Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಓಬದ್ಯ 1:19 - ಕನ್ನಡ ಸಮಕಾಲಿಕ ಅನುವಾದ

19 ದಕ್ಷಿಣದವರು ಏಸಾವನ ಬೆಟ್ಟವನ್ನೂ ಬಯಲಿನವರು ಫಿಲಿಷ್ಟಿಯರ ದೇಶವನ್ನೂ ಸ್ವತಂತ್ರಿಸಿಕೊಳ್ಳುವರು. ಎಫ್ರಾಯೀಮಿನ ಹೊಲಗಳನ್ನು ಸಮಾರ್ಯದ ಹೊಲಗಳನ್ನು ಸಹ ಸ್ವಾಧೀನಮಾಡಿಕೊಳ್ಳುವರು ಬೆನ್ಯಾಮೀನನು ಗಿಲ್ಯಾದನ್ನು ವಶಪಡಿಸಿಕೊಳ್ಳುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

19 ಆಗ ದಕ್ಷಿಣ ಪ್ರಾಂತ್ಯದವರು ಏಸಾವಿನ ಪರ್ವತವನ್ನು ಸ್ವಾಧೀನಮಾಡಿಕೊಳ್ಳುವರು, ಇಳಕಲಿನ ಪ್ರದೇಶದವರು ಫಿಲಿಷ್ಟಿಯರನ್ನೂ, ಎಫ್ರಾಯೀಮಿನ ಭೂಮಿಯನ್ನೂ ಮತ್ತು ಸಮಾರ್ಯದ ನೆಲವನ್ನೂ ವಶಮಾಡಿಕೊಳ್ಳುವರು. ಬೆನ್ಯಾಮೀನಿನವರು ಗಿಲ್ಯಾದನ್ನು ಸ್ವತಂತ್ರಿಸಿಕೊಳ್ಳುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

19 ಆಗ ದಕ್ಷಿಣವಲಯದವರು ಏಸಾವಿನ ಪರ್ವತವನ್ನು ಸ್ವಾಧೀನಪಡಿಸಿಕೊಳ್ಳುವರು. ಪಶ್ಚಿಮದ‌ ಬಯಲು ಸೀಮೆಯವರು ಫಿಲಿಷ್ಟಿಯವನ್ನೂ ಎಫ್ರಯಿಮ್ ಮತ್ತು ಸಮಾರ್ಯದ ಭೂಮಿಯನ್ನೂ ವಶಪಡಿಸಿಕೊಳ್ಳುವರು. ಬೆನ್ಯಾಮಿನ ವಂಶಜರು ಗಿಲ್ಯಾದನ್ನು ಸ್ವತಂತ್ರಿಸಿಕೊಳ್ಳುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

19 ಆಗ ದಕ್ಷಿಣಪ್ರಾಂತದವರು ಏಸಾವಿನ ಪರ್ವತವನ್ನು ಸ್ವಾಧೀನಮಾಡಿಕೊಳ್ಳುವರು; ಇಳಕಲಿನ ಪ್ರದೇಶದವರು ಫಿಲಿಷ್ಟಿಯವನ್ನೂ ಎಫ್ರಾಯೀವಿುನ ಭೂವಿುಯನ್ನೂ ಸಮಾರ್ಯದ ನೆಲವನ್ನೂ ವಶಮಾಡಿಕೊಳ್ಳುವರು; ಬೆನ್ಯಾಮೀನಿನವರು ಗಿಲ್ಯಾದನ್ನು ಸ್ವತಂತ್ರಿಸಿಕೊಳ್ಳುವರು;

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

19 ಆಗ ನೆಗೆವಿನ ಜನರು ಏಸಾವಿನ ಪರ್ವತಗಳಲ್ಲಿ ವಾಸಿಸುವರು. ಬೆಟ್ಟದ ಕೆಳಗೆ ವಾಸಿಸುವವರು ಫಿಲಿಷ್ಟಿಯರ ದೇಶವನ್ನು ಆಕ್ರಮಿಸುವರು. ಎಫ್ರಾಯೀಮ್ ಮತ್ತು ಸಮಾರ್ಯದ ಜನರು ಜೀವಿಸುವರು. ಗಿಲ್ಯಾದ್ ಪ್ರಾಂತ್ಯವು ಬೆನ್ಯಾಮೀನರಿಗೆ ಸೇರುವದು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಓಬದ್ಯ 1:19
33 ತಿಳಿವುಗಳ ಹೋಲಿಕೆ  

ಆಗ ಅವರು ಎದೋಮಿನ ಮಿಕ್ಕ ಭಾಗವನ್ನೂ, ನನ್ನ ಹೆಸರಿನಿಂದ ಕರೆಯಲಾಗುವ ಎಲ್ಲಾ ಜನಾಂಗಗಳನ್ನೂ ಸ್ವಾಧೀನ ಮಾಡಿಕೊಳ್ಳುವೆನು, ಎಂಬುದಾಗಿ ಇದನ್ನು ಮಾಡುವವರಾದ ಯೆಹೋವ ದೇವರು ಹೇಳುತ್ತಾರೆ.


ಬೆನ್ಯಾಮೀನನ ದೇಶದಲ್ಲಿಯೂ, ಯೆರೂಸಲೇಮಿನ ಪ್ರದೇಶಗಳಲ್ಲಿಯೂ, ಯೆಹೂದದ ಪಟ್ಟಣಗಳಲ್ಲಿಯೂ, ದಕ್ಷಿಣ ಪಟ್ಟಣಗಳಲ್ಲಿಯೂ ಹೊಲಗಳನ್ನು ಹಣಕ್ಕೆ ಕೊಂಡುಕೊಂಡು, ಪತ್ರಗಳನ್ನು ಬರೆದು ಮುದ್ರೆಹಾಕಿ, ಸಾಕ್ಷಿಗಳನ್ನು ಇಟ್ಟುಕೊಳ್ಳುವರು. ಏಕೆಂದರೆ ನಾನು ಅವರ ಸೆರೆಯಿಂದ ಹಿಂದಿರುಗುವಂತೆ ಮಾಡುವೆನು,” ಎಂದು ಯೆಹೋವ ದೇವರು ನುಡಿಯುತ್ತಾರೆ.


ನಾನು ನಿಮ್ಮ ತಂದೆಗಳಿಗೆ ಕೊಟ್ಟ ದೇಶದಲ್ಲಿ ವಾಸಿಸುವಿರಿ; ನೀವು ನನ್ನ ಜನರಾಗಿರುವಿರಿ. ನಾನು ನಿಮ್ಮ ದೇವರಾಗಿರುವೆನು.


ನಿನ್ನ ಜನರನ್ನೂ ಏಕಾಂತವಾಗಿ ಅಡವಿಯಲ್ಲಿ ಕರ್ಮೆಲಿನ ನಡುವೆ ವಾಸವಾಗಿರುವ ನಿನ್ನ ಬಾಧ್ಯತೆಯ ಮಂದೆಯನ್ನೂ ನಿನ್ನ ಕೋಲಿನಿಂದ ಮೇಯಿಸು. ಅವರು ಪೂರ್ವದ ದಿವಸಗಳಲ್ಲಾದ ಹಾಗೆ ಬಾಷಾನಿನಲ್ಲಿಯೂ ಗಿಲ್ಯಾದಿನಲ್ಲಿಯೂ ಮೇಯಲಿ.


ಯೆಹೋವ ದೇವರು ಹೀಗೆ ಹೇಳುತ್ತಾರೆ: “ಅಮ್ಮೋನಿನ ಮಕ್ಕಳು ಮಾಡಿರುವ ಮೂರು ಹೌದು ನಾಲ್ಕು ಪಾಪಗಳಿಗಾಗಿ, ಆಗಬೇಕಾದ ದಂಡನೆಯನ್ನು ನಾನು ತಪ್ಪಿಸುವುದೇ ಇಲ್ಲ. ಏಕೆಂದರೆ ತಮ್ಮ ಮೇರೆಯನ್ನು ವಿಸ್ತಾರ ಮಾಡುವುದಕ್ಕಾಗಿ, ಗಿಲ್ಯಾದಿನ ಗರ್ಭಿಣಿಯರನ್ನು ಸೀಳಿಬಿಟ್ಟಿದ್ದಾರೆ.


ಅಷ್ಡೋದಿನಿಂದ ನಿವಾಸಿಯನ್ನು ಮತ್ತು ಅಷ್ಕೆಲೋನಿನಿಂದ ರಾಜದಂಡ ಹಿಡಿಯುವವನನ್ನು ನಾಶಮಾಡುವೆನು. ಫಿಲಿಷ್ಟಿಯರಲ್ಲಿ ಕೊನೆಯವರು ಸಾಯುವವರೆಗೂ ನಾನು ಎಕ್ರೋನಿನ ವಿರುದ್ಧ ನನ್ನ ಕೈಯನ್ನು ತಿರುಗಿಸುವೆನು,” ಎಂದು ಸಾರ್ವಭೌಮ ಯೆಹೋವ ದೇವರು ಹೇಳುತ್ತಾರೆ.


ಸಾರ್ವಭೌಮ ಯೆಹೋವ ದೇವರು ಹೀಗೆ ಹೇಳುತ್ತಾರೆ: ಇಗೋ, ನಾನು ಫಿಲಿಷ್ಟಿಯರ ವಿರುದ್ಧ ನನ್ನ ಕೈಯನ್ನು ಚಾಚುವೆನು. ಕೆರೇತಿಯರನ್ನು ಕಡಿದುಬಿಡುವೆನು: ಉಳಿದವರನ್ನು ಸಮುದ್ರ ತೀರದಲ್ಲಿ ನಾಶಮಾಡುವೆನು.


ಅಮ್ಮೋನ್ಯರನ್ನು ಕುರಿತದ್ದು: ಯೆಹೋವ ದೇವರು ಹೀಗೆ ಹೇಳುತ್ತಾರೆ: “ಇಸ್ರಾಯೇಲಿಗೆ ಪುತ್ರರಿಲ್ಲವೋ? ಅವನಿಗೆ ಬಾಧ್ಯಸ್ಥನಿಲ್ಲವೋ? ಮಲ್ಕಾಮ್ ದೇವತೆಯು ಗಾದನ್ನು ಬಾಧ್ಯವಾಗಿ ತೆಗೆದುಕೊಳ್ಳುವುದು ಏಕೆ? ಅವನ ಜನರು ಅದರ ಪಟ್ಟಣಗಳಲ್ಲಿ ವಾಸಮಾಡುವುದು ಏಕೆ?


ದೇವರು ಚೀಯೋನನ್ನು ರಕ್ಷಿಸುವರು. ದೇವರು ಯೆಹೂದದ ಪಟ್ಟಣಗಳನ್ನು ಕಟ್ಟುವರು. ಜನರು ಅಲ್ಲಿ ವಾಸಮಾಡಿ, ಅದನ್ನು ಸ್ವಾಧೀನಮಾಡಿಕೊಳ್ಳುವರು.


ಈ ಪತ್ರಕ್ಕೆ ಅರಸನು ಅವರಿಗೆ ಕೊಟ್ಟ ಉತ್ತರ: ದೇಶಾಧಿಪತಿಯಾದ ರೆಹೂಮ್ ಹಾಗು ಕಾರ್ಯದರ್ಶಿ ಶಿಂಷೈ ಅವರಿಗೂ, ಸಮಾರ್ಯದಲ್ಲಿರುವವರಿಗೂ ಯೂಫ್ರೇಟೀಸ್ ನದಿಯ ಈಚೆಯಲ್ಲಿರುವ ಇತರರಿಗೂ, ಕ್ಷೇಮಾಭಿಲಾಶೆಗಳು.


ಅವರು ಜೆರುಬ್ಬಾಬೆಲನ ಬಳಿಗೂ, ಕುಟುಂಬಗಳ ಮುಖ್ಯಸ್ಥರ ಬಳಿಗೂ ಬಂದು ಅವರಿಗೆ, “ನಾವು ನಿಮ್ಮ ಹಾಗೆ ನಿಮ್ಮ ದೇವರನ್ನು ಹುಡುಕುತ್ತೇವೆ. ನಮ್ಮನ್ನು ಇಲ್ಲಿಗೆ ಬರಮಾಡಿದ ಅಸ್ಸೀರಿಯದ ಅರಸನಾದ ಏಸರ್‌ಹದ್ದೋನ್ ಎಂಬವನ ದಿವಸಗಳು ಮೊದಲುಗೊಂಡು, ಅವರಿಗೆ ನಾವೂ ಬಲಿಯನ್ನು ಅರ್ಪಿಸುತ್ತಾ ಇದ್ದೇವೆ, ಕಟ್ಟುವುದರಲ್ಲಿ ನಾವು ಸಹಾಯ ಮಾಡುತ್ತೇವೆ,” ಎಂದರು.


ಆದಕಾರಣ ಇಸ್ರಾಯೇಲಿನ ದೇವರು ಅಸ್ಸೀರಿಯದ ಅರಸನಾದ ಪೂಲನ ಆತ್ಮವನ್ನೂ ಅಸ್ಸೀರಿಯದ ಅರಸನಾದ ತಿಗ್ಲತ್ಪಿಲೆಸರನ ಆತ್ಮವನ್ನೂ ಪ್ರೇರಿಸಿದ್ದರಿಂದ, ಅವರು ಅವರನ್ನು ಸೆರೆಯಾಗಿ ಒಯ್ದರು. ಆ ರೂಬೇನ್ಯರನ್ನೂ, ಗಾದ್ಯರನ್ನೂ, ಮನಸ್ಸೆಯ ಅರ್ಧ ಗೋತ್ರದವರನ್ನೂ ಹಲಹ, ಹಾಬೋರ್, ಹಾರ, ಎಂಬ ಪ್ರಾಂತಗಳಿಗೂ ಗೋಜಾನ್ ನದಿಯ ಪ್ರದೇಶಗಳಿಗೂ ತೆಗೆದುಕೊಂಡು ಹೋದರು. ಅವರು ಇಂದಿನವರೆಗೂ ಅಲ್ಲಿಯೇ ಇದ್ದಾರೆ.


ಅಸ್ಸೀರಿಯದ ಅರಸನು ಬಾಬಿಲೋನ್, ಕೂತಾ, ಅವ್ವಾ, ಹಮಾತ್, ಸೆಫರ್ವಯಿಮ್ ಊರುಗಳ ಜನರನ್ನು ಬರಮಾಡಿ, ಅವರನ್ನು ಇಸ್ರಾಯೇಲರಿಗೆ ಬದಲಾಗಿ ಸಮಾರ್ಯದ ಪಟ್ಟಣಗಳಲ್ಲಿ ಇರಿಸಿದನು. ಅವರು ಸಮಾರ್ಯವನ್ನು ಸ್ವತಂತ್ರಿಸಿಕೊಂಡು, ಅದರ ಪಟ್ಟಣಗಳಲ್ಲಿ ವಾಸಿಸಿದರು.


ಪಶ್ಚಿಮದ ತಗ್ಗಿನ ದೇಶ ಎಷ್ಟಾವೋಲ್, ಚೊರ್ಗಾ, ಅಶ್ಣಾ,


ದಕ್ಷಿಣದ ಕಟ್ಟಕಡೆಗಿರುವ ಎದೋಮಿನ ಮೇರೆಗೆ ಸರಿಯಾಗಿ ಯೆಹೂದ ಗೋತ್ರಕ್ಕೆ ಇರುವ ಪಟ್ಟಣಗಳು. ಅವು: ಕಬ್ಜಯೇಲ್, ಏದೆರ್, ಯಾಗೂರ್,


ಗಿಲ್ಯಾದಿನ ಅರ್ಧ ಭಾಗ, ಬಾಷಾನಿನಲ್ಲಿರುವ ಓಗ್ ರಾಜನ ಪಟ್ಟಣಗಳಾದ ಅಷ್ಟಾರೋತ್, ಎದ್ರೈ, ಇವೆಲ್ಲವೂ ಮನಸ್ಸೆಯ ಮಗ ಮಾಕೀರನ ಗೋತ್ರಕ್ಕೆ ಅವರ ಕುಟುಂಬಗಳ ಪ್ರಕಾರ ಮಾಕೀರನ ಮಕ್ಕಳಲ್ಲಿ ಅರ್ಧ ಜನರಿಗೆ ಕೊಟ್ಟನು.


ಯಜ್ಜೇರ್ ಪ್ರದೇಶ, ಗಿಲ್ಯಾದಿನ ಸಮಸ್ತ ಪಟ್ಟಣಗಳೂ ರಬ್ಬಾ ಊರಿನ ಎದುರಾಗಿರುವ ಅರೋಯೇರ್ ಪಟ್ಟಣವರೆಗೂ ಇರುವ ಅಮ್ಮೋನಿಯರ ಅರ್ಧ ದೇಶವು.


ಯೋಸೇಫನ ಮಕ್ಕಳಾದ ಎಫ್ರಾಯೀಮನ ಸಂತತಿಯವರಲ್ಲಿ: ಯುದ್ಧಕ್ಕೆ ಶಕ್ತರಾದ ಪುರುಷರೆಲ್ಲರೂ ಅಂದರೆ ಇಪ್ಪತ್ತು ವರ್ಷ ಅಥವಾ ಅದಕ್ಕಿಂತ ಮೇಲ್ಪಟ್ಟ ವಯಸ್ಸಿನವರು ಗೋತ್ರ ಹಾಗೂ ಕುಟುಂಬಗಳ ಪ್ರಕಾರ ಒಬ್ಬೊಬ್ಬರಾಗಿ ಹೆಸರೆಸರಾಗಿ ಪಟ್ಟಿಮಾಡಲಾದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು