Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಎಸ್ತೇರಳು 8:15 - ಕನ್ನಡ ಸಮಕಾಲಿಕ ಅನುವಾದ

15 ಮೊರ್ದೆಕೈ ಶುಭ್ರವಾದ ನೀಲ ರಾಜವಸ್ತ್ರವನ್ನು ಧರಿಸಿ, ಬಂಗಾರದ ದೊಡ್ಡ ಕಿರೀಟವನ್ನು ಇಟ್ಟುಕೊಂಡು, ರಕ್ತವರ್ಣವುಳ್ಳ ನಯವಾದ ನಾರಿನ ಶಾಲನ್ನು ಹೊದ್ದುಕೊಂಡು ಅರಸನ ಸಮ್ಮುಖದಿಂದ ಹೊರಟುಹೋದನು. ಶೂಷನ್ ಪಟ್ಟಣವು ಸಂಭ್ರಮವೂ ಸಂತೋಷವೂ ಉಳ್ಳದ್ದಾಗಿತ್ತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

15 ಮೊರ್ದೆಕೈಯಾದರೋ ನೀಲಿ ಮತ್ತು ಶುಭ್ರವರ್ಣಗಳುಳ್ಳ ರಾಜವಸ್ತ್ರಗಳನ್ನು ಧರಿಸಿಕೊಂಡು, ಬಂಗಾರದ ದೊಡ್ಡ ಕಿರೀಟವನ್ನು ಇಟ್ಟುಕೊಂಡು, ರಕ್ತವರ್ಣದ ನಾರಿನ ನಿಲುವಂಗಿಯನ್ನು ಹೊದ್ದುಕೊಂಡು ರಾಜಸನ್ನಿಧಿಯಿಂದ ಹೊರಟನು. ಶೂಷನ್ ಪಟ್ಟಣದಲ್ಲಿ ಸಂತೋಷದ ಆರ್ಭಟವು ಕೇಳಿಸಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

15 ಮೊರ್ದೆಕೈಯಾದರೋ ನೀಲ ಶುಭ್ರವರ್ಣಗಳುಳ್ಳ ರಾಜವಸ್ತ್ರಗಳನ್ನು ಧರಿಸಿ, ಬಂಗಾರದ ದೊಡ್ಡ ಪಟ್ಟಿಯನ್ನು ಹಣೆಗೆ ಕಟ್ಟಿಕೊಂಡು, ರಕ್ತವರ್ಣದ ನಾರಿನ ಶಾಲನ್ನು ಹೊದ್ದು ರಾಜಸನ್ನಿಧಿಯಿಂದ ಹೊರಟನು. ಶೂಷನ್ ನಗರದಲ್ಲಿ ಹರ್ಷೋದ್ಗಾರ ಮೊಳಗಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

15 ಮೊರ್ದೆಕೈಯಾದರೋ ನೀಲ ಶುಭ್ರವರ್ಣಗಳುಳ್ಳ ರಾಜವಸ್ತ್ರಗಳನ್ನು ಧರಿಸಿ ಬಂಗಾರದ ದೊಡ್ಡ ಪಟ್ಟಿಯನ್ನು ಹಣೆಗೆ ಕಟ್ಟಿಕೊಂಡು ರಕ್ತವರ್ಣದ ನಾರಿನ ಶಾಲನ್ನು ಹೊದ್ದು ರಾಜಸನ್ನಿಧಿಯಿಂದ ಹೊರಟನು. ಶೂಷನ್ ಪಟ್ಟಣದಲ್ಲಿ ಸಂತೋಷದ ಆರ್ಭಟವು ಕೇಳಿಸಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

15 ರಾಜಸನ್ನಿಧಿಯಿಂದ ಮೊರ್ದೆಕೈ ಹೊರಟಾಗ, ಅರಸನು ಕೊಟ್ಟ ವಿಶೇಷ ವಸ್ತ್ರಗಳನ್ನು ಮೊರ್ದೆಕೈಯು ಧರಿಸಿದ್ದನು. ಅದು ನೀಲಿ ಮತ್ತು ಬಿಳಿ ಬಣ್ಣದಾಗಿತ್ತು. ತಲೆಗೆ ಬಂಗಾರದ ಕಿರೀಟವನ್ನು ತೊಟ್ಟಿದ್ದನು. ಅಲ್ಲದೆ ನೇರಳೇ ಬಣ್ಣದ ವಸ್ತ್ರವೂ ಕೂಡಾ ಅವನಲ್ಲಿದ್ದವು. ರಾಜಧಾನಿಯಾದ ಶೂಷನ್ ನಗರದಲ್ಲಿ ವಿಶೇಷ ಸಮಾರಂಭವಿತ್ತು. ಜನರು ಸಂತೋಷದಿಂದ ನಲಿದಾಡಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಎಸ್ತೇರಳು 8:15
15 ತಿಳಿವುಗಳ ಹೋಲಿಕೆ  

ಅಂಚೆಯವರು ಅರಸನ ಆಜ್ಞೆಯಿಂದ ತ್ವರೆಯಾಗಿ ಹೊರಟು ಹೋದರು. ಶೂಷನಿನ ಅರಮನೆಯಲ್ಲಿಂದ ಆ ಆಜ್ಞೆಯು ಹೊರಡಿತು. ಅರಸನೂ ಹಾಮಾನನೂ ಮದ್ಯಪಾನ ಮಾಡಲು ಕುಳಿತುಕೊಂಡರು. ಆದರೆ ಶೂಷನ್ ಪಟ್ಟಣವೋ ತಳಮಳಗೊಂಡಿತ್ತು.


ಫರೋಹನು ತನ್ನ ಕೈಯೊಳಗಿನ ಉಂಗುರವನ್ನು ತೆಗೆದು ಯೋಸೇಫನ ಕೈಯಲ್ಲಿಟ್ಟು, ನಾರುಮಡಿಯ ವಸ್ತ್ರವನ್ನು ತೊಡಿಸಿ, ಚಿನ್ನದ ಸರಪಣಿಯನ್ನು ಅವನ ಕೊರಳಿಗೆ ಹಾಕಿದನು.


ಅನಂತರ ಯೇಸು ಹೀಗೆ ಒಂದು ಸಾಮ್ಯ ಹೇಳಿದರು, “ಬಹು ಬೆಲೆಬಾಳುವ ಹಾಗೂ ನಯವಾದ ನಾರುಮಡಿ ವಸ್ತ್ರಗಳನ್ನೂ ಧರಿಸಿಕೊಂಡು ಪ್ರತಿದಿನವೂ ಭೋಗಗಳಲ್ಲಿಯೂ ಆಡಂಭರದಲ್ಲಿಯೂ ಬಾಳುತ್ತಿದ್ದ ಒಬ್ಬ ಧನವಂತನಿದ್ದನು.


ಶಿಷ್ಟರು ಅಧಿಕಾರಕ್ಕೆ ಬಂದರೆ ಜನರು ಹರ್ಷಿಸುತ್ತಾರೆ. ಆದರೆ ದುಷ್ಟರು ಆಳಿದರೆ, ಜನರಿಗೆ ನರಳಾಟ.


ಅರಸನು ಧರಿಸಿಕೊಳ್ಳುವ ರಾಜವಸ್ತ್ರಗಳನ್ನೂ, ಅರಸನು ಸವಾರಿ ಮಾಡುವ ಕುದುರೆಯನ್ನೂ, ಅರಸನ ತಲೆಯ ಮೇಲೆ ಧರಿಸಿಕೊಳ್ಳುವ ರಾಜಕಿರೀಟವನ್ನೂ ತರಿಸಬೇಕು.


ಅಲ್ಲಿ ಬಿಳಿ ಕಲ್ಲಿನ ಕಂಬಗಳಿಗೆ ಬೆಳ್ಳಿಯ ಉಂಗುರಗಳಿಂದಲೂ ರಕ್ತವರ್ಣದ ನಯವಾದ ನಾರು ಹಗ್ಗಗಳಿಂದಲೂ ತೂಗು ಹಾಕಲಾಗಿದ್ದವು. ಬಿಳಿ ಹಸಿರೂ ನೀಲವರ್ಣವೂ ಆದ ತೆರೆಗಳಿದ್ದವು. ಮಂಚಗಳು ಬೆಳ್ಳಿ ಬಂಗಾರದವುಗಳಾಗಿ ಕೆಂಪು, ನೀಲಿ, ಬಿಳಿ, ಕಪ್ಪು ಬಣ್ಣಗಳ ಅಮೃತಶಿಲೆಗಳಿಂದ ರಚಿತವಾದ ನೆಲದ ಮೇಲೆ ಇಡಲಾಗಿದ್ದವು.


ಇಲ್ಲವಾದರೆ, ನೀವು ಏನನ್ನು ಕಾಣುವುದಕ್ಕಾಗಿ ಹೋದಿರಿ? ನಯವಾದ ಉಡುಪನ್ನು ಧರಿಸಿದ್ದ ಮನುಷ್ಯನನ್ನೋ? ನಯವಾದ ಉಡುಪನ್ನು ಧರಿಸುವವರು ರಾಜರ ಅರಮನೆಗಳಲ್ಲಿ ಇರುತ್ತಾರೆ.


ಆದರೂ ಅರಸನಾದ ಸೊಲೊಮೋನನು ತನ್ನ ಸರ್ವವೈಭವದಲ್ಲಿ ಇದ್ದಾಗಲೂ ಆ ಹೂವುಗಳಲ್ಲಿ ಒಂದರಂತೆಯಾದರೂ ಉಡುಪನ್ನು ಧರಿಸಿರಲಿಲ್ಲ ಎಂದು, ನಾನು ನಿಮಗೆ ಹೇಳುತ್ತೇನೆ.


ಆದ್ದರಿಂದ ಹಾಮಾನನು ರಾಜವಸ್ತ್ರಗಳನ್ನೂ ಪಟ್ಟದ ಕುದುರೆಯನ್ನೂ ತೆಗೆದುಕೊಂಡು ಮೊರ್ದೆಕೈಗೆ ಆ ವಸ್ತ್ರಗಳನ್ನು ತೊಡಿಸಿ, ಅವನನ್ನು ಕುದುರೆಯ ಮೇಲೆ ಕೂರಿಸಿ ಪಟ್ಟಣದ ಬೀದಿಗಳಲ್ಲಿ ಮೆರವಣಿಗೆ ಮಾಡಿಸಿ ಅವನ ಮುಂದೆ, “ಅರಸನು ಸನ್ಮಾನಿಸಬೇಕೆಂದಿರುವ ಮನುಷ್ಯನಿಗೆ ಗೌರವಿಸುವ ರೀತಿ ಇದೇ!” ಎಂದು ಸಾರಿದನು.


ಮೂರನೆಯ ದಿವಸದಲ್ಲಿ, ಎಸ್ತೇರಳು ರಾಜವಸ್ತ್ರ ಆಭರಣಗಳನ್ನು ಧರಿಸಿಕೊಂಡು ಅರಮನೆಗೆ ಎದುರಾಗಿರುವ ಅರಸನ ಒಳಗಣ ಪ್ರಾಕಾರವನ್ನು ಪ್ರವೇಶಿಸಿ ನಿಂತಳು. ಅರಸನು ರಾಜಮಂದಿರದೊಳಗೆ ತನ್ನ ರಾಜಸಿಂಹಾಸನದ ಮೇಲೆ ಬಾಗಿಲಿಗೆ ಎದುರಾಗಿ ಕುಳಿತಿದ್ದನು.


ಹಾಮಾನನು ತನ್ನ ಐಶ್ವರ್ಯದ ಘನವನ್ನೂ, ತನ್ನ ಮಕ್ಕಳ ಹೆಚ್ಚಳವನ್ನೂ, ಅರಸನು ತನ್ನನ್ನು ಹೆಚ್ಚಿಸಿದ್ದನ್ನೂ, ಅರಸನ ಪ್ರಭುಗಳ ಹಾಗೂ ಸೇವಕರ ಮೇಲೆ ಎತ್ತಿದ್ದನ್ನೂ ಹೀಗೆ ಎಲ್ಲವನ್ನೂ ಅವರಿಗೆ ವಿವರವಾಗಿ ಹೇಳಿದನು.


ಅಂಚೆಯವರು ಅರಸನ ಆಜ್ಞೆಯಿಂದ ಪ್ರೇರಿತರಾಗಿ ಅರಮನೆಯ ಕುದುರೆಗಳ ಮೇಲೆ ಅತಿ ಶೀಘ್ರವಾಗಿ ಹೊರಟರು. ಈ ಆಜ್ಞೆಯು ಶೂಷನ್ ನಗರದ ಅರಮನೆಯಲ್ಲಿ ಕೊಡಲಾಗಿತ್ತು.


ಅವನ ಅಧಿಕಾರದ ಕ್ರಿಯೆಗಳೂ ಅವನ ಪರಾಕ್ರಮವೂ ಅರಸನು ಮೊರ್ದೆಕೈಯನ್ನು ಹೆಚ್ಚಿಸಿದ ಮಹತ್ತಿನ ಪ್ರಸಿದ್ಧಿಯೂ ಮೇದ್ಯ ಮತ್ತು ಪಾರಸಿಯ ಅರಸರ ಇತಿಹಾಸಗಳ ಗ್ರಂಥದಲ್ಲಿ ಬರೆದಿರುತ್ತವೆ.


ನೀತಿವಂತರು ಅಭಿವೃದ್ಧಿಹೊಂದಿದರೆ, ಪಟ್ಟಣವು ಉಲ್ಲಾಸಿಸುತ್ತದೆ; ದುಷ್ಟರು ನಾಶವಾದರೆ, ಜಯೋತ್ಸವ ಉಂಟಾಗುತ್ತದೆ.


ನೀತಿವಂತರಿಗೆ ಜಯವಾದರೆ, ದೊಡ್ಡ ಘನತೆ ಇರುವುದು. ಆದರೆ ದುಷ್ಟರಿಗೆ ಏಳಿಗೆಯಾದರೆ, ಮನುಷ್ಯರು ಅಡಗಿಕೊಳ್ಳುತ್ತಾರೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು