ಎಸ್ತೇರಳು 9:15 - ಕನ್ನಡ ಸಮಕಾಲಿಕ ಅನುವಾದ15 ಇದಲ್ಲದೆ ಶೂಷನಿನಲ್ಲಿರುವ ಯೆಹೂದ್ಯರು ಆದಾರ್ ಎಂಬ ಫಾಲ್ಗುನಮಾಸದ ಹದಿನಾಲ್ಕನೆಯ ದಿವಸದಲ್ಲಿ ಶೂಷನಿನಲ್ಲಿ ಒಟ್ಟಾಗಿ ಸೇರಿ ಮುನ್ನೂರು ಮಂದಿಗೆ ಮರಣದಂಡನೆಯನ್ನು ವಿಧಿಸಿದರು. ಆದರೆ ಅವರು ಸುಲಿಗೆಯನ್ನು ತೆಗೆದುಕೊಳ್ಳಲಿಲ್ಲ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201915 ಶೂಷನಿನ ಯೆಹೂದ್ಯರು ಫಾಲ್ಗುಣಮಾಸದ ಹದಿನಾಲ್ಕನೆಯ ದಿನದಲ್ಲೂ ಒಟ್ಟಿಗೆ ಸೇರಿ ಅಲ್ಲಿನ ಮುನ್ನೂರು ಜನರನ್ನು ಕೊಂದರು; ಆದರೆ ಕೊಳ್ಳೆಗೆ ಕೈಹಾಕಲಿಲ್ಲ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)15 ಶೂಷನಿನ ಯೆಹೂದ್ಯರು ಫಾಲ್ಗುಣಮಾಸದ ಹದಿನಾಲ್ಕನೆಯ ದಿನದಂದೂ ಒಟ್ಟಾಗಿ ಸೇರಿ ಮುನ್ನೂರು ಮಂದಿಯನ್ನು ಕೊಂದುಹಾಕಿದರು. ಆದರೆ ಸುಲಿಗೆಗೆ ಕೈಹಾಕಲಿಲ್ಲ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)15 ಶೂಷನಿನ ಯೆಹೂದ್ಯರು ಫಾಲ್ಗುನಮಾಸದ ಹದಿನಾಲ್ಕನೆಯ ದಿನದಲ್ಲೂ ಕೂಡಿಕೊಂಡು ಅಲ್ಲಿ ಮುನ್ನೂರು ಮಂದಿಯನ್ನು ಕೊಂದರು. ಆದರೆ ಕೊಳ್ಳೆಗೆ ಕೈಹಾಕಲಿಲ್ಲ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್15 ಶೂಷನ್ ನಗರದಲ್ಲಿದ್ದ ಯೆಹೂದ್ಯರು ಅದಾರ್ ಮಾಸದ ಹದಿನಾಲ್ಕನೆಯ ದಿನದಂದು ಒಟ್ಟಾಗಿ ಸೇರಿ ಆ ದಿವಸ ಮುನ್ನೂರು ಮಂದಿಯನ್ನು ಹತಿಸಿದರೆ ಹೊರತು, ಅವರ ಆಸ್ತಿಪಾಸ್ತಿಯನ್ನು ಮುಟ್ಟಲಿಲ್ಲ. ಅಧ್ಯಾಯವನ್ನು ನೋಡಿ |
ಅರಸನಾದ ಅಹಷ್ವೇರೋಷನ ಆಜ್ಞೆಯ ಪ್ರಕಾರ, ಸಮಸ್ತ ಪ್ರಾಂತಗಳ ಆಯಾ ಪಟ್ಟಣಗಳಲ್ಲಿರುವ ಎಲ್ಲಾ ಯೆಹೂದ್ಯರು ಒಟ್ಟಾಗಿ ಸೇರಿ ಪ್ರಾಣರಕ್ಷಣೆ ಮಾಡಿಕೊಳ್ಳುವ ಹಕ್ಕನ್ನು ಕೊಡಲಾಗಿತ್ತು. ಯಾವುದೇ ದೇಶದವರು ಅಥವಾ ಪ್ರಾಂತದವರು ಆಯುಧಗಳೊಡನೆ ಅವರಿಗೆ ವಿರೋಧವಾಗಿ ಎದ್ದು ಅವರನ್ನಾಗಲಿ, ಅವರ ಮಹಿಳೆಯರನ್ನಾಗಲಿ, ಅವರ ಮಕ್ಕಳನ್ನಾಗಲಿ ದಾಳಿಮಾಡಲು ಬಂದರೆ, ಅಂಥವರನ್ನು ಕೊಂದುಹಾಕುವುದಕ್ಕೂ ನಾಶಮಾಡುವುದಕ್ಕೂ ವೈರಿಯ ಆಸ್ತಿಯನ್ನು ಕೊಳ್ಳೆ ಹೊಡೆಯುವುದಕ್ಕೂ ಅಧಿಕಾರಕೊಡಲಾಗಿತ್ತು.