Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಕೀರ್ತನೆಗಳು 103:17 - ಕನ್ನಡ ಸಮಕಾಲಿಕ ಅನುವಾದ

17 ಆದರೆ ಯೆಹೋವ ದೇವರ ಪ್ರೀತಿಯು ಅವರಿಗೆ ಭಯಪಡುವವರ ಮೇಲೆ ಯುಗಯುಗಾಂತರಕ್ಕೂ ಇರುವುದು, ಅವರ ನೀತಿಯು ಮಕ್ಕಳ ಮಕ್ಕಳಿಗೂ ನೆಲೆಸಿರುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

17 ಆದರೆ ಯೆಹೋವನಲ್ಲಿ ಭಯಭಕ್ತಿಯುಳ್ಳವರ ಮೇಲೆ, ಆತನ ದಯೆಯು ಯುಗಯುಗಾಂತರಗಳವರೆಗೂ ಇರುತ್ತದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

17 ಭಯಭಕ್ತರಿಗೆ ಪ್ರಭುವಿನ ಪ್ರೀತಿಯಾದರೋ ಯುಗಯುಗಾಂತರಕು I ಅವರ ಮಕ್ಕಳ ಮಕ್ಕಳಿಗೆ ಆತನ ನೀತಿಯು ತಲತಲಾಂತರಕು II

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

17 ಆದರೆ ಯೆಹೋವನಲ್ಲಿ ಭಯಭಕ್ತಿಯುಳ್ಳವರ ಮೇಲೆ ಆತನ ದಯವು ಯುಗಯುಗಾಂತರಗಳವರೆಗೂ ಇರುತ್ತದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

17 ಆದರೆ ಯೆಹೋವನು ತನ್ನ ಭಕ್ತರನ್ನು ಪ್ರೀತಿಸುತ್ತಲೇ ಬಂದನು. ಇನ್ನು ಮುಂದೆಯೂ ಪ್ರೀತಿಸುತ್ತಲೇ ಇರುವನು. ಆತನು ಅವರ ಮಕ್ಕಳಿಗೂ ಮೊಮ್ಮಕ್ಕಳಿಗೂ ಒಳ್ಳೆಯವನಾಗಿರುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಕೀರ್ತನೆಗಳು 103:17
27 ತಿಳಿವುಗಳ ಹೋಲಿಕೆ  

ಯೆಹೋವ ದೇವರು ಒಳ್ಳೆಯವರು, ಅವರ ಕರುಣೆಯು ಯುಗಯುಗಕ್ಕೂ ಇರುವುದು. ಅವರ ಸತ್ಯತೆಯು ತಲತಲಾಂತರಕ್ಕೂ ಮುಂದುವರಿಯುವುದು.


ದೇವರು ನಮ್ಮ ಕ್ರಿಯೆಗಳಿಗನುಸಾರವಾಗಿ ಅಲ್ಲ, ತಮ್ಮ ಸ್ವಂತ ಸಂಕಲ್ಪ ಮತ್ತು ಕೃಪೆಯ ಪ್ರಕಾರ ನಮ್ಮನ್ನು ರಕ್ಷಿಸಿ ಪರಿಶುದ್ಧವಾದ ಜೀವಿತಕ್ಕೆ ನಮ್ಮನ್ನು ಕರೆದರು. ಈ ಕೃಪೆಯು ಕಾಲದ ಆರಂಭಕ್ಕೆ ಮುಂಚೆಯೇ ಕ್ರಿಸ್ತ ಯೇಸುವಿನಲ್ಲಿ ನಮಗೆ ಕೊಡಲಾಯಿತು.


ನನ್ನನ್ನು ಪ್ರೀತಿಸಿ, ನನ್ನ ಆಜ್ಞೆಗಳನ್ನು ಕೈಗೊಳ್ಳುವವರಿಗೆ, ಸಾವಿರ ತಲೆಗಳವರೆಗೆ ಪ್ರೀತಿ ತೋರಿಸುತ್ತೇನೆ.


ದೇವರಿಂದ ದೊರಕುವ ನೀತಿಯು ಸುವಾರ್ತೆಯಲ್ಲಿ ಪ್ರಕಟವಾಗಿದೆ. “ನೀತಿವಂತನು ನಂಬಿಕೆಯಿಂದಲೇ ಬದುಕುವನು,” ಎಂದು ಬರೆದಿರುವ ಪ್ರಕಾರ, ಆ ನೀತಿಯು ಪ್ರಾರಂಭದಿಂದ ಕೊನೆಯವರೆಗೆ ನಂಬಿಕೆಯಿಂದಲೇ ಆದದ್ದು.


ಆಕಾಶಗಳ ಕಡೆಗೆ ನಿಮ್ಮ ಕಣ್ಣುಗಳನ್ನು ಎತ್ತಿರಿ ಮತ್ತು ಕೆಳಗಿರುವ ಭೂಮಿಯನ್ನು ನೋಡಿರಿ. ಏಕೆಂದರೆ ಆಕಾಶಗಳು ಹೊಗೆಯಂತೆ ಅಗೋಚರವಾಗುವುವು. ಭೂಮಿಯು ಹಳೆಯ ಬಟ್ಟೆಯಂತಾಗುವುದು ಮತ್ತು ಅದರಲ್ಲಿ ವಾಸಿಸುವವರು ಸೊಳ್ಳೆಗಳೋಪಾದಿಯಲ್ಲಿ ಸಾಯುವರು. ಆದರೆ ನನ್ನ ರಕ್ಷಣೆಯು ಶಾಶ್ವತವಾಗಿರುವುದು, ನನ್ನ ನೀತಿಯು ಎಂದಿಗೂ ರದ್ದಾಗದು.


ಯೆಹೋವ ದೇವರು ಪೂರ್ವದಲ್ಲಿ ನನಗೆ ಕಾಣಿಸಿಕೊಂಡು, “ಹೌದು, ಶಾಶ್ವತ ಪ್ರೀತಿಯಿಂದ ನಿನ್ನನ್ನು ಪ್ರೀತಿಸಿದ್ದೇನೆ. ಕುಂದದ ದಯೆಯಿಂದಲೇ ನಿನ್ನನ್ನು ಸೆಳೆದುಕೊಂಡಿದ್ದೇನೆ.


ಯೆಹೋವ ದೇವರಿಗೆ ಉಪಕಾರಸ್ತುತಿ ಮಾಡಿರಿ; ಅವರು ಒಳ್ಳೆಯವರು. ಅವರ ಪ್ರೀತಿ ಶಾಶ್ವತವಾಗಿರುವುದು.


ಕ್ರಿಸ್ತ ಯೇಸುವಿನ ದಾಸನೂ ಅಪೊಸ್ತಲನೂ ಆಗಿರುವ ಸೀಮೋನ ಪೇತ್ರನು, ನಮ್ಮ ದೇವರ ಮತ್ತು ರಕ್ಷಕ ಆಗಿರುವ ಕ್ರಿಸ್ತ ಯೇಸುವಿನ ನೀತಿಯ ಮೂಲಕ ನಮ್ಮಂತೆಯೇ ಅಮೂಲ್ಯವಾದ ನಂಬಿಕೆಯನ್ನು ಹೊಂದಿದವರಿಗೆ ಬರೆಯುವುದು:


ನಾನು ನಿಮಗೆ ಹೇಳುವುದೇನೆಂದರೆ, ದೇವರು ನಂಬಿಗಸ್ತರು ಎಂದು ತೋರಿಸುವುದಕ್ಕಾಗಿ ಕ್ರಿಸ್ತ ಯೇಸು ಯೆಹೂದ್ಯರಿಗೆ ಸೇವಕರಾಗಿ ಬಂದರು. ಹೀಗೆ ದೇವರು ಪಿತೃಗಳಿಗೆ ಕೊಟ್ಟ ವಾಗ್ದಾನಗಳನ್ನು ದೃಢಪಡಿಸಿದರು.


ನಿಮ್ಮ ಸೇವಕರಿಗೆ ನಿಮ್ಮ ಕೃತ್ಯಗಳನ್ನು ಪ್ರಕಟಿಸಿರಿ. ಅವರ ಮಕ್ಕಳಿಗೆ ನಿಮ್ಮ ಪ್ರಭೆಯೂ ತೋರಿ ಬರಲಿ.


ನನ್ನ ಜನರೇ, ಮೋವಾಬಿನ ಅರಸನಾದ ಬಾಲಾಕನು ಯೋಚಿಸಿದ್ದನ್ನೂ ಬೆಯೋರನ ಮಗ ಬಿಳಾಮನು ಅವನಿಗೆ ಉತ್ತರವಾಗಿ ಹೇಳಿದ್ದನ್ನೂ ಶಿಟ್ಟೀಮು ಮೊದಲುಗೊಂಡು ಗಿಲ್ಗಾಲಿನ ವರೆಗೆ ಆದ ನಿಮ್ಮ ಪ್ರಯಾಣವನ್ನೂ ಈಗ ಜ್ಞಾಪಕಮಾಡಿಕೊಳ್ಳಿರಿ. ಆಗ ಯೆಹೋವ ದೇವರ ನೀತಿಯ ಕೃತ್ಯಗಳನ್ನು ತಿಳಿದುಕೊಳ್ಳುವಿರಿ.


“ಆದರೆ ನನ್ನ ಸೇವಕನಾದ ಇಸ್ರಾಯೇಲೇ, ನಾನು ಆಯ್ದುಕೊಂಡ ಯಾಕೋಬೇ, ನನ್ನ ಸ್ನೇಹಿತನಾದ ಅಬ್ರಹಾಮನ ಸಂತತಿಯೇ,


ಯೆಹೋವ ದೇವರೇ, ಆದಿಯಿಂದಿರುವ ನಿಮ್ಮ ಅನುಕಂಪವನ್ನೂ ನಿಮ್ಮ ಪ್ರೀತಿಯನ್ನೂ, ಕರುಣೆಯನ್ನೂ ಜ್ಞಾಪಕಮಾಡಿಕೊಳ್ಳಿರಿ.


ಆ ಸಂತತಿಯವರು ದೇವರ ನೀತಿಯನ್ನು ಇನ್ನೂ ಜನಿಸದ ಜನಾಂಗಕ್ಕೆ ಸಾರಿ ತಿಳಿಸುವರು, ಏಕೆಂದರೆ ಇದನ್ನೆಲ್ಲ ಮಾಡಿದವರು ದೇವರೇ!


ನಿಮ್ಮ ಪಿತೃಗಳ ಮೇಲೆ ಯೆಹೋವ ದೇವರು ತಾವೇ ಮನಸ್ಸಿಟ್ಟು, ಅವರನ್ನು ಪ್ರೀತಿಸಿ, ಅವರ ಸಂತಾನವಾಗಿರುವ ನಿಮ್ಮನ್ನು ಈ ಹೊತ್ತು ಇರುವ ಪ್ರಕಾರ ಎಲ್ಲಾ ಜನರೊಳಗಿಂದ ಆರಿಸಿಕೊಂಡರು.


“ಅಕ್ರಮಗಳನ್ನು ಮುಗಿಸುವುದಕ್ಕೂ, ಪಾಪಗಳನ್ನು ಮುಚ್ಚುವುದಕ್ಕೂ, ಅಪರಾಧಗಳಿಗೆ ಪ್ರಾಯಶ್ಚಿತ್ತ ಮಾಡುವುದಕ್ಕೂ, ನಿತ್ಯವಾದ ನೀತಿಯನ್ನು ಬರಮಾಡುವುದಕ್ಕೂ, ಆ ದರ್ಶನಕ್ಕೂ, ಪ್ರವಾದಿಯ ನುಡಿಗೆ ಮುದ್ರೆಹಾಕುವುದಕ್ಕೂ, ಮಹಾಪರಿಶುದ್ಧ ಸ್ಥಳವನ್ನು ಅಭಿಷೇಕ ಮಾಡುವುದಕ್ಕೂ ನಿನ್ನ ಜನರ ಮೇಲೆಯೂ, ನಿನ್ನ ಪರಿಶುದ್ಧ ಪಟ್ಟಣದ ಮೇಲೆಯೂ ಎಪ್ಪತ್ತು ವಾರಗಳು ಕಳೆಯಬೇಕು ಎಂದು ನಿಷ್ಕರ್ಷೆಯಾಗಿದೆ.


ನನ್ನ ನೀತಿಯನ್ನು ಹತ್ತಿರಕ್ಕೆ ಬರಮಾಡುವೆನು. ಅದು ಇನ್ನು ದೂರವಾಗಿರದು. ನನ್ನ ರಕ್ಷಣೆಯು ಇನ್ನು ತಡವಾಗದು, ನನ್ನ ಮಹಿಮೆಯಾಗಿರುವ ಇಸ್ರಾಯೇಲಿಗೋಸ್ಕರ ಚೀಯೋನಿನಲ್ಲಿ ರಕ್ಷಣೆಯನ್ನು ಉಂಟುಮಾಡುವೆನು.


ದೇವರ ಕೆಲಸವು ಘನತೆಯೂ, ಮಹಿಮೆಯೂ ಉಳ್ಳದ್ದು; ದೇವರ ನೀತಿಯು ಎಂದೆಂದಿಗೂ ನಿಲ್ಲುವುದು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು