Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಕೀರ್ತನೆಗಳು 105:1 - ಕನ್ನಡ ಸಮಕಾಲಿಕ ಅನುವಾದ

1 ಯೆಹೋವ ದೇವರಿಗೆ ಉಪಕಾರಸ್ತುತಿ ಮಾಡಿರಿ, ಅವರ ಹೆಸರನ್ನು ಸಾರಿ ಹೇಳಿರಿ; ಜನರಲ್ಲಿ ದೇವರ ಕ್ರಿಯೆಗಳನ್ನು ತಿಳಿಯಪಡಿಸಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

1 ಯೆಹೋವನಿಗೆ ಕೃತಜ್ಞತಾಸ್ತುತಿಮಾಡಿರಿ; ಆತನ ನಾಮದ ಮಹತ್ವವನ್ನು ವರ್ಣಿಸಿರಿ; ಜನಾಂಗಗಳಲ್ಲಿ ಆತನ ಕೃತ್ಯಗಳನ್ನು ಪ್ರಸಿದ್ಧಪಡಿಸಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

1 ಸಲ್ಲಿಸಿ ಪ್ರಭುವಿಗೆ ಕೃತಜ್ಞತಾಸ್ತೋತ್ರವನು I ಮಾಡಿರಿ ಆತನ ನಾಮಸ್ಮರಣೆಯನು I ಸಾರಿರಿ ಜಗಕೆ ಆತನ ಸತ್ಕಾರ್ಯಗಳನು II

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

1 ಯೆಹೋವನಿಗೆ ಕೃತಜ್ಞತಾಸ್ತುತಿ ಮಾಡಿರಿ; ಆತನ ನಾಮದ ಮಹತ್ವವನ್ನು ವರ್ಣಿಸಿರಿ; ಜನಾಂಗಗಳಲ್ಲಿ ಆತನ ಕೃತ್ಯಗಳನ್ನು ಪ್ರಸಿದ್ಧಪಡಿಸಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

1 ಯೆಹೋವನಿಗೆ ಕೃತಜ್ಞತಾಸ್ತುತಿಮಾಡಿರಿ. ಆತನ ಹೆಸರನ್ನು ಆರಾಧಿಸಿರಿ. ಆತನ ಅದ್ಭುತಕಾರ್ಯಗಳ ಕುರಿತು ಜನಾಂಗಗಳಿಗೆ ಸಾರಿ ಹೇಳಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಕೀರ್ತನೆಗಳು 105:1
22 ತಿಳಿವುಗಳ ಹೋಲಿಕೆ  

ಆ ದಿನದಲ್ಲಿ ನೀವು ಹೀಗೆ ಹೇಳುವಿರಿ, “ಯೆಹೋವ ದೇವರನ್ನು ಕೊಂಡಾಡಿರಿ. ಅವರ ಹೆಸರನ್ನೆತ್ತಿ ಜನರ ಮಧ್ಯದಲ್ಲಿ ಅವರ ಕ್ರಿಯೆಗಳನ್ನು ಪ್ರಕಟಿಸಿರಿ. ಅವರ ನಾಮವನ್ನು ಉನ್ನತೋನ್ನತವೆಂದು ಎತ್ತಿ ಹೇಳಿರಿ.


ಏಕೆಂದರೆ, “ಕರ್ತನ ಹೆಸರನ್ನು ಕರೆಯುವವರೆಲ್ಲರಿಗೆ ರಕ್ಷಣೆ ಆಗುವುದು.”


ಯೆಹೋವ ದೇವರನ್ನು ಸ್ತುತಿಸಿರಿ. ಯೆಹೋವ ದೇವರಿಗೆ ಉಪಕಾರಸ್ತುತಿ ಮಾಡಿರಿ; ಅವರು ಒಳ್ಳೆಯವರು. ಅವರ ಪ್ರೀತಿ ಶಾಶ್ವತವಾಗಿರುವುದು.


ಜನಾಂಗಗಳಲ್ಲಿ ಅವರ ಘನತೆಯನ್ನೂ, ಎಲ್ಲಾ ಜನಾಂಗಗಳಲ್ಲಿ ಅವರ ಅದ್ಭುತಗಳನ್ನೂ ವಿವರಿಸಿರಿ.


ಯೆಹೋವ ದೇವರಿಗೆ ಕೃತಜ್ಞತಾ ಸ್ತುತಿಮಾಡಿರಿ. ಅವರು ಒಳ್ಳೆಯವರು; ಅವರ ಪ್ರೀತಿ ಶಾಶ್ವತವಾಗಿರುವುದು.


ಇಲ್ಲಿ ನಿಮ್ಮ ಹೆಸರನ್ನು ಹೇಳಿಕೊಳ್ಳುವವರೆಲ್ಲರನ್ನು ಬಂಧಿಸಲು ಮುಖ್ಯಯಾಜಕನಿಂದ ಅಧಿಕಾರದ ಪತ್ರ ಪಡೆದು ಬಂದಿದ್ದಾನೆ,” ಎಂದು ಉತ್ತರಕೊಟ್ಟನು.


ಆದ್ದರಿಂದ ಸಕಲ ಪ್ರಜೆ, ಜನಾಂಗ, ಭಾಷೆಗಳಲ್ಲಿ ಯಾರು ಶದ್ರಕ್, ಮೇಶಕ್, ಅಬೇದ್‌ನೆಗೋ ಎಂಬುವರ ದೇವರಿಗೆ ವಿರೋಧವಾಗಿ ದೂಷಣೆ ಮಾಡುವರೋ, ಅವರನ್ನು ತುಂಡುತುಂಡಾಗಿ ಮಾಡಿರಿ, ಅವರ ಮನೆಗಳು ತಿಪ್ಪೆ ಗುಂಡಿಗಳಾಗಿ ಮಾಡಿರಿ, ಎಂದು ನಾನು ರಾಜಾಜ್ಞೆಯನ್ನು ವಿಧಿಸುತ್ತೇನೆ. ಏಕೆಂದರೆ ಈ ವಿಧವಾಗಿ ರಕ್ಷಿಸುವ ದೇವರು ಇನ್ಯಾರೂ ಇರುವುದಿಲ್ಲ,” ಎಂದನು.


ಸಮುದ್ರವನ್ನೂ, ದೊಡ್ಡ ಅಗಾಧದ ನೀರನ್ನೂ ಬತ್ತಿಸಿ, ವಿಮುಕ್ತರಾದವರು, ಹಾದು ಹೋಗುವುದಕ್ಕೆ ಸಮುದ್ರದ ತಳವನ್ನು ಮಾರ್ಗವನ್ನಾಗಿ ಮಾಡಿದಂಥವನು ನೀನಲ್ಲವೋ?


ಆದ್ದರಿಂದ ನಮ್ಮ ದೇವರೇ, ನಾವು ನಿಮ್ಮನ್ನು ಸ್ತುತಿಸಿ, ನಿಮ್ಮ ಮಹಿಮೆಯುಳ್ಳ ನಾಮವನ್ನು ಕೊಂಡಾಡುತ್ತೇವೆ.


ಕ್ರಿಸ್ತ ಯೇಸುವಿನಲ್ಲಿ ಪ್ರತ್ಯೇಕವಾಗಿ, ಪವಿತ್ರರಾಗುವುದಕ್ಕೆ ಕರೆಹೊಂದಿದ ಕೊರಿಂಥದಲ್ಲಿರುವ ದೇವರ ಸಭೆಗೆ ನಮಗೆ ಕರ್ತ ಆಗಿರುವ ಯೇಸುಕ್ರಿಸ್ತರ ನಾಮದಲ್ಲಿ ವಿಶ್ವಾಸವಿಟ್ಟ ಸಕಲ ಜನರಿಗೂ ಬರೆಯುವ ಪತ್ರ:


ಯೆಹೋವ ದೇವರ ಹೆಸರನ್ನು ಕರೆಯುವವರೆಲ್ಲರಿಗೆ ರಕ್ಷಣೆ ಆಗುವುದು. ಏಕೆಂದರೆ ಚೀಯೋನ್ ಪರ್ವತದಲ್ಲಿಯೂ ಯೆರೂಸಲೇಮಿನಲ್ಲಿಯೂ ಅನೇಕರಿಗೆ ಮುಕ್ತಿ ದೊರಕುವುದು. ಯೆಹೋವ ದೇವರು ಹೇಳಿದ ಪ್ರಕಾರ ಯೆಹೋವ ದೇವರ ಕರೆಹೊಂದಿ ಉಳಿದವರಲ್ಲಿಯೂ ಬಿಡುಗಡೆ ಇರುವುದು.


ಯೆಹೋವ ದೇವರ ಯಾಜಕರಲ್ಲಿ ಮೋಶೆಯೂ ಆರೋನನೂ ಇದ್ದಾರೆ. ದೇವರ ಹೆಸರೆತ್ತಿ ಕರೆದವರಲ್ಲಿ ಸಮುಯೇಲನೂ ಸಹ ಒಬ್ಬನು. ಇವರೆಲ್ಲರೂ ಯೆಹೋವ ದೇವರನ್ನು ಕರೆದರು. ದೇವರು ಅವರಿಗೆ ಉತ್ತರಕೊಟ್ಟರು.


ತರುವಾಯ ದಾವೀದನು ಸಮಸ್ತ ಸಭೆಗೆ, “ಈಗ ನಿಮ್ಮ ದೇವರಾದ ಯೆಹೋವ ದೇವರನ್ನು ಸ್ತುತಿಸಿರಿ,” ಎಂದನು. ಆಗ ಜನರೆಲ್ಲರು ತಮ್ಮ ಪಿತೃಗಳ ದೇವರಾದ ಯೆಹೋವ ದೇವರನ್ನು ಸ್ತುತಿಸುತ್ತಾ, ತಮ್ಮ ತಲೆಗಳನ್ನು ಬಾಗಿಸಿ ಯೆಹೋವ ದೇವರನ್ನೂ, ಅರಸನನ್ನೂ ವಂದಿಸಿದರು.


ಯೆಹೋವ ದೇವರ ಮಹಾ ಪ್ರೀತಿಯನ್ನು ಯುಗಯುಗಕ್ಕೂ ಹಾಡುವೆನು. ತಲತಲಾಂತರಕ್ಕೂ ನಿಮ್ಮ ನಂಬಿಗಸ್ತಿಕೆಯನ್ನು ನನ್ನ ಬಾಯಿ ತಿಳಿಯಪಡಿಸುವುದು.


ಯೆದುತೂನನ ಪುತ್ರರಲ್ಲಿ ಗೆದಲ್ಯ, ಚೆರೀ, ಯೆಶಾಯ, ಶಿಮ್ಮೀ, ಹಷಬ್ಯ, ಮತ್ತಿತ್ಯ. ಈ ಆರು ಮಂದಿಯು ಯೆದುತೂನನ ಪುತ್ರರು. ತಮ್ಮ ತಂದೆ ಯೆದುತೂನನ ಕೈಕೆಳಗೆ ಕಿನ್ನರಿಗಳನ್ನು ಬಾರಿಸಿ, ಯೆಹೋವ ದೇವರನ್ನು ಕೊಂಡಾಡಿ, ಸ್ತುತಿಸಿ ಪ್ರವಾದಿಸುತ್ತಿದ್ದರು.


ನಿಶ್ಚಯವಾಗಿ ಯಾಕೋಬನಲ್ಲಿ ಕಣಿಕೇಳುವದು ಇಲ್ಲ. ಇಸ್ರಾಯೇಲರಲ್ಲಿ ಶಕುನನೋಡುವದು ಇಲ್ಲ. ‘ನೋಡಿರಿ, ದೇವರು ಎಂತಹ ಮಹತ್ಕಾರ್ಯವನ್ನು ಮಾಡಿದ್ದಾರೆ,’ ಎಂದು ಯಾಕೋಬನ ವಿಷಯವಾಗಿಯೂ, ಇಸ್ರಾಯೇಲಿನ ವಿಷಯವಾಗಿಯೂ ಹೇಳುವರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು