ಎಸ್ತೇರಳು 9:17 - ಕನ್ನಡ ಸಮಕಾಲಿಕ ಅನುವಾದ17 ಆದಾರ್ ಮಾಸದ ಹದಿಮೂರನೆಯ ದಿನ ಈ ಘಟನೆ ನಡೆಯಿತು. ಹದಿನಾಲ್ಕನೆಯ ದಿನದಂದು ಅವರು ವಿಶ್ರಮಿಸಿಕೊಂಡು, ಅದನ್ನು ಸಂಭ್ರಮದ ಉತ್ಸವದಿನವನ್ನಾಗಿ ಆಚರಿಸಿದರು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201917 ಇದು ಫಾಲ್ಗುಣಮಾಸದ ಹದಿಮೂರನೆಯ ದಿನದಲ್ಲಿ ನಡೆಯಿತು. ಅವರು ಹದಿನಾಲ್ಕನೆಯ ದಿನದಲ್ಲಿ ವಿಶ್ರಮಿಸಿಕೊಂಡು ಆ ದಿನವನ್ನು ಉತ್ಸವಭೋಜನ ದಿನವನ್ನಾಗಿ ಆಚರಿಸಿದರು. ಹಳ್ಳಿಪಳ್ಳಿಯ ಯೆಹೂದ್ಯರು ಫಾಲ್ಗುಣಮಾಸದ ಹದಿನಾಲ್ಕನೆಯ ದಿನವನ್ನು ನಗರಗಳ ಯೆಹೂದ್ಯರು ಹದಿನೈದನೆಯ ದಿನವನ್ನೂ ಶುಭದಿನವೆಂದು ಆಚರಿಸಿ ಉತ್ಸವಭೋಜನಮಾಡಿ ಒಬ್ಬರಿಗೊಬ್ಬರು ಭೋಜನ ಪದಾರ್ಥಗಳನ್ನು ವಿನಿಮಯ ಮಾಡಿಕೊಂಡರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)17 ಇದು ನಡೆದದ್ದು ಫಾಲ್ಗುಣಮಾಸದ ಹದಿಮೂರನೆಯ ದಿನದಲ್ಲಿ. ಅವರು ಹದಿನಾಲ್ಕನೆಯ ದಿನದಂದು ವಿಶ್ರಮಿಸಿದರು. ಅಂದು ಸಂಭ್ರಮದ ಉತ್ಸವದಿನವನ್ನಾಗಿ ಆಚರಿಸಿದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)17 ಇದು ಫಾಲ್ಗುನಮಾಸದ ಹದಿಮೂರನೆಯ ದಿನದಲ್ಲಿ ನಡೆಯಿತು. ಅವರು ಹದಿನಾಲ್ಕನೆಯ ದಿನದಲ್ಲಿ ವಿಶ್ರವಿುಸಿಕೊಂಡು ಆ ದಿವಸವನ್ನು ಉತ್ಸವಭೋಜನ ದಿನವನ್ನಾಗಿ ಆಚರಿಸಿದರು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್17 ಅದಾರ್ ಮಾಸದ ಹದಿಮೂರನೇ ದಿವಸದಲ್ಲಿ ಈ ಕಾರ್ಯವು ನಡೆಯಿತು. ಹದಿನಾಲ್ಕನೆಯ ದಿವಸದಲ್ಲಿ ಅವರು ವಿಶ್ರಾಂತಿ ತೆಗೆದುಕೊಂಡರು. ಆ ದಿವಸವನ್ನು ಯೆಹೂದ್ಯರು ತಮ್ಮ ಸಂತಸದ ದಿನವಾಗಿ ಆಚರಿಸಿದರು. ಅಧ್ಯಾಯವನ್ನು ನೋಡಿ |
ಆಗ ಮೂರನೆಯ ತಿಂಗಳಾದ ಸಿವಾನ್ ಎಂಬ ಮಾಸದ ಇಪ್ಪತ್ತಮೂರನೆಯ ದಿನದಲ್ಲಿ ಅರಸನ ಲೇಖಕರನ್ನು ಕರೆಯಲಾಯಿತು. ಮೊರ್ದೆಕೈ ಆಜ್ಞಾಪಿಸಿದ ಎಲ್ಲಾದರ ಪ್ರಕಾರ, ಸಕಲ ಯೆಹೂದ್ಯರಿಗೂ ಹಿಂದೂ ದೇಶ ಮೊದಲುಗೊಂಡು ಇಥಿಯೋಪಿಯ ದೇಶದವರೆಗೂ ಇರುವ ನೂರ ಇಪ್ಪತ್ತೇಳು ಪ್ರಾಂತಗಳ ಉಪರಾಜರಿಗೂ, ದೇಶಾಧಿಪತಿಗಳಿಗೂ, ಅಧಿಕಾರಿಗಳಿಗೂ, ಅವರವರ ಪ್ರಾಂತದ ಲಿಪಿಯಲ್ಲಿಯೂ, ಅವರವರ ಭಾಷೆಯಲ್ಲಿಯೂ ಪತ್ರಗಳನ್ನು ಬರೆಯಲಾಯಿತು.
ಮೊದಲನೆಯ ತಿಂಗಳ ಹದಿಮೂರನೆಯ ದಿವಸದಲ್ಲಿ ಅರಸನ ಲೇಖಕರನ್ನು ಕರೆಸಲಾಯಿತು. ಹಾಮಾನನು ಆಜ್ಞಾಪಿಸಿದ್ದೆಲ್ಲದರ ಪ್ರಕಾರ ಪ್ರತಿ ಪ್ರಾಂತದ ಮೇಲಿರುವ ಅರಸನ ಕೈ ಕೆಳಗಿನ ಉಪ ರಾಜರುಗಳಿಗೂ ಅಧಿಪತಿಗಳಿಗೂ ಪ್ರತಿ ಪ್ರಾಂತದಲ್ಲಿ ಜನರ ಮೇಲಿರುವ ಅಧಿಕಾರಿಗೂ ಅವರವರ ಸ್ವದೇಶಿ ಲಿಪಿಗಳಲ್ಲಿಯೂ, ಭಾಷೆಗಳಲ್ಲಿಯೂ ಪತ್ರಗಳನ್ನು ಬರೆದರು. ಅರಸನಾದ ಅಹಷ್ವೇರೋಷನ ಹೆಸರಿನಲ್ಲಿಯೇ ಲಿಖಿತವಾದ ಈ ಪತ್ರಗಳು ಅರಸನ ಉಂಗುರದಿಂದ ಅಧಿಕೃತ ರಾಜಮುದ್ರೆಯನ್ನು ಹೊಂದಿದ್ದವು.