Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಕೀರ್ತನೆಗಳು 104:14 - ಕನ್ನಡ ಸಮಕಾಲಿಕ ಅನುವಾದ

14 ದೇವರು ಪಶುಗಳಿಗೋಸ್ಕರ ಹುಲ್ಲನ್ನೂ, ಮನುಷ್ಯನ ವ್ಯವಸಾಯಕ್ಕೋಸ್ಕರ ಪಲ್ಯಗಳನ್ನೂ ಮೊಳೆಸುತ್ತಾರೆ. ಹೀಗೆ ಭೂಮಿಯೊಳಗಿಂದ ಆಹಾರವನ್ನು ಬರಮಾಡುತ್ತಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

14 ಪಶುಗಳಿಗೋಸ್ಕರ ಹುಲ್ಲನ್ನು ಮೊಳಿಸುತ್ತೀ; ಮನುಷ್ಯರಿಗೋಸ್ಕರ ಪೈರುಗಳನ್ನು ಹುಟ್ಟಿಸುತ್ತೀ. ಅವರು ಭೂವ್ಯವಸಾಯಮಾಡಿ ಆಹಾರವನ್ನು,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

14 ಮೊಳೆಸುವೆ ಹುಲ್ಲನ್ನು ದನಕರುಗಳಿಗೋಸ್ಕರ I ಬೆಳೆಸುವೆ ಪೈರನು ನರಮಾನವರಿಗೋಸ್ಕರ II

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

14 ಪಶುಗಳಿಗೋಸ್ಕರ ಹುಲ್ಲನ್ನು ಮೊಳಿಸುತ್ತೀ; ಮನುಷ್ಯರಿಗೋಸ್ಕರ ಪೈರುಗಳನ್ನು ಹುಟ್ಟಿಸುತ್ತೀ. ಅವರು ಭೂವ್ಯವಸಾಯಮಾಡಿ ಆಹಾರವನ್ನೂ

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

14 ನೀನು ಪಶುಗಳಿಗೋಸ್ಕರ ಹುಲ್ಲನ್ನು ಬೆಳೆಯ ಮಾಡುವೆ. ನಾವು ದುಡಿದು ಬೆಳೆಸುವುದಕ್ಕಾಗಿ ಸಸಿಗಳನ್ನು ಕೊಟ್ಟಿರುವೆ. ಅವು ಬೆಳೆದು ನಮಗೆ ಆಹಾರವನ್ನು ಒದಗಿಸುತ್ತವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಕೀರ್ತನೆಗಳು 104:14
18 ತಿಳಿವುಗಳ ಹೋಲಿಕೆ  

ಸಕಲ ಜೀವಿಗಳಿಗೂ ಆಹಾರವನ್ನು ಕೊಡುತ್ತಾರೆ; ದೇವರ ಪ್ರೀತಿಯು ಎಂದೆಂದಿಗೂ ಇರುವುದು.


ಭೂಮಿ ಆಹಾರವನ್ನು ಕೊಡುತ್ತದೆ; ಆದರೆ ಅದರ ಕೆಳಭಾಗವು ಬೆಂಕಿಯ ಹಾಗೆ ಬದಲಾಗುವುದು.


ಹೀಗಿರಲಾಗಿ ನೆಡುವವನಾಗಲಿ, ನೀರು ಹಾಕುವವನಾಗಲಿ ಪ್ರಾಮುಖ್ಯರಾಗಿರದೆ, ಬೆಳೆಸುವ ದೇವರೇ ಬಹು ಪ್ರಾಮುಖ್ಯವಾದವರು.


ಚಲಿಸುವ ಜೀವಜಂತುಗಳೆಲ್ಲಾ ನಿಮಗೆ ಆಹಾರವಾಗಿ ಇರಲಿ. ಹಸಿರು ಪಲ್ಯಗಳ ಹಾಗೆಯೇ, ಅವುಗಳನ್ನೆಲ್ಲಾ ನಾನು ನಿಮಗೆ ಕೊಟ್ಟಿದ್ದೇನೆ.


ಭೂಮಿಯಲ್ಲಿ ಮುಳ್ಳುಗಿಡಗಳೂ ಕಳ್ಳಿಗಳೂ ಬೆಳೆಯುವುವು. ನೀನು ಹೊಲದ ಬೆಳೆಯನ್ನು ಉಣ್ಣುವೆ.


ಹಾಳು ಬೈಲುಗಳಿಗೆ ತೃಪ್ತಿಯನ್ನು ಉಂಟುಮಾಡುವುದು; ಹಸಿರಾದ ಹುಲ್ಲನ್ನು ಮೊಳಿಸುವುದು.


ಕಾಡುಮೃಗಗಳೇ, ಭಯಪಡಬೇಡಿರಿ. ಏಕೆಂದರೆ, ಅಡವಿಯ ಮೇವಿನ ಸ್ಥಳಗಳು ಮೊಳೆಯುತ್ತವೆ. ಮರಗಳು ತಮ್ಮ ಫಲವನ್ನು ಫಲಿಸುತ್ತವೆ. ಅಂಜೂರದ ಗಿಡವೂ ದ್ರಾಕ್ಷಿ ಬಳ್ಳಿಯೂ ತಮ್ಮ ಫಲವನ್ನು ಕೊಡುತ್ತವೆ.


ಅಹಾಬನು ಓಬದ್ಯನಿಗೆ, “ನೀನು ದೇಶದಲ್ಲಿರುವ ಎಲ್ಲಾ ನೀರಿನ ಬುಗ್ಗೆಗಳ ಬಳಿಗೂ, ಎಲ್ಲಾ ಹಳ್ಳಗಳ ಬಳಿಗೂ ಹೋಗು. ನಾವು ಸಮಸ್ತ ಪಶುಗಳನ್ನು ಕಳೆದುಕೊಳ್ಳದ ಹಾಗೆ ಕುದುರೆಗಳನ್ನೂ, ಹೇಸರಗತ್ತೆಗಳನ್ನೂ ಜೀವದಿಂದ ಇರಿಸುವುದಕ್ಕೆ ನಮಗೆ ಒಂದು ವೇಳೆ ಹುಲ್ಲು ದೊರಕಬಹುದು. ಆಗ ನಾವು ಅವುಗಳನ್ನು ಕೊಲ್ಲುವ ಅವಶ್ಯಕತೆ ಇರುವುದಿಲ್ಲ,” ಎಂದನು.


ಯೆಹೋವ ದೇವರು ನೋಟಕ್ಕೆ ರಮ್ಯವೂ ಊಟಕ್ಕೆ ಒಳ್ಳೆಯವೂ ಆದ ಎಲ್ಲಾ ಮರಗಳನ್ನೂ ಭೂಮಿಯಲ್ಲಿ ಬೆಳೆಯುವಂತೆ ಮಾಡಿದರು. ತೋಟದ ಮಧ್ಯದಲ್ಲಿ ಜೀವದ ಮರವನ್ನೂ ಒಳ್ಳೆಯದರ ಮತ್ತು ಕೆಟ್ಟದ್ದರ ತಿಳುವಳಿಕೆಯ ಮರವನ್ನೂ ಬೆಳೆಯುವಂತೆ ಮಾಡಿದರು.


ನೀನು ಭೂಮಿಯನ್ನು ವ್ಯವಸಾಯ ಮಾಡಿದರೂ ಅದು ಇನ್ನು ಮುಂದೆ ಫಲಿಸುವುದಿಲ್ಲ. ನೀನು ಭೂಲೋಕದಲ್ಲಿ ಅಲೆಮಾರಿಯಾಗಿ ತಿರುಗುವವನು ಆಗಿರುವೆ,” ಎಂದರು.


ಭೂಮಿಯಲ್ಲಿ ಯಾವ ಗಿಡವೂ ಇನ್ನೂ ಬೆಳೆದಿರಲಿಲ್ಲ, ಯಾವ ಪಲ್ಯವೂ ಇನ್ನೂ ಮೊಳೆತಿರಲಿಲ್ಲ. ಏಕೆಂದರೆ ಯೆಹೋವ ದೇವರು ಭೂಮಿಯ ಮೇಲೆ ಮಳೆ ಸುರಿಸಿರಲಿಲ್ಲ. ಆಗ ಭೂಮಿಯನ್ನು ವ್ಯವಸಾಯ ಮಾಡುವುದಕ್ಕೆ ಮನುಷ್ಯನೂ ಇರಲಿಲ್ಲ.


ನಿಮ್ಮ ದನಕರುಗಳಿಗೆ ಬೇಕಾದಷ್ಟು ಹುಲ್ಲನ್ನು ನಿಮ್ಮ ಹೊಲದಲ್ಲಿ ಕೊಡುವರು. ನೀವು ಆಹಾರದಿಂದ ತೃಪ್ತರಾಗುವಿರಿ.


ಒಣಹುಲ್ಲನ್ನು ಕೊಯ್ದು ನಂತರ ಹೊಸ ಬೆಳೆ ಕಾಣಿಸಿಕೊಂಡಾಗ ಮತ್ತು ಬೆಟ್ಟಗಳಿಂದ ಹುಲ್ಲು ಸಂಗ್ರಹಿಸಿದಾಗ,


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು