Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಕೀರ್ತನೆಗಳು 102:4 - ಕನ್ನಡ ಸಮಕಾಲಿಕ ಅನುವಾದ

4 ನನ್ನ ಹೃದಯವು ಬಾಡಿಹೋಗಿ ಹುಲ್ಲಿನ ಹಾಗೆ ಒಣಗಿಹೋಗಿದೆ; ನಾನು ಊಟಮಾಡುವುದಕ್ಕೆ ಸಹ ಮರೆತುಬಿಡುತ್ತೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

4 ನನ್ನ ಹೃದಯವು ಬಿಸಿಲಿನಿಂದ ಬಾಡಿಹೋದ ಹುಲ್ಲಿನಂತಿದೆ; ಊಟವನ್ನು ಮರೆತೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

4 ಬಿಸಿಲಿಗೆ ಬಾಡಿದ ಹುಲ್ಲಿನಂತಿದೆ ಎನ್ನೆದೆ I ತಿಂಡಿತೀರ್ಥವನುಣ್ಣಲೂ ನಾ ಮರೆತುಹೋದೆ II

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

4 ನನ್ನ ಹೃದಯವು ಬಿಸಿಲಿನಿಂದ ಬಾಡಿಹೋದ ಹುಲ್ಲಿನಂತಿದೆ; ಊಟವನ್ನು ಮರೆತೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

4 ನಾನು ನಿರ್ಬಲನಾಗಿ ಒಣಗಿಹೋಗುತ್ತಿರುವ ಹುಲ್ಲಿನಂತಿದ್ದೇನೆ. ನಾನು ಊಟವನ್ನೂ ಮರೆತುಬಿಡುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಕೀರ್ತನೆಗಳು 102:4
21 ತಿಳಿವುಗಳ ಹೋಲಿಕೆ  

ಯೆಹೋವ ದೇವರ ಶ್ವಾಸವು ಅದರ ಮೇಲೆ ಬೀಸುವುದರಿಂದ, ಹುಲ್ಲು ಒಣಗಿಹೋಗುವುದು. ಹೂವು ಉದುರಿ ಹೋಗುವುದು. ಮಾನವರೆಲ್ಲರೂ ಹುಲ್ಲೇ ಆಗಿದ್ದಾರೆ.


ಏಕೆಂದರೆ, ಅವರು ಹುಲ್ಲಿನ ಹಾಗೆ ಬೇಗ ಒಣಗಿ ಹೋಗುವರು. ಹಸಿರಾದ ಸೊಪ್ಪಿನ ಹಾಗೆ ಬಾಡಿಹೋಗುವರು.


ನಾನು ವ್ಯಥೆಪಡುತ್ತಿರುವಾಗ, ದೇವರನ್ನು ಜ್ಞಾಪಕಮಾಡಿಕೊಂಡೆನು. ನಾನು ಚಿಂತಿಸುವುದರಿಂದ ನನ್ನ ಆತ್ಮವು ಬಳಲಿ ಹೋಯಿತು.


ಆಮೇಲೆ ಎಜ್ರನು ಎದ್ದು ದೇವರ ಆಲಯದ ಮುಂಭಾಗದ ಸ್ಥಳವನ್ನು ಬಿಟ್ಟು, ಎಲ್ಯಾಷೀಬನ ಮಗ ಯೆಹೋಹಾನಾನನ ಕೊಠಡಿಗೆ ಹೋಗಿ, ದುಃಖಿಸುತ್ತಾ ಅನ್ನಪಾನಗಳನ್ನು ತೆಗೆದುಕೊಳ್ಳದೆ ರಾತ್ರಿಯನ್ನು ಕಳೆದನು. ಏಕೆಂದರೆ ಸೆರೆಯಿಂದ ಯೆರೂಸಲೇಮಿಗೆ ಬಂದಿದ್ದ ಯೆಹೂದ್ಯರ ಅಪನಂಬಿಗಸ್ತಿಕೆಯ ಬಗ್ಗೆ ತುಂಬಾ ದುಃಖಿತನಾಗಿದ್ದನು.


ಮೂರು ದಿನ ಅವನು ಕುರುಡನಾಗಿದ್ದನು. ಅವನು ಏನೂ ತಿನ್ನಲಿಲ್ಲ, ಏನೂ ಕುಡಿಯಲಿಲ್ಲ.


ನನ್ನ ಪ್ರಾಣವು ಇನ್ನೂ ಅವುಗಳನ್ನು ಜ್ಞಾಪಿಸಿಕೊಳ್ಳುತ್ತಾ ನನ್ನೊಳಗೆ ಕುಂದಿಹೋಗಿದೆ.


ಅವರು ತನ್ನ ಬತ್ತಳಿಕೆಯಲ್ಲಿನ ಬಾಣಗಳನ್ನು ನನ್ನ ಅಂತರಂಗಗಳಲ್ಲಿ ತೂರಿ ಹೋಗುವಹಾಗೆ ಮಾಡಿದ್ದಾರೆ.


ನನ್ನ ದಿವಸಗಳು ಸಾಯಂಕಾಲದ ನೆರಳಿನ ಹಾಗಿವೆ; ನಾನು ಹುಲ್ಲಿನ ಹಾಗೆ ಒಣಗುತಿದ್ದೇನೆ.


ನಿಮ್ಮ ದುಃಖ ಬೇಸರದ ನಿಮಿತ್ತ, ಬೂದಿಯನ್ನು ರೊಟ್ಟಿಯಂತೆ ತಿಂದಿದ್ದೇನೆ; ನನ್ನ ಪಾನವನ್ನು ಕಣ್ಣೀರಿನಿಂದ ಬೆರೆಸಿದ್ದೇನೆ.


ನಿಂದೆಯು ನನ್ನ ಹೃದಯವನ್ನು ಮುರಿದಿದೆ. ನನ್ನನ್ನು ನಿಸ್ಸಹಾಯಕನನ್ನಾಗಿ ಮಾಡಿದೆ. ಅನುತಾಪಕ್ಕೋಸ್ಕರ ಕೆಲವರನ್ನು ನಿರೀಕ್ಷಿಸಿದೆನು, ಆದರೆ ಒಬ್ಬರೂ ಇರಲಿಲ್ಲ. ಸಂತೈಸುವವರಿಗೋಸ್ಕರ ಸಹ ಎದುರು ನೋಡಿದೆನು, ಆದರೆ ಯಾರೂ ಸಿಕ್ಕಲಿಲ್ಲ.


ನನ್ನ ದೇವರೇ, ನನ್ನ ಪ್ರಾಣವು ನನ್ನಲ್ಲಿ ಕುಗ್ಗಿಹೋಗಿದೆ; ಆದ್ದರಿಂದ ಯೊರ್ದನ್ ನಾಡಿನಿಂದಲೂ ಹೆರ್ಮೋನ್ ಬೆಟ್ಟಗಳಿಂದಲೂ ಮಿಸಾರ್ ಬೆಟ್ಟದಿಂದಲೂ ನಿಮ್ಮನ್ನು ಜ್ಞಾಪಕಮಾಡಿಕೊಳ್ಳುತ್ತೇನೆ.


ಆಗ ಮನುಷ್ಯನು ತನ್ನ ಹಸಿವನ್ನು ಕಳೆದುಕೊಳ್ಳುತ್ತಾನೆ, ಅವನ ಜೀವಕ್ಕೆ ಸವಿ ಊಟವೂ ಅಸಹ್ಯವಾಗುವುದು.


“ನನ್ನ ಜೀವನವೇ ನನಗೆ ಬೇಸರವಾಗಿದೆ; ನನ್ನ ದೂರುಗಳನ್ನು ಮನಬಿಚ್ಚಿ ನುಡಿಯುವೆನು; ನನ್ನ ಪ್ರಾಣದ ಕಹಿಯಿಂದ ಮಾತನಾಡುವೆನು.


ಸರ್ವಶಕ್ತರ ಬಾಣಗಳು ನನ್ನಲ್ಲಿ ನಾಟಿವೆ; ಅವುಗಳ ವಿಷವನ್ನು ನನ್ನ ಆತ್ಮವು ಹೀರುತ್ತಿದೆ; ದೇವರ ವಿಷಯವಾದ ಹೆದರಿಕೆಗಳು ನನ್ನನ್ನು ಸುತ್ತುವರೆದಿವೆ.


ಅವನನ್ನು ಎಬ್ಬಿಸುವುದಕ್ಕೆ ಅವನ ಮನೆಯ ಹಿರಿಯರು ಅವನ ಬಳಿಗೆ ಬಂದರು. ಆದರೆ ಅವನಿಗೆ ಮನಸ್ಸಿಲ್ಲದೆ ಇತ್ತು. ಅವರ ಸಂಗಡ ಭೋಜನ ಮಾಡದೆ ಇದ್ದನು.


ನನ್ನ ಮೇಲಿನ ಚರ್ಮವು ಕಪ್ಪಾಗಿ ಉದುರುತ್ತಿದೆ; ನನ್ನ ಶರೀರ ಜ್ವರದಿಂದ ಬಿಸಿಯಾಗಿದೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು