Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಎಸ್ತೇರಳು 9:4 - ಕನ್ನಡ ಸಮಕಾಲಿಕ ಅನುವಾದ

4 ಏಕೆಂದರೆ ಮೊರ್ದೆಕೈ ಅರಮನೆಯಲ್ಲಿ ಪ್ರಮುಖನಾಗಿದ್ದನು. ಅವನ ಕೀರ್ತಿಯು ಸಮಸ್ತ ಪ್ರಾಂತಗಳಿಗೂ ಹರಡಿತು. ಈ ಮೊರ್ದೆಕೈ ಅಧಿಕವಾಗಿ ಅಧಿಕಾರವಂತನಾದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

4 ಸರ್ವ ಸಂಸ್ಥಾನಾಧಿಕಾರಿಗಳೂ, ಉಪರಾಜರೂ, ದೇಶಾಧಿಪತಿಗಳೂ ಮತ್ತು ಇತರ ರಾಜೋದ್ಯೋಗಸ್ಥರೂ ಅವನಿಗೆ ಹೆದರಿ ಯೆಹೂದ್ಯರಿಗೆ ಸಹಾಯಕರಾದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

4 ಆದುದರಿಂದ ಸಕಲ ಸಂಸ್ಥಾನಾಧಿಕಾರಿಗಳೂ ಉಪರಾಜರೂ ದೇಶಾಧಿಪತಿಗಳೂ ಮತ್ತು ಇತರ ರಾಜಸೇವಕರೂ ಅವನಿಗೆ ಭಯಪಟ್ಟು ಯೆಹೂದ್ಯರಿಗೆ ನೆರವಾದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

4 ಸರ್ವಸಂಸ್ಥಾನಾಧಿಕಾರಿಗಳೂ ಉಪರಾಜರೂ ದೇಶಾಧಿಪತಿಗಳೂ ಇತರ ರಾಜೋದ್ಯೋಗಸ್ಥರೂ ಅವನಿಗೆ ಹೆದರಿ ಯೆಹೂದ್ಯರಿಗೆ ಸಹಾಯಕರಾದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

4 ಮೊರ್ದೆಕೈ ಅರಮನೆಯಲ್ಲಿ ಅತ್ಯಂತ ಪ್ರಭಾವಶಾಲಿಯಾಗಿದ್ದನು. ಸಂಸ್ಥಾನಗಳಲ್ಲಿರುವವರೆಲ್ಲರೂ ಅವನ ಪ್ರಖ್ಯಾತಿಯ ಬಗ್ಗೆ ಕೇಳಿದ್ದರು. ದಿನೇದಿನೇ ಮೊರ್ದೆಕೈ ಬಲಶಾಲಿಯಾಗುತ್ತಾ ಬಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಎಸ್ತೇರಳು 9:4
14 ತಿಳಿವುಗಳ ಹೋಲಿಕೆ  

ಹೀಗೆಯೇ ಸೇನಾಧೀಶ್ವರ ಯೆಹೋವ ದೇವರು ದಾವೀದನ ಸಂಗಡ ಇದ್ದುದರಿಂದ ಅವನು ದಿನದಿನಕ್ಕೆ ಬಲಗೊಳ್ಳುತ್ತಾ ಇದ್ದನು.


ಸೌಲನ ಕುಟುಂಬದವರಿಗೂ ದಾವೀದನ ಕುಟುಂಬದವರಿಗೂ ಬಹು ದಿವಸ ಯುದ್ಧವು ನಡೆಯಿತು. ದಾವೀದನು ಬಲಗೊಳ್ಳುತ್ತಾ ಬಂದನು. ಆದರೆ ಸೌಲನ ಕುಟುಂಬದವರು ಬಲಹೀನರಾಗುತ್ತಾ ಹೋದರು.


ಆ ಕಾಲದಲ್ಲಿ ನಿನ್ನನ್ನು ಪೀಡಿಸುವವರನ್ನೆಲ್ಲಾ ದಂಡಿಸುವೆನು, ಕುಂಟಾದದ್ದನ್ನು ರಕ್ಷಿಸಿ, ಚದರಿಹೋದವರನ್ನು ಕೂಡಿಸುವೆನು; ಅವರು ಅವಮಾನ ಹೊಂದಿದ ದೇಶಗಳಲ್ಲೆಲ್ಲಾ ಅವರಿಗೆ ಹೊಗಳಿಕೆಯನ್ನೂ ಕೀರ್ತಿಯನ್ನೂ ಉಂಟುಮಾಡುವೆನು.


ನೀತಿವಂತರ ಮಾರ್ಗವು ಮುಂಜಾನೆಯ ಸೂರ್ಯನ ಬೆಳಕಿನಂತೆ ಇದ್ದು, ದಿನದ ಪೂರ್ಣ ಬೆಳಕಿನವರೆಗೂ ಪ್ರಕಾಶಿಸಿ ಹೊಳೆಯುತ್ತಾ ಇರುವುದು.


ನೀವು ನನ್ನ ಜನರ ಒಳಕಲಹದಿಂದ ನನ್ನನ್ನು ತಪ್ಪಿಸಿದ್ದೀರಿ; ನನ್ನನ್ನು ಜನಾಂಗಗಳಿಗೆ ನಾಯಕನನ್ನಾಗಿ ಮಾಡಿರುವಿರಿ. ನಾನು ಅರಿಯದ ಜನರು ನನಗೆ ವಿಧೇಯರಾಗುವರು.


ಅಂಥವರು ನೀರಿನ ಕಾಲುವೆಗಳ ಬಳಿಯಲ್ಲಿ ನೆಟ್ಟಿರುವ, ಮರದ ಹಾಗಿರುವರು. ಅಂಥ ಮರವು ತಕ್ಕ ಕಾಲದಲ್ಲಿ ಫಲಕೊಡುತ್ತದೆ, ಅದರ ಎಲೆ ಉದುರುವುದೇ ಇಲ್ಲ. ಅದರಂತೆ ಅವರು ಮಾಡುವ ಕಾರ್ಯವೆಲ್ಲವೂ ಸಫಲವಾಗುವುದು.


ದಾವೀದನ ಕೀರ್ತಿಯು ಸಮಸ್ತ ದೇಶಗಳಿಗೆ ಹರಡಿತು. ಯೆಹೋವ ದೇವರು ಅವನ ಭಯವನ್ನು ಸಮಸ್ತ ಜನಾಂಗಗಳ ಮೇಲೆ ಬರಮಾಡಿದರು.


“ಆದ್ದರಿಂದ ಇಸ್ರಾಯೇಲಿನ ದೇವರಾದ ಯೆಹೋವ ದೇವರು ಹೇಳುವುದೇನೆಂದರೆ, ‘ನಿನ್ನ ಮನೆಯವರೂ ನಿನ್ನ ತಂದೆಯ ಮನೆಯವರೂ ಎಂದೆಂದಿಗೂ ನನ್ನ ಸನ್ನಿಧಿಯಲ್ಲಿ ನಡೆದುಕೊಳ್ಳುವರೆಂದು ನಾನು ನಿಜವಾಗಿ ಹೇಳಿದ್ದೆನು. ಆದರೆ ಈಗ ಯೆಹೋವ ದೇವರು ಹೇಳುವುದೇನೆಂದರೆ: ನನಗೆ ಅದು ದೂರವಾಗಿರಲಿ. ಏಕೆಂದರೆ ನನ್ನನ್ನು ಸನ್ಮಾನಿಸುವವರನ್ನು ನಾನು ಸನ್ಮಾನಿಸುವೆನು. ನನ್ನನ್ನು ತಿರಸ್ಕರಿಸುವವರನ್ನು ನಾನು ತಿರಸ್ಕರಿಸುವೆನು.


ಯೆಹೋವ ದೇವರು ಯೆಹೋಶುವನ ಸಂಗಡ ಇದ್ದರು. ಅವನ ಕೀರ್ತಿ ದೇಶದಲ್ಲೆಲ್ಲಾ ಹರಡಿತು.


ಯೇಸುವಿನ ಸುದ್ದಿ ಸಿರಿಯಾ ದೇಶದಲ್ಲೆಲ್ಲಾ ಹಬ್ಬಿದ್ದರಿಂದ, ಜನರು ವಿವಿಧ ವ್ಯಾಧಿಗಳಿಂದಲೂ ತೀವ್ರ ವೇದನೆಯಿಂದಲೂ ಅಸ್ವಸ್ಥರಾದವರನ್ನೂ ದೆವ್ವ ಹಿಡಿದವರನ್ನೂ ಮೂರ್ಛಾರೋಗಿಗಳನ್ನೂ ಪಾರ್ಶ್ವವಾಯು ಪೀಡಿತರನ್ನೂ ಅವರ ಬಳಿಗೆ ಕರೆದುಕೊಂಡು ಬಂದರು; ಯೇಸು ಅವರನ್ನೆಲ್ಲಾ ಗುಣಪಡಿಸಿದರು.


ಅವರ ಆಡಳಿತದ ಶ್ರೇಷ್ಠತೆ ಮತ್ತು ಶಾಂತಿಗೆ ಅಂತ್ಯವಿಲ್ಲ. ಅವರ ಮುಖಾಂತರ ದಾವೀದನ ಸಿಂಹಾಸನದ ಆಡಳಿತವು ಅಭಿವೃದ್ಧಿಯಾಗುವುದು, ದಾವೀದನ ರಾಜ್ಯವು ಇಂದಿನಿಂದ ಯಾವಾಗಲೂ ನೀತಿನ್ಯಾಯಗಳ ಮೂಲಕ ಸ್ಥಾಪಿತವಾಗಿ ಸ್ಥಿರಗೊಳ್ಳುವುದು, ಸೇನಾಧೀಶ್ವರ ಯೆಹೋವ ದೇವರ ಅನುಗ್ರಹವು ಇದನ್ನು ನೆರವೇರಿಸುವುದು.


ಅವನ ಅಧಿಕಾರದ ಕ್ರಿಯೆಗಳೂ ಅವನ ಪರಾಕ್ರಮವೂ ಅರಸನು ಮೊರ್ದೆಕೈಯನ್ನು ಹೆಚ್ಚಿಸಿದ ಮಹತ್ತಿನ ಪ್ರಸಿದ್ಧಿಯೂ ಮೇದ್ಯ ಮತ್ತು ಪಾರಸಿಯ ಅರಸರ ಇತಿಹಾಸಗಳ ಗ್ರಂಥದಲ್ಲಿ ಬರೆದಿರುತ್ತವೆ.


ಇದಲ್ಲದೆ ಯೆಹೋವ ದೇವರು ಈಜಿಪ್ಟಿನವರ ದೃಷ್ಟಿಯಲ್ಲಿ ಜನರಿಗೆ ದಯೆ ದೊರಕುವಂತೆ ಮಾಡಿದರು. ಇದಲ್ಲದೆ ಮೋಶೆಯು ಈಜಿಪ್ಟ್ ದೇಶದಲ್ಲಿಯೂ ಫರೋಹನ ಅಧಿಕಾರಿಗಳ ದೃಷ್ಟಿಯಲ್ಲಿಯೂ ಜನರ ದೃಷ್ಟಿಯಲ್ಲಿಯೂ ಬಹಳ ಗೌರವ ಹೊಂದಿದನು.


ಅವರು ಯೆಹೋವ ದೇವರ ಆಲಯದಲ್ಲಿ ನೆಟ್ಟ ಸಸಿಗಳಂತಿರುವರು. ನಮ್ಮ ದೇವರ ಅಂಗಳಗಳಲ್ಲಿ ಅವರು ವೃದ್ಧಿ ಆಗುವರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು