Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಕೀರ್ತನೆಗಳು 104:15 - ಕನ್ನಡ ಸಮಕಾಲಿಕ ಅನುವಾದ

15 ದ್ರಾಕ್ಷಾರಸವು ಮನುಷ್ಯ ಹೃದಯವನ್ನು ಸಂತೋಷಪಡಿಸುತ್ತದೆ; ಎಣ್ಣೆಯು ಮಾನವನ ಮುಖವನ್ನು ಪ್ರಕಾಶಿಸುವಂತೆ ಮಾಡುತ್ತದೆ; ರೊಟ್ಟಿಯು ಮನುಷ್ಯನ ಪ್ರಾಣಕ್ಕೆ ಆಧಾರವಾಗುತ್ತದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

15 ಹೃದಯಾನಂದಕರವಾದ ದ್ರಾಕ್ಷಾರಸವನ್ನು, ಮುಖಕ್ಕೆ ಕಾಂತಿಯನ್ನು ಉಂಟುಮಾಡುವ ಎಣ್ಣೆಯನ್ನು, ಪ್ರಾಣಾಧಾರವಾದ ರೊಟ್ಟಿಯನ್ನು ಸಂಪಾದಿಸಿಕೊಳ್ಳುತ್ತಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

15 ಒದಗಿಸುವೆ ಬೇಸಾಯದ ಆಹಾರವನು I ಹೃದಯವನು ಮುದಗೊಳಿಸುವ ದ್ರಾಕ್ಷಾರಸವನು I ಮುಖಕೆ ಮೆರಗನ್ನೀಯುವ ತಿಳಿತೈಲಗಳನು I ದೇಹವನು ಗಟ್ಟಿಮುಟ್ಟಾಗಿಸುವ ರೊಟ್ಟಿಯನು II

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

15 ಹೃದಯಾನಂದಕರವಾದ ದ್ರಾಕ್ಷಾರಸವನ್ನೂ ಮುಖಕ್ಕೆ ಕಾಂತಿಯನ್ನುಂಟುಮಾಡುವ ಎಣ್ಣೆಯನ್ನೂ ಪ್ರಾಣಾಧಾರವಾದ ರೊಟ್ಟಿಯನ್ನೂ ಸಂಪಾದಿಸಿಕೊಳ್ಳುತ್ತಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

15 ನಮ್ಮನ್ನು ಸಂತೋಷಪಡಿಸುವ ದ್ರಾಕ್ಷಾರಸವನ್ನೂ ನಮ್ಮ ಚರ್ಮವನ್ನು ಮೃದುಗೊಳಿಸುವ ಎಣ್ಣೆಯನ್ನೂ ನಮ್ಮನ್ನು ಬಲಗೊಳಿಸುವ ಆಹಾರವನ್ನೂ ನಮಗೆ ದೇವರು ಕೊಡುತ್ತಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಕೀರ್ತನೆಗಳು 104:15
30 ತಿಳಿವುಗಳ ಹೋಲಿಕೆ  

ನೀವು ನನ್ನ ವೈರಿಗಳ ಮುಂದೆಯೇ ನನಗೊಂದು ಔತಣವನ್ನು ಸಿದ್ಧಮಾಡುತ್ತೀರಿ. ನೀವು ನನ್ನ ತಲೆಗೆ ತೈಲವನ್ನು ಅಭಿಷೇಕಿಸುತ್ತೀರಿ. ನನ್ನ ಪಾತ್ರೆಯು ತುಂಬಿ ಹೊರಸೂಸುತ್ತದೆ.


ವಿನೋದಕ್ಕಾಗಿ ಔತಣ ಮಾಡುತ್ತಾರೆ, ಆನಂದಕ್ಕಾಗಿ ದ್ರಾಕ್ಷಾರಸ ಕುಡಿಯುತ್ತಾರೆ; ಎಲ್ಲವನ್ನೂ ಒದಗಿಸಿಕೊಡುವುದಕ್ಕಾಗಿ ಹಣವು.


ನೀನು ಹೋಗಿ ನಿನ್ನ ಆಹಾರವನ್ನು ಸಂತೋಷದಿಂದ ತಿಂದು ಹರ್ಷ ಹೃದಯದಿಂದ ನಿನ್ನ ದ್ರಾಕ್ಷಾರಸವನ್ನು ಕುಡಿ. ಏಕೆಂದರೆ ನಿನ್ನ ಕೆಲಸಗಳನ್ನು ದೇವರು ಈಗಾಗಲೇ ಮೆಚ್ಚಿಕೊಂಡಿದ್ದಾರೆ.


“ಆದರೆ ದ್ರಾಕ್ಷಿ ಗಿಡವು ಅವುಗಳಿಗೆ, ‘ದೇವರನ್ನೂ, ಮನುಷ್ಯನನ್ನೂ ಸಂತೋಷಪಡಿಸುವ ನನ್ನ ರಸವನ್ನು ನಾನು ಬಿಟ್ಟು, ಮರಗಳ ಮೇಲೆ ಅಧಿಕಾರಿಯಾಗಿ ಹೋಗುವೆನೋ?’ ಎಂದಿತು.


ನೀವು ನೀತಿಯನ್ನು ಪ್ರೀತಿಸಿದ್ದೀರಿ. ಅನೀತಿಯನ್ನು ದ್ವೇಷಿಸಿದ್ದೀರಿ; ಆದ್ದರಿಂದ ದೇವರೇ, ನಿಮ್ಮ ದೇವರು ನಿಮ್ಮನ್ನು ನಿಮ್ಮ ಜೊತೆಗಾರರಿಗಿಂತ ಮಿಗಿಲಾಗಿ ಆನಂದದ ತೈಲದಿಂದ ಅಭಿಷೇಕಿಸಿದ್ದಾರೆ!”


ಮದ್ಯಪಾನ ಮಾಡಿ ಮತ್ತರಾಗಬೇಡಿರಿ. ಅದು ದುಷ್ಟತನಕ್ಕೆ ಎಡೆಮಾಡುತ್ತದೆ. ಆದರೆ ಪವಿತ್ರಾತ್ಮರಿಂದ ತುಂಬಿದವರಾಗಿದ್ದು,


ಆದರೆ ನೀವು ನನ್ನ ಬಲವನ್ನು ಕಾಡುಕೋಣದ ಕೊಂಬಿನ ಹಾಗೆ ಬಲಪಡಿಸುವಿರಿ. ನಾನು ನೂತನ ತೈಲದಿಂದ ಅಭಿಷಿಕ್ತನಾಗುವೆನು.


ಆದರೆ ನೀವು ಪವಿತ್ರವಾದವರಿಂದ ಅಭಿಷೇಕವನ್ನು ಹೊಂದಿದವರಾಗಿದ್ದು ನೀವೆಲ್ಲರೂ ಸತ್ಯವನ್ನು ತಿಳಿದವರಾಗಿದ್ದೀರಿ.


ಇದಾದ ಮೇಲೆ ಅವರು ನನಗೆ, “ಮನುಷ್ಯಪುತ್ರನೇ, ಇಗೋ, ನಾನು ಯೆರೂಸಲೇಮಿನಲ್ಲಿ ಆಹಾರ ಸರಬರಾಜನ್ನು ಮುರಿಯುವೆನು. ಅವರು ತೂಕದ ಪ್ರಕಾರ ಚಿಂತೆಯಿಂದ ರೊಟ್ಟಿಯನ್ನು ತಿನ್ನುವರು. ನೀರನ್ನು ಅಳತೆಯ ಪ್ರಕಾರ ನಿರಾಶೆಯಿಂದ ಕುಡಿಯುವರು.


ಅವರು ಬಂದು ಚೀಯೋನ್ ಶಿಖರದಲ್ಲಿ ಹಾಡುವರು; ಧಾನ್ಯ, ದ್ರಾಕ್ಷಾರಸ, ಎಣ್ಣೆ, ಕರು, ಕುರಿಮರಿ, ಅಂತು ಯೆಹೋವ ದೇವರು ಅನುಗ್ರಹಿಸುವ ಎಲ್ಲಾ ಮೇಲುಗಳನ್ನು ಅನುಭವಿಸಲು ಪ್ರವಾಹದಂತೆ ಬರುವರು. ಅವರ ಆತ್ಮವು ಹದವಾಗಿ ನೀರು ಹಾಯಿಸಿದ ತೋಟದಂತಿರುವುದು; ಅವರು ಇನ್ನು ಮುಂದೆ ದುಃಖಪಡುವುದಿಲ್ಲ.


“ಹಿಪ್ಪೆಯ ಮರ ಅವುಗಳಿಗೆ, ‘ಯಾವುದರಿಂದ ದೇವರನ್ನೂ, ಮನುಷ್ಯನನ್ನೂ ಘನಪಡಿಸುತ್ತಾರೋ, ಈ ನನ್ನ ಎಣ್ಣೆಯನ್ನು ಬಿಟ್ಟು, ಮರಗಳ ಮೇಲೆ ಅಧಿಕಾರಿಯಾಗಿ ಹೋಗುವೆನೋ?’ ಎಂದಿತು.


ನೀನು ನನ್ನ ತಲೆಗೆ ಎಣ್ಣೆ ಹಚ್ಚಲಿಲ್ಲ, ಆದರೆ ಈ ಸ್ತ್ರೀಯು ನನ್ನ ಪಾದಗಳಿಗೆ ಸುಗಂಧ ತೈಲವನ್ನು ಹಚ್ಚಿದ್ದಾಳೆ.


ಇಗೋ, ಕರ್ತನೂ ಸರ್ವಶಕ್ತನೂ ಆಗಿರುವ ಯೆಹೋವ ದೇವರೆಂಬ ನಾನು ಜೀವನಕ್ಕೆ ಆಧಾರವಾದ ಅನ್ನಪಾನಗಳನ್ನೆಲ್ಲಾ ಯೆರೂಸಲೇಮಿನಿಂದಲೂ ಯೆಹೂದದಿಂದಲೂ ತೆಗೆದುಬಿಡುವೆನು.


ಜ್ಞಾನಿಯ ಹಾಗೆ ಇರುವವರು ಯಾರು? ಈ ಸಂಗತಿಗಳ ಅರ್ಥವನ್ನು ವಿವರಿಸಬಲ್ಲವರು ಯಾರು? ಒಬ್ಬ ಮನುಷ್ಯನ ಜ್ಞಾನವು ಅವನ ಮುಖವನ್ನು ಬೆಳಗಿಸುತ್ತದೆ ಜ್ಞಾನವು ಕಠಿಣ ಮುಖಭಾವವನ್ನು ಸಹ ಬದಲಾಯಿಸುತ್ತದೆ.


ನಾಶವಾಗುವವರಿಗೆ ಮದ್ಯಪಾನವಿರಲಿ. ಮನೋವ್ಯಥೆಪಡುವವರಿಗೆ ಮದ್ಯವಿರಲಿ.


ದೇವರು ಕ್ಷಾಮವನ್ನು ದೇಶದಲ್ಲಿ ಅನುಮತಿಸಿದರು. ಆಹಾರದ ಒದಗುವಿಕೆಯನ್ನು ಸ್ವಲ್ಪಕಾಲ ನಿಲ್ಲಿಸಿದ್ದರು.


ಓಲಿವ್ ಮರಗಳು ನಿಮ್ಮ ಎಲ್ಲಾ ಮೇರೆಗಳಲ್ಲಿ ಇರುವುವು. ಆದರೆ ಅವುಗಳ ಕಾಯಿಗಳು ಉದುರುವುದರಿಂದ ನಿಮ್ಮ ಉಪಯೋಗಕ್ಕೆ ಎಣ್ಣೆ ಸಿಗದು.


ಮನುಷ್ಯನು ಜೀವಿಸುವುದು ರೊಟ್ಟಿಯಿಂದ ಮಾತ್ರವಲ್ಲ ಯೆಹೋವ ದೇವರ ಬಾಯಿಂದ ಹೊರಡುವ ಪ್ರತಿಯೊಂದು ಮಾತಿನಿಂದಲೂ ಬದುಕುತ್ತಾನೆಂದು ನಿಮಗೆ ಬೋಧಿಸುವಂತೆ ದೇವರು ನಿಮ್ಮನ್ನು ಹಸಿವೆಯಿಂದ ಬಳಲುವಂತೆ ಮಾಡಿದರು. ನೀವು ತಿಳಿಯದಂಥ ಮತ್ತು ನಿಮ್ಮ ಪಿತೃಗಳು ತಿಳಿಯದಂಥ ಮನ್ನವನ್ನು ನಿಮಗೆ ಉಣ್ಣಲು ಕೊಟ್ಟರು.


ನಾನು ನಿಮ್ಮ ಅನ್ನಾಧಾರವನ್ನು ಮುರಿದುಹಾಕಿದಾಗ, ಹತ್ತು ಸ್ತ್ರೀಯರು ನಿಮ್ಮ ರೊಟ್ಟಿಯನ್ನು ಒಂದೇ ಒಲೆಯಲ್ಲಿ ಸುಟ್ಟು, ತೂಕದ ಪ್ರಕಾರ ನಿಮಗೆ ರೊಟ್ಟಿಯನ್ನು ಕೊಡುವರು. ನೀವು ಅದನ್ನು ತಿನ್ನುವಿರಿ, ನಿಮಗೆ ತೃಪ್ತಿಯಾಗುವುದಿಲ್ಲ.


ತರುವಾಯ ಯೇಸು ಪಾತ್ರೆಯನ್ನು ತೆಗೆದುಕೊಂಡು ಕೃತಜ್ಞತಾಸ್ತುತಿ ಮಾಡಿ ಅವರಿಗೆ ಕೊಟ್ಟರು. ಅವರೆಲ್ಲರೂ ಅದರಲ್ಲಿ ಕುಡಿದರು.


“ಮನುಷ್ಯಪುತ್ರನೇ, ದೇಶವು ದೊಡ್ಡ ಅಪರಾಧದಿಂದ ನನಗೆ ವಿರುದ್ಧವಾಗಿ ಪಾಪಮಾಡಿದೆ, ನಾನು ಅದರ ಮೇಲೆ ನನ್ನ ಕೈಚಾಚಿ, ಅದರ ಜೀವನಾಧಾರವನ್ನು ತೆಗೆದುಹಾಕಿ, ಕ್ಷಾಮವು ಬರುವ ಹಾಗೆ ಮಾಡುವೆನು. ಮನುಷ್ಯರನ್ನೂ ಮೃಗಗಳನ್ನೂ ಅದರೊಳಗಿಂದ ಕಡಿದುಬಿಡುವೆನು.


ಆಗ ನಾನು ನಿನ್ನನ್ನು ಹಾಳುಮಾಡಲು ಕ್ಷಾಮವೆಂಬ ವಿನಾಶಕರವಾದ ತೀಕ್ಷ್ಣ ಬಾಣಗಳನ್ನು ನಿನ್ನ ಮೇಲೆ ಬಿಡುವೆನು. ನಿನ್ನ ಮೇಲೆ ಭಯಂಕರವಾದ ಕ್ಷಾಮವನ್ನು ಬರಮಾಡಿ ನಿನ್ನ ಆಹಾರ ಸರಬರಾಜನ್ನು ನಿಲ್ಲಿಸುವೆನು.


ನಾನು ಸ್ವಲ್ಪ ಆಹಾರವನ್ನು ತರುತ್ತೇನೆ. ತರುವಾಯ ನೀವು ಮುಂದೆ ಹೊರಟು ಹೋಗಬಹುದು. ನೀವು ನಿಮ್ಮ ದಾಸನ ಬಳಿಗೆ ಬಂದಿದ್ದೀರಿ,” ಎಂದು ಬೇಡಿಕೊಂಡನು. ಅದಕ್ಕೆ ಅವರು, “ನೀನು ಹೇಳಿದಂತೆಯೇ ಮಾಡು,” ಎಂದರು.


ನಾಲ್ಕನೆಯ ದಿನ ಅವರು ಬೇಗನೆ ಎದ್ದು, ಹೊರಡಲಿಕ್ಕೆ ಸಿದ್ಧರಾದರು. ಆದರೆ ಆ ಸ್ತ್ರೀಯ ತಂದೆಯು ತನ್ನ ಅಳಿಯನಿಗೆ, “ಸ್ವಲ್ಪ ಊಟಮಾಡಿ ಚೇತರಿಸಿಕೋ, ಆಮೇಲೆ ನೀವು ಹೋಗಬಹುದು,” ಎಂದನು.


ಅಬ್ಷಾಲೋಮನು ತನ್ನ ಸೇವಕರಿಗೆ, “ನೀವು ನೋಡಿಕೊಳ್ಳಿರಿ. ಅಮ್ನೋನನ ಮನಸ್ಸು ದ್ರಾಕ್ಷಾರಸದಿಂದ ಅಮಲೇರಿದಾಗ ನಾನು ನಿಮಗೆ ಅವನನ್ನು ಹೊಡೆಯಿರಿ ಎಂದು ಹೇಳಿದಕೂಡಲೆ, ಅವನನ್ನು ಕೊಂದುಹಾಕಿರಿ, ಭಯಪಡಬೇಡಿರಿ. ನಾನು ನಿಮಗೆ ಆಜ್ಞಾಪಿಸಿದ್ದೇನಲ್ಲಾ, ಧೈರ್ಯವಾಗಿರಿ, ಶೂರರಾಗಿರಿ,” ಎಂದು ಹೇಳಿದನು.


ಅವರು ಕುಡಿದು ಬಡತನವನ್ನು ಮರೆಯಲಿ. ತಮ್ಮ ಯಾತನೆಯನ್ನು ಜ್ಞಾಪಕಕ್ಕೆ ತಾರದಿರಲಿ.


ಮಳೆಯೂ, ಹಿಮವೂ ಆಕಾಶದಿಂದ ಬಿದ್ದು, ಭೂಮಿಯನ್ನು ತೋಯಿಸಿ, ಹಸಿರುಗೊಳಿಸಿ, ಫಲಿಸುವಂತೆ ಮಾಡಿ, ಬಿತ್ತುವವನಿಗೆ ಬೀಜವನ್ನು, ಉಣ್ಣುವವನಿಗೆ ಆಹಾರವನ್ನು ಒದಗಿಸದ ಹೊರತು ಹೇಗೆ ಆಕಾಶಕ್ಕೆ ಸುಮ್ಮನೆ ಹಿಂದಿರುಗುವುದಿಲ್ಲವೋ, ಹಾಗೆಯೇ


ಎಫ್ರಾಯೀಮಿನವರು ಶೂರರಂತೆ ಇರುವರು. ಅವರ ಹೃದಯವು ದ್ರಾಕ್ಷಾರಸ ಕುಡಿದವರಂತೆ ಸಂತೋಷಪಡುವುದು. ಅವರ ಮಕ್ಕಳು ಇದನ್ನು ಕಂಡು ಸಂತೋಷಿಸುವರು. ಅವರ ಹೃದಯವು ಯೆಹೋವ ದೇವರಲ್ಲಿ ಆನಂದಿಸುವುದು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು