Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಎಸ್ತೇರಳು 8:6 - ಕನ್ನಡ ಸಮಕಾಲಿಕ ಅನುವಾದ

6 ನನ್ನ ಜನರಿಗೆ ಕೇಡು ಸಂಭವಿಸುವುದನ್ನು ನೋಡಿ ನಾನು ಹೇಗೆ ಸಹಿಸಲಿ? ಇಲ್ಲವೆ ನನ್ನ ಕುಟುಂಬದ ನಾಶವನ್ನು ನಾನು ನೋಡಿ ಹೇಗೆ ಸಹಿಸಲಿ?” ಎಂದಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

6 ನನ್ನ ಜನರಿಗೆ ಕೇಡು ಸಂಭವಿಸುವುದನ್ನು ನೋಡಿ ನಾನು ಸಹಿಸಿಕೊಂಡಿರುವುದು ಹೇಗೆ? ನನ್ನ ಕುಲನಾಶನವನ್ನು ನೋಡುತ್ತಾ ಸುಮ್ಮನಿರುವುದು ಹೇಗೆ?” ಎಂದು ಬಿನ್ನವಿಸಿದಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

6 ನನ್ನ ಜನರಿಗೆ ಕೇಡು ಸಂಭವಿಸುವುದನ್ನು ಕಣ್ಣಾರೆ ಕಂಡು ನಾನು ಹೇಗೆ ತಾನೆ ಸಹಿಸಲಿ? ನನ್ನ ಕುಲನಾಶವನ್ನು ಕಂಡು ಸುಮ್ಮನಿರುವುದಾದರೂ ಹೇಗೆ?” ಎಂದು ಬಿನ್ನವಿಸಿದಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

6 ನನ್ನ ಜನರಿಗೆ ಕೇಡು ಸಂಭವಿಸುವದನ್ನು ನೋಡಿ ನಾನು ಸಹಿಸುವದು ಹೇಗೆ? ನನ್ನ ಕುಲನಾಶನವನ್ನು ನೋಡುತ್ತಾ ಸುಮ್ಮನಿರುವದು ಹೇಗೆ ಎಂದು ಬಿನ್ನವಿಸಿದಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

6 ನನ್ನ ಜನರಿಗೆ ಭಯಂಕರವಾದ ಆ ಪರಿಸ್ಥತಿ ಉಂಟಾಗುವುದನ್ನಾಗಲಿ ನನ್ನ ಕುಟಂಬವು ಕೊಲ್ಲಲ್ಪಡುವುದನ್ನು ಕಣ್ಣಾರೆ ನೋಡುವುದಕ್ಕಾಗಲಿ ನನಗೆ ಸಾಧ್ಯವಿಲ್ಲದಿರುವುದರಿಂದ ರಾಜನಲ್ಲಿ ಬೇಡಿಕೊಳ್ಳುತ್ತಿದ್ದೇನೆ” ಎಂದಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಎಸ್ತೇರಳು 8:6
9 ತಿಳಿವುಗಳ ಹೋಲಿಕೆ  

ಏಕೆಂದರೆ ನಾನು ಮತ್ತು ನನ್ನ ಜನರು ದುರಂತಕ್ಕೂ, ಕೊಲೆಗೂ, ಸರ್ವನಾಶಕ್ಕೂ ಮಾರಟವಾಗಿದ್ದೇವೆ. ಒಂದು ವೇಳೆ, ನಾವು ದಾಸರಾಗಿಯಾಗಲಿ, ದಾಸಿಯರಾಗಲಿ ಮಾರಾಟವಾಗಿದ್ದರೆ ನಾನು ಸುಮ್ಮನಿರುತ್ತಿದ್ದೆ. ಅಂಥ ಕಷ್ಟಕ್ಕಾಗಿ ನಾನು ಅರಸನನ್ನು ತೊಂದರೆಪಡಿಸದೆ ಸುಮ್ಮನೆ ಇದ್ದುಬಿಡುತ್ತಿದ್ದೆನು,” ಎಂದಳು.


ಪ್ರಿಯರೇ, ನನ್ನ ಹೃದಯದ ಬಯಕೆಯು, ನಾನು ದೇವರಿಗೆ ಸಲ್ಲಿಸುವ ಪ್ರಾರ್ಥನೆಯು ಇಸ್ರಾಯೇಲರು ರಕ್ಷಣೆ ಹೊಂದಬೇಕೆಂಬುದೇ.


ಓ, ನನ್ನ ತಲೆ ಚಿಲುಮೆಯೂ, ನನ್ನ ಕಣ್ಣುಗಳು ಕಣ್ಣೀರಿನ ಬುಗ್ಗೆಯಾಗಿಯೂ ಇದ್ದರೆ ಒಳ್ಳೆಯದು, ಆಗ ನನ್ನ ಜನರಲ್ಲಿ ಹತರಾದವರ ನಿಮಿತ್ತ ಹಗಲುರಾತ್ರಿ ಅಳುವೆನು.


ಓ, ನನ್ನ ಕರುಳು, ನನ್ನ ಕರುಳು! ನಾನು ನೋವಿನಿಂದ ನರಳುತ್ತೇನೆ. ನನ್ನ ಹೃದಯವು ನನ್ನಲ್ಲಿ ತಳಮಳಗೊಂಡಿದೆ. ನಾನು ಮೌನವಾಗಿರಲಾರೆನು; ಓ ನನ್ನ ಪ್ರಾಣವೇ, ತುತೂರಿ ಶಬ್ದವನ್ನೂ, ಯುದ್ಧದ ಆರ್ಭಟವನ್ನೂ ಕೇಳುತ್ತಿರುವೆ.


ಹನ್ನೆರಡನೆಯ ತಿಂಗಳಾದ ಆದಾರ್ ತಿಂಗಳೆಂಬ ಹದಿಮೂರನೆಯ ದಿನದಲ್ಲಿ ಅರಸನ ಆಜ್ಞೆಯು ನೆರವೇರುವುದಕ್ಕೆ ನಿರ್ಣಯವಾಗಿತ್ತು. ಯೆಹೂದ್ಯರ ಶತ್ರುಗಳು ಅದೇ ದಿನದಲ್ಲಿ ಅವರ ಮೇಲೆ ದೊರೆತನ ಮಾಡುವುದಾಗಿ ಎದುರುನೋಡಿದ್ದರು. ಅದಕ್ಕೆ ಬದಲಾಗಿ ಯೆಹೂದ್ಯರೇ ತಮ್ಮನ್ನು ಹಗೆಮಾಡುವವರ ಮೇಲೆ ದೊರೆತನ ಮಾಡಲಾರಂಭಿಸಿದರು.


“ಅರಸನು ಎಂದೆಂದಿಗೂ ಬಾಳಲಿ. ನನ್ನ ತಂದೆಗಳ ಸಮಾಧಿಗಳಿರುವ ಸ್ಥಳವಾದ ಆ ಪಟ್ಟಣವು ಹಾಳಾಗಿದ್ದು, ಅದರ ಬಾಗಿಲುಗಳು ಬೆಂಕಿಯಿಂದ ಸುಟ್ಟುಹೋಗಿರುವಾಗ ನನ್ನ ಮುಖವು ದುಃಖವಿಲ್ಲದೆ ಇರಲು ಸಾಧ್ಯವೇ?” ಎಂದು ಹೇಳಿದೆನು.


ಹುಡುಗನು ನನ್ನ ಬಳಿಯಲ್ಲಿರದೆ, ನಾನು ಹೇಗೆ ನನ್ನ ತಂದೆಯ ಬಳಿಗೆ ಹೋಗಲಿ? ಹೋದರೆ ನನ್ನ ತಂದೆಗೆ ಬರುವ ಕೇಡನ್ನು ನಾನು ನೋಡಬೇಕಾದೀತು,” ಎಂದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು