Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಎಸ್ತೇರಳು 8:11 - ಕನ್ನಡ ಸಮಕಾಲಿಕ ಅನುವಾದ

11 ಅರಸನಾದ ಅಹಷ್ವೇರೋಷನ ಆಜ್ಞೆಯ ಪ್ರಕಾರ, ಸಮಸ್ತ ಪ್ರಾಂತಗಳ ಆಯಾ ಪಟ್ಟಣಗಳಲ್ಲಿರುವ ಎಲ್ಲಾ ಯೆಹೂದ್ಯರು ಒಟ್ಟಾಗಿ ಸೇರಿ ಪ್ರಾಣರಕ್ಷಣೆ ಮಾಡಿಕೊಳ್ಳುವ ಹಕ್ಕನ್ನು ಕೊಡಲಾಗಿತ್ತು. ಯಾವುದೇ ದೇಶದವರು ಅಥವಾ ಪ್ರಾಂತದವರು ಆಯುಧಗಳೊಡನೆ ಅವರಿಗೆ ವಿರೋಧವಾಗಿ ಎದ್ದು ಅವರನ್ನಾಗಲಿ, ಅವರ ಮಹಿಳೆಯರನ್ನಾಗಲಿ, ಅವರ ಮಕ್ಕಳನ್ನಾಗಲಿ ದಾಳಿಮಾಡಲು ಬಂದರೆ, ಅಂಥವರನ್ನು ಕೊಂದುಹಾಕುವುದಕ್ಕೂ ನಾಶಮಾಡುವುದಕ್ಕೂ ವೈರಿಯ ಆಸ್ತಿಯನ್ನು ಕೊಳ್ಳೆ ಹೊಡೆಯುವುದಕ್ಕೂ ಅಧಿಕಾರಕೊಡಲಾಗಿತ್ತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

11 ಆ ಪತ್ರಗಳಲ್ಲಿ ಅರಸನು, “ಅಹಷ್ವೇರೋಷ್ ರಾಜನ ಎಲ್ಲಾ ಸಂಸ್ಥಾನಗಳ ಆಯಾ ಪಟ್ಟಣಗಳಲ್ಲಿರುವ ಯೆಹೂದ್ಯರು ಒಂದೇ ದಿನದಲ್ಲಿ ಅಂದರೆ, ಹನ್ನೆರಡನೆಯ ತಿಂಗಳಾದ ಫಾಲ್ಗುಣಮಾಸದ ಹದಿಮೂರನೆಯ ದಿನದಲ್ಲಿ ಒಟ್ಟಾಗಿ ಸೇರಿಕೊಳ್ಳಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

11 ಆ ಪತ್ರಗಳಲ್ಲಿ ಅರಸನ ರಾಜಾಜ್ಞೆ ಹೀಗೆಂದು ಬರೆಯಲಾಗಿತ್ತು: ‘ಅರಸ ಅಹಷ್ವೇರೋಷನ ಎಲ್ಲಾ ಸಂಸ್ಥಾನಗಳ ಆಯಾ ಪಟ್ಟಣಗಳಲ್ಲಿರುವ ಎಲ್ಲಾ ಯೆಹೂದ್ಯರು ಒಂದೇ ದಿನದಲ್ಲಿ

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

11 ಆ ಪತ್ರಗಳಿಂದ ಅರಸನು - ಅಹಷ್ವೇರೋಷ್‍ರಾಜನ ಎಲ್ಲಾ ಸಂಸ್ಥಾನಗಳ ಆಯಾ ಪಟ್ಟಣಗಳಲ್ಲಿರುವ ಯೆಹೂದ್ಯರು ಒಂದೇ ದಿನದಲ್ಲಿ ಅಂದರೆ ಹನ್ನೆರಡನೆಯ ತಿಂಗಳಾದ ಫಾಲ್ಗುನಮಾಸದ

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

11 ಆ ರಾಜಾಜ್ಞೆಯು ಹೀಗಿತ್ತು: “ಪ್ರತಿಯೊಂದು ನಗರಗಳಲ್ಲಿರುವ ಯೆಹೂದ್ಯರು ಸ್ವರಕ್ಷಣೆಗೋಸ್ಕರ ಒಟ್ಟಾಗಿ ಸೇರಿಬರಲು ಅವರಿಗೆ ಹಕ್ಕಿದೆ. ಅಲ್ಲದೆ ಅವರನ್ನು ಕೊಲ್ಲಲು, ಆಸ್ತಿ ಅಪಹರಿಸಲು ಅವರನ್ನು ನಿರ್ಮೂಲ ಮಾಡುವ ಉದ್ದೇಶದಿಂದ ಅವರ ಬಳಿಗೆ ಬರುವವರನ್ನು ಎದುರಿಸಿ, ಕೊಂದು ನಾಶಮಾಡುವ ಹಕ್ಕು ಅವರಿಗಿದೆ. ಯೆಹೂದ್ಯರಿಗೆ ತಮ್ಮನ್ನು ಹಗೆಮಾಡುವ ವೈರಿಗಳನ್ನು ಕೊಂದು ಅವರ ಆಸ್ತಿಪಾಸ್ತಿಗಳನ್ನು ಸೂರೆಮಾಡುವ ಹಕ್ಕಿದೆ.”

ಅಧ್ಯಾಯವನ್ನು ನೋಡಿ ನಕಲು ಮಾಡಿ




ಎಸ್ತೇರಳು 8:11
9 ತಿಳಿವುಗಳ ಹೋಲಿಕೆ  

ಹನ್ನೆರಡನೆಯ ತಿಂಗಳಾದ ಆದಾರ್ ಮಾಸದ ಹದಿಮೂರನೆಯ ದಿನದಲ್ಲಿ, ಹಿರಿಯರೂ, ಕಿರಿಯರೂ, ಮಕ್ಕಳೂ, ಮಹಿಳೆಯರೂ, ಒಟ್ಟು ಎಲ್ಲಾ ಯೆಹೂದ್ಯರನ್ನು ಒಂದೇ ದಿನದಲ್ಲಿ ಕೊಂದುಹಾಕುವುದಕ್ಕೂ ನಾಶಮಾಡುವುದಕ್ಕೂ ಅವರ ಆಸ್ತಿಯನ್ನು ಕೊಳ್ಳೆ ಹೊಡೆಯುವದಕ್ಕೂ ಅರಸನ ಎಲ್ಲಾ ಪ್ರಾಂತಗಳಿಗೆ ಅಂಚೆಯವರ ಮೂಲಕ ಪತ್ರಗಳನ್ನು ಕಳುಹಿಸಲಾಯಿತು.


ಅದಕ್ಕಾಗಿ ಅವರು ಬಯಲಿನಿಂದ ಮರಗಳನ್ನು ತೆಗೆದುಕೊಳ್ಳುವುದಿಲ್ಲ ಅಥವಾ ಅರಣ್ಯಗಳಲ್ಲಿ ಯಾವುದನ್ನೂ ಕತ್ತರಿಸಿಕೊಳ್ಳುವುದೂ ಇಲ್ಲ, ಅವರು ಆಯುಧಗಳನ್ನು ಬೆಂಕಿಗೆ ಸೌದೆಯಾಗಿ ಉಪಯೋಗಿಸುವರು. ಅವರು ಸೂರೆಯಾದವುಗಳನ್ನು ಸೂರೆ ಮಾಡುವರು ಮತ್ತು ಕೊಳ್ಳೆ ಹೊಡೆದವರನ್ನು ತಾವು ಕೊಳ್ಳೆಹೊಡೆಯುವರು ಎಂದು ಸಾರ್ವಭೌಮ ಯೆಹೋವ ದೇವರು ಹೇಳುತ್ತಾರೆ.


ಹಾಳಾಗಲಿಕ್ಕಿರುವ ಬಾಬಿಲೋನ್ ನಗರವೇ, ನೀನು ನಮಗೆ ಮಾಡಿದ್ದಕ್ಕೆ ಪ್ರತೀಕಾರವನ್ನು ನಿನಗೆ ಸಲ್ಲಿಸುವವನು ಧನ್ಯನು.


ಆದರೆ ನೀತಿವಂತರು ಸಂತೋಷಿಸಲಿ. ದೇವರ ಮುಂದೆ ಉಲ್ಲಾಸಪಡಲಿ. ಹೌದು, ಅವರು ಹರ್ಷಾನಂದರಾಗಲಿ.


ನಾನು ಅವನನ್ನು ಭಕ್ತಿಹೀನ ಜನರಿಗೆ ವಿರುದ್ಧವಾಗಿ ಕಳುಹಿಸಿ, ನನ್ನ ಕೋಪಕ್ಕೆ ಗುರಿಯಾದ ನನ್ನ ಪ್ರಜೆಯನ್ನು ಸೂರೆಮಾಡಿ, ಕೊಳ್ಳೆಹೊಡೆದು ಬೀದಿಯ ಕೆಸರನ್ನೋ ಎಂಬಂತೆ ತುಳಿದುಹಾಕಬೇಕೆಂದು ಅಪ್ಪಣೆ ಕೊಡುವೆನು.


ಆದರೆ ಶೂಷನಿನಲ್ಲಿದ್ದ ಯೆಹೂದ್ಯರು ಹದಿಮೂರನೆಯ ಹಾಗೂ ಹದಿನಾಲ್ಕನೆಯ ದಿನಗಳಲ್ಲಿ ಒಟ್ಟಾಗಿ ಸೇರಿಬಂದದ್ದರಿಂದ, ಹದಿನೈದನೆಯ ದಿನದಲ್ಲಿ ಅವರು ವಿಶ್ರಮಿಸಿಕೊಂಡು, ಅದೇ ದಿನವನ್ನು ಸಂಭ್ರಮದ ಉತ್ಸವದಿನವನ್ನಾಗಿ ಆಚರಿಸಿದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು