Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಕೀರ್ತನೆಗಳು 103:4 - ಕನ್ನಡ ಸಮಕಾಲಿಕ ಅನುವಾದ

4 ದೇವರು ನಿಮ್ಮ ಜೀವವನ್ನು ಪಾತಾಳದಿಂದ ವಿಮೋಚಿಸುವರು; ಪ್ರೀತಿ ಅನುಕಂಪವನ್ನು ನಿನಗೆ ಕಿರೀಟವಾಗಿ ಶೃಂಗರಿಸುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

4 ನಿನ್ನ ಜೀವವನ್ನು ನಾಶನದಿಂದ ತಪ್ಪಿಸುವವನೂ, ಶಾಶ್ವತ ಪ್ರೀತಿ ಮತ್ತು ಕರುಣೆಯೆಂಬ ಕಿರೀಟದಿಂದ ನಿನ್ನನ್ನು ಶೃಂಗರಿಸುವವನೂ ಆಗಿದ್ದಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

4 ಉಳಿಸುವನು ಪಾತಾಳದ ಕೂಪದಿಂದ ನನ್ನನು I ಮುಡಿಸುವನೆನಗೆ ದಯದಾಕ್ಷಿಣ್ಯದ ಮುಕುಟವನು II

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

4 ನಿನ್ನ ಜೀವವನ್ನು ನಾಶದಿಂದ ತಪ್ಪಿಸುವವನೂ ಪ್ರೀತಿಕೃಪೆಗಳೆಂಬ ಕಿರೀಟದಿಂದ ನಿನ್ನನ್ನು ಶೃಂಗರಿಸುವವನೂ ಆಗಿದ್ದಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

4 ಆತನು ನಮ್ಮ ಜೀವವನ್ನು ನಾಶನದಿಂದ ರಕ್ಷಿಸಿ ನಮಗೆ ಪ್ರೀತಿಯನ್ನೂ ಕನಿಕರವನ್ನೂ ತೋರುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಕೀರ್ತನೆಗಳು 103:4
15 ತಿಳಿವುಗಳ ಹೋಲಿಕೆ  

ನೀವು ನನ್ನನ್ನು ಬಿಡಿಸಿದ್ದಕ್ಕಾಗಿ ನನ್ನ ತುಟಿಗಳು ಆನಂದದಿಂದ ಹಾಡಿ ಸ್ತುತಿಸುತ್ತವೆ.


ಏಕೆಂದರೆ ನೀವು ನನ್ನ ಪ್ರಾಣವನ್ನು ಮರಣದಿಂದ ಬಿಡಿಸಿದ್ದೀರಿ. ನಾನು ಜೀವದ ಬೆಳಕಿನಲ್ಲಿ ನಿಮ್ಮ ಮುಂದೆ ನಡೆದುಕೊಳ್ಳುವ ಹಾಗೆ ನೀವು ನನ್ನ ಪಾದಗಳನ್ನು ಎಡವದಂತೆ ಕಾಪಾಡಿದ್ದೀರಿ.


ಪೂರ್ವಕ್ಕೂ ಪಶ್ಚಿಮಕ್ಕೂ ಎಷ್ಟು ದೂರವೋ, ಅವರು ನಮ್ಮ ಅತಿಕ್ರಮಗಳನ್ನು ನಮ್ಮಿಂದ ಅಷ್ಟು ದೂರ ಮಾಡಿದ್ದಾರೆ.


ಪ್ರಧಾನ ಕುರುಬ ಆಗಿರುವವರು ಪ್ರತ್ಯಕ್ಷರಾಗುವಾಗ ನೀವು ಎಂದಿಗೂ ಬಾಡದ ಮಹಿಮೆಯುಳ್ಳ ಕಿರೀಟವನ್ನು ಹೊಂದುವಿರಿ.


ನೀವು ಮನುಷ್ಯಪುತ್ರನನ್ನು ದೇವರಿಗಿಂತಲೂ ಸ್ವಲ್ಪ ಕಡಿಮೆ ಮಾಡಿ, ಮಹಿಮೆಯನ್ನೂ ಮಾನವನ್ನೂ ಅವನಿಗೆ ಕಿರೀಟವಾಗಿಟ್ಟಿದ್ದೀರಿ.


ಯೆಹೋವ ದೇವರೇ, ನೀವು ನೀತಿವಂತರನ್ನು ನಿಶ್ಚಯವಾಗಿ ಆಶೀರ್ವದಿಸಿದ್ದೀರಿ; ನೀವು ಅವರನ್ನು ನಿಮ್ಮ ಮೆಚ್ಚುಗೆಯಿಂದ ಗುರಾಣಿಯಂತೆಯೇ ಆವರಿಸಿಕೊಳ್ಳಿರಿ.


ಕಷ್ಟಗಳನ್ನು ಸಹಿಸಿಕೊಳ್ಳುವವನು ಧನ್ಯನು. ಅವನು ಪರಿಶೋಧಿತನಾದ ಮೇಲೆ ಕರ್ತದೇವರು ತಮ್ಮನ್ನು ಪ್ರೀತಿಸುವವರಿಗೆ ವಾಗ್ದಾನಮಾಡಿದ ಜೀವದ ಕಿರೀಟವನ್ನು ಹೊಂದುವನು.


ಯೆಹೋವ ದೇವರು ತಮ್ಮ ಸೇವಕರ ಪ್ರಾಣವನ್ನು ವಿಮೋಚಿಸುತ್ತಾರೆ; ದೇವರನ್ನು ಆಶ್ರಯಿಸುವವರು ಯಾರೂ ಶಿಕ್ಷೆಗೆ ಒಳಗಾಗುವುದಿಲ್ಲ.


ಅವರು ಹೊಸಹಾಡನ್ನು ಹಾಡುತ್ತಾ, “ನೀವು ಸುರುಳಿಯನ್ನು ತೆಗೆದುಕೊಂಡು ಅದರ ಮುದ್ರೆಗಳನ್ನು ಒಡೆಯುವುದಕ್ಕೆ ಯೋಗ್ಯರಾಗಿದ್ದೀರಿ. ಏಕೆಂದರೆ ನೀವು ವಧಿತರಾಗಿ, ನಿಮ್ಮ ರಕ್ತದಿಂದ ಸಕಲ ಕುಲ, ಭಾಷೆ, ಪ್ರಜೆ, ರಾಷ್ಟ್ರಗಳವರಿಂದ ಮನುಷ್ಯರನ್ನು ದೇವರಿಗಾಗಿ ಕೊಂಡುಕೊಂಡಿರುವಿರಿ.


ನೀವು ಉತ್ತಮ ಆಶೀರ್ವಾದಗಳಿಂದ ಅರಸನನ್ನು ಸ್ವಾಗತಿಸಿದ್ದೀರಿ; ಚೊಕ್ಕ ಬಂಗಾರದ ಕಿರೀಟವನ್ನು ಆತನ ತಲೆಯ ಮೇಲಿಟ್ಟಿದ್ದೀರಿ.


ಎಲ್ಲಾ ಕೇಡಿನಿಂದ ನನ್ನನ್ನು ತಪ್ಪಿಸಿದ ಆ ದೇವರ ದೂತ, ಈ ಹುಡುಗರನ್ನು ಆಶೀರ್ವದಿಸಲಿ. ನನ್ನ ಹೆಸರಿನಿಂದಲೂ, ನನ್ನ ಪಿತೃಗಳಾದ ಅಬ್ರಹಾಮ, ಇಸಾಕರ ಹೆಸರಿನಿಂದಲೂ ಅವರು ಮುಂದುವರೆಯಲಿ. ಭೂಮಿಯ ಮೇಲೆ ಸಮೂಹವಾಗಿ ಹೆಚ್ಚಲಿ.”


ವರ್ಷಕ್ಕೆ ನಿಮ್ಮ ಉದಾರತೆಯ ಕಿರೀಟವನ್ನು ಇಡುತ್ತೀರಿ. ನಿಮ್ಮ ಹಾದಿಗಳು ಸಮೃದ್ಧಿಯಿಂದ ತುಂಬಿ ಪ್ರವಾಹಿಸುತ್ತಿದೆ.


ಆ ಬಹು ವ್ಯಥೆಯು ನನ್ನ ಸಮಾಧಾನಕ್ಕಾಗಿಯೇ ಆಯಿತು. ಆದರೆ ನನ್ನ ಆತ್ಮವನ್ನು ನಾಶದಿಂದ ಬಿಡುಗಡೆ ಮಾಡಿದ್ದು ನಿಮ್ಮ ಪ್ರೀತಿಯೇ. ನನ್ನ ಪಾಪಗಳನ್ನೆಲ್ಲಾ ನಿನ್ನ ಬೆನ್ನಿನ ಹಿಂದೆ ಹಾಕಿಬಿಟ್ಟಿದ್ದೀ.


ನನಗೆ ಬೇಸರವಾದಾಗ ನನ್ನ ಮುಖವನ್ನು ನಿನಗೆ ಕ್ಷಣಮಾತ್ರವೇ ಮರೆಮಾಡಿಕೊಂಡೆನು. ಆದರೆ ಶಾಶ್ವತವಾದ ದಯೆಯಿಂದ ನಿನ್ನ ಮೇಲೆ ಕರುಣೆಯನ್ನು ಇಟ್ಟಿದ್ದೇನೆ, ಎಂದು ನಿನ್ನ ವಿಮೋಚಕನಾದ ಯೆಹೋವ ದೇವರು ಹೇಳುತ್ತಾರೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು