Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಕೀರ್ತನೆಗಳು 10:6 - ಕನ್ನಡ ಸಮಕಾಲಿಕ ಅನುವಾದ

6 ಅವನು ತನ್ನ ಹೃದಯದಲ್ಲಿ ಹೀಗೆ ಹೇಳುವನು, “ಯಾವುದೂ ಎಂದೂ ನನ್ನನ್ನು ಕದಲಿಸುವುದಿಲ್ಲ.” ಅವನು ಹೀಗೆ ಶಪಥ ಮಾಡುವನು, “ಯಾರೂ ಎಂದಿಗೂ ನನಗೆ ಕೇಡುಮಾಡಲಾರರು.”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

6 ಅವನು, “ನಾನು ಕದಲುವುದೇ ಇಲ್ಲ; ನನಗೆ ವಿಪತ್ತು ಎಂದೆಂದಿಗೂ ಸಂಭವಿಸುವುದಿಲ್ಲ” ಅಂದುಕೊಂಡಿದ್ದಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

6 ನೆನೆವನು ಮನದೊಳು ದುರುಳನಿಂತು: I “ಯಾರಿಗೂ ನನ್ನ ಕದಲಿಸಲಾಗದು I ಬಾರದು ನನಗೆಂದಿಗು ಆಪತ್ತು” II

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

6 ತಾನು ಕದಲುವದೇ ಇಲ್ಲ; ತನಗೆ ವಿಪತ್ತು ಎಂದೆಂದಿಗೂ ಸಂಭವಿಸುವದಿಲ್ಲ ಅಂದುಕೊಂಡಿದ್ದಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

6 ಅವರು, “ನಮ್ಮನ್ನು ಯಾವುದೂ ಕದಲಿಸದು; ನಮಗೆ ಕೇಡಾಗದಿರುವುದರಿಂದ ಸಂತೋಷವಾಗಿರೋಣ” ಎಂದುಕೊಂಡಿದ್ದಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಕೀರ್ತನೆಗಳು 10:6
11 ತಿಳಿವುಗಳ ಹೋಲಿಕೆ  

ಆದರೆ ದುಷ್ಟ ಸೇವಕನು ತನ್ನ ಹೃದಯದಲ್ಲಿ, ‘ನನ್ನ ಯಜಮಾನನು ಬರುವದಕ್ಕೆ ತಡಮಾಡುತ್ತಾನೆ,’ ಎಂದು ಹೇಳಿಕೊಂಡು


“ಬನ್ನಿರಿ, ನಾನು ದ್ರಾಕ್ಷಾರಸವನ್ನು ತರುವೆನು. ನಮ್ಮನ್ನು ನಾವೇ ಬೇಕಾದಷ್ಟು ಮದ್ಯದಿಂದ ತುಂಬಿಕೊಳ್ಳುವ! ನಾಳೆಯು ಈ ದಿವಸದಂತೆಯೇ ಇರುವುದು. ಅಥವಾ ಇದಕ್ಕಿಂತಲೂ ಚೆನ್ನಾಗಿರುವುದು,” ಎಂದು ಪ್ರತಿಯೊಬ್ಬನೂ ಹೇಳುತ್ತಾನೆ.


ಏಕೆಂದರೆ ದುಷ್ಟ ಕೆಲಸಕ್ಕೆ ದಂಡನೆಯು ಕೂಡಲೇ ಆಗದಿರುವುದರಿಂದ ಮನುಷ್ಯರ ಹೃದಯವು ಅವರನ್ನು ಕೆಟ್ಟದ್ದು ಮಾಡುವ ಯುಕ್ತಿಯಲ್ಲಿಯೇ ತುಂಬಿರುವುದು.


ಆಕೆಯು ಯಾವುದರಿಂದ ತನ್ನನ್ನು ಘನಪಡಿಸಿಕೊಂಡು ಭೋಗಿನಿಯಾಗಿದ್ದಳೋ ಅದಕ್ಕೆ ತಕ್ಕಂತೆ ನೀವು ಆಕೆಗೆ ಯಾತನೆಯನ್ನೂ ದುಃಖವನ್ನೂ ಕೊಡಿರಿ. ಏಕೆಂದರೆ ಆಕೆ ತನ್ನ ಹೃದಯದಲ್ಲಿ, ‘ನಾನು ರಾಣಿಯಾಗಿ ಕುಳಿತುಕೊಂಡಿದ್ದೇನೆ. ನಾನು ವಿಧವೆಯಲ್ಲ, ಎಂದೆಂದಿಗೂ ದುಃಖಿಸುವುದಿಲ್ಲ!’ ಎಂದುಕೊಳ್ಳುತ್ತಾಳೆ.


ಆದರೆ, “ಸಮಾಧಾನ, ಸುರಕ್ಷಿತ,” ಎಂದು ಜನರು ಹೇಳುತ್ತಿರುವಾಗಲೇ, ಅವರ ಮೇಲೆ ವಿನಾಶವು ಗರ್ಭಿಣಿಗೆ ಪ್ರಸವವೇದನೆ ಬರುವಂತೆ ಫಕ್ಕನೆ ಬರುವುದು. ಅವರು ಹೇಗೂ ತಪ್ಪಿಸಿಕೊಳ್ಳಲಾರರು.


ಅವರು ಮುಳ್ಳುಗಳಲ್ಲಿ ಸಿಕ್ಕಿಕೊಳ್ಳುವರು, ತಮ್ಮ ದ್ರಾಕ್ಷಾರಸದಿಂದ ಮತ್ತರಾಗುವರು. ಪೂರ್ಣವಾಗಿ ಒಣಗಿದ ಕೂಳೆಯಂತೆ ಅವರು ಸುಟ್ಟು ಹೋಗುವರು.


ನಾನು ಸುರಕ್ಷಿತನಾಗಿದ್ದಾಗ, “ನಾನೆಂದೂ ಕದಲುವುದಿಲ್ಲ,” ಎಂದು ಹೇಳಿಕೊಂಡೆನು.


ಅವರು ಬಡವರಿಗೆ ಸಾಲ ಕೊಟ್ಟು ಬಡ್ಡಿಕೇಳದವರೂ; ನಿರಪರಾಧಿಯ ಕೇಡಿಗಾಗಿ ಲಂಚ ತೆಗೆದುಕೊಳ್ಳದವರೂ ಆಗಿರಬೇಕು. ಈ ರೀತಿಯಾಗಿ ಬಾಳುವವರು ಎಂದಿಗೂ ಕದಲುವುದಿಲ್ಲ.


“ದೇವರು ಇಲ್ಲಾ,” ಎಂದು ಮೂರ್ಖರು ತಮ್ಮ ಹೃದಯದಲ್ಲಿ ಹೇಳಿಕೊಳ್ಳುತ್ತಾರೆ. ಅವರು ಕೆಟ್ಟು ಹೋಗಿ, ಅಸಹ್ಯ ಕೃತ್ಯಗಳನ್ನು ಮಾಡುತ್ತಾರೆ; ಒಳ್ಳೆಯದನ್ನು ಮಾಡುವವರು ಯಾರೂ ಇಲ್ಲ.


ಯೆಹೋವ ದೇವರಲ್ಲಿ ನಾನು ಆಶ್ರಯಿಸಿದ್ದೇನೆ. ಹಾಗಾದರೆ, “ಒಂದು ಪಕ್ಷಿಯಂತೆ ನಿನ್ನ ಪರ್ವತಕ್ಕೆ ಹಾರಿ ಹೋಗು,” ಎಂದು ನೀವು ನನಗೆ ಹೇಗೆ ಹೇಳುವಿರಿ?


‘ನಾನು ಶಾಶ್ವತವಾದ ರಾಣಿ’ ಎಂದು ನೀನು ಅಂದುಕೊಂಡದ್ದರಿಂದ ಈ ಸಂಗತಿಗಳನ್ನು ನಿನ್ನ ಹೃದಯದಲ್ಲಿ ಇಟ್ಟುಕೊಳ್ಳಲಿಲ್ಲ. ಅವರ ಅಂತ್ಯವನ್ನೂ ನೆನಸಿಕೊಳ್ಳಲಿಲ್ಲ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು