಕೆ ಜವೆಗೋಧಿಯನ್ನೂ, ಹುಲ್ಲನ್ನೂ ತಂದರು.


ಈಗ ನೀವು ಯೆಹೂದ್ಯರಿಗೋಸ್ಕರ ಅರಸನ ಹೆಸರಿನಿಂದ ನಿಮ್ಮ ದೃಷ್ಟಿಗೆ ಒಳ್ಳೆಯದಾಗಿ ತೋರುವ ಹಾಗೆ ಬೇರೆ ಒಂದು ಪತ್ರವನ್ನು ಬರೆದು, ಅರಸನ ಉಂಗುರದಿಂದ ಮುದ್ರೆಹಾಕಿರಿ. ಏಕೆಂದರೆ ಅರಸನ ಹೆಸರಿನಿಂದ ಬರೆಯಲಾದ ಹಾಗು ರಾಜಮುದ್ರೆಯನ್ನು ಹೊಂದಿರುವ ಲೇಖನವನ್ನು ಯಾರೂ ಈಗ ರದ್ದುಮಾಡಲಾಗದು,” ಎಂದು ಹೇಳಿದನು.


ರಾಜನೇ, ಈಗ ನೀನು ಈ ನಿಬಂಧನೆಯನ್ನು ವಿಧಿಸಿ, ಇದು ಬದಲಾಗದ ಮೇದ್ಯರ ಮತ್ತು ಪಾರಸಿಯರ ನಿಯಮಗಳ ಪ್ರಕಾರ ಇದು ರದ್ದಾಗದಂತೆ ನಿರ್ಣಯವನ್ನು ರೂಪಿಸಿ, ಶಾಸನಕ್ಕೆ ರುಜುಹಾಕು,” ಎಂದು ವಿನಂತಿಸಿದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು