Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಕೀರ್ತನೆಗಳು 102:18 - ಕನ್ನಡ ಸಮಕಾಲಿಕ ಅನುವಾದ

18 ಇದು ಮುಂದಿನ ಸಂತತಿಗೋಸ್ಕರ ಲಿಖಿತವಾಗಿರಲಿ; ಹುಟ್ಟಲಿಕ್ಕಿರುವ ಜನರು ಯೆಹೋವ ದೇವರನ್ನು ಸ್ತುತಿಸಲಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

18 ಇದು ಮುಂದಣ ಸಂತಾನದವರಿಗೋಸ್ಕರ ಶಾಸನವಾಗಿರಲಿ, ಮುಂದೆ ಹುಟ್ಟುವ ಪ್ರಜೆಯು ಯೆಹೋವನನ್ನು ಕೊಂಡಾಡುತ್ತಾ,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

18 ಮುಂದಣ ಸಂತತಿಗಿದು ಶಾಸನವಾಗಿರಲಿ I ಮುಂದೆ ಹುಟ್ಟುವ ಪ್ರಜೆ ಪ್ರಭುವನು ಹೊಗಳಲಿ II

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

18 ಇದು ಮುಂದಣ ಸಂತಾನದವರಿಗೋಸ್ಕರ ಶಾಸನವಾಗಿರಲಿ. ಮುಂದೆ ಹುಟ್ಟುವ ಪ್ರಜೆಯು ಯಾಹುವನ್ನು ಕೊಂಡಾಡುತ್ತಾ -

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

18 ಮುಂದಿನ ತಲೆಮಾರುಗಳವರಿಗಾಗಿ ಇವುಗಳನ್ನು ಬರೆದಿಡಿ. ಮುಂದಿನ ಕಾಲದಲ್ಲಿ ಅವರು ಯೆಹೋವನನ್ನು ಸ್ತುತಿಸುತ್ತಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಕೀರ್ತನೆಗಳು 102:18
21 ತಿಳಿವುಗಳ ಹೋಲಿಕೆ  

ಪವಿತ್ರ ವೇದದಲ್ಲಿ ಮುಂಚಿತವಾಗಿ ಬರೆದಿರುವುದೆಲ್ಲವೂ ನಮ್ಮ ಬೋಧನೆಗಾಗಿಯೇ ಬರೆಯಲಾಗಿದೆ. ನಾವು ಆ ಬೋಧನೆಗಳ ಮೂಲಕ ಸಹನೆಯನ್ನೂ ಉತ್ತೇಜನೆಯನ್ನೂ ಹೊಂದಿಕೊಂಡು ನಿರೀಕ್ಷೆಯುಳ್ಳವರಾಗಿರಬೇಕೆಂದು ಬರೆಯಲಾಗಿದೆ.


ನನ್ನ ಸ್ತೋತ್ರವನ್ನು ಪ್ರಚುರಪಡಿಸಲಿ ಎಂದು ನಾನು ಈ ಜನರನ್ನು ನನಗೋಸ್ಕರ ರೂಪಿಸಿದ್ದೇನೆ.


ಆದರೂ ನೀವು ನನ್ನ ಮರಣಾನಂತರ ಇವುಗಳನ್ನು ಯಾವಾಗಲೂ ನೆನಪಿಟ್ಟುಕೊಳ್ಳುವಂತೆ ನನ್ನಿಂದಾದಷ್ಟು ಪ್ರಯಾಸಪಡುವೆನು.


ಆ ಮನುಷ್ಯರಿಗೆ ಸಂಭವಿಸಿದ ಈ ಸಂಗತಿಗಳು ನಿದರ್ಶನಗಳಾಗಿವೆ, ಯುಗಾಂತ್ಯಕ್ಕೆ ಬಂದಿರುವ ನಮಗೆ ಎಚ್ಚರಿಕೆಯ ಮಾತುಗಳಾಗಿವೆ.


ನಾವು ಕ್ರಿಸ್ತ ಯೇಸುವಿನಲ್ಲಿ ಸತ್ಕ್ರಿಯೆಗಳನ್ನು ಮಾಡುವುದಕ್ಕಾಗಿಯೇ ಸೃಷ್ಟಿಸಲಾದ ದೇವರ ಕಲಾಕೃತಿಯಾಗಿದ್ದೇವೆ. ಸತ್ಕ್ರಿಯೆಗಳನ್ನು ಮಾಡುತ್ತಾ ಬಾಳಬೇಕೆಂದು ದೇವರು ನಮ್ಮನ್ನು ಮುಂಚಿತವಾಗಿ ನೇಮಿಸಿದ್ದಾರೆ.


ಆದರೆ ಯೇಸುವೇ ದೇವಪುತ್ರನಾದ ಕ್ರಿಸ್ತನೆಂದು ನೀವು ನಂಬುವಂತೆಯೂ ನಂಬಿ ಅವರ ಹೆಸರಿನ ಮೂಲಕ ನಿತ್ಯಜೀವವನ್ನು ಪಡೆದುಕೊಳ್ಳುವಂತೆಯೂ ಇವುಗಳು ಬರೆಯಲಾಗಿದೆ.


ದಾನಿಯೇಲನಾದ ನಾನು ಪವಿತ್ರ ಗ್ರಂಥಗಳನ್ನು ಪರೀಕ್ಷಿಸಿ, ಯೆಹೋವ ದೇವರ ಪ್ರವಾದಿ ಯೆರೆಮೀಯನಿಗೆ ದಯಪಾಲಿಸಿದ ವಾಕ್ಯಾನುಸಾರ, ಯೆರೂಸಲೇಮ್ ಪಾಳುಬಿದ್ದಿರಬೇಕಾದ ಪೂರ್ಣ ಕಾಲಾವಧಿ ಎಪ್ಪತ್ತು ವರ್ಷಗಳೆಂದು ತಿಳಿದುಕೊಂಡೆನು.


ನನ್ನ ಹೆಸರಿನಿಂದ ಕರೆಯಲಾದ ಪ್ರತಿಯೊಬ್ಬನನ್ನೂ ಬರಮಾಡುವೆನು. ಏಕೆಂದರೆ ಅವರನ್ನು ನನ್ನ ಮಹಿಮೆಗಾಗಿ ಸೃಷ್ಟಿಸಿದ್ದೇನೆ. ನಾನು ಅವರನ್ನು ನಿರ್ಮಿಸಿದ್ದೇನೆ. ಹೌದು, ನಾನು ಅವರನ್ನು ಉಂಟುಮಾಡಿದ್ದೇನೆ.”


ದೇವರೇ, ನಾನು ಮುಪ್ಪಿನವನೂ, ನೆರೆಕೂದಲಿನವನೂ ಆದಾಗ ಈ ಸಂತತಿಯವರಿಗೆ ನಿಮ್ಮ ಶಕ್ತಿಯನ್ನೂ, ಮುಂದಿನ ಪೀಳಿಗೆಗೆ ನಿಮ್ಮ ಪರಾಕ್ರಮವನ್ನೂ ತಿಳಿಸುವವರೆಗೂ ನನ್ನನ್ನು ಕೈಬಿಡಬೇಡಿರಿ.


ಮುಂದಿನ ತಲಾಂತರಕ್ಕೆ ತಿಳಿಸುವುದಕ್ಕೋಸ್ಕರ ಅದರ ಗೋಪುರಗಳನ್ನು ಕಣ್ಣಿಟ್ಟು ನೋಡಿರಿ, ಅದರ ಅರಮನೆಗಳನ್ನು ಲಕ್ಷಿಸಿರಿ.


ಆಗ ಯೆಹೋವ ದೇವರು ಮೋಶೆಗೆ, “ಇದನ್ನು ಜ್ಞಾಪಕಾರ್ಥವಾಗಿ ಗ್ರಂಥದಲ್ಲಿ ಬರೆ. ಏಕೆಂದರೆ ನಾನು ಅಮಾಲೇಕ್ಯರ ನೆನಪು ಭೂಲೋಕದಲ್ಲಿ ಇರದಂತೆ ಸಂಪೂರ್ಣವಾಗಿ ಅಳಿಸಿಬಿಡುವೆನು. ಇದನ್ನು ಯೆಹೋಶುವನಿಗೆ ಮನದಟ್ಟಾಗುವಂತೆ ಹೇಳು,” ಎಂದರು.


ಆಕಾಶವೂ ಭೂಮಿಯೂ ಸಮುದ್ರಗಳೂ, ಅವುಗಳಲ್ಲಿ ಸಂಚರಿಸುವುದೆಲ್ಲವೂ ದೇವರನ್ನು ಸ್ತುತಿಸಲಿ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು