Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಎಸ್ತೇರಳು 9:25 - ಕನ್ನಡ ಸಮಕಾಲಿಕ ಅನುವಾದ

25 ಆದರೆ ಈ ಒಳಸಂಚು ಅರಸನಿಗೆ ತಿಳಿದುಬಂದಾಗ ಹಾಮಾನನು ಯೆಹೂದ್ಯರಿಗೆ ವಿರೋಧವಾಗಿ ಯೋಚಿಸಿದ ದುರಾಲೋಚನೆಯು ಅವನ ತಲೆಯ ಮೇಲೆ ಬರುವಂತೆ ಅರಸನು ಆಜ್ಞೆಯನ್ನು ಹೊರಡಿಸಿದನು. ಅದರೊಂದಿಗೆ ಅವನ ಮಕ್ಕಳನ್ನೂ ಗಲ್ಲಿಗೇರಿಸಲು ಅರಸನು ಆಜ್ಞಾಪಿಸಿದ್ದನು;

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

25 ಇದು ಅರಸನ ಮುಂದೆ ಬಂದಾಗ ಅವನು, “ಹಾಮಾನನು ಯೆಹೂದ್ಯರಿಗೆ ವಿರುದ್ಧವಾಗಿ ಕಲ್ಪಿಸಿದ ಕುತಂತ್ರವು ಅವನ ತಲೆಯ ಮೇಲೆಯೇ ಬರಲಿ; ಅವನನ್ನೂ ಅವನ ಮಕ್ಕಳನ್ನೂ ಗಲ್ಲಿಗೆ ಹಾಕಬೇಕು” ಎಂದು ಪತ್ರದ ಮೂಲಕ ಅಪ್ಪಣೆಮಾಡಿದನಷ್ಟೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

25 ಈ ವಿಷಯ ಅರಸನ ಕಿವಿಗೆ ಬಿದ್ದಾಗ, ಅವನು, ‘ಹಾಮಾನನು ಯೆಹೂದ್ಯರ ವಿರುದ್ಧ ಯೋಚಿಸಿದ ಕೇಡು ಅವನ ತಲೆಯ ಮೇಲೆಯೇ ಬರಲಿ. ಅವನನ್ನು ಅವನ ಮಕ್ಕಳನ್ನೂ ಗಲ್ಲಿಗೇರಿಸಿರಿ,’ ಎಂದು ಅಪ್ಪಣೆಮಾಡಿದ್ದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

25 (ಇದು ಅರಸನ ಮುಂದೆ ಬಂದಾಗ ಅವನು - ಹಾಮಾನನು ಯೆಹೂದ್ಯರಿಗೆ ವಿರೋಧವಾಗಿ ಕಲ್ಪಿಸಿದ ಕುತಂತ್ರವು ಅವನ ತಲೆಯ ಮೇಲೆಯೇ ಬರಲಿ; ಅವನನ್ನೂ ಅವನ ಮಕ್ಕಳನ್ನೂ ಗಲ್ಲಿಗೆ ಹಾಕಬೇಕೆಂದು ಅಪ್ಪಣೆ ಮಾಡಿದನಷ್ಟೆ. )

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

25 ಹಾಮಾನನ ಕುತಂತ್ರವನ್ನು ಎಸ್ತೇರ್ ರಾಣಿಯು ರಾಜನ ಸಂಗಡ ಮಾತಾಡುವುದರ ಮೂಲಕ ನಿರರ್ಥಕಗೊಳಿಸಿ ಅವನಿಗೂ ಅವನ ಕುಟುಂಬಕ್ಕೂ ಮರಣವಾಗುವಂತೆ ಮಾಡಿದಳು. ಹಾಮಾನನೂ ಅವನ ಗಂಡುಮಕ್ಕಳೂ ಗಲ್ಲಿಗೇರಿಸಲ್ಪಟ್ಟರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಎಸ್ತೇರಳು 9:25
19 ತಿಳಿವುಗಳ ಹೋಲಿಕೆ  

ಅಂಥವರ ಕೇಡು ಅವರ ಮೇಲೆಯೇ ತಿರುಗುವುದು; ಅವರ ತಲೆಯ ಮೇಲೆ ಅವರ ಬಲಾತ್ಕಾರವೇ ಇಳಿಯುವುದು.


ಈ ಕಲ್ಲಿನ ಮೇಲೆ ಬೀಳುವವನು ತುಂಡುತುಂಡಾಗುವನು, ಆದರೆ ಇದೇ ಕಲ್ಲು ಯಾವನ ಮೇಲೆ ಬೀಳುವುದೋ ಅವನನ್ನು ಅದು ಜಜ್ಜಿ ಹೋಗುವಂತೆ ಮಾಡುವುದು,” ಎಂದರು.


ನಾನು ತಪ್ಪಿಸಿಕೊಂಡು ಸುರಕ್ಷಿತವಾಗಿ ಹೋಗುವಷ್ಟರಲ್ಲಿ ದುಷ್ಟರು ತಮ್ಮ ಬಲೆಗಳಲ್ಲಿಯೇ ಬೀಳಲಿ.


ನನ್ನನ್ನು ಸುತ್ತಿಕೊಂಡಿರುವವರ ತುಟಿಗಳ ಕೇಡು, ಅವರ ತಲೆಯ ಮೇಲೇ ಬರಲಿ.


ಆಗ ಅರಸನಾದ ಅಹಷ್ವೇರೋಷನು ರಾಣಿಯಾದ ಎಸ್ತೇರಳಿಗೆ, “ಯಾರು ಅವನು? ಈ ಪ್ರಕಾರ ಮಾಡಲು ಧೈರ್ಯಗೊಂಡವನು ಯಾರು? ಅವನು ಎಲ್ಲಿದ್ದಾನೆ?” ಎಂದನು.


ಮೊರ್ದೆಕೈ ಮತ್ತು ಅವನ ಜನರು ಯೆಹೂದ್ಯರೆಂದು ಹಾಮಾನನಿಗೆ ಗೊತ್ತಾದಾಗ ಮೊರ್ದೆಕೈಯನ್ನು ಮಾತ್ರ ಕೊಲ್ಲಬಾರದೆಂದು ಅವನಿಗೆ ತೋರಿತು. ಅದರ ಬದಲು ಹಾಮಾನನು ಅಹಷ್ವೇರೋಷನ ಸಮಸ್ತ ರಾಜ್ಯದಲ್ಲಿರುವ ಮೊರ್ದೆಕೈಯ ಜನರಾದ ಯೆಹೂದ್ಯರನ್ನೆಲ್ಲಾ ಸಂಹರಿಸಲು ಮಾರ್ಗವನ್ನು ಹುಡುಕಿದನು.


ಏಕೆಂದರೆ ನಾನು ಮತ್ತು ನನ್ನ ಜನರು ದುರಂತಕ್ಕೂ, ಕೊಲೆಗೂ, ಸರ್ವನಾಶಕ್ಕೂ ಮಾರಟವಾಗಿದ್ದೇವೆ. ಒಂದು ವೇಳೆ, ನಾವು ದಾಸರಾಗಿಯಾಗಲಿ, ದಾಸಿಯರಾಗಲಿ ಮಾರಾಟವಾಗಿದ್ದರೆ ನಾನು ಸುಮ್ಮನಿರುತ್ತಿದ್ದೆ. ಅಂಥ ಕಷ್ಟಕ್ಕಾಗಿ ನಾನು ಅರಸನನ್ನು ತೊಂದರೆಪಡಿಸದೆ ಸುಮ್ಮನೆ ಇದ್ದುಬಿಡುತ್ತಿದ್ದೆನು,” ಎಂದಳು.


ಯೆಹೋವ ದೇವರೇ, ದುಷ್ಟರಿಗೆ ಅವರ ಇಷ್ಟಾರ್ಥವನ್ನು ಕೊಡಬೇಡಿರಿ; ಅವರು ಉನ್ನತಕ್ಕೇರುವ ಹಾಗೆ ಅವರ ಯುಕ್ತಿಯನ್ನು ಪೂರೈಸಬೇಡಿರಿ.”


“ಆ ದಿನದಲ್ಲಿ,” ಸೇನಾಧೀಶ್ವರ ಯೆಹೋವ ದೇವರು ಪ್ರಕಟಿಸುವುದು ಏನೆಂದರೆ, “ಭದ್ರವಾದ ಸ್ಥಳದಲ್ಲಿ ಮೊಳೆಯನ್ನು ತೆಗೆದುಹಾಕಿ, ಕುಸಿದುಬೀಳುವುದು. ಮೊಳೆಯ ಮೇಲೆ ಇದ್ದ ಭಾರವೂ ತೆಗೆದುಹಾಕಲಾಗುವುದು,” ಇದು ಯೆಹೋವ ದೇವರ ನುಡಿ.


ನಾಬಾಲನು ಸತ್ತನೆಂದು ದಾವೀದನು ಕೇಳಿದಾಗ, “ನನ್ನ ನಿಂದೆಯ ವ್ಯಾಜ್ಯವನ್ನು ನಾಬಾಲನಿಂದ ವಿಚಾರಿಸಿ, ತನ್ನ ಸೇವಕನನ್ನು ಕೇಡು ಮಾಡಗೊಡದ ಹಾಗೆ ತಡೆದ ಯೆಹೋವ ದೇವರು ಸ್ತುತಿಹೊಂದಲಿ. ಏಕೆಂದರೆ ಯೆಹೋವ ದೇವರು ನಾಬಾಲನ ಕೆಟ್ಟತನವನ್ನು ಅವನ ತಲೆಯ ಮೇಲೆ ಬರಮಾಡಿದರು,” ಎಂದನು. ದಾವೀದನು ಅಬೀಗೈಲಳನ್ನು ತನಗೆ ಹೆಂಡತಿಯಾಗಿ ತೆಗೆದುಕೊಳ್ಳುವುದಕ್ಕಾಗಿ ಅವಳ ಸಂಗಡ ಮಾತನಾಡಲು ಸೇವಕರನ್ನು ಕಳುಹಿಸಿದನು.


ನೀವೇ ಆ ಅಪರಾಧಿಯನ್ನು ಖಂಡಿಸಿ ಅವನ ತಪ್ಪನ್ನು ಅವನ ತಲೆಯ ಮೇಲೆಯೇ ಹೊರಿಸಿ, ಅವನು ಅಪರಾಧಿಯೆಂದು ತೋರಿಸಿಕೊಡಿರಿ. ನಿರ್ದೋಷಿಯಾಗಿದ್ದರೆ ಅವನ ನೀತಿಯ ಫಲವನ್ನು ಅನುಗ್ರಹಿಸಿ ಅವನು ನೀತಿವಂತನೆಂದು ತೋರಿಸಿಕೊಡುವ ಹಾಗೆ ಪರಲೋಕದಲ್ಲಿರುವ ನೀವು ಅದನ್ನು ಕೇಳಿ, ನಿಮ್ಮ ಸೇವಕರ ನ್ಯಾಯವನ್ನು ತೀರಿಸಿರಿ.


ಅವರು ಮೊರ್ದೆಕೈಗೋಸ್ಕರ ಹಾಮಾನನು ಸಿದ್ಧಮಾಡಿದ್ದ ಅದೇ ಗಲ್ಲುಮರದಲ್ಲಿ ಅವನನ್ನು ನೇತುಹಾಕಿದರು. ಆಗ ಅರಸನ ಕೋಪವು ಶಾಂತವಾಯಿತು.


ನಾನು ಯೆಹೋವ ದೇವರನ್ನು ಕೊಂಡಾಡುವೆನು; ಏಕೆಂದರೆ, ಅವರು ನೀತಿಯುಳ್ಳವರು. ಮಹೋನ್ನತರಾದ ಯೆಹೋವ ದೇವರ ಹೆಸರನ್ನು ಕೀರ್ತನೆ ಮಾಡುವೆನು.


ವೈರಿಯ ಅಪರಾಧವು ಅವರ ಮೇಲೆಯೇ ತಿರುಗಿ ಬೀಳಲಿ; ಅವರ ಕೇಡಿನಲ್ಲಿ ಅವರನ್ನು ಸಂಹರಿಸುವನು; ನಮ್ಮ ದೇವರಾದ ಯೆಹೋವ ದೇವರು ಅವರನ್ನು ಸಂಹರಿಸಿ ಬಿಡುವನು.


ದುಷ್ಟನನ್ನು ಅವನ ಸ್ವಂತ ದ್ರೋಹಗಳೇ ಹಿಡಿಯುತ್ತವೆ; ತನ್ನ ಪಾಪಗಳ ಪಾಶಗಳೇ ಅವನನ್ನು ಬಂಧಿಸುತ್ತದೆ.


ಗುಂಡಿಯನ್ನು ತೋಡುವವನು ತಾನೇ ಅದರಲ್ಲಿ ಬೀಳುತ್ತಾನೆ; ಕಲ್ಲು ಹೊರಳಿಸುವವನ ಮೇಲೆಯೇ ಅದು ತಿರುಗಿ ಹೊರಳುವುದು.


“ಯೆಹೋವ ದೇವರ ದಿವಸವು ಎಲ್ಲಾ ಜನಾಂಗಗಳ ಮೇಲೆ ಸಮೀಪವಾಗಿದೆ. ನೀನು ಮಾಡಿದ ಹಾಗೆಯೇ ನಿನಗೂ ಮಾಡಲಾಗುವುದು. ನಿನ್ನ ಕಾರ್ಯಗಳು ನಿನ್ನ ತಲೆಯ ಮೇಲೆ ತಿರುಗುವುವು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು