16 ಅರಸನ ಪ್ರಾಂತಗಳಲ್ಲಿರುವ ಮಿಕ್ಕ ಯೆಹೂದ್ಯರು ತಮ್ಮ ಪ್ರಾಣ ರಕ್ಷಣೆಗಾಗಿ ಎದ್ದು ನಿಂತು, ತಮ್ಮ ಶತ್ರುಗಳ ಕಾಟದಿಂದ ವಿಶ್ರಾಂತಿ ಪಡೆಯುವಂತೆ ಒಟ್ಟಾಗಿ ಸೇರಿದರು. ಅವರು ತಮ್ಮ ವೈರಿಗಳಲ್ಲಿ 75,000 ಮಂದಿಗೆ ಮರಣದಂಡನೆ ವಿಧಿಸಿದರು. ಆದರೆ ಅವರ ಸುಲಿಗೆಯನ್ನು ತೆಗೆದುಕೊಳ್ಳಲಿಲ್ಲ.
16 ಅದೇ ಮೇರೆಗೆ ರಾಜಸಂಸ್ಥಾನಗಳಲ್ಲಿದ್ದ ಯೆಹೂದ್ಯರು ತಮ್ಮ ವಿರೋಧಿಗಳ ಕಾಟವನ್ನು ನಿಲ್ಲಿಸಿ, ಪ್ರಾಣ ರಕ್ಷಿಸಿಕೊಳ್ಳುವುದಕ್ಕಾಗಿ ಕೂಡಿಕೊಂಡು ತಮ್ಮ ವೈರಿಗಳಲ್ಲಿ ಎಪ್ಪತ್ತೈದು ಸಾವಿರ ಜನರನ್ನು ಸಂಹರಿಸಿದರು; ಆದರೆ ಸುಲಿಗೆಮಾಡುವುದಕ್ಕೆ ಕೈ ಹಾಕಲಿಲ್ಲ.
16 ಹಾಗೆಯೆ ಇತರ ರಾಜಸಂಸ್ಥಾನಗಳಲ್ಲೂ ಯೆಹೂದ್ಯರು ತಮ್ಮ ವಿರೋಧಿಗಳ ಕಾಟವನ್ನು ನಿಲ್ಲಿಸಿ, ತಮ್ಮ ಪ್ರಾಣರಕ್ಷಣೆಗಾಗಿ ಒಟ್ಟಾಗಿ ಸೇರಿ, ತಮ್ಮ ವೈರಿಗಳಲ್ಲಿ ಎಪ್ಪತ್ತೈದು ಸಾವಿರಮಂದಿಯನ್ನು ಕೊಂದುಹಾಕಿದರು. ಆದರೆ, ಸುಲಿಗೆಗೆ ಕೈಹಾಕಲಿಲ್ಲ.
16 ಅದೇ ಸಮಯದಲ್ಲಿ ಇತರ ಸಂಸ್ಥಾನಗಳಲ್ಲಿದ್ದ ಯೆಹೂದ್ಯರು ತಾವು ಬಲಹೊಂದುವಂತೆ ಒಟ್ಟಾಗಿ ಸೇರಿ ಒಗ್ಗಟ್ಟಿನಲ್ಲಿದ್ದು ತಮ್ಮ ವೈರಿಗಳನ್ನು ಸಂಪೂರ್ಣವಾಗಿ ನಿರ್ನಾಮ ಮಾಡಿದರು. ಹೀಗೆ ಒಟ್ಟು ಎಪ್ಪತ್ತೈದು ಸಾವಿರ ಜನರು ಹತಿಸಲ್ಪಟ್ಟರು. ಆದರೆ ಅವರ ಆಸ್ತಿಯನ್ನು ಸೂರೆ ಮಾಡಲಿಲ್ಲ.
ಅರಸನಾದ ಅಹಷ್ವೇರೋಷನ ಆಜ್ಞೆಯ ಪ್ರಕಾರ, ಸಮಸ್ತ ಪ್ರಾಂತಗಳ ಆಯಾ ಪಟ್ಟಣಗಳಲ್ಲಿರುವ ಎಲ್ಲಾ ಯೆಹೂದ್ಯರು ಒಟ್ಟಾಗಿ ಸೇರಿ ಪ್ರಾಣರಕ್ಷಣೆ ಮಾಡಿಕೊಳ್ಳುವ ಹಕ್ಕನ್ನು ಕೊಡಲಾಗಿತ್ತು. ಯಾವುದೇ ದೇಶದವರು ಅಥವಾ ಪ್ರಾಂತದವರು ಆಯುಧಗಳೊಡನೆ ಅವರಿಗೆ ವಿರೋಧವಾಗಿ ಎದ್ದು ಅವರನ್ನಾಗಲಿ, ಅವರ ಮಹಿಳೆಯರನ್ನಾಗಲಿ, ಅವರ ಮಕ್ಕಳನ್ನಾಗಲಿ ದಾಳಿಮಾಡಲು ಬಂದರೆ, ಅಂಥವರನ್ನು ಕೊಂದುಹಾಕುವುದಕ್ಕೂ ನಾಶಮಾಡುವುದಕ್ಕೂ ವೈರಿಯ ಆಸ್ತಿಯನ್ನು ಕೊಳ್ಳೆ ಹೊಡೆಯುವುದಕ್ಕೂ ಅಧಿಕಾರಕೊಡಲಾಗಿತ್ತು.
ಅದೇ ದಿನದಲ್ಲಿ ಅರಸನಾದ ಅಹಷ್ವೇರೋಷನ ಸಮಸ್ತ ಪ್ರಾಂತಗಳಲ್ಲಿರುವ ತಮ್ಮ ತಮ್ಮ ಪಟ್ಟಣಗಳಲ್ಲಿ ಯೆಹೂದ್ಯರು ತಮ್ಮನ್ನು ಕೊಲ್ಲಲು ಹುಡುಕುವವರ ಮೇಲೆ ದಾಳಿಮಾಡಲು ಒಟ್ಟಾಗಿ ಸೇರಿದರು. ಆಗ ಯೆಹೂದ್ಯರ ಭಯವು ಸಮಸ್ತ ಜನರ ಮೇಲೆ ಇದ್ದುದರಿಂದ ಅವರ ಮುಂದೆ ನಿಲ್ಲುವವನು ಒಬ್ಬನೂ ಇರಲಿಲ್ಲ.