Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಎಸ್ತೇರಳು 8:13 - ಕನ್ನಡ ಸಮಕಾಲಿಕ ಅನುವಾದ

13 ಯೆಹೂದ್ಯರು ತಮ್ಮ ಶತ್ರುಗಳ ಮೇಲೆ ಮುಯ್ಯಿಗೆ ಮುಯ್ಯಿ ತೀರಿಸಿಕೊಳ್ಳಲು, ಅವರು ಆ ದಿನ ಸಿದ್ಧವಾಗಿರಬೇಕೆಂದು ಈ ಆಜ್ಞಾಪತ್ರದ ಪ್ರತಿಯು ಪ್ರಾಂತ ಪ್ರಾಂತಗಳಲ್ಲಿ ಕಾನೂನಾಗಿ ಸಕಲ ದೇಶದವರಿಗೂ ಸಾರಿ ಹೇಳಲಾಗಿತ್ತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

13 ಅವರ ಸೊತ್ತನ್ನು ಸೂರೆಮಾಡಬೇಕು, ಈ ಪತ್ರದ ಒಂದೊಂದು ಪ್ರತಿಯನ್ನು ಪ್ರತಿಯೊಂದು ಸಂಸ್ಥಾನದಲ್ಲಿ ರಾಜವಿಧಿಯೆಂದು ಎಲ್ಲಾ ಜನರಲ್ಲಿ ಪ್ರಕಟಿಸಬೇಕು, ಆ ದಿನದಲ್ಲಿ ಯೆಹೂದ್ಯರು ತಮ್ಮ ಶತ್ರುಗಳಿಗೆ ಮುಯ್ಯಿತೀರಿಸುವುದಕ್ಕೆ ಸಿದ್ಧರಾಗಿರಬೇಕು” ಎಂದು ಅಪ್ಪಣೆಮಾಡಿದ್ದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

13 ನಿರ್ನಾಮಗೊಳಿಸಿ ಅವರ ಆಸ್ತಿಪಾಸ್ತಿಯನ್ನೆಲ್ಲಾ ಸೂರೆಮಾಡಬೇಕು; ಈ ಪತ್ರದ ಪ್ರತಿಯನ್ನು ಪ್ರತಿಯೊಂದು ಸಂಸ್ಥಾನದಲ್ಲಿ ರಾಜಾಜ್ಞೆಯೆಂದು ಎಲ್ಲಾ ಜನರಲ್ಲಿ ಪ್ರಕಟಿಸಬೇಕು. ಆ ದಿನಗಳಲ್ಲಿ ಯೆಹೂದ್ಯರು ತಮ್ಮ ಶತ್ರುಗಳ ಮೇಲೆ ಮುಯ್ಯಿ ತೀರಿಸಿಕೊಳ್ಳುವುದಕ್ಕೂ ಸನ್ನದ್ಧರಾಗಿರಬೇಕು.’

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

13 ಈ ಪತ್ರದ ಒಂದೊಂದು ಪ್ರತಿಯನ್ನು ಪ್ರತಿಯೊಂದು ಸಂಸ್ಥಾನದಲ್ಲಿ ರಾಜವಿಧಿಯೆಂದು ಎಲ್ಲಾ ಜನರಲ್ಲಿ ಪ್ರಕಟಿಸಬೇಕೆಂದೂ ಆ ದಿನದಲ್ಲಿ ಯೆಹೂದ್ಯರು ತಮ್ಮ ಶತ್ರುಗಳಿಗೆ ಮುಯ್ಯಿತೀರಿಸುವದಕ್ಕೆ ಸಿದ್ಧರಾಗಿರಬೇಕೆಂದೂ ಅಪ್ಪಣೆಮಾಡಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

13 ಈ ರಾಜಾಜ್ಞೆಯು ದೇಶದ ಶಾಸನವಾಯಿತು. ಇದನ್ನು ರಾಜ್ಯದ ಎಲ್ಲಾ ಸಂಸ್ಥಾನಗಳ ಎಲ್ಲಾ ಜನರಿಗೆ ಪ್ರಕಟಿಸಲಾಯಿತು. ಯಾವ ದಿವಸದಲ್ಲಿ ಯೆಹೂದ್ಯರನ್ನು ನಿರ್ಮೂಲ ಮಾಡಲು ಆಜ್ಞೆ ಹೊರಡಿತ್ತೋ ಆ ದಿವಸದಲ್ಲಿಯೆ ಯೆಹೂದ್ಯರು ತಮ್ಮ ವೈರಿಗಳನ್ನು ಎದುರಿಸಿ ಅವರನ್ನು ಕೊಲ್ಲುವುದಕ್ಕೆ ತಯಾರಿರಬೇಕೆಂದು ಈ ಆಜ್ಞೆಯನ್ನು ಹೊರಡಿಸಿದ್ದು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಎಸ್ತೇರಳು 8:13
9 ತಿಳಿವುಗಳ ಹೋಲಿಕೆ  

ಅವರು ಮಹಾಶಬ್ದದಿಂದ, “ಒಡೆಯನೇ, ಪವಿತ್ರನೇ, ಸತ್ಯವಂತನೇ ನಮ್ಮ ರಕ್ತ ಸುರಿಸಿದ ಲೋಕನಿವಾಸಿಗಳಿಗೆ ತೀರ್ಪನ್ನೂ ಪ್ರತಿದಂಡನೆಯನ್ನೂ ಮಾಡಲು ಇನ್ನೆಷ್ಟು ಸಮಯ ಬೇಕು?” ಎಂದು ಕೂಗಿದರು.


ಎಲ್ಲರೂ ಆ ದಿನದಲ್ಲಿ ಸಿದ್ಧರಾಗಿರುವ ಹಾಗೆ ಪ್ರತಿ ಪ್ರಾಂತದಲ್ಲಿಯೂ ರಾಜಾಜ್ಞೆ ಜಾರಿಗೆ ತರುವುದರಲ್ಲಿ ಇತ್ತು. ರಾಜಾಜ್ಞೆಯಾಗಿ ಬರೆದ ಪತ್ರದ ಪ್ರತಿಯಲ್ಲಿ ಎಲ್ಲಾ ಜನರಲ್ಲಿಯೂ ಜಾರಿಗೆ ತರಲು ಪ್ರಕಟಿಸಬೇಕೆಂದು ಸಹ ಬರೆದಿತ್ತು.


ದೇವರಾದುಕೊಂಡವರು ದೇವರಿಗೆ ಹಗಲುರಾತ್ರಿ ಮೊರೆಯಿಡುವಾಗ, ದೇವರು ಅವರ ವಿಷಯದಲ್ಲಿ ಅವರಿಗೆ ನ್ಯಾಯವನ್ನು ಕೊಡದೆ ಇರುವರೋ? ದೇವರು ನ್ಯಾಯ ಕೊಡಲು ತಡಮಾಡುವರೋ?


ಆಗ ನಿಮ್ಮ ಪಾದಗಳು ನಿಮ್ಮ ವೈರಿಗಳ ರಕ್ತದ ಮೇಲಿರಲಿ. ನಾಯಿಗಳು ಅದನ್ನು ನೆಕ್ಕಲಿ.”


ಆಗ ಸಂಸೋನನು ಯೆಹೋವ ದೇವರನ್ನು ಕೂಗಿ, “ಸಾರ್ವಭೌಮ ಯೆಹೋವ ದೇವರೇ, ನಾನು ನನ್ನ ಎರಡು ಕಣ್ಣುಗಳಿಗಾಗಿ ಒಂದೇ ಸಾರಿ ಫಿಲಿಷ್ಟಿಯರಿಗೆ ಮುಯ್ಯಿಗೆ ಮುಯ್ಯಿ ಮಾಡುವ ಹಾಗೆ ಈ ಸಾರಿ ಮಾತ್ರ ನನ್ನನ್ನು ನೆನಸಿ ಬಲಪಡಿಸಿ ದೇವರೇ,”


ಅಂಚೆಯವರು ಅರಸನ ಆಜ್ಞೆಯಿಂದ ಪ್ರೇರಿತರಾಗಿ ಅರಮನೆಯ ಕುದುರೆಗಳ ಮೇಲೆ ಅತಿ ಶೀಘ್ರವಾಗಿ ಹೊರಟರು. ಈ ಆಜ್ಞೆಯು ಶೂಷನ್ ನಗರದ ಅರಮನೆಯಲ್ಲಿ ಕೊಡಲಾಗಿತ್ತು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು