Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಎಸ್ತೇರಳು 9:5 - ಕನ್ನಡ ಸಮಕಾಲಿಕ ಅನುವಾದ

5 ಹೀಗೆ ಯೆಹೂದ್ಯರು ತಮ್ಮ ಶತ್ರುಗಳೆಲ್ಲರನ್ನು ಸೋಲಿಸಿ, ಖಡ್ಗದಿಂದ ಸಂಹರಿಸಿದರು. ತಮ್ಮನ್ನು ಹಗೆಮಾಡುತ್ತಿದ್ದವರಿಗೆ ತಮ್ಮ ಇಷ್ಟ ಬಂದ ಹಾಗೆ ಮಾಡಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

5 ಹೀಗೆ ಯೆಹೂದ್ಯರು ತಮ್ಮ ಎಲ್ಲಾ ವೈರಿಗಳನ್ನು ಸೋಲಿಸಿ, ಕತ್ತಿಯಿಂದ ಹೊಡೆದು ಕೊಂದು ನಿರ್ನಾಮಗೊಳಿಸಿದರು; ತಮ್ಮ ವೈರಿಗಳನ್ನು ಇಷ್ಟವಿದ್ದಂತೆ ಮಾಡಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

5 ಹೀಗಾಗಿ ಯೆಹೂದ್ಯರು ತಮ್ಮ ವೈರಿಗಳನ್ನೆಲ್ಲಾ ಸೋಲಿಸಿ, ಕತ್ತಿಯಿಂದ ಇರಿದು ಕೊಂದು, ನಿರ್ನಾಮಗೊಳಿಸಿದರು. ತಮ್ಮನ್ನು ಹಗೆಮಾಡುತ್ತಿದ್ದ ಶತ್ರುಗಳಿಗೆ ತಮ್ಮ ಇಷ್ಟಾನುಸಾರ ಮಾಡಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

5 ಹೀಗೆ ಯೆಹೂದ್ಯರು ತಮ್ಮ ಎಲ್ಲಾ ವೈರಿಗಳನ್ನು ಸೋಲಿಸಿ ಕತ್ತಿಯಿಂದ ಹೊಡೆದು ಕೊಂದು ನಿರ್ನಾಮಗೊಳಿಸಿದರು; ತಮ್ಮ ಹಗೆಗಳನ್ನು ಇಷ್ಟವಿದ್ದಂತೆ ಮಾಡಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

5 ತಮ್ಮ ಶತ್ರುಗಳನ್ನೆಲ್ಲಾ ಯೆಹೂದ್ಯರು ಸೋಲಿಸಿ ತಮ್ಮ ಖಡ್ಗಗಳಿಂದ ನಾಶಮಾಡಿದರು; ತಮ್ಮನ್ನು ದ್ವೇಷಿಸುತ್ತಿದ್ದವರನ್ನು ತಮಗಿಷ್ಟ ಬಂದಂತೆ ಮಾಡಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಎಸ್ತೇರಳು 9:5
11 ತಿಳಿವುಗಳ ಹೋಲಿಕೆ  

ನಿಮ್ಮನ್ನು ಸಂಕಟ ಪಡಿಸುವವರಿಗೆ ದೇವರು ಪ್ರತಿಯಾಗಿ ಸಂಕಟವನ್ನೂ ಮತ್ತು


ಆದ್ದರಿಂದ ಅವರ ಮಕ್ಕಳನ್ನು ಕ್ಷಾಮಕ್ಕೆ ಕೊಡು. ಖಡ್ಗದ ಬಲದಿಂದ ಅವರ ರಕ್ತವನ್ನು ಸುರಿದುಬಿಡು. ಅವರ ಹೆಂಡತಿಯರು ಮಕ್ಕಳಿಲ್ಲದೆ ವಿಧವೆಯರಾಗಲಿ. ಅವರ ಗಂಡಸರು ಹತರಾಗಲಿ. ಅವರ ಯೌವನಸ್ಥರು ಯುದ್ಧದಲ್ಲಿ ಖಡ್ಗಕ್ಕೆ ತುತ್ತಾಗಲಿ.


ಹನ್ನೆರಡನೆಯ ತಿಂಗಳಾದ ಆದಾರ್ ಮಾಸದ ಹದಿಮೂರನೆಯ ದಿನದಲ್ಲಿ, ಹಿರಿಯರೂ, ಕಿರಿಯರೂ, ಮಕ್ಕಳೂ, ಮಹಿಳೆಯರೂ, ಒಟ್ಟು ಎಲ್ಲಾ ಯೆಹೂದ್ಯರನ್ನು ಒಂದೇ ದಿನದಲ್ಲಿ ಕೊಂದುಹಾಕುವುದಕ್ಕೂ ನಾಶಮಾಡುವುದಕ್ಕೂ ಅವರ ಆಸ್ತಿಯನ್ನು ಕೊಳ್ಳೆ ಹೊಡೆಯುವದಕ್ಕೂ ಅರಸನ ಎಲ್ಲಾ ಪ್ರಾಂತಗಳಿಗೆ ಅಂಚೆಯವರ ಮೂಲಕ ಪತ್ರಗಳನ್ನು ಕಳುಹಿಸಲಾಯಿತು.


ಶೂಷನಿನ ಅರಮನೆಯಲ್ಲಿ ಯೆಹೂದ್ಯರು ಐನೂರು ಮಂದಿಗೆ ಮರಣದಂಡನೆ ವಿಧಿಸಿದರು.


ಹಾಗೆಯೇ ಇಸ್ರಾಯೇಲರು ಹೋಗಿ, ಆ ದೇಶವನ್ನು ಸ್ವಾಧೀನಮಾಡಿಕೊಂಡರು. ನೀವು ಆ ದೇಶದ ನಿವಾಸಿಗಳಾದ ಕಾನಾನ್ಯರನ್ನು ಅವರ ಮುಂದೆ ಕುಗ್ಗಿಸಿ, ಅವರಿಗೆ ಸರಿತೋರಿದ ಪ್ರಕಾರ ಮಾಡುವುದಕ್ಕೆ ಅವರನ್ನೂ, ಅವರ ಅರಸರನ್ನೂ, ದೇಶದ ಜನರನ್ನೂ ಅವರ ಕೈಯಲ್ಲಿ ಒಪ್ಪಿಸಿಕೊಟ್ಟಿರಿ.


ಅರಸನಾದ ಅಹಷ್ವೇರೋಷನ ಆಜ್ಞೆಯ ಪ್ರಕಾರ, ಸಮಸ್ತ ಪ್ರಾಂತಗಳ ಆಯಾ ಪಟ್ಟಣಗಳಲ್ಲಿರುವ ಎಲ್ಲಾ ಯೆಹೂದ್ಯರು ಒಟ್ಟಾಗಿ ಸೇರಿ ಪ್ರಾಣರಕ್ಷಣೆ ಮಾಡಿಕೊಳ್ಳುವ ಹಕ್ಕನ್ನು ಕೊಡಲಾಗಿತ್ತು. ಯಾವುದೇ ದೇಶದವರು ಅಥವಾ ಪ್ರಾಂತದವರು ಆಯುಧಗಳೊಡನೆ ಅವರಿಗೆ ವಿರೋಧವಾಗಿ ಎದ್ದು ಅವರನ್ನಾಗಲಿ, ಅವರ ಮಹಿಳೆಯರನ್ನಾಗಲಿ, ಅವರ ಮಕ್ಕಳನ್ನಾಗಲಿ ದಾಳಿಮಾಡಲು ಬಂದರೆ, ಅಂಥವರನ್ನು ಕೊಂದುಹಾಕುವುದಕ್ಕೂ ನಾಶಮಾಡುವುದಕ್ಕೂ ವೈರಿಯ ಆಸ್ತಿಯನ್ನು ಕೊಳ್ಳೆ ಹೊಡೆಯುವುದಕ್ಕೂ ಅಧಿಕಾರಕೊಡಲಾಗಿತ್ತು.


ನೀತಿವಂತರು ಖರ್ಜೂರ ಮರದ ಹಾಗೆ ವೃದ್ಧಿಯಾಗುವರು. ಅವರು ಲೆಬನೋನಿನಲ್ಲಿರುವ ದೇವದಾರಿನ ಹಾಗೆ ಬೆಳೆಯುವರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು