Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಓಬದ್ಯ 1:13 - ಕನ್ನಡ ಸಮಕಾಲಿಕ ಅನುವಾದ

13 ನನ್ನ ಜನರ ಆಪತ್ತಿನ ದಿವಸದಲ್ಲಿ ಅವರ ದ್ವಾರಗಳ ಮೂಲಕ ಪ್ರವೇಶಿಸಬಾರದಿತ್ತು. ಹೌದು, ನೀನು ಅವರ ಆಪತ್ತಿನ ದಿವಸದಲ್ಲಿ ಅವರನ್ನು ಕೀಳು ದೃಷ್ಟಿಯಿಂದ ನೋಡಬಾರದಾಗಿತ್ತು. ಅವರ ಆಪತ್ತಿನ ದಿವಸದಲ್ಲಿ ಅವರ ಆಸ್ತಿಯ ಮೇಲೆ ಕೈ ಹಾಕಬಾರದಾಗಿತ್ತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

13 ನನ್ನ ಜನರ ವಿಪತ್ಕಾಲದಲ್ಲಿ ಅವರ ಪುರದ್ವಾರದೊಳಗೆ ಪ್ರವೇಶಿಸಬಾರದಾಗಿತ್ತು, ಅವರ ವಿಪತ್ಕಾಲದಲ್ಲಿ ಅವರ ಕೇಡಿಗೆ ನಿನ್ನಂಥವನ ಕಣ್ಣು ಅರಳಬಾರದಾಗಿತ್ತು. ಅವರ ವಿಪತ್ಕಾಲದಲ್ಲಿ ಅವರ ಆಸ್ತಿಯ ಮೇಲೆ ನೀನು ಕೈಹಾಕಬಾರದಾಗಿತ್ತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

13 ನನ್ನ ಜನರ ಆಪತ್ಕಾಲದಲ್ಲಿ ನೀನು ಅವರ ಪುರದ್ವಾರದೊಳಗೆ ಪ್ರವೇಶಿಸಬಾರದಿತ್ತು. ಅವರ ಸೊತ್ತಿಗೆ ನೀನು ಕೈಹಾಕಬಾರದಿತ್ತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

13 ನನ್ನ ಜನರ ವಿಪತ್ಕಾಲದಲ್ಲಿ ಅವರ ಪುರದ್ವಾರದೊಳಗೆ ಪ್ರವೇಶಿಸಬಾರದಾಗಿತ್ತು; ಅವರ ವಿಪತ್ಕಾಲದಲ್ಲಿ ಅವರ ಕೇಡಿಗೆ ನಿನ್ನಂಥವನ ಕಣ್ಣು ಅರಳಬಾರದಾಗಿತ್ತು; ಅವರ ವಿಪತ್ಕಾಲದಲ್ಲಿ ಅವರ ಸೊತ್ತಿಗೆ ನೀನು ಕೈಹಾಕಬಾರದಾಗಿತ್ತು;

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

13 ನನ್ನ ಜನರ ನಗರದ ಬಾಗಿಲನ್ನು ನೀನು ಪ್ರವೇಶಿಸಿ ಅವರ ತೊಂದರೆಗಳನ್ನು ನೋಡಿ ನೀನು ಹಾಸ್ಯ ಮಾಡಿದೆ. ನೀನು ಹಾಗೆ ಮಾಡಬಾರದಾಗಿತ್ತು. ಅವರು ಸಂಕಟಪಡುತ್ತಿರುವಾಗ ನೀನು ಅವರ ಐಶ್ವರ್ಯವನ್ನು ಸೂರೆಮಾಡಿದೆ. ನೀನು ಹಾಗೆ ಮಾಡಬಾರದಿತ್ತು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಓಬದ್ಯ 1:13
9 ತಿಳಿವುಗಳ ಹೋಲಿಕೆ  

ನಿಶ್ಚಿಂತೆಯುಳ್ಳವರಾಗಿರುವ ಇತರ ರಾಷ್ಟ್ರಗಳ ಮೇಲೆ ನಾನು ಬಹಳ ಕೋಪವಾಗಿದ್ದೇನೆ. ಆದರೆ ಯೆರೂಸಲೇಮಿನ ಮೇಲೆ ನಾನು ಸ್ವಲ್ಪ ಮಾತ್ರ ಸಿಟ್ಟುಗೊಂಡಿರಲು, ಅವರು ಸಂಕಟಕ್ಕೆ ಇನ್ನು ಹೆಚ್ಚು ಕೇಡು ಕೂಡಿಸಿದರು.


“ ‘ಯೆಹೋವ ದೇವರು ಅವುಗಳಲ್ಲಿದ್ದರೂ ಈ ಎರಡು ಜನಾಂಗಗಳೂ ಈ ಎರಡು ರಾಜ್ಯಗಳೂ ನನ್ನ ವಶವಾಗುವುವು. ಎಂದೂ ನೀನು ಹೇಳಿದ್ದರಿಂದ ನಾವು ಅವುಗಳನ್ನು ವಶಮಾಡಿಕೊಳ್ಳುತ್ತೇವೆ.


“ ‘ನೀನು ಇಸ್ರಾಯೇಲರ ಮೇಲೆ ದೀರ್ಘ ದ್ವೇಷವಿಟ್ಟು ಅವರ ಅಪರಾಧದ ಕಾಲದಲ್ಲಿ ಅವರನ್ನು ಖಡ್ಗದ ಬಾಯಿಗೆ ಗುರಿಮಾಡಿದ ಕಾರಣ ಅವರ ಶಿಕ್ಷೆಯು ತಪ್ಪದು.


ನನ್ನ ಎಲುಬುಗಳನ್ನೆಲ್ಲಾ ಎಣಿಸುವಂತಾಗಿದೆ; ಅವರು ನನ್ನನ್ನು ಕಂಡು ಹಿಗ್ಗುತ್ತಾರೆ.


ಒಂದು ವೇಳೆ ಯೆಹೋವ ದೇವರು ನನ್ನ ಕಷ್ಟವನ್ನು ಕಂಡು, ಈ ದಿನದಲ್ಲಿ ಅವನು ಮಾಡಿದ ಶಾಪಕ್ಕೆ ಪ್ರತಿಯಾಗಿ, ನನಗೆ ಒಳ್ಳೆಯದನ್ನು ಮಾಡಬಹುದು,” ಎಂದನು.


ಅದರೊಳಗಿರುವ ಅದರ ಸಂಬಳದವರು ಕೊಬ್ಬಿದ ಕರುಗಳಂತಿದ್ದಾರೆ; ಅವರು ಸಹ ಹಿಂದಕ್ಕೆ ತಿರುಗಿಕೊಂಡು ಏಕವಾಗಿ ಓಡಿಹೋಗುತ್ತಾರೆ; ಅವರು ನಿಲ್ಲಲಿಲ್ಲ; ಏಕೆಂದರೆ ಅವರ ಆಪತ್ತಿನ ದಿವಸವೂ, ಅವರ ವಿಚಾರಣೆಯ ಕಾಲವೂ ಅವರ ಮೇಲೆ ಬಂತು.


ಸಾರ್ವಭೌಮ ಯೆಹೋವ ದೇವರು ಹೀಗೆ ಹೇಳುತ್ತಾರೆ: ಏಕೆಂದರೆ ನಿನ್ನ ಶತ್ರುವು ನಿನಗೆ ವಿರೋಧವಾಗಿ, “ಆಹಾ, ಪೂರ್ವದ ಉತ್ತಮ ಸ್ಥಳಗಳು ನಮ್ಮ ಸೊತ್ತಾದವು,” ಎಂದು ಹೇಳುವರು. ’


ಆದ್ದರಿಂದ ನೀನು ಪ್ರವಾದಿಸಿ ಹೀಗೆ ಹೇಳು, ‘ಸಾರ್ವಭೌಮ ಯೆಹೋವ ದೇವರು ಹೀಗೆ ಹೇಳುತ್ತಾರೆ: ಅವರು ನಿನ್ನನ್ನು ಹಾಳು ಮಾಡಿ ಎಲ್ಲಾ ಕಡೆಗಳಿಂದಲೂ ನಿನ್ನನ್ನು ತುಳಿದುಬಿಟ್ಟರು. ನೀವು ಇತರ ಜನಾಂಗಗಳಲ್ಲಿ ಉಳಿದವರ ವಶವಾಗಿದ್ದು ಹರಟೆಗಾರರ ಬಾಯಿಗೆ ಬಿದ್ದು ಜನರ ನಿಂದೆಗೆ ಗುರಿಯಾಗಿದ್ದೀರಿ.


“ವೈರಿಯ ನಾಶಕ್ಕೆ ನಾನು ಸಂತೋಷಪಟ್ಟು, ವೈರಿಗೆ ಕೇಡು ಬಂದಾಗ ಹಿಗ್ಗಿಕೊಂಡು ಗರ್ವಪಟ್ಟೆನೋ?


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು