Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಓಬದ್ಯ 1:1 - ಕನ್ನಡ ಸಮಕಾಲಿಕ ಅನುವಾದ

1 ಓಬದ್ಯನ ದರ್ಶನವು. ಸಾರ್ವಭೌಮ ಯೆಹೋವ ದೇವರು ಎದೋಮನ್ನು ಕುರಿತು ಹೀಗೆ ಹೇಳುತ್ತಾರೆ: ಯೆಹೋವ ದೇವರಿಂದ ಸುದ್ದಿಯನ್ನು ಕೇಳಿದ್ದೇವೆ. ಅವರು ದೂತನ ಮೂಲಕ ಜನಾಂಗಗಳಿಗೆ ಹೀಗೆ ಹೇಳಿ ಕಳುಹಿಸಿದ್ದಾರೆ: “ಏಳಿರಿ, ಅದಕ್ಕೆ ವಿರೋಧವಾಗಿ ಯುದ್ಧಕ್ಕೆ ಹೋಗೋಣ!”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

1 ಓಬದ್ಯನಿಗಾದ ದೈವದರ್ಶನ. ಕರ್ತನಾದ ಯೆಹೋವನು ಎದೋಮನ್ನು ಕುರಿತು ಹೀಗೆ ನುಡಿಯುತ್ತಾನೆ: ಯೆಹೋವನಿಂದ ಬಂದ ಸಮಾಚಾರವನ್ನು ಕೇಳಿದ್ದೇವೆ. ಆತನು ದೂತನ ಮೂಲಕ ಜನಾಂಗಗಳಿಗೆ ಹೀಗೆ ಹೇಳಿ ಕಳುಹಿಸಿದ್ದಾನೆ, “ಹೊರಡಿರಿ! ಯುದ್ಧಕ್ಕೆ ಹೊರಟು ಎದೋಮಿನ ಮೇಲೆ ಬೀಳೋಣ”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

1 ಓಬದ್ಯನು ಕಂಡ ದೈವದರ್ಶನ: ಎದೋಮ್ ನಾಡಿನ ವಿಷಯವಾಗಿ ಸ್ವಾಮಿ ಸರ್ವೇಶ್ವರ ಇಂತೆನ್ನುತ್ತಾರೆ: “ಹೊರಡಿರಿ, ಎದೋಮಿನ ಮೇಲೆ ಯುದ್ಧಮಾಡಲು ತೆರಳೋಣ” ಹೀಗೆಂದು ತಮ್ಮ ದೂತನ ಮುಖಾಂತರ ಸರ್ವೇಶ್ವರ ರಾಷ್ಟ್ರಗಳಿಗೆ ಹೇಳಿಕಳುಹಿಸಿದ್ದಾರೆ. ಅವರಿಂದ ಬಂದ ಈ ಸಮಾಚಾರವನ್ನು ನಾವು ಕೇಳಿದ್ದೇವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

1 ಓಬದ್ಯನಿಗಾದ ದೈವದರ್ಶನ. ಕರ್ತನಾದ ಯೆಹೋವನು ಎದೋವಿುನ ವಿಷಯವಾಗಿ ನುಡಿದ ವಾಕ್ಯ. ಯೆಹೋವನಿಂದ ಬಂದ ಸಮಾಚಾರವನ್ನು ಕೇಳಿದ್ದೇವೆ; ಆತನು ದೂತನ ಮೂಲಕ ಜನಾಂಗಗಳಿಗೆ ಹೀಗೆ ಹೇಳಿಕಳುಹಿಸಿದ್ದಾನೆ - ಹೊರಡಿರಿ, ಯುದ್ಧಕ್ಕೆ ಹೊರಟು ಎದೋವಿುನ ಮೇಲೆ ಬೀಳೋಣ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

1 ಒಬದ್ಯನಿಗೆ ಆದ ದೈವದರ್ಶನ. ನನ್ನ ಒಡೆಯನಾದ ಯೆಹೋವನು ಎದೋಮಿನ ಬಗ್ಗೆ ಹೀಗೆ ಹೇಳುತ್ತಾನೆ: ದೇವರಾದ ಯೆಹೋವನಿಂದ ನಾವು ಒಂದು ಸುದ್ಧಿ ಕೇಳಿದೆವು. ಒಬ್ಬ ಸಂದೇಶದೂತನು ಜನಾಂಗಗಳ ಕಡೆಗೆ ಕಳುಹಿಸಲ್ಪಟ್ಟನು. ಅವನು ಹೇಳಿದ್ದೇನೆಂದರೆ, “ಬನ್ನಿ, ನಾವು ಎದೋಮಿಗೆ ವಿರುದ್ಧವಾಗಿ ಯುದ್ಧಮಾಡೋಣ.”

ಅಧ್ಯಾಯವನ್ನು ನೋಡಿ ನಕಲು ಮಾಡಿ




ಓಬದ್ಯ 1:1
28 ತಿಳಿವುಗಳ ಹೋಲಿಕೆ  

ಈಜಿಪ್ಟ್ ಹಾಳಾಗುವುದು. ಎದೋಮು ಹಾಳಾದ ಮರುಭೂಮಿಯಾಗುವುದು. ಏಕೆಂದರೆ ಅವರು ಯೆಹೂದದ ಜನರನ್ನು ಬಲಾತ್ಕಾರ ಮಾಡಿ, ತಮ್ಮ ದೇಶದಲ್ಲಿ ಅಪರಾಧವಿಲ್ಲದ ರಕ್ತವನ್ನು ಚೆಲ್ಲಿದರು.


ಏಕೆಂದರೆ ಅವನ ಪ್ರಧಾನರು ಚೋವನಿನಲ್ಲಿ ಇದ್ದರು. ಅವನ ರಾಯಭಾರಿಗಳು ಹಾನೇಸಿಗೆ ಬಂದಿದ್ದಾರೆ.


ದೂಮ ವಿಷಯವಾದ ಪ್ರವಾದನೆ: ಸೇಯೀರಿನಿಂದ ನನ್ನನ್ನು ಯಾರೋ ಹೀಗೆ ಕರೆಯುತ್ತಿದ್ದಾರೆ, “ಕಾವಲುಗಾರನೇ, ಈಗ ರಾತ್ರಿ ಎಷ್ಟು ಕಳೆಯಿತು? ಕಾವಲುಗಾರನೇ, ರಾತ್ರಿ ಎಷ್ಟು ಕಳೆಯಿತು?”


ಯೆರೂಸಲೇಮು ಬಿದ್ದುಹೋದ ದಿವಸದಲ್ಲಿ, “ಹಾಳುಮಾಡಿರಿ, ಅದರ ಅಸ್ತಿವಾರದವರೆಗೆ ಹಾಳುಮಾಡಿರಿ,” ಎಂದು ಹೇಳಿದ ಎದೋಮಿನವರನ್ನು ಯೆಹೋವ ದೇವರೇ ಜ್ಞಾಪಕಮಾಡಿಕೊಳ್ಳಿರಿ.


ಇದಲ್ಲದೆ ಯುದ್ಧಗಳನ್ನೂ, ಯುದ್ಧಗಳ ಸುದ್ದಿಗಳನ್ನೂ ನೀವು ಕೇಳುವಾಗ ಕಳವಳಪಡಬೇಡಿರಿ. ಏಕೆಂದರೆ ಇವೆಲ್ಲವು ಸಂಭವಿಸುವುದು ಅಗತ್ಯ. ಆದರೆ ಇದು ಇನ್ನೂ ಅಂತ್ಯವಲ್ಲ.


ಯುದ್ಧಗಳನ್ನೂ ಯುದ್ಧಗಳ ಸುದ್ದಿಗಳನ್ನೂ ನೀವು ಕೇಳುವಿರಿ, ಆದರೆ ನೀವು ಕಳವಳಗೊಳ್ಳದಂತೆ ನೋಡಿಕೊಳ್ಳಿರಿ. ಏಕೆಂದರೆ ಇವೆಲ್ಲವು ಸಂಭವಿಸುವುದು ಅಗತ್ಯ. ಆದರೆ ಇದು ಇನ್ನೂ ಅಂತ್ಯವಲ್ಲ.


ಮಾರ್ಗ ತೆರೆಯುವಾತನು ಅವರ ಮುಂದೆ ಹೋಗುವನು. ಅವರು ಬಾಗಿಲು ತೆರೆದು ಹೊರಗೆ ಹೋಗುವರು. ಅವರ ಅರಸನು ಅವರ ಮುಂದೆ ಹಾದು ಹೋಗುತ್ತಾನೆ. ಯೆಹೋವ ದೇವರು ಅವರ ಮುಂದಾಳತ್ವವನ್ನು ವಹಿಸುವರು.”


ನಿಮ್ಮ ಹೃದಯವು ಕುಂದದ ಹಾಗೆ ದೇಶದಲ್ಲಿ ಕಿವಿಗೆ ಬೀಳುವ ಸುದ್ದಿಗೆ ನೀವು ಭಯಪಡದ ಹಾಗೆ, ಒಂದು ವರ್ಷದಲ್ಲಿ ಒಂದು ಸುದ್ದಿಯೂ ಇನ್ನೊಂದು ವರ್ಷದಲ್ಲಿ ಇನ್ನೊಂದು ಸುದ್ದಿಯೂ ಬರುವುದು. ದೇಶದಲ್ಲಿ ಬಲಾತ್ಕಾರವಿರುವುದು, ಆಳುವವನು ಆಳುವವನಿಗೆ ವಿರೋಧವಾಗಿರುವನು.


ಎದೋಮಿಗೂ, ಮೋವಾಬಿಗೂ, ಅಮ್ಮೋನ್ಯರಿಗೂ,


ಆಗ ನಾನು ಪಾತ್ರೆಯನ್ನು ಯೆಹೋವ ದೇವರ ಕೈಯಿಂದ ತೆಗೆದುಕೊಂಡು, ಯೆಹೋವ ದೇವರು ನನ್ನನ್ನು ಕಳುಹಿಸಿದ ಎಲ್ಲಾ ಜನಾಂಗಗಳಿಗೆ ಕುಡಿಸಿದೆನು.


ಕಾವಲುಗಾರನು ಹೀಗೆ ಉತ್ತರಿಸಿದನು, “ಉದಯವು ಬರುತ್ತದೆ, ರಾತ್ರಿಯೂ ಬರುತ್ತದೆ. ವಿಚಾರಿಸಬೇಕಾದರೆ ವಿಚಾರಿಸಿರಿ, ತಿರುಗಿ ಬನ್ನಿರಿ.”


ಏಸಾವನು ಯಾಕೋಬನಿಗೆ, “ಆ ಕೆಂಪಾದ ಪದಾರ್ಥವನ್ನು ತಿನ್ನುವುದಕ್ಕೆ ನನಗೆ ಕೊಡು, ನಾನು ದಣಿದಿದ್ದೇನೆ,” ಎಂದನು. ಆದ್ದರಿಂದ ಅವನಿಗೆ, ಎದೋಮ್, ಎಂದು ಹೆಸರಾಯಿತು.


ಹೀಗೆ ಎದೋಮನು ಎಂಬ ಏಸಾವನು ಸೇಯೀರ್ ಪರ್ವತದಲ್ಲಿ ವಾಸವಾಗಿದ್ದನು.


ಸೇಯೀರ್ ಪರ್ವತದಲ್ಲಿರುವ ಎದೋಮ್ಯರ ತಂದೆ ಏಸಾವನ ವಂಶಾವಳಿಗಳು ಇವೇ:


ಯೆಹೋವ ದೇವರ ವಾಕ್ಯವು ನನಗೆ ಬಂದಿತು,


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು