Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಎಸ್ತೇರಳು 9:2 - ಕನ್ನಡ ಸಮಕಾಲಿಕ ಅನುವಾದ

2 ಅದೇ ದಿನದಲ್ಲಿ ಅರಸನಾದ ಅಹಷ್ವೇರೋಷನ ಸಮಸ್ತ ಪ್ರಾಂತಗಳಲ್ಲಿರುವ ತಮ್ಮ ತಮ್ಮ ಪಟ್ಟಣಗಳಲ್ಲಿ ಯೆಹೂದ್ಯರು ತಮ್ಮನ್ನು ಕೊಲ್ಲಲು ಹುಡುಕುವವರ ಮೇಲೆ ದಾಳಿಮಾಡಲು ಒಟ್ಟಾಗಿ ಸೇರಿದರು. ಆಗ ಯೆಹೂದ್ಯರ ಭಯವು ಸಮಸ್ತ ಜನರ ಮೇಲೆ ಇದ್ದುದರಿಂದ ಅವರ ಮುಂದೆ ನಿಲ್ಲುವವನು ಒಬ್ಬನೂ ಇರಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

2 ಆದುದರಿಂದ ಅರಸನಾದ ಅಹಷ್ವೇರೋಷನ ಸಮಸ್ತ ಸಂಸ್ಥಾನಗಳ ಆಯಾ ಪಟ್ಟಣಗಳಲ್ಲಿದ್ದ ಯೆಹೂದ್ಯರು ತಮಗೆ ಕೇಡು ಬಯಸಿದವರಿಗೆ ವಿರುದ್ಧವಾಗಿ ಕೈಯೆತ್ತುವುದಕ್ಕೆ ಸೇರಿಕೊಂಡಾಗ ಯಾರಿಗೂ ಅವರ ಎದುರಿನಲ್ಲಿ ನಿಲ್ಲಲಾಗಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

2 ಆದುದರಿಂದ ಅರಸ ಅಹಷ್ವೇರೋಷನ ಸಮಸ್ತ ಸಂಸ್ಥಾನಗಳ ಪ್ರತಿಯೊಂದು ನಗರದಲ್ಲಿದ್ದ ಯೆಹೂದ್ಯರು ತಮಗೆ ಕೇಡು ಬಗೆದವರಿಗೆ ವಿರುದ್ಧವಾಗಿ ಕೈಯೆತ್ತಲು ಒಟ್ಟಾಗಿ ಸೇರಿದರು. ಎಲ್ಲರಿಗೂ ಅವರ ಭಯ ಇದ್ದುದರಿಂದ ಯಾರೂ ಅವರ ಮುಂದೆ ನಿಲ್ಲಲಾಗಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

2 ಆದದರಿಂದ ಅರಸನಾದ ಅಹಷ್ವೇರೋಷನ ಸಮಸ್ತಸಂಸ್ಥಾನಗಳ ಆಯಾ ಪಟ್ಟಣಗಳಲ್ಲಿದ್ದ ಯೆಹೂದ್ಯರು ತಮಗೆ ಕೇಡುಬಯಸಿದವರಿಗೆ ವಿರೋಧವಾಗಿ ಕೈಯೆತ್ತುವದಕ್ಕೆ ಕೂಡಿಕೊಂಡಾಗ ಯಾರೂ ಅವರೆದುರಿನಲ್ಲಿ ನಿಲ್ಲಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

2 ರಾಜನಾದ ಅಹಷ್ವೇರೋಷನ ಸಾಮ್ರಾಜ್ಯದ ಸಂಸ್ಥಾನಗಳಲ್ಲಿದ್ದ ಯೆಹೂದ್ಯರು ತಮ್ಮನ್ನು ಕೊಲ್ಲಲು ಬರುವ ವೈರಿಗಳನ್ನು ಎದುರಿಸಲು ಒಟ್ಟಾಗಿ ಸೇರಿದರು. ಇವರಿಗೆ ವಿರುದ್ಧವಾಗಿ ಬಿದ್ದು ಹೊಡೆದಾಡಲು ಯಾರಿಗೂ ಧೈರ್ಯಸಾಲಲಿಲ್ಲ. ಯೆಹೂದ್ಯರ ಮೇಲೆ ಜನರಿಗೆ ಭೀತಿ ಉಂಟಾಯಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಎಸ್ತೇರಳು 9:2
12 ತಿಳಿವುಗಳ ಹೋಲಿಕೆ  

ಅರಸನ ಆಜ್ಞೆಯು ಪ್ರಕಟವಾದ ಪ್ರತಿ ಪ್ರಾಂತದಲ್ಲಿಯೂ ಪ್ರತಿ ಪಟ್ಟಣದಲ್ಲಿಯೂ ಯೆಹೂದ್ಯರಿಗೆ ಸಂತೋಷವೂ ಆನಂದವೂ ಸಂಭ್ರಮವೂ ಸುದಿನವೂ ಉಂಟಾಗಿದ್ದವು. ಇದಲ್ಲದೆ ಇತರ ದೇಶಗಳ ಅನೇಕ ಜನರು ಯೆಹೂದ್ಯರಾದರು. ಯೆಹೂದ್ಯರ ಭಯವು ಅವರ ಮೇಲೆ ಇತ್ತು.


ಅರಸನಾದ ಅಹಷ್ವೇರೋಷನ ಆಜ್ಞೆಯ ಪ್ರಕಾರ, ಸಮಸ್ತ ಪ್ರಾಂತಗಳ ಆಯಾ ಪಟ್ಟಣಗಳಲ್ಲಿರುವ ಎಲ್ಲಾ ಯೆಹೂದ್ಯರು ಒಟ್ಟಾಗಿ ಸೇರಿ ಪ್ರಾಣರಕ್ಷಣೆ ಮಾಡಿಕೊಳ್ಳುವ ಹಕ್ಕನ್ನು ಕೊಡಲಾಗಿತ್ತು. ಯಾವುದೇ ದೇಶದವರು ಅಥವಾ ಪ್ರಾಂತದವರು ಆಯುಧಗಳೊಡನೆ ಅವರಿಗೆ ವಿರೋಧವಾಗಿ ಎದ್ದು ಅವರನ್ನಾಗಲಿ, ಅವರ ಮಹಿಳೆಯರನ್ನಾಗಲಿ, ಅವರ ಮಕ್ಕಳನ್ನಾಗಲಿ ದಾಳಿಮಾಡಲು ಬಂದರೆ, ಅಂಥವರನ್ನು ಕೊಂದುಹಾಕುವುದಕ್ಕೂ ನಾಶಮಾಡುವುದಕ್ಕೂ ವೈರಿಯ ಆಸ್ತಿಯನ್ನು ಕೊಳ್ಳೆ ಹೊಡೆಯುವುದಕ್ಕೂ ಅಧಿಕಾರಕೊಡಲಾಗಿತ್ತು.


ನನ್ನ ನಾಲಿಗೆಯು ಸಹ ದಿನವೆಲ್ಲಾ ನಿಮ್ಮ ನೀತಿಯನ್ನು ಮಾತನಾಡುವುದು, ಏಕೆಂದರೆ ನನಗೆ ಕೇಡು ಬಗೆಯುವವರು ನಾಚಿಕೊಂಡು ತಲೆ ತಗ್ಗಿಸಿದ್ದಾರೆ.


ನನ್ನನ್ನು ಆರೋಪಿಸುವವರು, ನಾಚಿಕೆಪಟ್ಟು ನಾಶವಾಗಲಿ. ನನ್ನ ಕೇಡಿಗಾಗಿ ಹುಡುಕುವವರನ್ನು ನಿಂದಾಪಮಾನಗಳು ಕವಿಯಲಿ.


ಜನಾಂಗಗಳೇ, ನೀವು ಯುದ್ಧವನ್ನು ಘೋಷಿಸಿರಿ, ಆದರೂ ಚದರಿಹೋಗುವಿರಿ! ಎಲ್ಲಾ ದೂರ ದೇಶದವರೇ ಕಿವಿಗೊಡಿರಿ. ನಡುಕಟ್ಟಿಕೊಳ್ಳಿರಿ, ಆದರೂ ಚದರಿಹೋಗುವಿರಿ! ನಡುಕಟ್ಟಿಕೊಳ್ಳಿರಿ, ಆದರೂ ಚದರಿಹೋಗುವಿರಿ!


ಇವರು ಯೆಹೂದ್ಯರ ವೈರಿಯಾದ ಹಮ್ಮೆದಾತನ ಮಗ ಹಾಮಾನನ ಹತ್ತು ಮಂದಿ ಪುತ್ರರು. ಆದರೆ ಅವರು ಇವರ ಸುಲಿಗೆಯನ್ನು ತೆಗೆದುಕೊಳ್ಳಲಿಲ್ಲ.


ಏಕೆಂದರೆ ಅವರು ಇಸ್ರಾಯೇಲರಿಗೆ ಎದುರಾಗಿ ಯುದ್ಧಮಾಡಲು ಬರುವ ಹಾಗೆ ಅವರ ಹೃದಯವನ್ನು ಯೆಹೋವ ದೇವರು ಕಠಿಣಮಾಡಿದ್ದರು. ಯೆಹೋವ ದೇವರು ಮೋಶೆಗೆ ಆಜ್ಞಾಪಿಸಿದಂತೆ ಇಸ್ರಾಯೇಲರು ಅವರಿಗೆ ದಯೆ ತೋರಿಸದೆ, ಅವರನ್ನು ಸಂಹರಿಸಿದರು.


“ಯೆಹೋವ ದೇವರು ನಿಮಗೆ ದೇಶವನ್ನು ಕೊಟ್ಟಿದ್ದಾರೆಂದೂ, ನಿಮ್ಮ ನಿಮಿತ್ತ ನಮಗೆ ಮಹಾ ಭೀತಿಯಾಗಿದೆ ಎಂದೂ ನಿಮಗೋಸ್ಕರ ದೇಶದ ನಿವಾಸಿಗಳೆಲ್ಲರೂ ಕಂಗೆಟ್ಟು ಹೋಗಿದ್ದಾರೆಂದೂ ನಾನು ಬಲ್ಲೆನು.


ಆದರೆ ಹೆಷ್ಬೋನಿನ ಅರಸನಾದ ಸೀಹೋನನು ನಮ್ಮನ್ನು ತನ್ನ ಬಳಿಯಿಂದ ದಾಟಿಹೋಗಲು ಸಮ್ಮತಿಸಲಿಲ್ಲ. ಏಕೆಂದರೆ ಅವನನ್ನು ನಿಮ್ಮ ಕೈಯಲ್ಲಿ ಒಪ್ಪಿಸುವ ಹಾಗೆ ನಿಮ್ಮ ದೇವರಾದ ಯೆಹೋವ ದೇವರು ಅವನ ಬುದ್ಧಿಯನ್ನು ಮಂಕುಮಾಡಿ, ಹೃದಯವನ್ನು ಕಠಿಣಪಡಿಸಿದರು. ಈಗಾಗಲೇ ಅದು ನೆರವೇರಿದೆ.


“ನೀವು ಹೋಗುವ ಎಲ್ಲ ಜಾಗಗಳಲ್ಲಿಯೂ ನನ್ನ ಮೇಲಿನ ಭೀತಿಯನ್ನು ನಿಮ್ಮನ್ನು ಎದುರಿಸುವ ಜನರಲ್ಲಿ ಉಂಟುಮಾಡಿಸಿ, ಕಳವಳವನ್ನು ಉಂಟುಮಾಡುವೆನು ಮತ್ತು ನಿಮ್ಮನ್ನು ವಿರೋಧಿಸುವವರೆಲ್ಲಾ ನಿಮಗೆ ಬೆನ್ನು ತೋರಿಸುವಂತೆ ಮಾಡುವೆನು.


ತರುವಾಯ ಅವರು ಮುಂದೆ ಪ್ರಯಾಣಮಾಡಿದರು. ಆಗ ಸುತ್ತಲಿರುವ ಪಟ್ಟಣಗಳವರ ಮೇಲೆ ದೇವರ ಭಯವು ಇದ್ದುದರಿಂದ, ಅವರು ಯಾಕೋಬನ ಮಕ್ಕಳನ್ನು ಬೆನ್ನಟ್ಟಿ ಬರಲಿಲ್ಲ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು