Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಕೀರ್ತನೆಗಳು 105:25 - ಕನ್ನಡ ಸಮಕಾಲಿಕ ಅನುವಾದ

25 ತಮ್ಮ ಜನರನ್ನು ದ್ವೇಷಿಸುವಂತೆಯೂ, ತಮ್ಮ ಸೇವಕರನ್ನು ಕುಯುಕ್ತಿಯಿಂದ ನಡೆಸುವಂತೆಯೂ ದೇವರು ಅವರ ಹೃದಯವನ್ನು ಮಾರ್ಪಡಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

25 ಆತನು ಆ ದೇಶದವರ ಹೃದಯವನ್ನು ಮಾರ್ಪಡಿಸಿದ್ದರಿಂದ, ಅವರು ಆತನ ಜನರನ್ನು ದ್ವೇಷಿಸಿ, ಆತನ ಸೇವಕರನ್ನು ಕುಯುಕ್ತಿಯಿಂದ ನಡೆಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

25 ಮಾರ್ಪಡಿಸಿದ ಈಜಿಪ್ಟರನು ತನ್ನ ಜನರನು ದ್ವೇಷಿಸುವಂತೆ I ತನ್ನ ದಾಸರೊಡನವರು ಕುಯುಕ್ತಿಯಿಂದ ನಡೆದುಕೊಳ್ಳುವಂತೆ II

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

25 ಆತನು ಆ ದೇಶದವರ ಹೃದಯವನ್ನು ಮಾರ್ಪಡಿಸಿದ್ದರಿಂದ ಅವರು ಆತನ ಜನರನ್ನು ದ್ವೇಷಿಸಿ ಆತನ ಸೇವಕರನ್ನು ಕುಯುಕ್ತಿಯಿಂದ ನಡಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

25 ಆದ್ದರಿಂದ ಈಜಿಪ್ಟಿನವರು ಯಾಕೋಬನ ಕುಟುಂಬವನ್ನು ದ್ವೇಷಿಸತೊಡಗಿದರು. ಅವರು ತಮ್ಮ ಗುಲಾಮರ ವಿರೋಧವಾಗಿ ಸಂಚುಗಳನ್ನು ಮಾಡತೊಡಗಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಕೀರ್ತನೆಗಳು 105:25
11 ತಿಳಿವುಗಳ ಹೋಲಿಕೆ  

ಆ ಅರಸನು ನಮ್ಮ ಜನರೊಂದಿಗೆ ಕುಯುಕ್ತಿಯಿಂದ ವರ್ತಿಸುತ್ತಾ, ಅವರ ಕೂಸುಗಳು ಸಾಯುವಂತೆ ಬಿಸಾಡಿಬಿಡಬೇಕೆಂದು, ನಮ್ಮ ಪಿತೃಗಳನ್ನು ಕಠಿಣವಾಗಿ ಹಿಂಸಿಸಿದನು.


ಯೆಹೋವ ದೇವರು ಅಬ್ರಾಮನಿಗೆ, “ನಿನ್ನ ಸಂತತಿಯವರು ತಮ್ಮದಲ್ಲದ ದೇಶದಲ್ಲಿ ಪ್ರವಾಸಿಗಳಾಗಿರುವರು, ಅವರು ಗುಲಾಮರಾಗಿ ನಾಲ್ಕುನೂರು ವರ್ಷಗಳವರೆಗೆ ದಬ್ಬಾಳಿಕೆಗೆ ಗುರಿಯಾಗುವರು ಎಂಬುದನ್ನು ನೀನು ಖಂಡಿತವಾಗಿಯೂ ತಿಳಿಯತಕ್ಕದ್ದು.


ಆದರೆ ನಿಶ್ಚಯವಾಗಿ ನಾನು ನಿನ್ನಲ್ಲಿ ನನ್ನ ಶಕ್ತಿಯನ್ನು ತೋರಿಸಿ, ನನ್ನ ಹೆಸರನ್ನು ಭೂಮಿಯ ಮೇಲೆಲ್ಲಾ ಪ್ರಸಿದ್ಧಪಡಿಸಬೇಕೆಂಬ ಉದ್ದೇಶದಿಂದಲೇ ನಿನ್ನನ್ನು ಸಾಯಿಸದೆ ಉಳಿಸಿದ್ದೇನೆ.


ಅವರಿಗೆ, “ನೀವು ಹಿಬ್ರಿಯ ಸ್ತ್ರೀಯರಿಗೆ ಸೂಲಗಿತ್ತಿಯ ಕೆಲಸ ಮಾಡುವುದಕ್ಕೆ ಹೆರಿಗೆಯ ಸಮಯದಲ್ಲಿ ಅವರನ್ನು ಪರಾಂಬರಿಸುವಾಗ, ಗಂಡು ಮಗುವಾದರೆ ಅದನ್ನು ಕೊಂದುಹಾಕಿರಿ, ಹೆಣ್ಣಾದರೆ ಬದುಕಲಿ,” ಎಂದು ಹೇಳಿದ್ದನು.


ಆದರೆ ಹೆಷ್ಬೋನಿನ ಅರಸನಾದ ಸೀಹೋನನು ನಮ್ಮನ್ನು ತನ್ನ ಬಳಿಯಿಂದ ದಾಟಿಹೋಗಲು ಸಮ್ಮತಿಸಲಿಲ್ಲ. ಏಕೆಂದರೆ ಅವನನ್ನು ನಿಮ್ಮ ಕೈಯಲ್ಲಿ ಒಪ್ಪಿಸುವ ಹಾಗೆ ನಿಮ್ಮ ದೇವರಾದ ಯೆಹೋವ ದೇವರು ಅವನ ಬುದ್ಧಿಯನ್ನು ಮಂಕುಮಾಡಿ, ಹೃದಯವನ್ನು ಕಠಿಣಪಡಿಸಿದರು. ಈಗಾಗಲೇ ಅದು ನೆರವೇರಿದೆ.


ತರುವಾಯ ಯೆಹೋವ ದೇವರು ಮೋಶೆಗೆ, “ಫರೋಹನ ಬಳಿಗೆ ಹೋಗು, ಏಕೆಂದರೆ ನಾನು ನನ್ನ ಅದ್ಭುತ ಸೂಚಕಕಾರ್ಯಗಳನ್ನು ಅವನ ಮುಂದೆ ತೋರಿಸುವುದಕ್ಕಾಗಿ ಅವನ ಹೃದಯವನ್ನೂ ಅವನ ಅಧಿಕಾರಿಗಳ ಹೃದಯಗಳನ್ನೂ ಕಠಿಣ ಮಾಡಿದ್ದೇನೆ.


ಆಗ ಯೆಹೋವ ದೇವರು ಮೋಶೆಗೆ, “ನೀನು ಈಜಿಪ್ಟ್ ದೇಶಕ್ಕೆ ಹಿಂದಿರುಗಿ ಹೋಗುವಾಗ, ನಾನು ನಿನ್ನ ಕೈಯಲ್ಲಿ ಮಾಡಿಸಿದ ಎಲ್ಲಾ ಸೂಚಕಕಾರ್ಯಗಳನ್ನು ಫರೋಹನ ಮುಂದೆ ಮಾಡು. ಆದರೆ ನಾನು ಅವನ ಹೃದಯವನ್ನು ಕಠಿಣಪಡಿಸುವೆನು. ಅವನು ಜನರನ್ನು ಹೋಗಗೊಡಿಸುವುದಿಲ್ಲ.


ಹೀಗೆ ಬಹಳ ದಿನಗಳಾದ ಮೇಲೆ ಈಜಿಪ್ಟಿನ ಅರಸನು ಸತ್ತನು. ಇಸ್ರಾಯೇಲರು ದಾಸತ್ವದ ಕಾರಣದಿಂದ ನರಳಾಡುತ್ತಾ ಮೊರೆಯಿಡುತ್ತಿದ್ದರು. ದಾಸತ್ವದ ನಿಮಿತ್ತವಾಗಿ ಅವರ ಕೂಗು ದೇವರ ಬಳಿಗೆ ಮುಟ್ಟಿತು.


ಪ್ರೀತಿಸುವುದಕ್ಕೆ ಒಂದು ಸಮಯ, ದ್ವೇಷಿಸುವುದಕ್ಕೆ ಒಂದು ಸಮಯ. ಯುದ್ಧದ ಸಮಯ, ಸಮಾಧಾನದ ಸಮಯ, ಹೀಗೆ ಒಂದೊಂದಕ್ಕೂ ತಕ್ಕ ಸಮಯವಿದೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು