Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಕೀರ್ತನೆಗಳು 10:8 - ಕನ್ನಡ ಸಮಕಾಲಿಕ ಅನುವಾದ

8 ಅವನು ಗ್ರಾಮಗಳಲ್ಲಿ ಹೊಂಚಿಕೊಂಡು ಮರೆಯಾದ ಸ್ಥಳಗಳಲ್ಲಿ, ನಿರಪರಾಧಿಯನ್ನು ಕೊಲ್ಲುತ್ತಾನೆ. ಅವನ ಕಣ್ಣುಗಳು ನಿರ್ಗತಿಕರನ್ನು ಹೊಂಚಿ ನೋಡುತ್ತವೆ;

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

8 ಅವನು ಗ್ರಾಮಗಳ ಸಂದುಗೊಂದುಗಳಲ್ಲಿ ಹೊಂಚಿಕೊಂಡಿದ್ದು, ಮರೆಯಾದ ಸ್ಥಳಗಳಲ್ಲಿ ನಿರಪರಾಧಿಗಳನ್ನು ಕೊಲ್ಲುತ್ತಾನೆ. ಅವನು ಗತಿಹೀನನನ್ನು ಹಿಡಿಯುವುದಕ್ಕೆ ಸಮಯ ನೋಡುತ್ತಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

8 ಊರು ಸಂದುಗೊಂದುಗಳಲೆ ಅವಿತಿದ್ದು I ನಿರ್ಗತಿಕರಿಗಾಗಿ ಅಲ್ಲೆ ಕಾದಿದ್ದು I ಕೊಲೆಗೈವನು ಮರೆಯಲ್ಲೆ ಮೇಲೆಬಿದ್ದು II

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

8 ಅವನು ಗ್ರಾಮಗಳ ಸಂದುಗೊಂದುಗಳಲ್ಲಿ ಹೊಂಚಿಕೊಂಡಿದ್ದು ಮರೆಯಾದ ಸ್ಥಳಗಳಲ್ಲಿ ನಿರಪರಾಧಿಗಳನ್ನು ಕೊಲ್ಲುತ್ತಾನೆ. ಅವನು ಗತಿಹೀನನನ್ನು ಹಿಡಿಯುವದಕ್ಕೆ ಸಮಯ ನೋಡುತ್ತಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

8 ಅವರು ನಿರಪರಾಧಿಗಳನ್ನು ಹಿಡಿದು ಕೊಲ್ಲಲು ಗುಪ್ತವಾದ ಸ್ಥಳಗಳಲ್ಲಿ ಅಡಗಿಕೊಂಡಿರುವರು; ಅಸಹಾಯಕರಿಗಾಗಿ ಎದುರುನೋಡುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಕೀರ್ತನೆಗಳು 10:8
14 ತಿಳಿವುಗಳ ಹೋಲಿಕೆ  

ನಮ್ಮನ್ನು ಚದುರಿಸಲು ಅವನ ಯುದ್ಧವೀರರು ಮುತ್ತಿಗೆ ಹಾಕಿದಾಗ, ಅವನ ಸ್ವಂತ ಭರ್ಜಿಯಿಂದಲೇ ಅವನ ತಲೆಯನ್ನು ತಿವಿದಿ. ಅವರು ಅಡಗಿಕೊಂಡಿರುವ ಬಡವರನ್ನು ನುಂಗಲು ಬಂದವರೋ ಎಂಬಂತೆ ಬಂದಿದ್ದರಲ್ಲವೇ?


“ಆದರೆ ನಿನ್ನ ಕಣ್ಣುಗಳು, ನಿನ್ನ ಹೃದಯವು ನಿನ್ನ ದುರ್ಲಾಭದ ಮೇಲೆ ಅಪರಾಧವಿಲ್ಲದವನ ರಕ್ತ ಚೆಲ್ಲುವುದರ ಮೇಲೆ ಮತ್ತು ಪೀಡೆಯನ್ನೂ, ಬಲಾತ್ಕಾರವನ್ನೂ ಮಾಡುವುದರ ಮೇಲೆಯೇ ಹೊರತು, ಮತ್ಯಾವುದರ ಮೇಲೆಯೂ ಇರುವುದಿಲ್ಲ.”


ಆಗ ಅರಸನು ದೋಯೇಗನಿಗೆ, “ನೀನು ತಿರುಗಿಕೊಂಡು ಯಾಜಕರ ಮೇಲೆ ಬೀಳು,” ಎಂದನು. ಆಗ ಎದೋಮ್ಯನಾದ ದೋಯೇಗನು ತಿರುಗಿಕೊಂಡು ಯಾಜಕರ ಮೇಲೆ ಬಿದ್ದು, ನಾರುಬಟ್ಟೆಯ ಏಫೋದನ್ನು ಧರಿಸಿಕೊಳ್ಳುವವರಾದ ಎಂಬತ್ತೈದು ಯಾಜಕರನ್ನು ಆ ದಿನದಲ್ಲಿ ಕೊಂದನು.


ಇದಾದ ಮೇಲೆ, ಯೇಸು ಪ್ರತಿಯೊಂದು ಪಟ್ಟಣಕ್ಕೂ ಹಳ್ಳಿಗೂ ಹೋಗಿ, ದೇವರ ರಾಜ್ಯದ ವಿಷಯ ಪ್ರಚಾರ ಮಾಡುತ್ತಾ ಸುವಾರ್ತೆಯನ್ನು ಸಾರುತ್ತಾ ಇದ್ದರು. ಹನ್ನೆರಡು ಮಂದಿ ಶಿಷ್ಯರು ಅವರೊಂದಿಗೆ ಇದ್ದರು.


ವಿಧವೆಯನ್ನೂ ಪರದೇಶಸ್ಥನನ್ನೂ ಅವರು ಹತ್ಯಮಾಡುತ್ತಾರೆ. ದಿಕ್ಕಿಲ್ಲದವರನ್ನು ಹತಮಾಡುತ್ತಾರೆ.


ನನ್ನನ್ನು ಬೀಳಿಸುವಂತೆ, ಅವರು ಈಗ ನನ್ನನ್ನು ಸುತ್ತಿಕೊಂಡಿದ್ದಾರೆ, ನನ್ನನ್ನು ನೆಲಕ್ಕೆ ಹಾಕಬೇಕೆಂದು ಅವರ ಕಣ್ಣುಗಳು ಕಾದಿವೆ.


ಇದಲ್ಲದೆ ಮನಸ್ಸೆಯು ಯೆಹೋವ ದೇವರ ದೃಷ್ಟಿಯಲ್ಲಿ ಕೇಡನ್ನು ಮಾಡಿದ್ದರಲ್ಲಿ ಯೆಹೂದವು ಪಾಪವನ್ನು ಮಾಡಲು ಪ್ರೇರೇಪಿಸಿದ ತನ್ನ ಪಾಪದ ಹೊರತು ಅವನು ಯೆರೂಸಲೇಮನ್ನು ಒಂದು ಕೊನೆಯಿಂದ ಮತ್ತೊಂದು ಕೊನೆಯವರೆಗೂ ತಾನು ಬಹು ಹೆಚ್ಚಾಗಿ ಚೆಲ್ಲಿದ ನಿರಪರಾಧದ ರಕ್ತದಿಂದ ತುಂಬಿಸಿದನು.


ಅವನು ಅಡಗಿಕೊಂಡಿರುವ ಸಮಸ್ತ ರಹಸ್ಯ ಸ್ಥಳಗಳನ್ನೂ ನೋಡಿ ತಿಳಿದುಕೊಂಡು, ನಿಶ್ಚಯವಾದ ವರ್ತಮಾನವನ್ನು ನನ್ನ ಬಳಿಗೆ ತೆಗೆದುಕೊಂಡು ಬನ್ನಿರಿ. ಆಗ ನಾನು ನಿಮ್ಮ ಸಂಗಡ ಬಂದು ಅವನು ದೇಶದಲ್ಲಿದ್ದರೆ, ಯೆಹೂದದ ಸಹಸ್ರ ಕುಲದಲ್ಲಿಯೂ ಅವನನ್ನು ಹುಡುಕಿ ಅವನನ್ನು ಹಿಡಿಯುವೆನು,” ಎಂದನು.


ಇವುಗಳಾದ ಮೇಲೆ ಕರ್ತದೇವರು ಬೇರೆ ಎಪ್ಪತ್ತೆರಡು ಮಂದಿಯನ್ನು ಸಹ ನೇಮಿಸಿ ತಾವೇ ಸ್ವತಃ ಹೋಗಬೇಕೆಂದಿದ್ದ ಪ್ರತಿಯೊಂದು ಪಟ್ಟಣಕ್ಕೂ ಸ್ಥಳಕ್ಕೂ ಇಬ್ಬಿಬ್ಬರನ್ನಾಗಿ ತಮಗೆ ಮುಂದಾಗಿ ಕಳುಹಿಸಿದರು.


ಶೆಕೆಮಿನ ಹಿರಿಯರು ಪರ್ವತ ಶಿಖರಗಳ ಮೇಲೆ ಅವನಿಗೋಸ್ಕರ ಹೊಂಚುಗಾರರನ್ನು ಇಟ್ಟು, ತಮ್ಮ ಸಮೀಪವಾಗಿ ಮಾರ್ಗದಲ್ಲಿ ಹಾದುಹೋಗುವ ಎಲ್ಲರನ್ನು ಸುಲಿದುಕೊಂಡರು. ಈ ವರ್ತಮಾನವು ಅಬೀಮೆಲೆಕನಿಗೆ ಮುಟ್ಟಿತು.


ಕೊಲೆಗಾರನು ಮುಂಜಾನೆಯೇ ಎದ್ದು, ದಿಕ್ಕಿಲ್ಲದವರನ್ನೂ, ಬಡವರನ್ನೂ ಸಂಹರಿಸುತ್ತಾನೆ; ರಾತ್ರಿಯಲ್ಲಿ ಕಳ್ಳನಂತೆ ವರ್ತಿಸುತ್ತಾನೆ.


ದುಷ್ಟನೇ, ನೀತಿವಂತನ ನಿವಾಸಕ್ಕೆ ಹೊಂಚು ಹಾಕಬೇಡ; ಅವನ ವಿಶ್ರಾಂತಿಯ ಸ್ಥಳವನ್ನು ಸೂರೆಮಾಡಬೇಡ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು