Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಕೀರ್ತನೆಗಳು 1:1 - ಕನ್ನಡ ಸಮಕಾಲಿಕ ಅನುವಾದ

1 ದುಷ್ಟರ ಆಲೋಚನೆಯಂತೆ ನಡೆಯದೆ, ಪಾಪಿಗಳ ಮಾರ್ಗದಲ್ಲಿ ನಿಲ್ಲದೆ, ಅಪಹಾಸ್ಯಗಾರರ ಕೂಟದಲ್ಲಿ ಕೂತುಕೊಳ್ಳದೆ,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

1 ಯಾರು ದುಷ್ಟರ ಆಲೋಚನೆಯಂತೆ ನಡೆಯದೆ, ಪಾಪಾತ್ಮರ ಮಾರ್ಗದಲ್ಲಿ ನಿಂತುಕೊಳ್ಳದೆ, ಧರ್ಮನಿಂದಕರೊಡನೆ ಕುಳಿತುಕೊಳ್ಳದೆ,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

1 ದುರ್ಜನರ ಆಲೋಚನೆಯಂತೆ ನಡೆಯದೆ I ಪಾಪಾತ್ಮರ ಪಥದಲಿ ಕಾಲೂರದೆ I ಧರ್ಮನಿಂದಕರ ಕೂಟದಲಿ ಕೂರದೆ II

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

1 ಯಾವನು ದುಷ್ಟರ ಆಲೋಚನೆಯಂತೆ ನಡೆಯದೆ ಪಾಪಾತ್ಮರ ಮಾರ್ಗದಲ್ಲಿ ನಿಂತುಕೊಳ್ಳದೆ ಧರ್ಮನಿಂದಕರೊಡನೆ ಕೂತುಕೊಳ್ಳದೆ

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

1 ಯಾವನು ದುಷ್ಟರ ಮಾರ್ಗವನ್ನು ಅನುಸರಿಸದೆ, ಪಾಪಿಗಳಂತೆ ಜೀವಿಸದೆ, ದೇವರಿಗೆ ಅವಿಧೇಯರಾದ ಜನರೊಂದಿಗೆ ಸೇರದೆ ಇರುವನೋ ಅವನೇ ಭಾಗ್ಯವಂತನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಕೀರ್ತನೆಗಳು 1:1
52 ತಿಳಿವುಗಳ ಹೋಲಿಕೆ  

ಜ್ಞಾನವಂತರ ಜೊತೆಗೆ ನಡೆಯುವವನು ಜ್ಞಾನಿಯಾಗುವನು; ಆದರೆ ಮೂರ್ಖರ ಜೊತೆಗಾರನು ಸಂಕಟಪಡುವನು.


ನಾನು ವಿನೋದಗಾರರ ಕೂಟದಲ್ಲಿ ಕೂತುಕೊಳ್ಳಲಿಲ್ಲ, ಉಲ್ಲಾಸ ಪಡಲೂ ಇಲ್ಲ; ನೀವು ನನ್ನ ಮೇಲೆ ಕೈ ಇಟ್ಟಿದ್ದರಿಂದ ಒಂಟಿಗನಾಗಿ ಕೂತುಕೊಂಡೆನು; ನನ್ನನ್ನು ರೋಷದಿಂದ ತುಂಬಿಸಿದ್ದಿಯಷ್ಟೆ;


ಅದಕ್ಕೆ ಯೇಸು, “ಅದಕ್ಕಿಂತಲೂ ದೇವರ ವಾಕ್ಯವನ್ನು ಕೇಳಿ, ಅದನ್ನು ಅನುಸರಿಸುವವರು ಹೆಚ್ಚು ಭಾಗ್ಯವಂತರು,” ಎಂದರು.


ಯೆಹೋವ ದೇವರು ನೀತಿವಂತರ ಮಾರ್ಗವನ್ನು ಅರಿತಿದ್ದಾರೆ; ಆದರೆ ದುಷ್ಟರ ಮಾರ್ಗವು ನಾಶಕ್ಕೆ ನಡೆಸುವುದು.


ಮಗನೇ, ಅವರೊಂದಿಗೆ ಸೇರಬೇಡ, ಅವರ ಮಾರ್ಗದಲ್ಲಿ ಹೆಜ್ಜೆಯಿಡಬೇಡ.


ಯೆಹೋವ ದೇವರು ಒಳ್ಳೆಯವರೆಂದು ರುಚಿಸಿ ನೋಡಿರಿ; ಅವರನ್ನು ಆಶ್ರಯಿಸುವ ಮನುಷ್ಯನು ಭಾಗ್ಯವಂತನು.


ಯೆಹೋವ ದೇವರನ್ನು ಸ್ತುತಿಸಿರಿ. ಯೆಹೋವ ದೇವರಿಗೆ ಭಯಪಟ್ಟು ಅವರ ಆಜ್ಞೆಗಳಲ್ಲಿ ಬಹಳವಾಗಿ ಸಂತೋಷಿಸುವವರು ಧನ್ಯರು.


ಕುಯುಕ್ತಿಯನ್ನು ತಮ್ಮ ಹಾಸಿಗೆಯ ಮೇಲೆ ಕಲ್ಪಿಸುತ್ತಾರೆ; ಪಾಪದ ಮಾರ್ಗಕ್ಕೆ ತಮ್ಮನ್ನು ಅರ್ಪಿಸಿಕೊಳ್ಳುತ್ತಾರೆ; ಅವರು ಕೆಟ್ಟದ್ದಕ್ಕೆ ಅಸಹ್ಯಪಡುವುದಿಲ್ಲ.


ಆದರೆ ಅವರ ಸುಖವು ಅವರ ಕೈಯಲ್ಲಿ ಇಲ್ಲ; ಆದ್ದರಿಂದ ಆ ದುಷ್ಟರ ಆಲೋಚನೆಯು ನನಗೆ ದೂರವಾಗಿರಲಿ.


ಆದುದರಿಂದ ವೈರಿಯು ದಾಳಿಮಾಡುವ ದಿನವು ಬರುವಾಗ ನೀವು ಅವನನ್ನು ಎದುರಿಸಿ ನಿಲ್ಲುವಂತೆಯು, ಎಲ್ಲವನ್ನು ಜಯಿಸಿ ಮುಗಿಸಿದ ಮೇಲೆ ನಿಲ್ಲಲು ಶಕ್ತರಾಗುವಂತೆ, ದೇವರ ಸರ್ವಾಯುಧಗಳನ್ನು ಧರಿಸಿಕೊಳ್ಳಿರಿ.


ನನ್ನ ಮನವೇ, ಅವರ ಆಲೋಚನೆಗೆ ಒಳಪಡಬೇಡ. ನನ್ನ ಪ್ರಾಣವೇ, ಅವರ ಕೂಟಗಳಲ್ಲಿ ಸೇರಬೇಡ. ಅವರು ತಮ್ಮ ಕೋಪದಲ್ಲಿ ಮನುಷ್ಯರನ್ನು ಕೊಂದರು, ಮದದಿಂದ ಎತ್ತುಗಳನ್ನು ಊನಪಡಿಸಿದರು.


“ಯಾವನು ಯೆಹೋವ ದೇವರಲ್ಲಿ ನಂಬಿಕೆ ಇಟ್ಟಿರುವನೋ, ಯಾವನಿಗೆ ಯೆಹೋವ ದೇವರು ಭರವಸೆಯಾಗಿದ್ದಾನೋ, ಆ ಮನುಷ್ಯನು ಧನ್ಯನು.


ಒಳ್ಳೆಯ ಪ್ರಜ್ಞೆ ಇರುವ ವ್ಯಕ್ತಿಯನ್ನು ಗೌರವಿಸಲಾಗುತ್ತದೆ; ಆದರೆ ವಿಶ್ವಾಸದ್ರೋಹಿಯ ಮಾರ್ಗವು ನಾಶಕರವಾಗಿದೆ.


ನಿಯಮ ಮೀರುವವರೇ, ನನ್ನಿಂದ ತೊಲಗಿರಿ, ನಾನು ನನ್ನ ದೇವರ ಆಜ್ಞೆಗಳನ್ನು ಪಾಲಿಸಲು ಬಿಡಿರಿ!


ನ್ಯಾಯವನ್ನು ಕಾಪಾಡಿಕೊಂಡು ಯಾವಾಗಲೂ ಸರಿಯಾದವುಗಳನ್ನು ಪಾಲಿಸುವವರು ಧನ್ಯರು.


ನನ್ನ ಪಾದವು ಸಮ ನೆಲದಲ್ಲಿ ನಿಂತಿದೆ; ನಾನು ಮಹಾಸಭೆಯಲ್ಲಿ ಯೆಹೋವ ದೇವರನ್ನು ಸ್ತುತಿಸುವೆನು.


ಜ್ಞಾನವು ದುಷ್ಟರ ಮಾರ್ಗಗಳಿಂದಲೂ, ವಕ್ರರ ಮಾತುಗಳಿಂದಲೂ ಕಾಪಾಡುವುದು.


ಆದ್ದರಿಂದ ಅವರ ಹೃದಯದ ದುರಾಶೆಗೆ ಅವರನ್ನು ನಾನು ಒಪ್ಪಿಸಿದೆನು; ಅವರು ತಮ್ಮ ಆಲೋಚನೆಗಳಂತೆ ನಡೆದುಕೊಂಡರು.


ಆದರೆ, ದುಷ್ಟರ ಮಾರ್ಗವು ಕಗ್ಗತ್ತಲಿನಂತಿದೆ. ಅವರು ಯಾವುದಕ್ಕೆ ಎಡವಿ ಬೀಳುತ್ತಾರೋ ಅದು ಅವರಿಗೆ ಗೊತ್ತಾಗದು.


ದೇವರು ಗರ್ವಿಷ್ಠ ಪರಿಹಾಸ್ಯಗಾರರನ್ನು ಪರಿಹಾಸ್ಯ ಮಾಡುತ್ತಾರೆ; ದೀನರಿಗಾದರೋ ದೇವರು ಕೃಪೆಯನ್ನು ಕೊಡುತ್ತಾರೆ.


“ತಮ್ಮ ನಿಲುವಂಗಿಗಳನ್ನು ತೊಳೆದುಕೊಂಡವರು ಧನ್ಯರು. ಹೀಗೆ ಅವರಿಗೆ ಜೀವವೃಕ್ಷದ ಹಕ್ಕು ಇರುವುದು. ಅವರು ದ್ವಾರಗಳ ಮೂಲಕ ಆ ಪಟ್ಟಣದೊಳಕ್ಕೆ ಸೇರುವರು.


ನೀನು ಜ್ಞಾನಿಯಾದರೆ, ನಿನ್ನ ಜ್ಞಾನವು ನಿನಗೆ ಪ್ರತಿಫಲ ಕೊಡುವುದು; ನೀನು ನಿಂದಿಸುವವನಾದರೆ, ನೀನೇ ಅದರ ಫಲವನ್ನು ಅನುಭವಿಸುವಿ.


ಸೇನಾಧೀಶ್ವರ ಯೆಹೋವ ದೇವರೇ, ನಿಮ್ಮಲ್ಲಿ ಭರವಸವಿಡುವವನೇ ಭಾಗ್ಯವಂತನು.


ಯೇಸುವಿನ ಮೂಲಕವೇ ನಾವು ಈಗ ಈ ಕೃಪೆಯಲ್ಲಿ ವಿಶ್ವಾಸದಿಂದ ಪ್ರವೇಶಮಾಡಿದ್ದೇವೆ. ಈ ಕೃಪೆಯಲ್ಲಿಯೇ ಈಗ ನಿಂತಿದ್ದೇವೆ. ನಾವು ದೇವರ ಮಹಿಮೆಯಲ್ಲಿ ಪಾಲುಗೊಳ್ಳುತ್ತೆವೆಂಬ ನಿರೀಕ್ಷೆಯಲ್ಲಿ ಆನಂದಪಡುತ್ತೇವೆ.


ಹೀಗಿರುವ ಜನರು ಧನ್ಯರು; ಯೆಹೋವ ದೇವರು ಯಾರಿಗೆ ದೇವರಾಗಿದ್ದಾರೋ, ಅವರು ಧನ್ಯರು.


ಯೇಸು ಅವನಿಗೆ, “ನೀನು ನನ್ನನ್ನು ಕಂಡಿದ್ದರಿಂದ ನಂಬಿದ್ದೀಯಾ? ಕಾಣದೆ ನಂಬಿದವರು ಧನ್ಯರು,” ಎಂದರು.


“ಮುಗ್ಧರೇ ನೀವು ಎಷ್ಟು ಕಾಲ ಮುಗ್ಧತೆಯನ್ನು ಪ್ರೀತಿಸುವಿರಿ. ಕುಚೋದ್ಯಗಾರರೇ ಎಷ್ಟು ಕಾಲ ಕುಚೋದ್ಯಗಾರರಾಗಿರಲು ಇಚ್ಛಿಸುವಿರಿ? ಜ್ಞಾನಹೀನರೇ, ಎಷ್ಟು ಕಾಲ ಪರಿಜ್ಞಾನವನ್ನು ಹಗೆ ಮಾಡುವಿರಿ?


ದೇವರನ್ನು ಅರಿಯದ ಜನರು ಮಾಡಲು ಇಚ್ಛಿಸುವುದನ್ನೆಲ್ಲಾ ನೀವು ಗತಕಾಲದಲ್ಲಿ ಸಾಕಷ್ಟು ಮಾಡಿದ್ದೀರಿ. ಆಗ ನೀವು ಅಶ್ಲೀಲತೆ, ದುರಾಶೆಗಳು, ಕುಡುಕತನ, ಅಮಲೇರುವಿಕೆ, ದುಂದು ಔತಣಗಳು, ಅಸಹ್ಯವಾದ ವಿಗ್ರಹಾರಾಧನೆಗಳು ಇವುಗಳನ್ನು ಮಾಡುತ್ತಿದ್ದೀರಿ.


ನೀವು ಇವುಗಳನ್ನು ತಿಳಿದುಕೊಂಡು ಇದರಂತೆ ಮಾಡಿದರೆ ನೀವು ಧನ್ಯರು.


ಯೆಹೋವ ದೇವರು ಪರದೇಶಸ್ಥರನ್ನು ಕಾಪಾಡುತ್ತಾರೆ. ದಿಕ್ಕಿಲ್ಲದವರನ್ನೂ, ವಿಧವೆಯರನ್ನೂ ಉದ್ಧರಿಸುತ್ತಾರೆ. ಆದರೆ ದುಷ್ಟರ ಮಾರ್ಗವನ್ನು ಬೇಸರಪಡಿಸುತ್ತಾರೆ.


ಯೆಹೋವ ದೇವರು ಬೇಸರಗೊಂಡು, ನೀವು ನಿಮ್ಮ ಮಾರ್ಗದಲ್ಲಿ ನಾಶವಾಗದಂತೆ ಅವರ ಮಗನನ್ನು ಮುದ್ದಿಸಿರಿ. ಏಕೆಂದರೆ ದೇವರ ರೋಷವು ಕ್ಷಣಮಾತ್ರದಲ್ಲಿ ಜ್ವಾಲಿಸುವುದು. ದೇವರ ಆಶ್ರಯ ಪಡೆಯುವವರೆಲ್ಲಾ ಧನ್ಯರು.


ಯಾಕೋಬನ ದೇವರನ್ನು ತಮ್ಮ ಸಹಾಯಕರಾಗಿ ಮಾಡಿಕೊಂಡವನು ಧನ್ಯನು; ಅವನು ತನ್ನ ದೇವರಾದ ಯೆಹೋವ ದೇವರ ಮೇಲೆ ನಿರೀಕ್ಷೆ ಇಡುವನು.


ನೆಬಾಟನ ಮಗ ಯಾರೊಬ್ಬಾಮನ ಪಾಪಗಳಲ್ಲಿ ನಡೆಯುವುದು ಅವನಿಗೆ ಅಲ್ಪವಾಗಿತ್ತು. ಅವನು ಸೀದೋನ್ಯರ ಅರಸನಾದ ಎತ್ಬಾಳನ ಮಗಳಾದ ಈಜೆಬೆಲಳನ್ನು ಮದುವೆಯಾಗಿ ಬಾಳನನ್ನು ಸೇವಿಸಿ ಅವನಿಗೆ ಅಡ್ಡಬಿದ್ದನು.


ಇಸ್ರಾಯೇಲರೇ, ನೀವು ಎಷ್ಟೋ ಧನ್ಯರು. ಯೆಹೋವ ದೇವರಿಂದ ರಕ್ಷಣೆಹೊಂದಿದ ಜನಾಂಗವೇ ನಿಮ್ಮಂತೆ ಯಾರಿದ್ದಾರೆ? ದೇವರೇ ನಿಮಗೆ ಗುರಾಣಿ ಹಾಗೂ ಸಹಾಯಕ. ದೇವರು ನಿಮ್ಮ ಮಹಿಮಾ ಖಡ್ಗ. ನಿಮ್ಮ ವೈರಿಗಳು ನಿಮ್ಮ ಮುಂದೆ ಮುದುರಿಕೊಳ್ಳುವರು ಮತ್ತು ಅವರ ಉನ್ನತ ಸ್ಥಳಗಳನ್ನು ನೀವು ತುಳಿದುಬಿಡುವಿರಿ.”


ಮರುಭೂಮಿಯಲ್ಲಿ ನಾನು ಅವರ ಮಕ್ಕಳಿಗೆ ಹೇಳಿದ್ದೇನೆಂದರೆ, “ನೀವು ನಿಮ್ಮ ತಂದೆಗಳ ನಿಯಮಗಳನ್ನು ಅನುಸರಿಸಬೇಡಿರಿ, ಅವರ ನ್ಯಾಯಗಳನ್ನು ಕೈಕೊಳ್ಳಬೇಡಿರಿ, ಅವರ ವಿಗ್ರಹಗಳಿಂದ ನಿಮ್ಮನ್ನು ಅಪವಿತ್ರಮಾಡಿಕೊಳ್ಳಬೇಡಿರಿ.


ಪರಿಹಾಸ್ಯಗಾರರಿಗೆ ನ್ಯಾಯ ತೀರ್ಪುಗಳೂ, ಬುದ್ಧಿಹೀನರ ಬೆನ್ನಿಗೆ ಪೆಟ್ಟುಗಳೂ ಸಿದ್ಧವಾಗಿವೆ.


ದುರ್ಮಾರ್ಗಿಗಳ ಗುಪ್ತ ಆಲೋಚನೆಗಳಿಗೂ, ದುಷ್ಟರ ಒಳಸಂಚಿಗೂ ನನ್ನನ್ನು ಮರೆಮಾಡಿರಿ.


“ನಾನು ಕಪಟವಾಗಿ ನಡೆದುಕೊಂಡಿದ್ದರೆ, ಮೋಸಕ್ಕೆ ನನ್ನ ಕಾಲು ತ್ವರೆಪಟ್ಟಿದ್ದರೆ,


ದೇವರೇ, ನಿಮ್ಮ ಕೈಕೃತಿಯಾಗಿರುವ ನನ್ನನ್ನು ಜಜ್ಜುವುದೂ ನಿಮಗೆ ಮೆಚ್ಚಿಕೆಯೋ? ನೀವು ನನ್ನನ್ನು ಅಲಕ್ಷ್ಯ ಮಾಡುವಿರೋ? ನೀವು ದುಷ್ಟರ ಯೋಜನೆಯನ್ನು ಮೆಚ್ಚುವಿರೋ?


ದೇವರೊಂದಿಗೆ ನಂಬಿಗಸ್ತನಾಗಿ ನಡೆಯುತ್ತಿದ್ದ ಹನೋಕನನ್ನು ದೇವರು ತೆಗೆದುಕೊಂಡು ಹೋದದ್ದರಿಂದ ಅವನು ಕಾಣಲಿಲ್ಲ.


ಅವನ ತಾಯಿಯ ದುರ್ಬೋಧನೆಯಿಂದ ಅವನು ದುಷ್ಟನಾಗಿ ಅಹಾಬನ ಮನೆಯವರ ಮಾರ್ಗಗಳಲ್ಲಿ ನಡೆದನು.


ಇವನು ಅವರ ತೀರ್ಮಾನಕ್ಕೂ ಕೃತ್ಯಕ್ಕೂ ಒಪ್ಪಿಕೊಂಡಿರಲಿಲ್ಲ. ಇವನು ಯೆಹೂದ್ಯರ ಪಟ್ಟಣವಾದ ಅರಿಮಥಾಯದವನೂ ದೇವರ ರಾಜ್ಯಕ್ಕಾಗಿ ಎದುರುನೋಡುವವನೂ ಆಗಿದ್ದನು.


ಯೇಸು ಅವನಿಗೆ, “ಯೋನನ ಮಗ ಸೀಮೋನನೇ, ನೀನು ಧನ್ಯನು. ಏಕೆಂದರೆ ಇದನ್ನು ಪ್ರಕಟಿಸಿದ್ದು ಮಾನವರಲ್ಲ. ಪರಲೋಕದಲ್ಲಿರುವ ನನ್ನ ತಂದೆಯೇ ಇದನ್ನು ನಿನಗೆ ಪ್ರಕಟಿಸಿದರು.


ಯಾವ ಪ್ರಾಣಿಯ ಕಾಲ್ಗೊರಸು ಸೀಳಿದೆಯೋ, ಅದು ಮೆಲುಕು ಹಾಕುವಂಥಾದ್ದಾದರೆ ಅದರ ಮಾಂಸವನ್ನು ತಿನ್ನಬಹುದು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು